Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈ; ಕೆಎಸ್‌ಸಿಸಿ ವತಿಯಿಂದ ಮಕ್ಕಳ...

ದುಬೈ; ಕೆಎಸ್‌ಸಿಸಿ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

ವಾರ್ತಾಭಾರತಿವಾರ್ತಾಭಾರತಿ26 Aug 2022 7:35 PM IST
share
ದುಬೈ; ಕೆಎಸ್‌ಸಿಸಿ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

ದುಬೈ: ದುಬೈ ಸರ್ಕಾರದ ಕಮ್ಯುನಿಟಿ ಡೆವಲಪ್‌ಮೆಂಟ್ ಅಥಾರಿಟಿ (ಸಿಡಿಎ)ಯಲ್ಲಿ ನೋಂದಾಯಿತ ಸಂಸ್ಥೆಯಾಗಿರುವ ಕರ್ನಾಟಕ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಕ್ಲಬ್ (ಕೆಎಸ್‌ಸಿಸಿ), ಯುಎಇ,  ಆ.21 ರಂದು ದುಬೈ ಅಲ್ ನಹದಾದ ಲ್ಯಾವೆಂಡರ್ ಹೋಟೆಲ್‌ನಲ್ಲಿ ʼಬೇಸಿಗೆ ಶಿಬಿರ-2022ʼ ಅನ್ನು ಯಶಸ್ವಿಯಾಗಿ ಆಯೋಜಿಸಿತು.

ಎ.ಕೆ. ಬಿಲ್ಡಿಂಗ್ ಕಾಂಟ್ರಾಕ್ಟಿಂಗ್ ವ್ಯವಸ್ಥಾಪಕ ನಿರ್ದೇಶಕರಾದ ಮೊಹಮ್ಮದ್ ಶಾಫಿ ಹಾಗು ಲ್ಯಾವೆಂಡರ್ ಹೋಟೆಲ್ ಅಲ್ ನಹ್ದಾ ದುಬೈನ ಕ್ಲಸ್ಟರ್ ಮ್ಯಾನೇಜರ್ ಡೇವಿಡ್ ವಿಲಿಯಮ್ಸ್ ಬೇಸಿಗೆ ಶಿಬಿರವನ್ನು ಉದ್ಘಾಟಿಸಿದರು.

ಉದ್ಯಮಿ ನಾಸಿರ್ ಶೇಖ್ ಅಧಿವೇಶನಕ್ಕೆ ಚಾಲನೆ ನೀಡಿದರು. ಈ ಶಿಬಿರವು ಶಿಬಿರಾರ್ಥಿಗಳಲ್ಲಿ ಆತ್ಮ ಸ್ಥೈರ್ಯವನ್ನು ತುಂಬುವುದರ ಜೊತೆಗೆ ವೈಯುಕ್ತಿಕ ಜೀವನದಲ್ಲಿ ಸಹಕಾರಿಯಾಗಲಿ ಎಂದು ಶುಭ ಹಾರೈಸಿದರು.

ಪ್ರೈಮ್‌ಕೇರ್ ಸ್ಪೆಷಾಲಿಟಿ ಕ್ಲಿನಿಕ್ಸ್, ದುಬೈ ಇದರ ಡಾ.ಹಫ್ಸಾ ಖಾದಿರ್, ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಉಪನ್ಯಾಸ ನೀಡುತ್ತಾ, ವೈಯಕ್ತಿಕ ನೈರ್ಮಲ್ಯಕ್ಕೆ ಪ್ರಾಮುಖ್ಯತೆಯನ್ನು ನೀಡಬೇಕೆಂದರು, ಉತ್ತಮ ವೈಯಕ್ತಿಕ ನೈರ್ಮಲ್ಯದಿಂದ ಶೀತ ಮತ್ತು ಜ್ವರದಂತಹ ಸಾಂಕ್ರಾಮಿಕ ರೋಗಗಳಿಂದ ನಮ್ಮನ್ನು ರಕ್ಷಿಸಿಕೊಳ್ಳಬಹುದು ಮತ್ತು ರೋಗಗಳು ಹರಡುವುದನ್ನು ತಡೆಯಲು ಸಹಾಯ ಮಾಡುತ್ತದೆ ಎಂದರು.

ಪ್ರಮುಖ ಭಾಷಣಕಾರರಾಗಿ ಆಗಮಿಸಿದ್ದ ದುಬೈ ಆದಮ್ ಮೆಡಿಕಲ್ ಸೆಂಟರ್ ಇದರ ತಜ್ಞ ವೈದ್ಯರಾದ ಡಾ. ಸಲೀಲ್ ಅಬ್ದುಲ್ ಕಲಾಂ,  ವೈದ್ಯಕೀಯ ಕ್ಷೇತ್ರದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಮುಖ ಪಾತ್ರದ ಕುರಿತು ವಿವರಿಸಿದರು. ವಿದ್ಯಾರ್ಥಿಗಳಿಗೆ ಮೌಲ್ಯಯುತ ವಿಜ್ಞಾನ ಶಿಕ್ಷಣವನ್ನು ನೀಡುವುದು ಬಹುದೊಡ್ಡ ಸವಾಲಾಗಿದೆ, ವಿಜ್ಞಾನವನ್ನು ಕಲಿಸಲು ಶಿಕ್ಷಕರು ಹೇಗೆ ಸಿದ್ಧರಾಗಿದ್ದಾರೆ ಮತ್ತು ವಿಜ್ಞಾನ ಶಿಕ್ಷಣವನ್ನು ಎಲ್ಲಿ ಪ್ರಾರಂಭಿಸಬೇಕು. ಇವುಗಳು ನಾವು ಕಾಳಜಿವಹಿಸಬೇಕಾದ ಪ್ರಶ್ನೆಗಳಾಗಿವೆ. ಮೌಲ್ಯಯುತ ಶಿಕ್ಷಣವು ಪ್ರಾಥಮಿಕ ಶಿಕ್ಷಣವನ್ನು ಅವಲಂಬಿಸಿರುವುದರಿಂದ ಶಾಲಾ ಶಿಕ್ಷಣದ ಪ್ರಾರಂಭದಲ್ಲಿಯೇ ವಿಜ್ಞಾನ ಶಿಕ್ಷಣವನ್ನು ಪ್ರಾರಂಭಿಸಲು ಒತ್ತನ್ನು ನೀಡುವುದು ಮುಖ್ಯವಾಗಿದೆ ಎಂದರು.

ನ್ಯೂಮೆರೊ ಯುನೊ ಟ್ರೈನಿಂಗ್ ಕನ್ಸಲ್ಟಿಂಗ್ ಅಬುಧಾಬಿ ಇದರ ತರಬೇತುದಾರರಾದ ರಿಝ್ವಾನ್ ಅಹ್ಮದ್ ಅವರು ಸಾಮಾಜಿಕ ಸಮುದಾಯದಲ್ಲಿ ಭ್ರಾತೃತ್ವವನ್ನು ಎತ್ತಿಹಿಡಿಯುವ ಪಠ್ಯ ಮತ್ತು ಪಠ್ಯತರ ವಿಷಯಗಳ ಜೊತೆಗೆ ಮೋಜಿನ ಆಟಗಳೊಂದಿಗೆ ಮಕ್ಕಳ ಮನರಂಜಿಸುತ್ತಾ ಕಾರ್ಯಕ್ರಮದುದ್ದಕ್ಕೂ ಮಕ್ಕಳು ಸಕ್ರಿಯವಾಗಿ ತೊಡಗಿಸಿಕೊಳ್ಳಲು ಪ್ರೇರಣೆಯನ್ನು ನೀಡಿದರು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅಬ್ದುಲ್ಲಾ ಹುಸೇನ್ ಅಲ್ ಮಲಿಕ್, ಯುರೋಟೆಕ್ ಗ್ಯಾಸ್ ಸರ್ವಿಸಸ್ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕರಾದ ಪೌಲ್ ಪ್ರಭಾಹರ್, ನವೀಲ್ ರಶೀದ್ ಮತ್ತು ದೀನ್ ಬ್ಯುಸಿನೆಸ್ ಸರ್ವಿಸಸ್ ವ್ಯವಸ್ಥಾಪಕ ನಿರ್ದೇಶಕರಾದ ಅನ್ವರ್ ಭಾಗವಹಿಸಿದರು ಮತ್ತು ವಿವಿಧ ಸಂದರ್ಭಗಳಲ್ಲಿ ಕೆಎಸ್‌ಸಿಸಿ ನಡೆಸಿದ ವಿವಿಧ ಸಾಮಾಜಿಕ ಕಾರ್ಯಗಳನ್ನು ಶ್ಲಾಘಿಸಿದರು, ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಸಂಚಾಲಕರಾದ ನಾಸಿರ್ ಅಬ್ದುಲ್ ಖಾದರ್ ಕಾರ್ಯಕ್ರಮದ ಯಶಸ್ವಿಗೆ ಪ್ರತ್ಯಕ್ಷ ಹಾಗು ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ  ಸಂಸ್ಥೆಯು ಆಭಾರಿಯಾಗಿದೆ ಎಂದರು. ಸಹಾಯಕ ಸಂಚಾಲಕರಾಗಿ ಸಯ್ಯದ್ ಇಫ್ತಿಕಾರ್ ಕಾರ್ಯನಿರ್ವಹಿಸಿದರೆ, ರಾಹಿಲ್  ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X