Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳ ಜೈಲು...

ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳ ಜೈಲು ಶಿಕ್ಷೆ ರದ್ದತಿಗೆ ಸುಪ್ರೀಂಕೋರ್ಟ್ ಗೆ 134 ಮಾಜಿ ಉನ್ನತ ಅಧಿಕಾರಿಗಳ ಪತ್ರ

"ಇದು ಘೋರ, ಪ್ರಮಾದಕರ ನಿರ್ಧಾರ"

ವಾರ್ತಾಭಾರತಿವಾರ್ತಾಭಾರತಿ27 Aug 2022 10:56 PM IST
share
ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳ ಜೈಲು ಶಿಕ್ಷೆ ರದ್ದತಿಗೆ ಸುಪ್ರೀಂಕೋರ್ಟ್ ಗೆ 134 ಮಾಜಿ ಉನ್ನತ ಅಧಿಕಾರಿಗಳ ಪತ್ರ

ಹೊಸದಿಲ್ಲಿ,ಆ.27: ಬಿಲ್ಕಿಸ್ ಬಾನು ಪ್ರಕರಣದಲ್ಲಿ ಅತ್ಯಾಚಾರ ಹಾಗೂ ಕೊಲೆ ಅಪರಾಧಗಳಿಗಾಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಎಲ್ಲಾ 11 ಮಂದಿಯನ್ನು ಬಿಡುಗಡೆಗೊಳಿಸಿದ ಗುಜರಾತ್ ಸರಕಾರದ ‘ಘೋರ ಹಾಗೂ ಪ್ರಮಾದಕರ’ ನಿರ್ಧಾರವನ್ನು ರದ್ದುಪಡಿಸಬೇಕೆಂದು, 134 ಮಂದಿ ಮಾಜಿ ನಾಗರಿಕ ಸೇವಾ ಅಧಿಕಾರಿಗಳು ಸುಪ್ರೀಂಕೋರ್ಟ್ಗೆ ಆಗ್ರಹಿಸಿದ್ದಾರೆ.

‘ಸಾಂವಿಧಾನಿಕ ನಡವಳಿಕೆ ಸಮಿತಿ’ ಎಂಬ ಸಂಘಟನೆಯು ಭಾರತದ ಮುಖ್ಯ ನ್ಯಾಯಮೂರ್ತಿಯವರಿಗೆ ಬರೆದ ಈ ಪತ್ರಕ್ಕೆ ಸಹಿಹಾಕಿದವರಲ್ಲಿ ಮಾಜಿ ನಾಗರಿಕ ಸೇವಾ ಅಧಿಕಾರಿಗಳಾದ ನಜೀಬ್ ಜಂಗ್, ವಜಾಹತ್ ಹಬೀಬುಲ್ಲಾ, ಹರ್ಷ ಮಂಧೇರ್,ಜೂಲಿಯೊ ರಿಬೇರೋ, ಅರುಣಾ ರಾಯ್, ಜಿ.ಬಾಲಚಂದ್ರನ್, ರಾಶೆಲ್ ಚಟರ್ಜಿ, ನಿತಿನ್ ದೇಸಾಯಿ, ಎಚ್.ಎಸ್.ಗುಜ್ರಾಲ್ ಹಾಗೂ ಮೀನಾ ಗುಪ್ತಾ ಅವರು ಕೂಡಾ ಒಳಗೊಂಡಿದ್ದಾರೆ.

ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳನ್ನು ಬಿಡುಗಡೆಗೊಳಿಸಿದ ಗುಜರಾತ್ ಸರಕಾರದ ಕ್ರಮದಿಂದ ತಾವು ಗಾಢವಾಗಿ ನೊಂದಿದ್ದೇವೆ ಎಂದು ಈ ಮಾಜಿ ಅಧಿಕಾರಿಗಳು ತಿಳಿಸಿದ್ದಾರೆ.

 ‘ನಿಮಗೆ ತಿಳಿದಂತೆ ಬಿಲ್ಕಿಸ್ ಬಾನು ಅವರ ಕಥೆಯು ಅಗಾಧವಾದ ಧೈರ್ಯ ಹಾಗೂ ಛಲದ ಕಥೆಯಾಗಿದೆ. ಇದೊಂದು ಜರ್ಝರಿತ ಹಾಗೂ ಘಾಸಿಗೊಂಡ ಯುವತಿಯೊಬ್ಬಳು ನ್ಯಾಯಾಲಗಳಲ್ಲಿ ನ್ಯಾಯಕ್ಕಾಗಿ ಹೋರಾಡಿದ ದಿಟ್ಟತನದ ಅದ್ಭುತ ಗಾಥೆಯಾಗಿದೆ’ ಎಂದು ಪತ್ರದಲ್ಲಿ ಹೇಳಲಾಗಿದೆ.

ಆರೋಪಿಗಳು ಪ್ರಭಾವಿಗಳಾಗಿದ್ದರಿಂದ ನ್ಯಾಯಸಮ್ಮತ ವಿಚಾರಣೆಗಾಗಿ ಈ ಪ್ರಕರಣವನ್ನು ಗುಜರಾತ್ನಿಂದ ಮುಂಬೈನ ಸಿಬಿಐ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿತ್ತು. ಅಲ್ಲದೆ ಇದೊಂದು ಅತ್ಯಂತ ಅಪರೂಪದ ಪ್ರಕರಣ ಕೂಡಾ ಆಗಿತ್ತು. ಆರೋಪಿಗಳನ್ನು ರಕ್ಷಿಸಲು ಹಾಗೂ ಅಪರಾಧವನ್ನು ಮುಚ್ಚಿಹಾಕಲು ಪೊಲೀಸರು ಹಾಗೂ ವೈದ್ಯರು ಕೂಡಾ ಸಾಕ್ಷಗಳನ್ನು ತಿರುಚಲು ಯತ್ನಿಸಿದ್ದರು ಎಂದು ಪತ್ರದಲ್ಲಿ ನೆನಪಿಸಲಾಗಿದೆ.

      

ಬಿಲ್ಕಿಸ್ ಬಾನು ಪ್ರಕರಣದ ಆರೋಪಿಗಳನ್ನು ಮಹಾರಾಷ್ಟ್ರ ರಾಜ್ಯದಲ್ಲಿ ನಡೆದ ವಿಚಾರಣೆಯಲ್ಲಿ ಅಪರಾಧಿಗಳೆಂದು ಘೋಷಿಸಿದ್ದರಿಂದ ಜೈಲು ಶಿಕ್ಷೆ ರದ್ದತಿ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಆ ರಾಜ್ಯವು ಆಲಿಸಬೇಕಿತ್ತೆಂದು ಸಮಿತಿಯು 2015ರ ಸಾಂವಿಧಾನಿಕ ಪೀಠವೊಂದರ ತೀರ್ಪನ್ನು ಉಲ್ಲೇಖಿಸಿ ಹೇಳಿದೆ.

ಬಿಲ್ಕಿಸ್ ಬಾನು ಪ್ರಕರಣದ ಆಪರಾಧಿಗಳ ಜೈಲು ಶಿಕ್ಷೆ ರದ್ದುಪಡಿಸುವ ಕುರಿತು ಎರಡು ತಿಂಗಳುಗಳ ಅಲ್ಪಾವಧಿಯೊಳಗೆ ನಿರ್ಧಾರವನ್ನು ಕೈಗೊಳ್ಳುವಂತೆ ಸುಪ್ರೀಂಕೋರ್ಟ್ ಯಾಕೆ ಗುಜರಾತ್ ಸರಕಾರಕ್ಕೆ ನಿರ್ದೇಶನ ನೀಡಿತ್ತೆಂದು ಸಮಿತಿಯು ಪ್ರಶ್ನಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X