Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಳಕೆದಾರರಿಗೆ ʼಒಪ್ಪಿಕೊಳ್ಳಿ ಅಥವಾ...

ಬಳಕೆದಾರರಿಗೆ ʼಒಪ್ಪಿಕೊಳ್ಳಿ ಅಥವಾ ಬಿಟ್ಟುಬಿಡಿʼ ಆಯ್ಕೆ ನೀಡಿದ ವಾಟ್ಸ್ಯಾಪ್‍: ದಿಲ್ಲಿ ಹೈಕೋರ್ಟ್ ಕಿಡಿ

ವಾರ್ತಾಭಾರತಿವಾರ್ತಾಭಾರತಿ26 Aug 2022 5:53 PM IST
share
ಬಳಕೆದಾರರಿಗೆ ʼಒಪ್ಪಿಕೊಳ್ಳಿ ಅಥವಾ ಬಿಟ್ಟುಬಿಡಿʼ ಆಯ್ಕೆ ನೀಡಿದ ವಾಟ್ಸ್ಯಾಪ್‍: ದಿಲ್ಲಿ ಹೈಕೋರ್ಟ್ ಕಿಡಿ

ಹೊಸದಿಲ್ಲಿ: ವಾಟ್ಸ್ಯಾಪ್ ಗೌಪ್ಯತೆ ನೀತಿ 2021(Whatsapp privacy policy) ಬಳಕೆದಾರರನ್ನು ʼಒಪ್ಪಿಕೊಳ್ಳಿ ಅಥವಾ ಬಿಟ್ಟು ಬಿಡಿʼ ಎನ್ನುವಂತಹ ಸನ್ನಿವೇಶಕ್ಕೆ ದೂಡಿದೆ ಹಾಗೂ ʼಆಯ್ಕೆಯನ್ನು ಮರೀಚಿಕೆʼಯಾಗಿಸಿ ಬಳಕೆದಾರರನ್ನು ಒಪ್ಪಂದಕ್ಕೆ ಬಲವಂತದಿಂದ ಒಪ್ಪಿಕೊಳ್ಳುವಂತೆ ಮಾಡಿದೆ ಎಂದು ದಿಲ್ಲಿ ಹೈಕೋರ್ಟ್ ಬುಧವಾರ ಹೇಳಿದೆ.

ವಾಟ್ಸ್ಯಾಪ್‍ನ ಗೌಪ್ಯತೆ ನೀತಿಯ ಕುರಿತು ಭಾರತದ ಕಾಂಪಿಟೀಷನ್ ಕಮಿಷನ್ ತನಿಖೆಯಲ್ಲಿ ಹಸ್ತಕ್ಷೇಪ ನಡೆಸಲು ಹೈಕೋರ್ಟಿನ ಏಕಸದಸ್ಯ ಪೀಠ ನಿರಾಕರಿಸಿದ್ದನ್ನು ಪ್ರಶ್ನಿಸಿ ವಾಟ್ಸ್ಯಾಪ್ ಮತ್ತದರ ಮಾತೃ ಸಂಸ್ಥೆ ಮೆಟಾ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸುವ ವೇಳೆ ದಿಲ್ಲಿ ಹೈಕೋರ್ಟ್(delhi high court) ಮೇಲಿನಂತೆ ಹೇಳಿದೆ.

ವಾಟ್ಸ್ಯಾಪ್ ಮತ್ತು ಮೆಟಾ(meta) ತಮ್ಮ ಅಪೀಲುಗಳಲ್ಲಿ ನೀಡಿರುವ ಕಾರಣಗಳು ಸಮರ್ಥನೀಯವಲ್ಲ ಹಾಗೂ ಈ ಹಿಂದೆ ಏಕಸದಸ್ಯ ಪೀಠ ನೀಡಿದ್ದ ಆದೇಶ ಸರಿಯಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮ ಮತ್ತು ಜಸ್‍ಇಸ್ ಸುಬ್ರಮಣಿಯಂ ಪ್ರಸಾದ್ ಅವರನ್ನೊಳಗೊಂಡ ವಿಭಾಗೀಯ ಪೀಠ ಹೇಳಿದೆ. ಈ ಪ್ರಕರಣದ ತೀರ್ಪನ್ನು ಈ ಹಿಂದೆ ಜುಲೈ 25 ರಂದು ವಿಚಾರಣೆ ನಂತರ ನ್ಯಾಯಾಲಯ ಕಾಯ್ದಿರಿಸಿತ್ತು.

"ವಾಟ್ಸ್ಯಾಪ್‍ಗೆ ಭಾರತೀಯ ಮಾರುಕಟ್ಟೆಯಲ್ಲಿ ಪ್ರಮುಖ ಸ್ಥಾನವಿದೆ ಹಾಗೂ ಅದಕ್ಕಿರುವ ಪ್ರಬಲ ಲಾಕ್-ಇನ್ ಎಫೆಕ್ಟ್ ನಿಂದಾಗಿ  ಅಸಮಾಧಾನ ಹೊಂದಿರುವ ಬಳಕೆದಾರರಿಗೂ ಬೇರೆ ಪ್ಲಾಟ್‍ಫಾರ್ಮ್‍ಗೆ ಬದಲಿಸಲು ಸಾಧ್ಯವಾಗುತ್ತಿಲ್ಲ" ಎಂದು ನ್ಯಾಯಾಲಯ ಹೇಳಿದೆ.

ವಾಟ್ಸ್ಯಾಪ್‍ನ ಹೊಸ ಗೌಪ್ಯತೆ ನೀತಿಯು ಕಾಂಪಿಟೀಷನ್ ಕಾಯಿದೆ 2000 ಇದನ್ನು ಉಲ್ಲಂಘಿಸುತ್ತದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಹೇಳಿ ಕಳೆದ ವರ್ಷದ ಮಾರ್ಚ್ ತಿಂಗಳಿನಲ್ಲಿ ಆಯೋಗ ತನಿಖೆಗೆ ಆದೇಶಿಸಿತ್ತು.

ಜನವರಿ 2021 ರಲ್ಲಿ ತನ್ನ ಹೊಸ ಗೌಪ್ಯತೆ ನೀತಿ ಬಗ್ಗೆ ಬಳಕೆದಾರರಿಗೆ ಅಧಿಸೂಚನೆ ಕಳುಹಿಸಿದ್ದ ವಾಟ್ಸ್ಯಾಪ್ ತಾನು ಹೊಸ ನೀತಿಯನ್ನು ಸಿದ್ಧಪಡಿಸುತ್ತಿರುವುದಾಗಿ ಹಾಗೂ ಬಳಕೆದಾರರ ಸ್ವಲ್ಪ ಡೇಟಾವನ್ನು ಫೇಸ್ಬುಕ್ ಜೊತೆಗೆ ಹಂಚಿಕೊಳ್ಳುವ ಹಕ್ಕನ್ನು ತಾನು ಕಾಯ್ದಿರಿಸಿಕೊಳ್ಳುವುದಾಗಿ ತಿಳಿಸಿತ್ತು. ಇದು ಬಳಕೆದಾರರಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X