Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಎತ್ತಿನಹೊಳೆ ಯೋಜನೆಯ ವೆಚ್ಚ 33 ಸಾವಿರ...

ಎತ್ತಿನಹೊಳೆ ಯೋಜನೆಯ ವೆಚ್ಚ 33 ಸಾವಿರ ಕೋಟಿ ರೂ.ಗೆ ಪರಿಷ್ಕೃತ?

10 ವರ್ಷಗಳಲ್ಲಿ 20 ಸಾವಿರ ಕೋಟಿ ರೂ. ಹೆಚ್ಚಳ

ಜಿ.ಮಹಾಂತೇಶ್ಜಿ.ಮಹಾಂತೇಶ್26 Aug 2022 12:37 AM IST
share
ಎತ್ತಿನಹೊಳೆ ಯೋಜನೆಯ ವೆಚ್ಚ 33 ಸಾವಿರ ಕೋಟಿ ರೂ.ಗೆ ಪರಿಷ್ಕೃತ?

ಬೆಂಗಳೂರು: ಭೂ ಸ್ವಾಧೀನ ಸಮಸ್ಯೆಗಳು, ಪರಿಸರ, ಅರಣ್ಯ ತೀರುವಳಿ, ಎನ್‌ಜಿಟಿಯಲ್ಲಿ ದಾಖಲಾದ ದಾವೆಗಳು, ರೈಲ್ವೆ, ರಾಷ್ಟ್ರೀಯ ಹೆದ್ದಾರಿ, ಪೆಟ್ರೋನೆಟ್, ಗೇಲ್ ಕ್ರಾಸಿಂಗ್ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿತ ಇಲಾಖೆಗಳ ಅನುಮತಿ, ಆರ್ಥಿಕ ಸಂಪನ್ಮೂಲಗಳ ಲಭ್ಯತೆ ಕೊರತೆ ಸೇರಿದಂತೆ ಇನ್ನಿತರ ಅಂಶಗಳಿಂದಾಗಿ ವಿಳಂಬಗೊಂಡಿರುವ ಎತ್ತಿನಹೊಳೆ ಯೋಜನೆಯ ವೆಚ್ಚವು 33 ಸಾವಿರ ಕೋಟಿ ರೂ.ಗೆ ಪರಿಷ್ಕೃತಗೊಳ್ಳಲಿದೆ!

ಯೋಜನೆ ಆರಂಭವಾದ ವರ್ಷದಲ್ಲಿ 12,912.36 ಕೋಟಿ ರೂ. ಇದ್ದ ಯೋಜನಾ ವೆಚ್ಚವು ಆಗಸ್ಟ್ ಮೊದಲ ವಾರದ ಹೊತ್ತಿಗೆ 23,251 ಕೋಟಿ ರೂ. ಹೆಚ್ಚಳವಾಗಿತ್ತು. ಇದು ಒಂದು ಟಿಎಂಸಿಗೆ 1,000 ಕೋಟಿ ರೂ.ನಂತೆ ಅಂದಾಜಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಆದರೀಗ ಯೋಜನಾ ವೆಚ್ಚವನ್ನು ಮತ್ತಷ್ಟು ಪರಿಷ್ಕೃತಗೊಳಿಸಿರುವ ಜಲಸಂಪನ್ಮೂಲ ಇಲಾಖೆಯು ಅದನ್ನು 33,000 ಕೋಟಿ ರೂ.ಗೆ ಏರಿಸಿದೆ. ಇದರ ಪ್ರಕಾರ ಯೋಜನೆ ವೆಚ್ಚದಲ್ಲಿ 10 ವರ್ಷದಲ್ಲಿ 20,087.44 ಕೋಟಿ ರೂ. ಹೆಚ್ಚಳವಾಗಿದೆ.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಕುರಿತು ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ವಿವರಣೆ ನೀಡಿರುವ ಜಲಸಂಪನ್ಮೂಲ ಇಲಾಖೆಯು 2012-13ರಿಂದ 2022ರ ಜೂನ್ ಅಂತ್ಯಕ್ಕೆ ಒಟ್ಟಾರೆ 10,783.05 ಕೋಟಿ ರೂ. ವೆಚ್ಚ ಮಾಡಿದೆ ಎಂದು ಮಾಹಿತಿ ಒದಗಿಸಿದೆ. ಜಲಸಂಪನ್ಮೂಲ ಇಲಾಖೆಯು ನೀಡಿರುವ ವಿವರಣಾತ್ಮಕ ಟಿಪ್ಪಣಿಯು ‘the-file.in’ ಗೆ ಲಭ್ಯವಾಗಿದೆ.

2022-23ರ ಜೂನ್ ಅಂತ್ಯಕ್ಕೆ ಒದಗಿಸಿದ್ದ ಒಟ್ಟು 1,044 ಕೋಟಿ ರೂ. ಅನುದಾನದ ಪೈಕಿ 39.07 ಕೋಟಿ ರೂ. ಮಾತ್ರ ವೆಚ್ಚ ಮಾಡಿದೆ. 2012- 13ರಿಂದ ಜೂನ್ 2022ರವರೆಗೆ ಒದಗಿಸಿದ್ದ ಒಟ್ಟು 11,787.98 ಕೋಟಿ ರೂ. ಅನುದಾನದ ಪೈಕಿ 10,793.05 ಕೋಟಿ ರೂ. ಖರ್ಚು ಮಾಡಿರುವುದು ವಿವರಣಾತ್ಮಕ ಟಿಪ್ಪಣಿಯಿಂದ ತಿಳಿದು ಬಂದಿದೆ.

ಯೋಜನೆಗೆ ಎದುರಾಗಿರುವ ಅಡ್ಡಿ ಆತಂಕಗಳನ್ನು ನಿವಾರಿಸಿಕೊಂಡು ನಿಗದಿಪಡಿಸಿದ ಕಾಲಮಿತಿಯಲ್ಲಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು ಎಂದು ಜಲಸಂಪನ್ಮೂಲ ಇಲಾಖೆಯು ಸಮಿತಿಗೆ ತಿಳಿಸಿದೆ. ಮೊದಲನೇ ಹಂತದ ಏತ ಕಾಮಗಾರಿಗಳು, ವಿದ್ಯುತ್ ಪೂರೈಕೆ ಕಾಮಗಾರಿ ಮತ್ತು ಎರಡನೇ ಹಂತದ ಗುರುತ್ವ ಕಾಲುವೆಯ ಪ್ರಾರಂಭಿಕ 55.00 ಕಿ.ಮೀ. ವರೆಗಿನ ಕಾಲುವೆ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸೆಪ್ಟಂಬರ್ 22ರ ಹೊತ್ತಿಗೆ ಪ್ರಾಯೋಗಿಕವಾಗಿ ನೀರು ಹರಿಸಲು ಯೋಜಿಸಲಾಗಿದೆ. ಪ್ರಸಕ್ತ ಪ್ರಗತಿಯಲ್ಲಿರುವ ಮೊದಲನೇ ಹಂತದ ಏತ ಮತ್ತು ವಿದ್ಯುತ್, ಎರಡನೇ ಹಂತದ ಗುರುತ್ವ ಕಾಲುವೆ, ಭೈರಗೊಂಡ್ಲು ಜಲಾಶಯಕ್ಕಿಂತ ಮುಂಚೆ ಕವಲೊಡೆಯುವ ವಿವಿಧ ಫೀಡರ್ ಕಾಲುವೆ ಕಾಮಗಾರಿಗಳನ್ನು 2023-24ರ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ವಿವರ ಒದಗಿಸಿದೆ.

ಭೈರಗೊಂಡ್ಲು ಜಲಾಶಯ ನಂತರದ ಲಿಫ್ಟ್ ಮತ್ತು ಫೀಡರ್ ಕಾಲುವೆ ಕಾಮಗಾರಿಗಳ ಮುಖಾಂತರ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವುದು ಮತ್ತು ಕೆರೆ ತುಂಬಿಸಲು ಅನುಮೋದಿತ ಯೋಜನಾ ವರದಿಯಲ್ಲಿ ಅವಕಾಶ ಕಲ್ಪಿಸಿದೆ. ಎತ್ತಿನಹೊಳೆ ಯೋಜನೆಯಿಂದ ಮಾತ್ರ ಈ ಪ್ರದೇಶಗಳಿಗೆ ಸುರಕ್ಷಿತ ಕುಡಿಯುವ ನೀರನ್ನು ಪೂರೈಸಲು ಸಾಧ್ಯವಿದೆ ಎಂದು ಸಮಿತಿಗೆ ಜಲಸಂಪನ್ಮೂಲ ಇಲಾಖೆಯು ಖಚಿತಪಡಿಸಿದೆ.

ಈ ಕಾಮಗಾರಿಗಳನ್ನು ಕೂಡಲೇ ಕೈಗೆತ್ತಿಕೊಳ್ಳಲು ಈ ಜಿಲ್ಲೆಗಳ ಜನಪ್ರತಿನಿಧಿಗಳು ತೀವ್ರವಾಗಿ ಒತ್ತಾಯಿಸುತ್ತಿದ್ದಾರೆ. ಸುಮಾರು 1.5ರಿಂದ 2.00 ಟಿಎಂಸಿ ಸಂಗ್ರಹಣಾ ಸಾಮರ್ಥ್ಯದ ಸಮತೋಲನ ಜಲಾಶಯ ನಿರ್ಮಾಣದ ಪರ್ಯಾಯ ಪ್ರಸ್ತಾವನೆಯನ್ನು ತಯಾರಿಸಲಾಗಿದೆ. ಈ ಪರ್ಯಾಯ ಪ್ರಸ್ತಾವನೆಯನ್ನು ಒಳಗೊಂಡ 23,251.66 ಕೋಟಿ ಮೊತ್ತದ ಪುನರ್ ಪರಿಷ್ಕೃತ ಯೋಜನಾ ವರದಿಯನ್ನು ನಿಗಮದ ನಿರ್ದೇಶಕರ ಮೇರೆಗೆ ಆರ್ಥಿಕ ಇಲಾಖೆಗೆ ಕಳಿಸಿದೆ. ಈ ಸಂಬಂಧ ಕೆಲ ಸ್ಪಷ್ಟೀಕರಣವನ್ನು ಆರ್ಥಿಕ ಇಲಾಖೆ ಕೋರಿದೆ ಎಂದು ಮಾಹಿತಿ ಒದಗಿಸಿದೆ.

ಸಮತೋಲನ ಜಲಾಶಯ ನಿರ್ಮಾಣದ ಪರ್ಯಾಯ ಪ್ರಸ್ತಾವನೆಯಂತೆ ಈಗಾಗಲೇ ಭೈರಗೊಂಡ್ಲು ಜಲಾಶಯದಿಂದ ಡಿಸಿ-5ರವರೆಗಿನ ಲಿಫ್ಟ್ ಕಾಮಗಾರಿ ಡಿಸಿ-5ರಿಂದ ದೊಡ್ಡಬಳ್ಳಾಪುರ ತಾಲೂಕು, ದೇವನಹಳ್ಳಿ ತಾಲೂಕು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಪೈಪ್‌ಲೈನ್‌ಗಳ ಮೂಲಕ ನೀರು ಹರಿಸುವ ಉದ್ದೇಶವಿದೆ.

ಇದಕ್ಕೆಂದು ಎರಡು ಪ್ಯಾಕೇಜ್ ಕಾಮಗಾರಿಗಳ 2,048.20 ಕೋಟಿ ರೂ. ಮೊತ್ತದ ಟೆಂಡರ್ ಆಹ್ವಾನಿಸಿರುವ ಜಲಸಂಪನ್ಮೂಲ ಇಲಾಖೆಯು ಕೋಲಾರ, ಶ್ರೀನಿವಾಸಪುರ ಫೀಡರ್ ಕಾಲುವೆಯ ಸರ್ವೇ ಕಾರ್ಯವನ್ನು ಪೂರ್ಣಗೊಳಿಸಿದೆ ಎಂದು ಸಮಿತಿಗೆ ತಿಳಿಸಿದೆ.

ಅದೇ ರೀತಿ ಎತ್ತಿನಹೊಳೆ ಗುರುತ್ವ ಕಾಲುವೆ ಕೊನೆಯಲ್ಲಿ ಬರುವ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕೋಲಾಲ ಹೋಬಳಿಯ ಭೈರಗೊಂಡ್ಲು ಹತ್ತಿರ 5.78 ಟಿಎಂಸಿ ನೀರನ್ನು ಶೇಖರಿಸಲು ಯೋಜಿಸಿರುವ ಜಲಾಶಯ ನಿರ್ಮಾಣದಿಂದ 7 ಗ್ರಾಮಗಳು ಸಂಪೂರ್ಣ ಮುಳುಗಡೆಯಾಗಲಿವೆ. (ಕೊರಟಗೆರೆ -5, ದೊಡ್ಡಬಳ್ಳಾಪುರ -2) ಕೊರಟಗೆರೆ ತಾಲೂಕಿನ ಕೋಲಾಲ ಹೋಬಳಿಯ 17 ಗ್ರಾಮಗಳ 2,797 ಎಕರೆ 9 ಗುಂಟೆ ಸೇರಿ ಒಟ್ಟು 5,478 ಎಕರೆ 33 ಗುಂಟೆ ಭೂಮಿಯ ಭೂ ಸ್ವಾಧೀನದ ಅವಶ್ಯಕತೆ ಇದೆ ಎಂದು ಮಾಹಿತಿ ಒದಗಿಸಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X