Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಾಬಾ ಬುಡಾನ್ ಸ್ವಾಮಿ ದರ್ಗಾದಲ್ಲಿ ಹಿಂದೂ...

ಬಾಬಾ ಬುಡಾನ್ ಸ್ವಾಮಿ ದರ್ಗಾದಲ್ಲಿ ಹಿಂದೂ ಅರ್ಚಕರ ನೇಮಕ ಸರಕಾರದ ಕೋಮುವಾದಿ ನಿಲುವು: ನಾಸಿರ್ ಪಾಷಾ ಶಾಖಾದ್ರಿ

ವಾರ್ತಾಭಾರತಿವಾರ್ತಾಭಾರತಿ23 Aug 2022 9:24 PM IST
share
ಬಾಬಾ ಬುಡಾನ್ ಸ್ವಾಮಿ ದರ್ಗಾದಲ್ಲಿ ಹಿಂದೂ ಅರ್ಚಕರ ನೇಮಕ ಸರಕಾರದ ಕೋಮುವಾದಿ ನಿಲುವು: ನಾಸಿರ್ ಪಾಷಾ ಶಾಖಾದ್ರಿ

ಚಿಕ್ಕಮಗಳೂರು, ಆ.23: ಗುರುದತ್ತಾತ್ರೇಯ ಬಾಬಾ ಬುಡಾನ್ ಸ್ವಾಮಿ ದರ್ಗಾದಲ್ಲಿ ಹಿಂದೂ ಅರ್ಚಕರನ್ನು ನೇಮಿಸುವ ಹಾಗೂ ಶಾಖಾದ್ರಿಗಳ ಆಡಳಿತವನ್ನು ಕಿತ್ತು ಹಾಕಿ ಸರಕಾರಿ ಸಮಿತಿಯನ್ನು ರಚಿಸಲು ಸರಕಾರ ಆದೇಶಿಸಿರುವುದು ರಾಜ್ಯ ಸರಕಾರದ ಕೋಮುವಾದಿ ಆದೇಶವಾಗಿದೆ ಎಂದು ಶಾಖಾದ್ರಿ ಕುಟುಂಬಸ್ಥರಾದ ನಾಸಿರ್ ಪಾಷಾ ಶಾಖಾದ್ರಿ ಟೀಕಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಗುರು ದತ್ತಾತ್ರೇಯ ಬಾಬಾ ಬುಡಾನ್ ಸ್ವಾಮಿ ದರ್ಗಾದಲ್ಲಿ ಹಿಂದೂ ಅರ್ಚರನ್ನು ನೇಮಿಸುವ ಹೊಸ ಪದ್ಧತಿಯ ತೀರ್ಪು ಖಂಡನೀಯ. ಇದರಿಂದಾಗಿ ಜಿಲ್ಲೆಯ ಸೌಹಾರ್ದ ಪರಂಪರೆಗೆ ಹಿನ್ನಡೆ ಆಗಿದೆ. ದರ್ಗಾದ ಆವರಣದಲ್ಲಿ ನಮ್ಮ ಅಜ್ಜ, ಮುತ್ತಜ್ಜರ ಗೋರಿಗಳು ಹಾಗೂ ಬಾಬಾ ಬುಡಾನ್ ವಂಶಸ್ಥರು, ವಾರಸುದಾರರು ಇರುವಾಗ  ಸಮಿತಿಯನ್ನು ರಚಿಸುವ ಸರಕಾರದ ಆದೇಶ ಬಿಜೆಪಿ ಸರಕಾರದ ಕೋಮುವಾದಿ ನಿಲುವನ್ನು ಎತ್ತಿ ತೋರಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. 

ಬಿಜೆಪಿ ಸರಕಾರದ ಈ ಆದೇಶ 1991ರ ಕಾಯ್ದೆಯ ಸಂಪೂರ್ಣ ಉಲಂಘನೆಯಾಗಿದೆ. ನೂರಾರು ವರ್ಷಗಳಿಂದ ಇಲ್ಲದ ಆಚರಣೆಗಳನ್ನು ಅಧಿಕೃತಗೊಳಿಸುವುದು ಕಾನೂನು ಬಾಹಿರವಾಗಿದೆ. ಬಾಬಾ ಬುಡನ್ ದರ್ಗಾದ ಆವರಣದಲ್ಲಿ ನಮ್ಮ ವಂಶಸ್ಥರ ಗೋರಿಗಳನ್ನು ಕಾಣಬಹುದು. ಆದರೂ ಕೂಡ ಅಲ್ಲಿ ಅರ್ಚಕರ ನೇಮಕ ಮಾಡಲೇಬೇಕು ಎಂದು ಪಣತೊಟ್ಟಿರುವುದು ಬಿಜೆಪಿ ಸರಕಾರದ ನೀಚ ಆಡಳಿತವನ್ನು ಎತ್ತಿ ತೋರಿಸಿದೆ. ಬಿಜೆಪಿ ಸರಕಾರ ಸಂವಿಧಾನಕ್ಕೆ ಗೌರವ ಇಲ್ಲದ ರೀತಿಯಲ್ಲಿ ಆಡಳಿತ ನಡೆಸುವ ಪ್ರಯತ್ನದ ಭಾಗ ಇದಾಗಿದೆ. ವಿರೋಧ ಪಕ್ಷಗಳು ಈ ವಿಚಾರದಲ್ಲಿ ಮೌನಕ್ಕೆ ಶರಣಾಗಿರುವುದು ವಿಪರ್ಯಾಸವಾಗಿದೆ. ಕಾಂಗ್ರೆಸ್, ಜೆಡಿಎಸ್‍ನಂತಹ ಪಕ್ಷಗಳು ಅಲ್ಪಸಂಖ್ಯಾತರ ವೋಟ್ ಬ್ಯಾಂಕ್ ಪಡೆಯಲು ಮಾತ್ರ ಸೀಮಿತವಾಗಿದೆ. ಬಾಬಾ ಬುಡಾನ್ ದರ್ಗಾಕ್ಕೆ ಸಂಬಂಧಿಸಿದ ಯಾವುದೇ ಹೋರಾಟದಲ್ಲಿ ಭಾಗವಹಿಸದೇ ಈ ಪಕ್ಷಗಳು ಹಿಂದೆ ಸರಿದಿರುವುದು ಈ ಮೂಲಕ ಸ್ಪಷ್ಟ ಎಂದು ಅವರು ಆರೋಪಿಸಿದ್ದಾರೆ.

ರಾಜ್ಯದ ಜನರು ಬಾಬಾ ಬುಡಾನ್ ಸ್ವಾಮಿ ಅವರ ಪ್ರಯತ್ನದಿಂದ ಕಾಫಿ ಜಿಲ್ಲೆಗೆ ಬಂದಿರುವ ಇತಿಹಾಸವನ್ನು ಮರೆಯದೇ ಆ ಮಹಾನ್ ವ್ಯಕ್ತಿಯ ಪರ  ನಿಲ್ಲಬೇಕು. ಅವರ ಪ್ರಯತ್ನದಿಂದ ಹಲವು ಕುಟುಂಬಗಳ ಜೀವನ ನಡೆಯುತ್ತಿದೆ. ಅವರು ಕೊಟ್ಟಿರುವ ಅನ್ನದ ತಟ್ಟೆಗೆ ದ್ರೋಹ ಬಗೆಯುವ ಕೆಲಸ ಮಾಡಬಾರದು. ಅಕ್ರಮವಾಗಿ ಬಾಬಾ ಬುಡಾನ್ ದರ್ಗಾವನ್ನು ವಶಕ್ಕೆ ಪಡಯುವ ಬಿಜೆಪಿ ಸರಕಾರ ಹುನ್ನಾರ ನಡೆಸುತ್ತಿದೆ. ರಾಜ್ಯ ಸರಕಾರ ಈ ರೀತಿಯ ಅನ್ಯಾಯದ ನಿರ್ಧಾರವನ್ನು ರದ್ದುಗೊಳಿಸಿ ಹಿಂದಿನ ರೀತಿಯಲ್ಲಿ ಶಾಖಾದ್ರಿ ನೇತೃತ್ವದಲ್ಲಿ ಸಮಿತಿ ರಚಿಸಿ ಸಜ್ಜಾದ್ ನಶೀನ್ ಅವರ  ನಾಯಕತ್ವದಲ್ಲಿ ದರ್ಗಾದ ಆಡಳಿತಕ್ಕೆ ಅನುವು ಮಾಡಿಕೊಡಬೇಕು ಎಂದು ಅವರು ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X