Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಲ್ಕೀಸ್ ಬಾನು ಪ್ರಕರಣದ ಆರೋಪಿಗಳ...

ಬಿಲ್ಕೀಸ್ ಬಾನು ಪ್ರಕರಣದ ಆರೋಪಿಗಳ ಬಿಡುಗಡೆ 2 ದಶಕಗಳ ಗಾಯವನ್ನು ಹಸಿಯಾಗಿಸಿದೆ: ನಟ ಪ್ರಕಾಶ್ ರಾಜ್

ವಾರ್ತಾಭಾರತಿವಾರ್ತಾಭಾರತಿ27 Aug 2022 6:01 PM IST
share
ಬಿಲ್ಕೀಸ್ ಬಾನು ಪ್ರಕರಣದ ಆರೋಪಿಗಳ ಬಿಡುಗಡೆ 2 ದಶಕಗಳ ಗಾಯವನ್ನು ಹಸಿಯಾಗಿಸಿದೆ: ನಟ ಪ್ರಕಾಶ್ ರಾಜ್

ಮೈಸೂರು,ಆ.27:  'ಬಿಲ್ಕೀಸ್ ಬಾನು ಅತ್ಯಾಚಾರಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಿರುವುದು ಗುಜರಾತ್ ಸರ್ಕಾರದ ನಿರ್ಲಜ್ಜ ಕ್ರಮವಾಗಿದ್ದು, ಎರಡು ದಶಕಗಳ ಗಾಯವನ್ನು ಇನ್ನೂ ಹಸಿಯಾಗಿಸಿದೆ' ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಬೇಸರ ವ್ಯಕ್ತಪಡಿಸಿದರು.

ನಗರದ ಪುರಭವನದ  ಮುಂಭಾಗದಲ್ಲಿರುವ ಅಂಬೇಡ್ಕರ್ ಪುತ್ಥಳಿ ಎದುರು ಶನಿವಾರ ಕರ್ನಾಟಕ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ವಿವಿಧ ಸಂಘಟನೆಗಳ ಜತೆಗೂಡಿ ಬಿಲ್ಕೀಸ್ ಬಾನು ಅತ್ಯಾಚಾರಿಗಳ ಅವಧಿಪೂರ್ಣ ಬಿಡುಗಡೆಯನ್ನು ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಗುಜರಾತ್ ಗಲಭೆಯಲ್ಲಿ ದಾಳಿಕೋರರಿಂದ ತಪ್ಪಿಸಿಕೊಂಡು ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದ ಕುಟುಂಬವನ್ನು ಅಡ್ಡಗಟ್ಟಿ ಮೂರು ವರ್ಷದ ಹಸುಳೆ ಸೇರಿದಂತೆ 12 ಜನರನ್ನು ಕೊಂದು ಬಿಲ್ಕೀಸ್ ಬಾನು ಅವರ ಮೇಲೆ 11 ಜನರು  ಅತ್ಯಾಚಾರವೆಸಗಿದ್ದು ಸನ್ನಡತೆಯೇ? ಅಥವಾ ಬಿಡುಗಡೆಯಾದ ನಂತರ ಇವರಿಗೆ ಹಾರ ಹಾಕಿ ಸ್ವಾಗತಿಸದ ಕ್ರಮ ಸನ್ನಡತೆಯೇ? ಇದು ನನ್ನ ದೇಶ ಎಂದು ಪ್ರಕಾಶ್ ರಾಜ್ ವ್ಯಂಗ್ಯವಾಡಿದರು.

'11 ಜನ  ಅತ್ಯಾಚಾರಿಗಳಿಗೆ ಜೀವಾವಧಿ ಶಿಕ್ಷೆ ಕೊಟ್ಟ ನ್ಯಾಯಮೂರ್ತಿ ಸಾಳ್ವೆಯವರು ಅವಧಿಪೂರ್ಣ ಬಿಡುಗಡೆ ವಿಷಯ ತಿಳಿದು ಆತಂಕವಾಗಿದ್ದಾರೆ. ನನ್ನನ್ನೊಮ್ಮೆ ಕೇಳಬಹುದಿತ್ತು. ನಾನು ಅವರಿಗೆ ಯಾಕೆ ಜೀವಾವಧಿ ಶಿಕ್ಷೆ ಕೊಟ್ಟಿದ್ದೆ ಎಂದು ಹೇಳುತ್ತಿದ್ದೆ' ಎಂದು ಸಾಳ್ವೆ  ಹೇಳಿದ್ದನ್ನು ಉಲ್ಲೇಖಿಸಿದರು.

ಮಹಿಳಾ ಹೋರಾಟಗಾರ್ತಿ ಉಮಾದೇವಿ ಮಾತನಾಡಿ, ಗಲಭೆಗಳಲ್ಲಿ ಮಹಿಳೆಯರನ್ನು ಅತ್ಯಾಚಾರ ಮಾಡುವುದನ್ನು ಕೆಲವರು ಒಂದು ಅಸ್ತ್ರವನ್ನಾಗಿ  ಬಳಸಿಕೊಂಡಿದ್ದಾರೆ. ನಮಗೆ ಯಾವ ಪಕ್ಷದ ಮೇಲೂ ನಂಬಿಕೆ ಇಲ್ಲ. ನ್ಯಾಯಾಂಗದ ಮೇಲೆ ಒಂದಷ್ಟು ನಂಬಿಕೆ ಇತ್ತು ಈಗ ಅದೂ ಹೊರಟುಹೋಗಿದೆ. ಹೋರಾಟಗಳನ್ನು ರೂಪಿಸಿ ನ್ಯಾಯ ಪಡೆದುಕೊಳ್ಳಬೇಕು ಎಂದರು.

ಹಿರಿಯ ಹೋರಾಟಗಾರ ಪ.ಮಲ್ಲೇಶ್ ಮಾತನಾಡಿ, ಆಡಳಿತ ಮತ್ತು ನ್ಯಾಯಾಂಗದ ವ್ಯವಸ್ಥೆಯ ಮೇಲೆ ನಂಬಿಕೆ ಹೊರಟುಹೋಗಿದೆ. ಒಬ್ಬಳೇ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಅವರ ಕುಟುಂಬದ 12 ಜನರನ್ನು ಕೊಂದ 11 ಜನರನ್ನು ಯಾವ ಆಧಾರದಲ್ಲಿ ಬಿಟ್ಟಿದ್ದಾರೆ. ಇದೊಂದು ಘೋರ ಅನ್ಯಾಯ. ಇದನ್ನು ಸಂಘಟಿತರಾಗಿ ಪ್ರತಿಭಟಿಸಬೇಕು. ಇನ್ನುಮುಂದೆ ಮನೆ ಮನೆಗೂ ಹೋಗಿ ಈ ವ್ಯವಸ್ಥೆಯ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.

ಪ್ರತಿಭಟನೆಯಲ್ಲಿ ಸಾಹಿತಿ ಡಾ.ಇ.ರತಿರಾವ್, ಡಾ.ವಿ.ಲಕ್ಷ್ಮಿನಾರಾಯಣ, ಡಾ.ಪಂಡಿತಾರಾಧ್ಯ, ಕಾಳಚನ್ನೇಗೌಡ, ಡಾ.ಬಿ.ಜೆ.ವಿಜಯಕುಮಾರ್,  ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು, ಪತ್ರಕರ್ತ ಕೆ.ದೀಪಕ್, ರೈತ ಮುಖಂಡ ಪಿ.ಮರಂಕಯ್ಯ, ಜನಾರ್ಧನ್,  ಕಮಲ್‌ಗೋಪಿನಾಥ್, ಜವರಯ್ಯ, ಸೈಯದ್ ಕಲೀಂ, ಮಾಳವಿಕ ಸೇರಿದಂತೆ ಹಲವರು ಭಾಗವಹಿಸಿದ್ದರು.

ಉತ್ತಮ ಜಾತಿಯ ಹೆಣ್ಣು ಮಕ್ಕಳನ್ನು ಕೆಳಜಾತಿಯವರು ಅತ್ಯಾಚಾರ ಮಾಡಿದರೆ ಎನ್‌ಕೌಂಟರ್ ಮಾಡುವುದು. ಕೆಳವರ್ಗದ ಹೆಣ್ಣುಮಕ್ಕಳನ್ನು ಮೇಲ್ಜಾತಿಯವರು ಅತ್ಯಾಚಾರ ಮಾಡಿದರೆ ಸನ್ನಡತೆ ಆಧಾರದಲ್ಲಿ ಬಿಡುವುದು ಯಾವ ನ್ಯಾಯ? ಇದು ಎರಡು ಸಂಸ್ಕೃತಿಯನ್ನು ಭಿನ್ನ ಮಾಡುವ ಕ್ರಮ.

- ಸಿ.ಬಸವಲಿಂಗಯ್ಯ, ಹಿರಿಯ ರಂಗಕರ್ಮಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X