Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆ.28ರಂದು ಮಂಗಳೂರು ವಿವಿಯಲ್ಲಿ ಪ್ರೊ....

ಆ.28ರಂದು ಮಂಗಳೂರು ವಿವಿಯಲ್ಲಿ ಪ್ರೊ. ಇವಿ ರಾಮಕೃಷ್ಣರಿಂದ ಉಪನ್ಯಾಸ

ನಾರಾಯಣಗುರು ಅಧ್ಯಯನ ಪೀಠ ಸಹಭಾಗಿತ್ವ

ವಾರ್ತಾಭಾರತಿವಾರ್ತಾಭಾರತಿ25 Aug 2022 2:12 PM IST
share
ಆ.28ರಂದು ಮಂಗಳೂರು ವಿವಿಯಲ್ಲಿ ಪ್ರೊ. ಇವಿ ರಾಮಕೃಷ್ಣರಿಂದ ಉಪನ್ಯಾಸ

ಮಂಗಳೂರು: ಪಿಪಿ ಗೋಮತಿ ಸ್ಮಾರಕ ಶಿಕ್ಷಣ ಟ್ರಸ್ಟ್ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ಆಶ್ರಯದಲ್ಲಿ ಆ.28ರಂದು ಗುಜರಾತ್‌ನ ಸೆಂಟ್ರಲ್ ಯುನಿವರ್ಸಿಟಿಯ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಇ.ವಿ.. ರಾಮಕೃಷ್ಣನ್ ಅವರಿಂದ ‘ಶ್ರೀ ನಾರಾಯಣ ಗುರು: ಸಂತ, ಸುಧಾರಕ, ಕವಿ’  ಎಂಬ ವಿಷಯದಲ್ಲಿ ಉಪನ್ಯಾಸವನ್ನು ಆಯೋಜಿಸಲಾಗಿದೆ.

ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಸಂಜೆ 4.30ಕ್ಕೆ ಈ ವಿನತೂನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಪ್ರೊ.ಪಿ.ಪಿ.ಗೋಮತಿ ಅವರು ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕೆಲಸ ಮಾಡಿದವರು. 1984 ರಲ್ಲಿ ನಿವೃತ್ತರಾದ ನಂತರ ಅಕ್ಟೋಬರ್ 2014 ರಲ್ಲಿ ಅವರ ಮರಣದವರೆಗೂ ಮಂಗಳೂರಿನ ರಾಷ್ಟ್ರೀಯ ಮಹಿಳಾ ಶಿಕ್ಷಣ ಸೊಸೈಟಿಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. 

ಪಿ.ಪಿ.ಗೋಮತಿಯವರು ಯಾವುದೇ ಪ್ರಕಾರದ ತಾರತಮ್ಯ ಇಲ್ಲದ ಸಮಾಜದ ಕನಸು ಕಂಡವರು.  ನಮ್ಮ ಪ್ರತಿಯೊಂದು ಹೆಜ್ಜೆಗಳು ಸರಿಯಾದ ದಿಕ್ಕಿನಲ್ಲಿದ್ದರೆ ನಮ್ಮನ್ನು ಆ ಹೆಜ್ಜೆಗಳು ಆದರ್ಶ ಜಗತ್ತಿನತ್ತ ಕೊಂಡಯ್ಯಬಲ್ಲವು ಎಂದು ಆಶಿಸಿದ್ದರು.  ಪಿ.ಪಿ.ಗೋಮತಿ ಸ್ಮಾರಕ ಶಿಕ್ಷಣ ಟ್ರಸ್ಟ್ ಅತ್ಯುತ್ತಮ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಆರ್ಥಿಕ ಬಡ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ 1,00,000 ರೂ.ಗಳ ವಿದ್ಯಾರ್ಥಿ ವೇತನವನ್ನು ಒದಗಿಸುತ್ತಿದೆ. ಮಂಗಳೂರಿನಲ್ಲಿ ಖ್ಯಾತ ವಿದ್ವಾಂಸರು, ಶಿಕ್ಷಣ ತಜ್ಞರು ಅಥವಾ ಸಾಮಾಜಿಕ ಕಾರ್ಯಕರ್ತರ ಉಪನ್ಯಾಸಗಳನ್ನು ಸಹ ಆಯೋಜಿಸುತ್ತಿದೆ.

ಗುಜರಾತ್‌ನ ಸೆಂಟ್ರಲ್ ಯುನಿವರ್ಸಿಟಿಯ ಖ್ಯಾತ ಪ್ರೊಫೆಸರ್ ಆಗಿರುವ ಪ್ರೊ. ಇ.ವಿ. ರಾಮಕೃಷ್ಣನ್, ಬೋಧನೆ ಮತ್ತು ಸಂಶೋಧನೆಯಲ್ಲಿ ನಲವತ್ತೊಂದು ವರ್ಷಗಳಿಗಿಂತ ಅಧಿಕ ಅನುಭವ ಹೊಂದಿರುವ ಖ್ಯಾತ ಶಿಕ್ಷಣ ತಜ್ಞ. ಇಂಗ್ಲಿಷ್ ಮತ್ತು ಮಲಯಾಳಂಗಳಲ್ಲಿ ಕವನ ಮತ್ತು ವಿಮರ್ಶೆಗಳನ್ನು ಪ್ರಕಟಿಸಿರುವ ದ್ವಿಭಾಷಾ ಬರಹಗಾರ.

2010ರಲ್ಲಿ ಗುಜರಾತ್‌ನ ಸೆಂಟ್ರಲ್ ಯುನಿವರ್ಸಿಟಿಯಲ್ಲಿ ಪ್ರೊಫೆಸರ್ ಆಗಿ ವೃತ್ತಿ ಆರಂಭಿಸುವ ಮೊದಲು ಅವರು ಹೈದರಾಬಾದ್‌ನ ಇಎಫ್‌ಎಲ್ ಯುನಿವರ್ಸಿಟಿ, ಮಹಾರಾಷ್ಟ್ರ ಜಲ್ನಾದ ಜೆ.ಇ.ಎಸ್. ಯುನಿವರ್ಸಿಟಿ, ಸೂರತ್‌ನ ವೀರ್ ನರ್ಮದ್ ಸೌತ್ ಗುಜರಾತ್ ಯುನಿವರ್ಸಿಟಿಯಂತಹ ವಿವಿಧ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮತ್ತೊಂದು ವಿಶೇಷ ಆಕರ್ಷಣೆಯಾಗಿ ನಾರಾಯಣ ಗುರು ವಿರಚಿತ ಕಾವ್ಯದ ಹಾಡುಗಾರಿಕೆ ನಡೆಯಲಿದೆ. ಕರ್ನಾಟಕ ಸಂಗೀತ ಕ್ಷೇತ್ರದ ಉತ್ಕೃಷ್ಟ ಗಾಯಕರಲ್ಲಿ ಓರ್ವರಾದ ವಿದ್ವಾನ್ ಟಿಎಂ ಕೃಷ್ಣ  ಹಾಗೂ ತಂಡದಿಂದ ಈ ಕಾರ್ಯಕ್ರಮ ನಡೆಯಲಿದೆ. ಅಕ್ಕರೈ ಶುಭಲಕ್ಷ್ಮಿ ವಯಲಿನ್‌ನಲ್ಲಿ, ಅರುಣ್ ಪ್ರಕಾಶ್ ಮೃದಂಗದಲ್ಲಿ ಹಾಗೂ ಚಂದ್ರಶೇಖರ ಶರ್ಮ ಘಟಂನಲ್ಲಿ ಸಹಕರಿಸಲಿದ್ದಾರೆ. ಸೆ.9ರಂದು ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿಯ ಸಂದರ್ಭದಲ್ಲೇ ಮಂಗಳೂರಿನಲ್ಲಿ ಈ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X