Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಮೋದಿ ಕ್ಷೇತ್ರದಲ್ಲಿ...

ಪ್ರಧಾನಿ ಮೋದಿ ಕ್ಷೇತ್ರದಲ್ಲಿ ಬೀದಿಗಳಲ್ಲೇ ಶವಸಂಸ್ಕಾರ!

ವಾರ್ತಾಭಾರತಿವಾರ್ತಾಭಾರತಿ27 Aug 2022 8:24 AM IST
share
ಪ್ರಧಾನಿ ಮೋದಿ ಕ್ಷೇತ್ರದಲ್ಲಿ ಬೀದಿಗಳಲ್ಲೇ ಶವಸಂಸ್ಕಾರ!

ವಾರಣಾಸಿ: ವಾರಣಾಸಿ(Varanasi)ಯ ಪ್ರಸಿದ್ಧ ಘಾಟ್‍ಗಳು ಸೇರಿದಂತೆ ನಗರದ ಹಲವು ಪ್ರದೇಶಗಳು ಗಂಗಾ(Ganga) ಹಾಗೂ ವರುಣಾ(Varuna) ನದಿ ನೀರಿನಿಂದ ಮುಳುಗಿದ್ದು, ಹರಿಶ್ಚಂದ್ರ(Harishchandra ghat) ಹಾಗೂ ಮಣಿಕಂಟಕ ಘಾಟ್‍(Manikarnika ghat)ಗಳಿಗೆ ಸಂಸ್ಕಾರಕ್ಕಾಗಿ ತಂದ ಮೃತದೇಹಗಳನ್ನು ಅಕ್ಕಪಕ್ಕದ ಬೀದಿಗಳಲ್ಲಿ ಹಾಗೂ ಮನೆಗಳ ಟೆರೇಸ್‍ಗಳ ಮೇಲೆ ಅಂತ್ಯಸಂಸ್ಕಾರ ನಡೆಸುತ್ತಿರುವ ದೃಶ್ಯ ಕಂಡುಬರುತ್ತಿದೆ ಎಂದು ndtv ವರದಿ ಮಾಡಿದೆ.

ಪ್ರವಾಹದಿಂದ ಸಂತ್ರಸ್ತರಾಗಿರುವ ನಿರಾಶ್ರಿತರು ಸುರಕ್ಷಿತ ಪ್ರದೇಶಗಳಲ್ಲಿ ಆಶ್ರಯ ಪಡೆದಿದ್ದು, ಇವರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲು ಆಡಳಿತ ಯಂತ್ರ ಸಜ್ಜಾಗುತ್ತಿದೆ.

ತಮ್ಮ ಕ್ಷೇತ್ರದ ಜನ ಗಂಭೀರ ಸಮಸ್ಯೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಈಗಾಗಲೇ ಪರಿಹಾರ ಶಿಬಿರಗಳಲ್ಲಿ ಆಸರೆ ಪಡೆದಿರುವ ಮಂದಿಗೆ ಸಾಧ್ಯವಾದ ಎಲ್ಲ ನೆರವನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನಾಗ್ವಾ, ಸಾಮ್ನೇ ಘಾಟ್, ಮಾರುತಿನಗರ, ಕಾಶಿಪುರಂ ಸೇರಿದಂತೆ ಹಲವು ಕಡೆಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. "ಮನೆಗೆ ನೀರು ನುಗ್ಗುತ್ತಿದ್ದಂತೆ ಕುಟುಂಬ ಸದಸ್ಯರನ್ನು ಗ್ರಾಮಕ್ಕೆ ಕಳುಹಿಸಿದ್ದೇನೆ ಹಾಗೂ ಮನೆಯನ್ನು ನೋಡಿಕೊಳ್ಳಲು ಒಬ್ಬನೇ ಉಳಿದಿದ್ದೇನೆ" ಎಂದು ಸಾಮ್ನೆ ಘಾಟ್‍ನ ನಿವಾಸಿ ವೀರೇಂದ್ರ ಚೌಬೆ ಹೇಳಿದ್ದಾರೆ.

ಅಸ್ಸಿ ಘಾಟ್‍ನಿಂದ ನಮೋ ಘಾಟ್‍ವರೆಗಿನ ಪ್ರದೇಶಗಳು ಸಂಪೂರ್ಣ ಜಲಾವೃತವಾಗಿದ್ದು, ಹರಿಶ್ಚಂದ್ರ ಘಾಟ್ ಮತ್ತು ಮಣಿಕರ್ಣಿಕಾ ಘಾಟ್‍ಗೆ ಅಂತಿಮ ಸಂಸ್ಕಾರಕ್ಕಾಗಿ ತಂದ ಮೃತದೇಹಗಳನ್ನು ಪಕ್ಕದ ಬೀದಿಗಳಲ್ಲಿ ಅಥವಾ ಟೆರೇಸ್ ಮೇಲೆ ಸುಡುವುದು ಅನಿವಾರ್ಯವಾಗಿದೆ. ಸ್ಥಳಾವಕಾಶದ ಕೊರತೆಯಿಂದಾಗಿ ಶವಸಂಸ್ಕಾರಕ್ಕಾಗಿ ಜನ ಉದ್ದ ಸರದಿಗಳಲ್ಲಿ ನಿಂತಿರುವುದು ಕಂಡುಬರುತ್ತಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಗುಲಾಂ ನಬಿ ಆಝಾದ್ ಬೆಂಬಲಿಸಿ ಮತ್ತೆ 8 ಕಾಂಗ್ರೆಸ್ ಮುಖಂಡರ ರಾಜೀನಾಮೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X