Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮನಪಾ: ಬಗೆಹರಿಯದ 23ನೆ ಮೇಯರ್-ಉಪ ಮೇಯರ್...

ಮನಪಾ: ಬಗೆಹರಿಯದ 23ನೆ ಮೇಯರ್-ಉಪ ಮೇಯರ್ ಮೀಸಲಾತಿ; ರಾಜ್ಯ ಸರಕಾರದಿಂದ 24ನೆ ಅವಧಿಯ ಮೀಸಲಾತಿ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ24 Aug 2022 6:30 PM IST
share
ಮನಪಾ: ಬಗೆಹರಿಯದ 23ನೆ ಮೇಯರ್-ಉಪ ಮೇಯರ್ ಮೀಸಲಾತಿ; ರಾಜ್ಯ ಸರಕಾರದಿಂದ 24ನೆ ಅವಧಿಯ ಮೀಸಲಾತಿ ಪ್ರಕಟ

ಮಂಗಳೂರು, ಆ.24: ರಾಜ್ಯ ಸರಕಾರ ಇಂದು ಎಲ್ಲಾ ಮಹಾನಗರ ಪಾಲಿಕೆಗಳ 24ನೆ ಅವಧಿಗೆ ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳಿಗೆ ಮೀಸಲಾತಿಯನ್ನು ಪ್ರಕಟಿಸಿದೆ. ಅದರಂತೆ ಮಂಗಳೂರು ಮಹಾನಗರ ಪಾಲಿಕೆಯ 24ನೆ ಅವಧಿಗೆ ಮೇಯರ್ ಸ್ಥಾನಕ್ಕೆ ‘ಸಾಮಾನ್ಯ’ ಹಾಗೂ ಉಪ ಮೇಯರ್ ಸ್ಥಾನ ‘ಸಾಮಾನ್ಯ ಮಹಿಳೆ’ ಗೆ ಮೀಸಲಾತಿ ಪ್ರಕಟವಾಗಿದೆ.

ಆದರೆ ಮಂಗಳೂರು ಪಾಲಿಕೆಯ 23ನೇ ಸಾಲಿನ ಮೇಯರ್ ಹಾಗೂ ಉಪ ಮೇಯರ್ ಮೀಸಲಾತಿ ಇನ್ನೂ ಗೊಂದಲದಲ್ಲಿದೆ.  ಮಂಗಳೂರು ಪಾಲಿಕೆಯ 23ನೇ ಅವಧಿಗೆ ಮೇಯರ್ ಸ್ಥಾನವನ್ನು ಸಾಮಾನ್ಯ ಹಾಗೂ ಉಪಮೇಯರ್ ಸ್ಥಾನವನ್ನು ಹಿಂದುಳಿದ ವರ್ಗ ಎ ಮಹಿಳೆ ವರ್ಗಕ್ಕೆ ಮೀಸಲಿರಿಸಿ ಕಳೆದ ವರ್ಷವೇ ಸರಕಾರ ಆದೇಶಿಸಿತ್ತು. ಅದರಂತೆ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಮಾ.2ರಂದು ನಿಗದಿಯಾಗಿತ್ತು. ಆದರೆ, ಮಹಾರಾಷ್ಟ್ರದ ರಾಹುಲ್ ರಮೇಶ್ ಎಂಬವರು ಸುಪ್ರಿಂಕೋರ್ಟ್‌ನಲ್ಲಿ ಬೇರೊಂದು ಪ್ರಕರಣಕ್ಕೆ ಸಂಬಂಧಿಸಿ ದೂರು ಸಲ್ಲಿಸಿದ ವೇಳೆ ನ್ಯಾಯಾಲಯವು ಸ್ಥಳೀಯ ಸಂಸ್ಥೆಯ ಮೀಸಲಾತಿ ವಿಚಾರವಾಗಿ ಬೊಟ್ಟು ಮಾಡಿದ ಕಾರಣದಿಂದ ಸರಕಾರ ಮಂಗಳೂರು ಪಾಲಿಕೆ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆದಿರಲಿಲ್ಲ.

ಮಂಗಳೂರು ಮಹಾನಗರ ಪಾಲಿಕೆಯ 22ನೇ ಸಾಲಿನ ಮೇಯರ್ ಆಗಿ ಆಯ್ಕೆಯಾಗಿದ್ದ  ಪ್ರೇಮಾನಂದ ಶೆಟ್ಟಿ ಹಾಗೂ ಉಪಮೇಯರ್ ಆಗಿ ಸುಮಂಗಳಾ ರಾವ್ ಅವರೇ ಸದ್ಯ ಮುಂದುವರಿದಿದ್ದಾರೆ.  23ನೇ ಮೇಯರ್ ಮೀಸಲಾತಿಯು ಕಳೆದ ವರ್ಷವೇ ಬಂದಿತ್ತಾದರೂ ಚುನಾವಣೆ ನಡೆದಿಲ್ಲ. ಇದೀಗ 24ನೆ ಅವಧಿಗೆ ಮೇಯರ್ ಹಾಗೂ ಉಪ ಮೇಯರ್ ಸ್ಥಾನಕ್ಕೆ ಮೀಸಲಾತಿ ಪ್ರಕಟವಾಗಿರುವುದು ಗೊಂದಲಕ್ಕೆ ಕಾರಣವಾಗಿದೆ.

ಸಾಮಾನ್ಯವಾಗಿ ಮೇಯರ್-ಉಪಮೇಯರ್ ಮೀಸಲಾತಿ ಆಯಾ ವರ್ಷವೇ ಸರಕಾರ ಪ್ರಕಟ ಮಾಡುತ್ತದೆ. ಆದರೆ, ಮಂಗಳೂರು ಪಾಲಿಕೆ ಹಾಗೂ ರಾಜ್ಯದ ಉಳಿದ ಪಾಲಿಕೆಗಳ ನಡುವೆ 1 ವರ್ಷದ ಆಡಳಿತ ಅವಧಿ ವ್ಯತ್ಯಾಸವಿದೆ. ಹೀಗಾಗಿ ಮಂಗಳೂರು ಪಾಲಿಕೆಗೆ 23ನೇ ಅವಧಿಯ ಮೇಯರ್-ಉಪಮೇಯರ್ ಆಯ್ಕೆ ನಡೆಯಲಿದ್ದರೆ, ಉಳಿದ ಪಾಲಿಕೆಗಳಲ್ಲಿ ಈ ಬಾರಿ 24ನೇ ಅವಧಿ ನಡೆಯುತ್ತಿದೆ. ಕಳೆದ ವರ್ಷವೇ 23ನೇ ಅವಧಿಯ ಮೇಯರ್ -ಉಪಮೇಯರ್ ಮೀಸಲಾತಿ ಮಂಗಳೂರು ಪಾಲಿಕೆಗೆ ಬಂದಿತ್ತು. ಅದು ಈ ವರ್ಷ ಅನುಷ್ಠಾನವಾಗಬೇಕಿತ್ತು. ಈ ನಡುವೆ ಮುಂದಿನ ಸಾಲಿನ ಮೀಸಲಾತಿ ಇಂದು ಪ್ರಕಟವಾಗಿದೆ.

ಮಂಗಳೂರು ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತದ ಮೊದಲ ಅವಧಿಯಲ್ಲಿ ದಿವಾಕರ್ ಪಾಂಡೇಶ್ವರ ಮೇಯರ್ ಆಗಿದ್ದರೆ, ಎರಡನೇ ಅವಧಿಗೆ ಸಾಮಾನ್ಯ ಮೀಸಲು ನಿಗದಿಯಾಗಿದ್ದ ಹಿನ್ನೆಲೆಯಲ್ಲಿ ಪ್ರೇಮಾನಂದ ಶೆಟ್ಟಿ ಮೇಯರ್ ಆಗಿ ಆಯ್ಕೆಯಾಗಿದ್ದರು. ಕಳೆದ ವರ್ಷ ಸರಕಾರ ಪ್ರಕಟಿಸಿದ್ದ ಮೂರನೇ ಅವಧಿಯ ಮೀಸಲಾತಿಯೂ ‘ಸಾಮಾನ್ಯ’ ಅಭ್ಯರ್ಥಿಗೆ ನಿಗದಿಯಾಗಿತ್ತು.

"ಕಳೆದ ವರ್ಷ 23ನೆ ಅವಧಿಗೆ ಮೇಯರ್ ಹಾಗೂ ಉಪ ಮೇಯರ್ ಸ್ಥಾನದ ಮೀಸಲಾತಿ ರಾಜ್ಯದಿಂದ ಪ್ರಕಟವಾಗಿತ್ತು. ಆದರೆ ಚುನಾವಣೆ ನಡೆದಿರಲಿಲ್ಲ. ಇದೀಗ 24ನೆ ಅವಧಿಗೆ ಮೀಸಲಾತಿ ಪ್ರಕಟವಾಗಿದೆ. 23ನೆ ಅವಧಿಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಗೆ ಸಂಬಂಧಿಸಿ ದಿನಾಂಕ ನಿಗದಿಯಾಗಬೇಕಾಗಿದೆ. ಈ ಬಗ್ಗೆ  ಸ್ಪಷ್ಟನೆಯನ್ನು ಕೇಳಲಾಗಿದೆ".

- ಅಕ್ಷಯ್ ಶ್ರೀಧರ್, ಆಯುಕ್ತರು, ಮಂಗಳೂರು ಮಹಾನಗರ ಪಾಲಿಕೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X