Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆತ್ಮವಿಶ್ವಾಸವಿರುವ ಕಲಾಕಾರ ಅಬ್ಬರದ...

ಆತ್ಮವಿಶ್ವಾಸವಿರುವ ಕಲಾಕಾರ ಅಬ್ಬರದ ಧ್ವನಿ ಬಳಸುವುದಿಲ್ಲ: ಗಿರೀಶ್ ಕಾಸರವಳ್ಳಿ

ವಾರ್ತಾಭಾರತಿವಾರ್ತಾಭಾರತಿ27 Aug 2022 10:15 PM IST
share
ಆತ್ಮವಿಶ್ವಾಸವಿರುವ ಕಲಾಕಾರ ಅಬ್ಬರದ ಧ್ವನಿ ಬಳಸುವುದಿಲ್ಲ: ಗಿರೀಶ್ ಕಾಸರವಳ್ಳಿ

ಬೆಂಗಳೂರು, ಆ.27: ಯಾವ ಕಲಾಕಾರನಿಗೆ ತನ್ನ ಕಲೆಯ ಬಗ್ಗೆ ಆತ್ಮವಿಶ್ವಾಸ ಇರುತ್ತದೆಯೋ, ಆ ಕಲಾಕಾರ ಅಬ್ಬರದ ಧ್ವನಿಯನ್ನು ಬಳಸುವುದಿಲ್ಲ. ಸಂಯಮದ ಧ್ವನಿಯನ್ನು ಬಳಸುತ್ತಾನೆ. ಆ ಮೂಲಕ ವಾದಕ್ಕೆ ಅಲ್ಲದೇ ಸಂವಾದಕ್ಕೆ ನಾಂದಿಯಾಗುತ್ತಾನೆ. ಆ ಸಂವಾದ ಇಂದಿನ ಅಗತ್ಯವಾಗಿದ್ದು, ಎಂ.ಎಸ್. ಮೂರ್ತಿ ತಮ್ಮ ಕಾದಂಬರಿ ಮೂಲಕ ಅಂತಹ ಸಂವಾದಕ್ಕೆ ಅನುವು ಮಾಡಿಕೊಟ್ಟಿದ್ದಾರೆ ಎಂದು ಖ್ಯಾತ ಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅಭಿಪ್ರಾಯಪಟ್ಟರು. 

ಕಿರಂ ಪ್ರಕಾಶನ ಶನಿವಾರ ಬಸವನಗುಡಿಯ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ವರ್ಲ್ಡ್  ಕಲ್ಚರ್ ನಲ್ಲಿ ಆಯೋಜಿಸಿದ್ದ `ಬೌಲ್’ ಪುಸ್ತಕ ಲೋಕಾರ್ಪಣೆಯ ಸಮಾರಂಭದಲ್ಲಿ ಮಾತನಾಡಿದ ಅವರು, ಕಲಾಕಾರರು ಅಬ್ಬರದ ಧ್ವನಿಯಲ್ಲಿ ಹೇಳಿದರೆ, ಓದುಗ, ಕೇಳುಗ ಹಾಗೂ ನೋಡುಗನು ವಿವೇಚನೆಯನ್ನು ಕಳೆದುಕೊಳ್ಳುತ್ತಾನೆ. ಓದುಗನು ಕಲಾಕಾರ ಹೇಳುತ್ತಿರುವುದೇ ಸರಿ ಎಂದು ವಿವೇಚನೆ ಮಾಡದೆ ನಿರ್ಧಾರಕ್ಕೆ ಬರುತ್ತಾನೆ. ಆದರೆ ಎಂ.ಎಸ್. ಮೂರ್ತಿ ಅದಕ್ಕೆ ಅವಕಾಶ ಕೊಡುವುದಿಲ್ಲ ಎಂದರು.

ಬೌಲ್ ಕೃತಿ ಬೌದ್ಧರ ಭಿಕ್ಷಾ ಪಾತ್ರೆಯನ್ನು ನೆನಪಿಗೆ ತಂದರೂ, ಈ ಕೃತಿ ಅಷ್ಟಕ್ಕೇ ಸೀಮಿತವಾಗದೆ ಹೊಸ ಸಂವಾದವನ್ನು ಹುಟ್ಟುಹಾಕುತ್ತದೆ. ಮೂರ್ತಿ ಅವರು ಈಗಾಗಲೇ ಕಲಾವಿದರಾಗಿ ಹೆಸರುವಾಸಿಯಾದವರು. ಕಲಾಕೃತಿಗಳ ಮೂಲಕ ನೋಡುಗರನ್ನು ಭಿನ್ನ ಆಲೋಚನೆಯತ್ತ ಸೆಳೆದವರು. ಅದೇ ರೀತಿಯಲ್ಲಿ ಇದೀಗ ಬೌಲ್ ಕೃತಿಯಲ್ಲೂ ಕೂಡ ಹೊಸತನದ ಹುಡುಕಾಟ ನಡೆಸಿದ್ದಾರೆ ಎಂದು ತಿಳಿಸಿದರು.

ವಿಮರ್ಶಕ ಪ್ರೊ. ಒ.ಎಲ್. ನಾಗಭೂಷಣಸ್ವಾಮಿ ಮಾತನಾಡಿ, ಮೂರ್ತಿ ಅವರ ಪುಸ್ತಕ ಬದಲಾವಣೆಯನ್ನು ಬಯಸುತ್ತದೆ. ಬೌಲ್ ಕೃತಿಯನ್ನು ಓದುಗರು ಓದಿ ಕಲ್ಪಿಸಿಕೊಳ್ಳಬೇಕು. ಬೇರೆಯವರ ಮಾತು ಅದಕ್ಕೆ ಅಡ್ಡಿ ಆಗಬಾರದು. ಬೌಲ್ ಎಂಬುದು ರೂಪಕ, ಖಾಲಿಯಾಗುವುದನ್ನು ಕಲಿಸುವ, ಮನಕ್ಕಿಳಿಸುವ ರೂಪಕ ಎಂದು ಅವರು ಹೇಳಿದರು. 

ಕಾರ್ಯಕ್ರಮದಲ್ಲಿ ಹಿರಿಯ ವಿಮರ್ಶಕರಾದ ಎಚ್.ಎಸ್.ರಾಘವೇಂದ್ರರಾವ್, ಮನು ಚಕ್ರವರ್ತಿ, ಕೃಷ್ಣ ಮಾಸಡಿ, ಕಿರಂ ಪ್ರಕಾಶನದ ಜಿ.ವಿ.ಧನಂಜಯ, ವೆಂಕಟೇಶಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ>>> 'ಬುಲ್ ಬುಲ್ ಪಕ್ಷಿ ಮೇಲೆ ಕೂತು ಹಾರಲು ಸಾಧ್ಯವೇ?': ಸಾವರ್ಕರ್ ಪಠ್ಯದ ಕುರಿತು ಮತ್ತೊಂದು ವಿವಾದ ಸೃಷ್ಟಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X