Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳಿಗೆ...

ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳಿಗೆ ಸನ್ಮಾನ ಮಾಡಿರುವುದು ಅಸಹ್ಯಕರ: ನ್ಯಾ. ಸಾಳ್ವಿ

ವಾರ್ತಾಭಾರತಿವಾರ್ತಾಭಾರತಿ24 Aug 2022 9:41 PM IST
share
ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳಿಗೆ ಸನ್ಮಾನ ಮಾಡಿರುವುದು ಅಸಹ್ಯಕರ: ನ್ಯಾ. ಸಾಳ್ವಿ

ಮುಂಬೈ,ಆ.24: ಅಪರಾಧಿಗಳಿಗೆ ಜೈಲು ಶಿಕ್ಷೆಯನ್ನು ರದ್ದುಪಡಿಸುವ ಅಧಿಕಾರ ಸರಕಾರಕ್ಕಿದೆ. ಆದರೆ ಬಿಲ್ಕಿಸ್ ಬಾನೊ ಪ್ರಕರಣದಲ್ಲಿ ಬಿಡುಗಡೆಯಾದ ಅಪರಾಧಿಗಳನ್ನು ಕೆಲವರು ಸನ್ಮಾನಿಸಿರುವುದು ಅಸಹ್ಯಕರ ಎಂದು ನಿವೃತ್ತ ನ್ಯಾಯಾಧೀಶ ಯು.ಡಿ. ಸಾಳ್ವಿ ಹೇಳಿದ್ದಾರೆ. 14 ವರ್ಷಗಳ ಹಿಂದೆ ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಾಧೀಶರಾಗಿ ಸಾಳ್ವಿ ಅವರು ಬಿಲ್ಕಿಸ್ ಬಾನು ಪ್ರಕರಣದ ವಿಚಾರಣೆ ನಡೆಸಿದ್ದ ರು ಹಾಗೂ 11 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದರು.

  ‘‘ ಬಿಲ್ಕಿಸ್ ಬಾನೊ ಪ್ರಕರಣದಲ್ಲಿ 11 ಮಂದಿಯನ್ನು ಅಪರಾಧಿಗಳೆಂದು ತೀರ್ಪು ನೀಡುವ ಮೂಲಕ ತಾನು ವಿಶೇಷವಾದುದನ್ನು ಸಾಧಿಸಿದ್ದೇನೆ ಎಂದು ಭಾವಿಸುವುದಿಲ್ಲ. ತೀರ್ಪು ನೀಡುವುದೇ ನನ್ನ ಕರ್ತವ್ಯವಾಗಿದೆ’’ ಎಂದು ಸಾಳ್ವಿ ಹೇಳಿದ್ದಾರೆ. ‘ಅನ್ಯಾಯ ಹಾಗೂ ತಾರತಮ್ಯದ ವಿರುದ್ಧ ಏಕತೆ’ ಎಂಬ ಸಂಘಟನೆಯು ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

 ‘‘ಜೈಲು ಶಿಕ್ಷೆಯನ್ನು ರದ್ದುಪಡಿಸುವ ಅಧಿಕಾರ ರಾಜ್ಯ ಸರಕಾರಕ್ಕಿದೆ ಕಾನೂನಿನಡಿಯಲ್ಲಿಯೇ ಈ ಅಧಿಕಾರವನ್ನು ರಾಜ್ಯ ಸರಕಾರಕ್ಕೆ ನೀಡಲಾಗಿದೆಯೆಂದು ಸಾಳ್ವೆ ತಿಳಿಸಿದರು. ಆದಾಗ್ಯೂ ಅಪರಾಧಿಗಳನ್ನು ಅವಧಿ ಪೂರ್ಣಗೊಳ್ಳುವ ಮೊದಲೇ ಬಿಡುಗಡೆಗೊಳಿಸಿರುವುದಕ್ಕೆ ಸಂಬಂಧಿಸಿದ ವರದಿಗಳನ್ನು ತಾನು ಪರಿಶೀಲಿಸಿಲ್ಲ ಹಾಗೂ ಅವರ ಬಿಡುಗಡೆಗೆ ಯಾವ್ಯಾವ ಅಂಶಗಳನ್ನು ಪರಿಗಣಿಸಲಾಗಿದೆಯೆಂಬ ಬಗ್ಗೆತನಗೆ ತಿಳಿದಿಲ್ಲವಾದ್ದರಿಂದ ಆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲವೆಂದು ಸಾಳ್ವಿ ತಿಳಿಸಿದರು.

  ‘‘ಆದರೆ ಬಿಡುಗಡೆಗೊಂಡ ಬಳಿಕ ಕೆಲವರು ಅವರನ್ನು ಸನ್ಮಾನಿಸಿರುವುದು ಅತ್ಯಂತ ಕೆಟ್ಟ ಅಭಿರುಚಿಯಾಗಿದೆ. ಈ ಅಪರಾಧಿಗಳು ತಾವಾಗಿಯೇ ಆ ಸನ್ಮಾನವನ್ನು ಸ್ವೀಕರಿಸಬಾರದಿತ್ತು’’ ಎಂದು ಸಾಳ್ವಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

 ಬಿಲ್ಕಿಸ್ ಬಾನು ಪ್ರಕರಣದ 11 ಮಂದಿ ಅಪರಾಧಿಗಳ ಜೈಲು ಶಿಕ್ಷೆಯನ್ನು ರದ್ದುಪಡಿಸಿದ ಗುಜರಾತ್ ಸರಕಾರವು ಅವರನ್ನು ಈ ವರ್ಷದ ಆಗಸ್ಟ್ 15ರಂದು ಬಿಡುಗಡೆಗೊಳಿಸಿತ್ತು.

 ತನಗೆ ಜೀವಬೆದರಿಕೆಯಿದೆಯೆಂದು ಬಿಲ್ಕಿಸ್ ಬಾನು ದೂರು ನೀಡಿದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಚ್ 2004ರಲ್ಲಿ ಪ್ರಕರಣದ ತನಿಖೆಯನ್ನು ಅಹ್ಮದಾಬಾದ್ನಿಂದ ಮುಂಬೈಗೆ ವರ್ಗಾಯಿಸಿತ್ತು.

 ಸಾಳ್ವೆ ನ್ಯಾಯಾಧೀಶರಾಗಿದ್ದ ಸಿಬಿಐನ ವಿಶೇಷ ನ್ಯಾಯಾಲಯವು 2008ರ ಜೂನ್ 21ರಂದು ಪ್ರಕರಣದ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿತ್ತು.

  ಬಹಳ ಸಮಯದ ಹಿಂದೆ ತಾನು ನೀಡಿದ್ದ ತೀರ್ಪನ್ನು ತಾನು ಮತ್ತೊಮ್ಮೆ ಓದಬೇಕೆಂದು ಬಯಸಿದ್ದೇನೆ. ಆದರೆ ಅದು ಲಭ್ಯವಿಲ್ಲವೆಂದು ಸಾಳ್ವಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X