Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೂರು ಸಾವಿರ ಕೋಟಿ ರೂ. ಅಭಿವೃದ್ಧಿಯ ಗುರಿ...

ಮೂರು ಸಾವಿರ ಕೋಟಿ ರೂ. ಅಭಿವೃದ್ಧಿಯ ಗುರಿ : ಶಾಸಕ ರಾಜೇಶ್ ನಾಯ್ಕ್

102.5 ಕೋಟಿ ರೂ. ಅನುದಾನದಲ್ಲಿ ಬಂಟ್ವಾಳ ಕ್ಷೇತ್ರದ ವಿವಿಧ ರಸ್ತೆಗಳ ಅಭಿವೃದ್ಧಿಗೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ23 Aug 2022 6:39 PM IST
share
ಮೂರು ಸಾವಿರ ಕೋಟಿ ರೂ. ಅಭಿವೃದ್ಧಿಯ ಗುರಿ : ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ನಾಲ್ಕು ವರ್ಷಗಳಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ 1,800 ಕೋಟಿ ರೂ. ಅನುದಾನದಲ್ಲಿ 1,400 ರಸ್ತೆಗಳು ಅಭಿವೃದ್ಧಿಗೊಂಡಿದ್ದು, ಐದು ವರ್ಷ ಪೂರ್ತಿಯಾಗುವಾಗ ಕ್ಷೇತ್ರದಲ್ಲಿ ರಸ್ತೆ ಸಹಿತ ಇತರ ಅಭಿವೃದ್ಧಿ ಕಾಮಗಾರಿಗಳ ಅನುದಾನದ ಒಟ್ಟು ಮೊತ್ತ ಮೂರು ಸಾವಿರ ಕೋಟಿ ರೂ.‌ ತಲುಪಬೇಕೆಂಬ ಗುರಿಯನ್ನು ಹೊಂದಿದ್ದೇನೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಹೇಳಿದರು. 

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 102.5 ಕೋಟಿ ರೂಪಾಯಿ ಅನುದಾನದಲ್ಲಿ ವಿವಿಧ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳವಾರ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. 

ನನ್ನ ನಾಲ್ಕು ವರ್ಷಗಳಲ್ಲಿ ಕ್ಷೇತ್ರದ 1,400 ರಸ್ತೆಗಳ ಅಭಿವೃದ್ಧಿಗೆ 1,800 ಕೋಟಿ ರೂ. ಅನುದಾನ ನೀಡಲಾಗಿದೆ. ಅವುಗಳಲ್ಲಿ ಹೆಚ್ಚಿನ ರಸ್ತೆಗಳು ಸಂಚಾರಕ್ಕೆ ಮುಕ್ತವಾಗಿದ್ದು, ಕೆಲವು ರಸ್ತೆಗಳ ಕಾಮಗಾರಿ ಮುಕ್ತಾಯದ ಹಂತದಲ್ಲಿ ಇದೆ. ಇನ್ನು ಕೆಲವು ರಸ್ತೆಗಳ ಕಾಮಗಾರಿ ಆದಷ್ಟು ಬೇಗ ಆರಂಭಗೊಂಡು ಮುಂದಿನ ಆರು ತಿಂಗಳ ಒಳಗೆ ಪೂರ್ಣಗೊಳ್ಳಲಿದೆ ಎಂದು ಅವರು ಹೇಳಿದರು. 

ವಸತಿ ಶಾಲೆಗಳು, ಕಿಂಡಿ ಅಣೆಕಟ್ಟು, ತಡೆಗೋಡೆ, ಆಸ್ಪತ್ರೆ, ಕುಡಿಯುವ ನೀರು, ರಸ್ತೆ, ಒಳಚರಂಡಿ ಹೀಗೆ ಹಲವಾರು ಅಭಿವೃದ್ಧಿ ಕೆಲಸಗಳು ಕ್ಷೇತ್ರದಲ್ಲಿ ನಡೆದಿವೆ. ಕೆಲವು ಪ್ರಗತಿಯಲ್ಲಿ ಇವೆ. ಇನ್ನು ಕೆಲವು ಕಾಮಗಾರಿಗೆ ಅನುದಾನ ಬಿಡುಗಡೆಯಾಗಿದ್ದು ಆದಷ್ಟು ಬೇಗ ಕಾಮಗಾರಿ ಆರಂಭಗೊಳ್ಳಲಿದೆ ಎಂದು ತಿಳಿಸಿದರು. 

ಕೋವಿಡ್ ನಿಂದ ಆರ್ಥಿಕ ಸಂಕಷ್ಟ ಉಂಟಾದರೂ ಅಭಿವೃದ್ಧಿಗೆ ಯಾವುದೇ ಸಮಸ್ಯೆ ಆಗಿಲ್ಲ. ಬಂಟ್ವಾಳ ಕ್ಷೇತ್ರದಲ್ಲಿ ಐತಿಹಾಸಿಕ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಅಭಿವೃದ್ಧಿ ಜೊತೆಯಲ್ಲಿ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಮಹತ್ಕಾರ್ಯ ನಡೆದಿದೆ. ಸಾಧನೆಯ ಹೊಗಲಿಕೆಯನ್ನೂ, ನನ್ನ ವಿರುದ್ಧ ಬರುವ ಟೀಕೆ ಟಿಪ್ಪಣಿಯನ್ನೂ ನಾನು ಸಮಾನವಾಗಿ ಸ್ವೀಕರಿಸುತ್ತೇನೆ. ಕ್ಷೇತ್ರದ ಪ್ರಗತಿಗಾಗಿ ಹಗಲಿರುವ ಶ್ರಮಪಡುತ್ತಿದ್ದೇ‌ನೆ. ಸುಳ್ಳು, ಅನಗತ್ಯ ಟೀಕೆಯಿಂದ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ತಡೆಯಾಗದು ಎಂದು ಹೇಳಿದರು. 

ಕ್ಷೇತ್ರದಲ್ಲಿ ನಡೆದ ಪ್ರತಿಯೊಂದು ಅಭಿವೃದ್ಧಿ ಕೆಲಸದಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಲಾಗಿದೆ. ಗುಣಮಟ್ಟದಲ್ಲಿ ರಾಜಿ ಮಾಡುವ ಪ್ರಶ್ನೆಯೇ ಇಲ್ಲ. ಕಳಪೆ ಗುಣಮಟ್ಟ ಕಂಡು ಬಂದರೆ ಅಂತಹ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು. ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು. ತಮ್ಮ ತಮ್ಮ ಊರಿನಲ್ಲಿ ನಡೆಯುವ ಕಾಮಗಾರಿಗಳ ಗುಣ ಮಟ್ಟವನ್ನು ಸ್ಥಳೀಯರು ಪರಿಶೀಲನೆ ನಡೆಸಬೇಕು. ಯಾವುದಾದರೂ ಸಂಶಯ ಬಂದರೆ ಸಂಬಂಧಿಸಿದವರಿಗೆ ತಿಳಿಸಬೇಕು. ಜೊತೆಗೆ ಕಾಮಗಾರಿ ನಡೆಸುವವರಿಗೆ ಸಹಕಾರವನ್ನೂ ನೀಡಬೇಕು. ಹೀಗಾದರೆ ಕಾಮಗಾರಿಯ ಗುಣಮಟ್ಟ ಕಾಪಾಡಲು ಸಾಧ್ಯ ಎಂದು ಹೇಳಿದರು.

ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಬೂಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ಸುಲೋಚನಾ ಜಿ.ಕೆ. ಭಟ್, ರವೀಂದ್ರ ಕಂಬಳಿ, ಕಮಲಾಕ್ಷಿ ಕೆ.ಪೂಜಾರಿ, ತುಂಗಪ್ಪ ಬಂಗೇರ, ಡೊಂಬಯ್ಯ ಅರಳ, ರವೀಶ್ ಶೆಟ್ಟಿ, ಗಣೇಶ್ ಸುವರ್ಣ, ವೆಂಕಟೇಶ್ ನಾವುಡ, ಯಶವಂತ ಪೂಜಾರಿ, ರಾಮದಾಸ ಬಂಟ್ವಾಳ, ಸೋಮಪ್ಪ ಕೋಟ್ಯಾನ್, ಪ್ರಭಾಕರ ಪ್ರಭು, ರತ್ನ ಕುಮಾರ್ ಚೌಟ ಹಾಗೂ ವಿವಿಧೆಡೆ ನಡೆದ ಶಿಲಾನ್ಯಾಸ ಕಾರ್ಯಕ್ರಮದ ಸಂದರ್ಭದಲ್ಲಿ ವಿವಿಧ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸ್ಥಳೀಯ ಪ್ರಮುಖ ಮೊದಲಾದವರು ಉಪಸ್ಥಿತರಿದ್ದರು.

ಅಭಿವೃದ್ಧಿಗೆ ಶಿಲಾನ್ಯಾಸ ನಡೆದ ರಸ್ತೆಗಳು 

ಶ್ರೀ ಕ್ಷೇತ್ರ ಪೊಳಲಿಯಲ್ಲಿ 40 ಲಕ್ಷ ರೂ. ವೆಚ್ಚದ ಒಳಚರಂಡಿ, 10 ಲಕ್ಷ ರೂ. ವೆಚ್ಚದ ಶ್ರೀ ರಾಮಕೃಷ್ಣ ತಪೋವನ ಸಂಪರ್ಕ ರಸ್ತೆ, ಗ್ರಾಮೀಣಾಭಿವೃದ್ಧಿ ಇಲಾಖೆಯ 28 ಕೋಟಿ ರೂ.ಗಳ ವಿವಿಧ ರಸ್ತೆಗಳ ಅಭಿವೃದ್ಧಿ, ಮೂಲರಪಟ್ಣ ಸೊರ್ನಾಡ್ ರಸ್ತೆ 4.10 ಕೋಟಿ ರೂ., ಅರಳ ಗರುಡಮಹಾಕಾಳಿ ದೇವಸ್ಥಾನ ರಸ್ತೆ 1.25 ಕೋಟಿ ರೂ., ರಾಯಿ ಅಣ್ಣಳಿಕೆ ರಸ್ತೆ 2 ಕೋಟಿ ರೂ., ಮಣಿಹಳ್ಳ ಸರಪಾಡಿ ಬಜ ರಸ್ತೆ 7 ಕೋಟಿ ರೂ., ಸರಪಾಡಿ ಪೆರ್ಲ ಬಿಯಪಾದೆ ರಸ್ತೆ 3 ಕೋಟಿ ರೂ., ಕುಂಟಾಲಪಲ್ಕೆ ಉಳಿ ರಸ್ತೆ 7 ಕೋಟಿ ರೂ., ಮಾರ್ನಬೈಲ್ ಮಂಚಿ ಸಾಲೆತ್ತೂರು ರಸ್ತೆ 3 ಕೋಟಿ ರೂ., ಬೊಳ್ಳಾಯಿ ಕಂಚಿಲ ಮಂಚಿ ರಸ್ತೆ 2 ಕೋಟಿ ರೂ., ನರಹರಿ ಶ್ರೀ ಸದಾಶಿವ ದೇವಸ್ಥಾನ ರಸ್ತೆ 2 ಕೋಟಿ ರೂ., ಕಲ್ಲಡ್ಕ ಬೊಂಡಾಲ ಶ್ರೀ ಮಹಾಗಣಪತಿ ದೇವಸ್ಥಾನ ರಸ್ತೆ 3 ಕೋಟಿ ರೂ., ಕೊಡಪದವು ಮಂಗಳಪದವು ರಸ್ತೆ 1.50 ಕೋಟಿ ರೂ., ಮಾಣಿ ಶ್ರೀ ಉಳ್ಳಾಲ್ತಿ ಮಾಡ ರಸ್ತೆ 2 ಕೋಟಿ ರೂ., ಸುಧೆಕಾರು ಕಕ್ಕೆಮಜಲು ಕಾಪಿಕಾಡು ರಸ್ತೆ 4.95 ಕೋಟಿ ರೂ., ನರಿಕೊಂಬು ದಾಸಕೋಡಿ ರಸ್ತೆ 4.95 ಕೋಟಿ ರೂ., ಬೆಂಜನಪದವು ಪಿಲಿಬೊಟ್ಟು ರಸ್ತೆ 2.50 ಕೋಟಿ ರೂ., ಶ್ರೀ ಕ್ಷೇತ್ರ ನಂದಾವರ ನೂತನ ಸೇತುವೆ ಮತ್ತು ರಸ್ತೆ 9.75 ಕೋಟಿ ರೂ. ವೆಚ್ಚದ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X