Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಳಗಾವಿ ನಗರದ ಗಾಲ್ಫ್ ಕ್ಲಬ್ ಬಳಿ ಚಿರತೆ...

ಬೆಳಗಾವಿ ನಗರದ ಗಾಲ್ಫ್ ಕ್ಲಬ್ ಬಳಿ ಚಿರತೆ ಪ್ರತ್ಯಕ್ಷ: ನಗರದ ಜನರಲ್ಲಿ ಆತಂಕ

ಕಾರ್ಯಾಚರಣೆಗೆ ಸಕ್ರೆಬೈಲ್ ಆನೆ

ವಾರ್ತಾಭಾರತಿವಾರ್ತಾಭಾರತಿ22 Aug 2022 8:26 PM IST
share
ಬೆಳಗಾವಿ ನಗರದ ಗಾಲ್ಫ್ ಕ್ಲಬ್ ಬಳಿ ಚಿರತೆ ಪ್ರತ್ಯಕ್ಷ: ನಗರದ ಜನರಲ್ಲಿ ಆತಂಕ

ಬೆಳಗಾವಿ, ಆ. 22: ‘ನಗರದ ಹಿಂಡಲಗಾ ರಸ್ತೆಯಲ್ಲಿ ಚಿರತೆಯೊಂದು (Leopard) ಕಾಣಿಸಿಕೊಂಡಿದ್ದು, ನಿರ್ಭಯವಾಗಿ ರಸ್ತೆಯ ಪಕ್ಕದಲ್ಲೇ ಓಡಾಡುತ್ತಿರುವುದನ್ನು ಖಾಸಗಿ ಬಸ್ ಪ್ರಯಾಣಿಕರೊಬ್ಬರ ಮೊಬೈಲ್ ವಿಡಿಯೋದಲ್ಲಿ ಸೆರೆ ಹಿಡಿದಿದ್ದು, ಬೆಳಗಾವಿ ನಗರದ ಜನತೆಯಲ್ಲಿ ಆತಂಕ ಮನೆ ಮಾಡಿದೆ.

ಆ.7, 8ರಂದು ನಗರದ ಗಾಲ್ಫ್ ಮೈದಾನದ ಕ್ಯಾಮೆರಾದಲ್ಲಿ ಸೆರೆಯಾಗಿದ್ದ ಚಿರತೆ ಇದೀಗ ಮತ್ತೆ ಗಾಲ್ಫ್ ಕ್ಲಬ್ ಸಮೀಪದ ಜಾಧವ ನಗರದ ಹುಲ್ಲಿನ ಪೊದೆಯೊಳಗೆ ಕಾಣಿಸಿಕೊಂಡಿದ್ದ ಚಿರತೆ ಪತ್ತೆಗೆ ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆ ಜಂಟಿಯಾಗಿ ಶಸ್ತ್ರಸಹಿತ ನೂರಾರು ಸಿಬ್ಬಂದಿಯೊಂದಿಗೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರೂ ಚಿರತೆ ತಪ್ಪಿಸಿಕೊಳ್ಳುತ್ತಿದೆ. ಚಿರತೆ ಪ್ರತ್ಯೇಕ್ಷವಾಗಿರುವ ಹಿನ್ನೆಲೆಯಲ್ಲಿ ನಗರ ಹಾಗೂ ಗ್ರಾಮೀಣ ಭಾಗದ ಶಾಲೆಗಳಿಗೆ ರಜೆ ನೀಡಲಾಗಿದೆ.

ಮೂರು ದಿನಗಳ ಹಿಂದಷ್ಟೇ ವನಿತಾ ವಿದ್ಯಾಲಯ ಶಾಲೆ ಆವರಣದಲ್ಲಿ ಚಿರತೆ ಕಂಡಿದ್ದೇವೆ ಎಂದು ವಿದ್ಯಾರ್ಥಿಗಳು ಹೇಳಿದ್ದರು. ಮಕ್ಕಳ ಮಾತನ್ನು ಹಗುರವಾಗಿ ತೆಗೆದುಕೊಂಡ ಅರಣ್ಯ ಇಲಾಖೆ ಅಧಿಕಾರಿಗಳು ನೆಪಕ್ಕೆ ಮಾತ್ರ ಪರಿಶೀಲನೆ ನಡೆಸಿದ್ದರು. ಇದೀಗ ಚಿರತೆ ಕಾಣಿಸಿಕೊಂಡ ವಿಡಿಯೊ ಕೆಲವೇ ಕ್ಷಣಗಳಲ್ಲಿ ವೈರಲ್ ಆಗಿದ್ದು, ವನ್ಯಮೃಗ ಜನರಿಗೆ ಹಾನಿ ಮಾಡುವ ಸಾಧ್ಯತೆಗಳಿದ್ದು ಕೂಡಲೇ ಚಿರತೆ ಸೆರೆ ಹಿಡಿಯಬೇಕೆಂಬ ಆಗ್ರಹ ಕೇಳಿಬಂದಿದೆ. 

ಗಾಲ್ಫ್ ಮೈದಾನದ ಎಡಬದಿಯಿಂದ ಸದ್ದು ಮಾಡುತ್ತ ಕೆಲವು ಸಿಬ್ಬಂದಿ ಮುನ್ನುಗ್ಗಿದರು. ಮರದ ಹಿಂದೆ ಚಿರತೆ ಅವಿತಿತ್ತು. ಒಂದು ಕಡೆಯಿಂದ ಚಿರತೆ ಓಡಿಸುವುದು, ವಿರುದ್ಧ ದಿಕ್ಕಿನಲ್ಲಿ ಬಲೆ ಹಿಡಿದು ನಿಲ್ಲಲು ಅರಣ್ಯ ಇಲಾಖೆ ಯೋಜನೆ ರೂಪಿಸಿತ್ತು. ಆದರೆ, ಗಾಲ್ಫ್ ಮೈದಾನ ಸೇರಿದ ಚಿರತೆ ಕಣ್ಣೆದುರಲ್ಲೇ ನೆಗೆದು ಪರಾರಿಯಾಯಿತು. ಈ ವೇಳೆ ಸಮೀಪದಲ್ಲೇ ಗನ್ ಹಿಡಿದು ನಿಂತಿದ್ದ ಶೂಟರ್ ಅರಿವಳಿಕೆ ಚುಚ್ಚುಮದ್ದು ಹಾರಿಸಿದರೂ ಅದು ಚಿರತೆಗೆ ತಗುಲಲಿಲ್ಲ. ಹೀಗಾಗಿ ಚಿರತೆ ಸೆರೆ ಕಾರ್ಯಾಚರಣೆ ವಿಫಲವಾಗಿದೆ.

ಕಾರ್ಯಾಚರಣೆಗೆ ಸಕ್ರೆಬೈಲ್ ಆನೆ: ‘ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲಿನಿಂದ ನಾಳೆ(ಆ.23)ಎರಡು ಆನೆಗಳನ್ನು ತರಿಸಿ ಚಿರತೆ ಕಾರ್ಯಾಚರಣೆ ನಡೆಸಲಾಗುವುದು. ಎರಡು ಅಥವಾ ಮೂರು ದಿನಗಳಲ್ಲಿ ಚಿರತೆ ಸೆರೆ ಹಿಡಿಯಲಾಗುವುದು' ಎಂದಿರುವ ಅರಣ್ಯ ಸಚಿವ ಉಮೇಶ ಕತ್ತಿ, ‘ಅರಣ್ಯ ಇಲಾಖೆಯ 120 ಹಾಗೂ ಪೊಲೀಸ್ ಇಲಾಖೆಯ 80 ಮಂದಿ ಸೇರಿದಂತೆ 200 ಮಂದಿ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಶೀಘ್ರದಲ್ಲೆ ಚಿರತೆ ಸೆರೆ ಹಿಡಿಯಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X