Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಣಚೂರು ಆಸ್ಪತ್ರೆಯಲ್ಲಿ ಕ್ಯಾನ್ಸರ್...

ಕಣಚೂರು ಆಸ್ಪತ್ರೆಯಲ್ಲಿ ಕ್ಯಾನ್ಸರ್ ಗಡ್ಡೆ ತೆರವಿನ ಕ್ಲಿಷ್ಟಕರ ಯಶಸ್ವಿ ಚಿಕಿತ್ಸೆ

*ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಸೆ.3ರವರೆಗೆ ಒಳರೋಗಿಗಳಿಗೆ ಉಚಿತ ಚಿಕಿತ್ಸೆ

ವಾರ್ತಾಭಾರತಿವಾರ್ತಾಭಾರತಿ26 Aug 2022 10:37 AM IST
share
ಕಣಚೂರು ಆಸ್ಪತ್ರೆಯಲ್ಲಿ ಕ್ಯಾನ್ಸರ್ ಗಡ್ಡೆ ತೆರವಿನ ಕ್ಲಿಷ್ಟಕರ ಯಶಸ್ವಿ ಚಿಕಿತ್ಸೆ

ಮಂಗಳೂರು, ಆ.26: ಕಣಚೂರು ಹಾಸ್ಪಿಟಲ್ ಆ್ಯಂಡ್ ರಿಸರ್ಚ್ ಸೆಂಟರ್ (Kanachur Hospital & Research Centre)ನಲ್ಲಿ 17 ವರ್ಷದ ಬಾಲಕನಲ್ಲಿ ಕಾಣಿಸಿಕೊಂಡ ಅಪರೂಪದ ಕ್ಯಾನ್ಸರ್ ಗೆಡ್ಡೆ ತೆರವಿನ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಬ್ದುಲ್ ರಹಿಮಾನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ಚಿಕಿತ್ಸೆಯನ್ನು ಆಸ್ಪತ್ರೆಯ ತಜ್ಞವೈದ್ಯರಾದ ಡಾ.ರವಿವರ್ಮ, ಡಾ.ಗುರುಪ್ರಸಾದ್, ಡಾ.ನಝೀಬ್ ನೇತೃತ್ವದ ತಂಡ ಯಶಸ್ವಿಯಾ ಗಿ ನೆರವೇರಿಸಿದೆ ಎಂದು ಅವರು ತಿಳಿಸಿದರು.

1000 ಹಾಸಿಗೆಗಳುಳ್ಳ ಕಣಚೂರು ಆಸ್ಪತ್ರೆಯಲ್ಲಿ ಈ ರೀತಿಯ ಕ್ಲಿಷ್ಟಕರ ಕ್ಯಾನ್ಸರ್ ಚಿಕಿತ್ಸೆಗೆ ಪರಿಣಾಮಕಾರಿ ಚಿಕಿತ್ಸೆ ನೀಡುವ ತಜ್ಞ ವೈದ್ಯರ ತಂಡವಿದೆ. ಕೊಪ್ಪದ 17 ವರ್ಷದ ಬಾಲಕನಿಗೆ ಮೆದುಳು, ಕಣ್ಣು, ಬಾಯಿ, ದವಡೆಯ ಸಂಪರ್ಕ ಭಾಗದಲ್ಲಿ ಕಾಣಿಸಿಕೊಂಡ ಕ್ಯಾನ್ಸರ್ ಗೆಡ್ಡೆ ದಿನಕಳೆದಂತೆ ಉಲ್ಬಣಿಸಿತ್ತು. ಹಲವು ಆಸ್ಪತ್ರೆಯ ವೈದ್ಯರು ಕೈಚೆಲ್ಲಿದ ಸಂದರ್ಭದಲ್ಲಿ ಕಣಚೂರು ಆಸ್ಪತ್ರೆಯ ವೈದ್ಯರ ತಂಡ ಈ ಸವಾಲನ್ನು ಸ್ವೀಕರಿಸಿ ಯಶಸ್ವಿಯಾಗಿ ಚಿಕಿತ್ಸೆ ನೀಡಿದೆ. ರೋಗಿಯ ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ಗಮನಿಸಿ ಆಯುಷ್ಮಾನ್ ಭಾರತ್ ಯೋಜನೆಯಡಿ ಭರಿಸಲು ಸಾಧ್ಯ ವಾಗದ ಸಂದರ್ಭದಲ್ಲಿ ಈ ಚಿಕಿತ್ಸೆಯ ದುಬಾರಿ ವೆಚ್ಚವನ್ನು ಆಸ್ಪತ್ರೆಯ ಆಡಳಿತವೇ ಭರಿಸಿದೆ ಎಂದವರು ವಿವರಿಸಿದರು.

ಕ್ಲಿಷ್ಟಕರ ಚಿಕಿತ್ಸೆ: ಬಾಲಕನಿಗೆ ಕೋವಿಡ್ ಸಂದರ್ಭದಲ್ಲಿ ರಾಬ್ಡೋಮಿಯಾ ಸಾರ್ಕೋ ಮಾ ಎಂದು ಕರೆಯಲ್ಪಡುವ ಈ ಕ್ಯಾನ್ಸರ್ ರೋಗ ಮುಖದ ದವಡೆಯಲ್ಲಿ ಕಾಣಿಸಿಕೊಂಡಿತ್ತು. ಸಾಮಾನ್ಯವಾಗಿ ದಶಲಕ್ಷ ಜನರಲ್ಲಿ ಒಬ್ಬರಲ್ಲಿ ಕಂಡುಬರುವ ಭಾರತದ ಲ್ಲಿ ಶೇ.1ಕ್ಕಿಂತಲೂ ಕಡಿಮೆ ಜನರಲ್ಲಿ ಕಂಡು ಬಂದಿದೆ. ಈ ಕಾಯಿಲೆ ಬಾಲಕನಲ್ಲಿ ಉಲ್ಬಣಿಸಿದ್ದು, ಆತನ ಮುಖ ವಿಕಾರವಾಗಿ ಊದಿಕೊಂಡು ಗೆಡ್ಡೆ ಬೆಳೆಯಲಾರಂಭಿಸಿತ್ತು. ಕಿಮೋಥೆರಪಿ, ರೇಡಿಯೋ ಥೆರಪಿ ಚಿಕಿತ್ಸೆ ವಿಫಲವಾಗಿದ್ದರಿಂದ ಅಂತಿಮವಾಗಿ ಆತನಿಗೆ ಶಸ್ತ್ರಚಿಕಿತ್ಸೆ ಮಾಡಲು ನಿರ್ಧರಿಸಲಾಯಿತು. ದ್ರವ ಸಾರಜನಕವನ್ನು ಬಳಸಿ ಈ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ. ಕಣ್ಣು, ಮೆದುಳು, ಬಾಯಿ ಸಂಪರ್ಕದ ಭಾಗದಲ್ಲಿ ಕಂಡು ಬಂದ ಈ ಗೆಡ್ಡೆ ಗರಿಷ್ಠ ಮಟ್ಟದಲ್ಲಿ ಬೆಳೆದ ಕಾರಣ ಅತ್ಯಂತ ಸೂಕ್ಷ್ಮ ಕಾರ್ಯಾಚರಣೆಯ ಮೂಲಕ ಚಿಕಿತ್ಸೆ ನೀಡುವ ಸವಾಲು ನಮ್ಮ ಮುಂದಿತ್ತು. ಇದೀಗ ರೋಗಿ ಚೇತರಿಸಿಕೊಂಡಿರುವುದಾಗಿ ಡಾ.ರವಿವರ್ಮ ಮತ್ತು ಗುರುಪ್ರಸಾದ್ ವಿವರಿಸಿದರು.

ಆ.3ರಿಂದ ಸೆ.3ರವರೆಗೆ ಉಚಿತ ಒಳರೋಗಿ ಚಿಕಿತ್ಸೆ

ದೇಶವು ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಆ.3ರಿಂದ ಸೆಪ್ಟಂಬರ್ 3ರವರೆಗೆ ಕಣಚೂರು ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ದಾಖಲಾಗುವವರಿಗೆ ಒಂದು ತಿಂಗಳ ಉಚಿತ ಚಿಕಿತ್ಸೆಯನ್ನು ಆಸ್ಪತ್ರೆಯ ವತಿಯಿಂದ ನೀಡಲಾಗುವುದು ಎಂದು ಅಬ್ದುಲ್ ರಹಿಮಾನ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಡಾ.ಸಂಭ್ರಮ್, ಡಾ.ಗುರುಪ್ರಸಾದ್, ಡಾ.ರೋಹನ್ ಮೊನೀಸ್, ಡಾ.ನಝೀಬ್, ಡಾ.ವಿನ್ಸೆಂಟ್ ಮಥಾಯಸ್ , ಡಾ.ಹರೀಶ್, ಡಾ.ಮನೀಶ್ ಶೆಟ್ಟಿ, ಡಾ.ಸಂದೀಪ್ ಮೊದಲಾದರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X