Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾರ್ಖಂಡ್ ಸಿಎಂ ಮೇಲೆ ಶಾಸಕ ಸ್ಥಾನದ...

ಜಾರ್ಖಂಡ್ ಸಿಎಂ ಮೇಲೆ ಶಾಸಕ ಸ್ಥಾನದ ಅನರ್ಹತೆಯ ತೂಗುಗತ್ತಿ: ಬಿಜೆಪಿಯನ್ನು ದೂಷಿಸಿದ ಹೇಮಂತ್ ಸೊರೇನ್

ವಾರ್ತಾಭಾರತಿವಾರ್ತಾಭಾರತಿ25 Aug 2022 5:12 PM IST
share
ಜಾರ್ಖಂಡ್ ಸಿಎಂ ಮೇಲೆ ಶಾಸಕ ಸ್ಥಾನದ ಅನರ್ಹತೆಯ ತೂಗುಗತ್ತಿ: ಬಿಜೆಪಿಯನ್ನು ದೂಷಿಸಿದ ಹೇಮಂತ್ ಸೊರೇನ್

ರಾಂಚಿ: ತಮ್ಮನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಚುನಾವಣಾ ಆಯೋಗ(Election Commission) ಶಿಫಾರಸು ಮಾಡಿದೆಯೆಂಬ ಬಿಜೆಪಿ ಹೇಳಿಕೆಗಳ ಕುರಿತು ಮಾಧ್ಯಮ ವರದಿಗಳನ್ನು ನೋಡಿದ್ದೇನೆ ಆದರೆ ಈ ಕುರಿತು ಅಧಿಕೃತವಾಗಿ ತಮಗೆ ಯಾವುದೇ ಮಾಹಿತಿ ಬಂದಿಲ್ಲ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್(Hemanth Soren) ಹೇಳಿದರು. ಸೊರೇನ್ ಅವರನ್ನು ಅನರ್ಹಗೊಳಿಸಬೇಕೆಂಬ ತನ್ನ ಅಪೀಲು ಯಶಸ್ವಿಯಾಗಿದೆ ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿ ನೈತಿಕತೆಯ ನೆಲೆಯಲ್ಲಿ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯಬೇಕೆಂದು ಆಗ್ರಹಿಸಿದೆ.

ಆದರೆ  ಚುನಾವಣಾ ಆಯೋಗದ ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲ.

"ಒಬ್ಬ ಬಿಜೆಪಿ ಸಂಸದ ಸೇರಿದಂತೆ ಕೆಲ ಬಿಜೆಪಿ ನಾಯಕರು(BJP leader), ಸಂಸದನ ಕೈಗೊಂಬೆಯಾಗಿರುವ ಕೆಲ ಪತ್ರಕರ್ತರು  ತಾವಾಗಿಯೇ ಇಸಿಐ ವದಿಯನ್ನು ಸಿದ್ಧಪಡಿಸಿರುವಂತೆ ತೋರುತ್ತಿದೆ. ಇಲ್ಲದೇ ಹೋದರೆ ಚುನಾವಣಾ ಆಯೋಗದ ವರದಿ ಸೀಲ್ ಮಾಡಲ್ಪಟ್ಟ ಕವರಿನಲ್ಲಿರಬೇಕು" ಎಂದು ಸೊರೇನ್ ಆಕ್ರೋಶದಿಂದ ಹೇಳಿದರು.

ಸೊರೇನ್ ಅವರು ತಮಗೆ ತಾವಾಗಿಯೇ ಗಣಿಗಾರಿಕೆ ಲೀಸ್ ಕೊಡಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಈ ಕಾರಣ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು, ವಿಧಾನಸಭೆಯನ್ನು ವಿಸರ್ಜಿಸಬೇಕು ಹಾಗೂ ಮತ್ತೆ ಚುನಾವಣೆ ನಡೆಯಬೇಕು ಎಂದು ಆಗ್ರಹಿಸುತ್ತಿದೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಹೇಳಿದ್ದಾರೆ.

ರಾಜ್ಯದಲ್ಲಿ ಸೊರೇನ್ ಅವರ ಜಾರ್ಖಂಡ್ ಮುಕ್ತಿ ಮೋರ್ಚಾದ  ಮೈತ್ರಿ ಪಕ್ಷವಾಗಿ ಕಾಂಗ್ರೆಸ್ ಇದ್ದು, ಸೊರೇನ್ ಅವರ್ ಸೀಎಂ ಸ್ಥಾನಕ್ಕೆ ಕುತ್ತು ಬಾರದು ಎಂಬ ವಿಶ್ವಾಸದಲ್ಲಿ ಕಾಂಗ್ರೆಸ್ ಪಕ್ಷವಿದೆ.

ಸೊರೇನ್ ಅವರು ಸ್ವಯಂ ಗಣಿಗಾರಿಕೆ ಲೀಸ್ ಪಡೆದುಕೊಂಡು ಜನ ಪ್ರಾತಿನಿಧ್ಯ ಕಾಯಿದೆಯ ಸೆಕ್ಷನ್ 9ಎ ಅನ್ನು ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದ ನಂತರ ನಿಯಮಾನುಸಾರ ರಾಜ್ಯಪಾಲರು ಸಂವಿಧಾನದ 192ನೇ ವಿಧಿಯನ್ವಯ ಈ ಪ್ರಕರಣವನ್ನು ಚುನಾವಣಾ ಆಯೋಗಕ್ಕೆ  ವಹಿಸಿದ್ದರು.

ಸೋಮವಾರ ಚುನಾವಣಾ ಆಯೋಗ ವಿಚಾರಣೆ ಮುಗಿಸಿ ತನ್ನ ಅಭಿಪ್ರಾಯವನ್ನು ಮಂಗಳವಾರ ರಾಜ್ಯಪಾಲ ರಮೇಶ್ ಬಾಯಿಸ್ ಅವರಿಗೆ ಸಲ್ಲಿಸಿತ್ತು.

ಹಣಬಲದೊಂದಿಗೆ ಬಿಜೆಪಿಯು ರಾಜ್ಯ ಸರಕಾರವನ್ನು ಉರುಳಿಸಲು ಯತ್ನಿಸುತ್ತಿದೆ ಎಂದು ಈ ಹಿಂದೆ ಜೆಎಂಎಂ ಮತ್ತು ಕಾಂಗ್ರೆಸ್ ಆರೋಪಿಸಿದ್ದವು.  ನೆರೆಯ ಬಂಗಾಳದಲ್ಲಿ ಮೂವರು ಜೆಎಂಎಂ ಶಾಸಕರು ರೂ 50 ಲಕ್ಷ ನಗದಿನೊಂದಿಗೆ ಸಿಕ್ಕಿ ಬಿದ್ದ ನಂತರ ಮೇಲಿನ ಆರೋಪ ಮಾಡಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X