Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳ...

ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳ ಬಿಡುಗಡೆ:ಪ್ರಶ್ನಿಸಿದ ಪಿಐಎಲ್ ವಿಚಾರಣೆಗೆ ಪರಿಶೀಲಿಸಲು ಸುಪ್ರೀಂ ಸಮ್ಮತಿ

ವಾರ್ತಾಭಾರತಿವಾರ್ತಾಭಾರತಿ23 Aug 2022 11:54 AM IST
share
ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳ ಬಿಡುಗಡೆ:ಪ್ರಶ್ನಿಸಿದ ಪಿಐಎಲ್ ವಿಚಾರಣೆಗೆ ಪರಿಶೀಲಿಸಲು ಸುಪ್ರೀಂ ಸಮ್ಮತಿ

ಹೊಸದಿಲ್ಲಿಆ.24: ಬಿಲ್ಕಿಸ್ ಬಾನೊ ಪ್ರಕರಣದ ಎಲ್ಲಾ ಅಪರಾಧಿಗಳ ಜೈಲು ಶಿಕ್ಷೆಯನ್ನು ರದ್ದುಪಡಿಸಿದ ಗುಜರಾತ್ ಸರಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಲು ಸುಪ್ರೀಂಕೋರ್ಟ್ ಮಂಗಳವಾರ ಸಮ್ಮತಿಸಿದೆ.

   ಸಿಪಿಎಂ ಸದಸ್ಯ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲಾವುಲ್ ಹಾಗೂ ಪ್ರೊಫೆಸರ್ ರೂಪ ರೇಖಾ ವರ್ಮಾ ಅವರ ಪರವಾಗಿ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ ಹಾಗೂ ನ್ಯಾಯವಾದಿ ಅಪರ್ಣಾ ಭಟ್ ಪಿಐಎಲ್ ಅರ್ಜಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

‘‘14 ಮಂದಿಯ ಹತ್ಯೆ ಪ್ರಕರಣದ ಅಪರಾಧಿಗಳ ಜೈಲು ಶಿಕ್ಷೆಯನ್ನು ರದ್ದುಪಡಿಸಿರುವುದನ್ನು ನಾವು ಪ್ರಶ್ನಿಸುತ್ತಿದ್ದೇವೆ. ಈ ಅಪರಾಧಿಗಳಿಗೆ ಯಾವ ಸಿದ್ಧಾಂತಗಳ ಆಧಾರದಲ್ಲಿ ಕ್ಷಮಾದಾನ ನೀಡಲಾಯಿತೆಂಬುದನ್ನು ನಾವು ಪ್ರಶ್ನಿಸುತ್ತಿದ್ದೇವೆ. ಈ ಪ್ರಕರಣದಲ್ಲಿ ಗರ್ಭಿಣಿ ಮಹಿಳೆಯನ್ನು ಅತ್ಯಾಚಾರಗೈಯಲಾಗಿತ್ತು ಹಾಗೂ 14 ಮಂದಿಯನ್ನು ಹತ್ಯೆಗೈಯಲಾಗಿತ್ತು ಎಂದು ಕಪಿಲ್ ಸಿಬಲ್ ನ್ಯಾಯಾಲಯದಲ್ಲಿ ವಾದಿಸಿದ್ದಾರೆ.

  ಬಿಲ್ಕಿಸ್ ಬಾನು ಪ್ರಕರಣದ 11 ಮಂದಿ ಆರೋಪಿಗಳನ್ನು ಬಿಡುಗಡೆಗೊಳಿಸಿರುವ ಗುಜರಾತ್ ಸರಕಾರದ ಆದೇಶವನ್ನು ಬದಿಗೊತ್ತಿ, ಅವರನ್ನು ಕೂಡಲೇ ಮರುಬಂಧಿಸಬೇಕು ಎಂದು ಇನ್ನೋರ್ವ ನ್ಯಾಯವಾದಿ ಅಪರ್ಣಾ ಭಟ್ ವಾದಿಸಿದರು.

  ಅರ್ಜಿದಾರ ಪರ ವಕೀಲರ ವಾದವನ್ನು ಅಲಿಸಿದ ಭಾರತದ ಮುಖ್ಯನ್ಯಾಯಮೂರ್ತಿಯವರು ‘‘ ನಾವು ಪರಿಶೀಲಿಸಲಿದ್ದೇವೆ’’ ಎಂದರು.

   ಬಿಲ್ಕಿಸ್ ಬಾನೊ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲ್ಪಟ್ಟಿದ್ದ 11 ಮಂದಿ ಅಪರಾಧಿಗಳಾದ ಜಸ್ವಂತ್ ನೈ, ಶೈಲೇಶ್ ಭಟ್, ರಾಧೆಶ್ಯಾಮ್ ಶಾ, ಬಿಪಿನ್‌ಚಂದ್ರ ಜೋಶಿ, ಕೇಸರ್‌ಭಾಯಿ ವೊಹಾನಿಯಾ, ಪ್ರದೀಪ್ ಮೋರ್ದಿಯಾ, ಬಾಕಾಭಾಯ್ ವೊಹಾನಿಯಾ, ರಾಜುಭಾಯ್ ಸೋನಿ, ಮಿತೇಶ್ ಭಟ್ ಹಾಗೂ ರಮೇಶ್‌ಚಂದ್ರ ಅವರಿಗೆ ಗುಜರಾತ್ ಸರಕಾರವು ಕ್ಷಮಾದಾನ ನೀಡಿ, ಆಗಸ್ಟ್ 15ರಂದು ಬಿಡುಗಡೆಗೊಳಿಸಿತ್ತು.

 ‘‘  ಸರಿಯಾಗಿ ಯೋಚಿಸುವ ಯಾವುದೇ ಆಡಳಿತವು ಇಂತಹ ಹೇಯ ಕೃತ್ಯಗಳಲ್ಲಿ ಶಾಮೀಲಾಗಿರುವವರ ಜೈಲು ಶಿಕ್ಷೆಯನ್ನು ರದ್ದುಪಡಿಸುವುದು ಸೂಕ್ತವೆಂದು ಪರಿಗಣಿಸದು ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

    ‘‘ಈ ಅಪರಾಧಿಗಳ ಜೈಲು ಶಿಕ್ಷೆಯನ್ನು ರದ್ದುಪಡಿಸುವ ಬಗ್ಗೆ ಪರಿಶೀಲನೆ ನಡೆಸಲು ರಚನೆಯಾದ ಸಮಿತಿಯಲ್ಲಿರುವ ಸದಸ್ಯರು ಒಂದು ನಿರ್ದಿಷ್ಟ ಪಕ್ಷಕ್ಕೆ ಸೇರಿದವರಾಗಿದ್ದಾರೆ ಹಾಗೂ ಹಾಲಿ ಶಾಸಕರಾಗಿದ್ದಾರೆ ಮತ್ತು ಸಮಿತಿಯು ತಾನಾಗಿಯೇ ನಿರ್ಧಾರಗಳನ್ನು ಕೈಗೊಳ್ಳುವಷ್ಟು ಸ್ವತಂತ್ರವಾಗಿರಲಿಲ್ಲವೆಂಬಂತೆ ಕಂಡುಬರುತ್ತಿದೆಯೆಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಮಹುವಾ ಮೊಯಿತ್ರಾರಿಂದಲೂ ಪಿಐಎಲ್

 ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳ ಜೈಲು ಶಿಕ್ಷೆಯನ್ನು ರದ್ದುಪಡಿಸಿದ ಗುಜರಾತ್ ಸರಕಾರದ ಆದೇಶವನ್ನು ಪ್ರಶ್ನಿಸಿ ಟಿಎಂಸಿ ಸಂಸದೆ, ಮಹುವಾ ಮೊಯಿತ್ರಾ ಕೂಡಾ ಪ್ರತ್ಯೇಕವಾಗಿ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಗಳನ್ನು ಸಲ್ಲಿಸಿದ್ದಾರೆಂದು ‘ಲೈವ್ ಲಾ’ ಕಾನೂನು ಸುದ್ದಿಜಾಲತಾಣ ಮಂಗಳವಾರ ವರದಿ ಮಾಡಿದೆ.

 ಮೊಯಿತ್ರಾ ಅವರು ಖ್ಯಾತ ನ್ಯಾಯವಾದಿ ಶಾದಾನ್ ಫರ್ಸಾತ್ ಅವರ ಮೂಲಕ ಪಿಐಎಲ್ ಅರ್ಜಿ ಸಲ್ಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X