ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಸಂಪತ್ಗೆ ಅಭಿನಂದನೆ ಸಲ್ಲಿಸುತ್ತೇನೆ: BJP ಶಾಸಕ ಯತ್ನಾಳ್
![ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಸಂಪತ್ಗೆ ಅಭಿನಂದನೆ ಸಲ್ಲಿಸುತ್ತೇನೆ: BJP ಶಾಸಕ ಯತ್ನಾಳ್ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಸಂಪತ್ಗೆ ಅಭಿನಂದನೆ ಸಲ್ಲಿಸುತ್ತೇನೆ: BJP ಶಾಸಕ ಯತ್ನಾಳ್](https://www.varthabharati.in/sites/default/files/images/articles/2022/08/22/346818-1661165835.jpg)
ವಿಜಯಪುರ: 'ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಸಂಪತ್ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೂ ಧರ್ಮದ ಅಪಮಾನ ಮಾಡಿರುವುದಕ್ಕೆ ಆತನಿಗೆ ನೋವಾಗಿದೆ' ಎಂದು ವಿಜಯಪುರ ನಗರ ಮತ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ( Basangouda Patil Yatnal) ಹೇಳಿದ್ದಾರೆ.
ನಗರದಲ್ಲಿ ಬಿಡಿಎ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಸಿದ್ದರಾಮಯ್ಯ (Siddaramaiah) ಅವರ ಕಾರಿಗೆ ಮೊಟ್ಟೆ ಎಸೆದ ಸಂಪತ್ಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಆತ ಜೆಡಿಎಸ್, ಬಿಜೆಪಿ ಅಥವಾ ಕಾಂಗ್ರೆಸ್ ಪಕ್ಷದವನಾಗಿರಲಿ. ಆದರೆ , ತಾನು ಪಾಲಿಸುವ ಧರ್ಮಕ್ಕೆ ಅಪಮಾನ ಮಾಡಿದಾಗ ಆತ ಸರಿಯಾದ ಪ್ರತಿಕ್ರಿಯೆ ನಿಡಿದ್ದಾನೆ' ಎಂದು ಹೇಳಿದರು.
ಇದನ್ನೂ ಓದಿ: ಸಿದ್ದರಾಮಯ್ಯ ಮಾಂಸ ಸೇವನೆ ಚರ್ಚೆಯ ವಿಷಯವೇ ಅಲ್ಲ, ಬಿಜೆಪಿಯಿಂದ ಅನಗತ್ಯ ಗೊಂದಲ: ಪ್ರಮೋದ್ ಮುತಾಲಿಕ್
ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೊ ಅಂಟಿಸಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಅವರು, 'ಕಾಂಗ್ರೆಸ್ ಭಾರತದ ಪಾರ್ಟಿಯೋ ಪಾಕಿಸ್ತಾನದ ಪಾರ್ಟಿಯೋ? ನಮ್ಮ ಯುವ ಮೋರ್ಚಾದವರು ಒಳ್ಳೆಯ ಕೆಲಸ ಮಾಡಿದ್ದಾರೆ. ಸಾವರ್ಕರ್ ಬಗ್ಗೆ ಚಿಲ್ಲರೆಯಾಗಿ ಮಾತನಾಡುವುದು ಕಾಂಗ್ರೆಸ್ ಸಂಸ್ಕೃತಿ ಆಗಿದೆ' ಎಂದು ಹೇಳಿದರು.