ಚಿತ್ರದುರ್ಗ: ಕಾರು-ಲಾರಿ ಢಿಕ್ಕಿ; ಮೂವರು ಮೃತ್ಯು, ಮೂವರಿಗೆ ಗಂಭೀರ ಗಾಯ
![ಚಿತ್ರದುರ್ಗ: ಕಾರು-ಲಾರಿ ಢಿಕ್ಕಿ; ಮೂವರು ಮೃತ್ಯು, ಮೂವರಿಗೆ ಗಂಭೀರ ಗಾಯ ಚಿತ್ರದುರ್ಗ: ಕಾರು-ಲಾರಿ ಢಿಕ್ಕಿ; ಮೂವರು ಮೃತ್ಯು, ಮೂವರಿಗೆ ಗಂಭೀರ ಗಾಯ](https://www.varthabharati.in/sites/default/files/images/articles/2022/08/27/347378-1661566597.jpg)
ಚಿತ್ರದುರ್ಗ: ಕಾರು-ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಚಿತ್ರದುರ್ಗ ಹೊರವಲಯದ ಸೀಬಾರ ಸಮೀಪ ನಡೆದಿದೆ.
ಮೃತಪಟ್ಟವರು ಬೆಂಗಳೂರಿನ ಭೂಮಿಕ, ಸಿಂಚನ ಮತ್ತು ಮನೀಶ್ ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದ ಗಿರಿಧರ್, ಆಶಾ ಹಾಗೂ ಲಾರಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರು ಬೆಂಗಳೂರಿನಿಂದ ಶಿರಡಿ ಸಾಯಿಬಾಬ ದರ್ಶನಕ್ಕೆ ಕಾರಿನಲ್ಲಿ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಲಾಸನ್ ಡೈಮಂಡ್ ಲೀಗ್ ಪ್ರಶಸ್ತಿ ಗೆದ್ದ ನೀರಜ್ ಛೋಪ್ರಾ
![](https://www.varthabharati.in/sites/default/files/images/galllery/2022/08/27/67c65bed-d56f-4a48-b751-0f61d6ddba74.jpg)
Next Story