Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಾಲೆಗಳಲ್ಲಿ ಲೈಂಗಿಕ ಕಿರುಕುಳದ ಬಗ್ಗೆ...

ಶಾಲೆಗಳಲ್ಲಿ ಲೈಂಗಿಕ ಕಿರುಕುಳದ ಬಗ್ಗೆ ಜಾಗೃತಿ ಕಾರ್ಯಕ್ರಮ ಕಡ್ಡಾಯ: ಸಿಬಿಎಸ್‌ಇ, ಕೇರಳ ಸರಕಾರಕ್ಕೆ ಹೈಕೋರ್ಟ್ ನಿರ್ದೇಶ

ವಾರ್ತಾಭಾರತಿವಾರ್ತಾಭಾರತಿ27 Aug 2022 10:56 PM IST
share
ಶಾಲೆಗಳಲ್ಲಿ ಲೈಂಗಿಕ ಕಿರುಕುಳದ ಬಗ್ಗೆ ಜಾಗೃತಿ ಕಾರ್ಯಕ್ರಮ ಕಡ್ಡಾಯ: ಸಿಬಿಎಸ್‌ಇ, ಕೇರಳ ಸರಕಾರಕ್ಕೆ ಹೈಕೋರ್ಟ್ ನಿರ್ದೇಶ

ತಿರುವನಂತಪುರ, ಆ. 27: ರಾಜ್ಯದ ಎಲ್ಲ ಶಾಲೆಗಳಲ್ಲಿ ಲೈಂಗಿಕ ಕಿರುಕುಳ ತಡೆ ಕೇಂದ್ರಿತ ಕಾರ್ಯಕ್ರಮಗಳನ್ನು ಆಯೋಜಿಸುವ ಖಾತರಿ ನೀಡುವಂತೆ ಪ್ರೌಢ ಶಿಕ್ಷಣದ ಕೇಂದ್ರ ಮಂಡಳಿ ಹಾಗೂ ರಾಜ್ಯ ಸರಕಾರಕ್ಕೆ ಕೇರಳ ಉಚ್ಚ ನ್ಯಾಯಾಲಯ ಶುಕ್ರವಾರ ನಿರ್ದೇಶಿಸಿದೆ. 

ಶಾಲಾ ಪಠ್ಯದ ಕಡ್ಡಾಯ ಭಾಗವಾಗಿ ಇಂತಹ ಕಾರ್ಯಕ್ರಮಗಳನ್ನು ಸೇರಿಸುವಂತೆ ಶಾಲೆಗಳಿಗೆ ಸಿಬಿಎಸ್‌ಇ ಹಾಗೂ ಕೇರಳ ಸರಕಾರ ನಿರ್ದೇಶಿಸಬೇಕು ಎಂದು ನ್ಯಾಯಮೂರ್ತಿ ಬೆಚು ಕುರಿಯನ್ ಥೋಮಸ್ ಅವರು ಸೂಚಿಸಿದ್ದಾರೆ.  

15 ವರ್ಷದ ಬಾಲಕಿಯ ಅತ್ಯಾಚಾರ ಪ್ರಕರಣದ ಆರೋಪಿ 23 ವರ್ಷದ ವ್ಯಕ್ತಿಯ ಜಾಮೀನು ಅರ್ಜಿ ಆಲಿಸಿದ ಸಂದರ್ಭ ನ್ಯಾಯಮೂರ್ತಿ ಈ ನಿರ್ದೇಶನಗಳನ್ನು ನೀಡಿದರು.  
‘‘ಲೈಂಗಿಕ ಕಿರುಕುಳದ ತಡೆ ಕೇಂದ್ರಿತ ಕಾರ್ಯಕ್ರಮ ಭಾರತ ಸಂವಿಧಾನದ ಕಲಂ 21ಎ ಅಡಿಯಲ್ಲಿ ಶಿಕ್ಷಣದ ಹಕ್ಕಿನ ಭಾಗವಾಗಿದೆ’’ ಎಂದು ನ್ಯಾಯಾಲಯ ಹೇಳಿದೆ. 

ಲೈಂಗಿಕ ದೌರ್ಜನ್ಯದ ವರದಿ ಮಾಡಲು ಹಾಗೂ ತಡೆಯಲು ಮಕ್ಕಳನ್ನು ಸಬಲೀಕರಿಸುವುದು ಶಿಕ್ಷಣ ಪ್ರಕ್ರಿಯೆ ಭಾಗವಾಗಿದೆ ಎಂದು ನ್ಯಾಯಮೂರ್ತಿ ಥಾಮಸ್ ಅಭಿಪ್ರಾಯಪಟ್ಟರು.  ‘‘ಲೈಂಗಿಕ ಕಿರುಕುಳ ಸಂತ್ರಸ್ತರ ಧ್ವನಿಯನ್ನು ನಿಗ್ರಹಿಸಬಾರದು. ಸಂತ್ರಸ್ತರು ಈ ಬಗ್ಗೆ ಧ್ವನಿ ಎತ್ತುವಂತೆ ಸಬಲೀಕರಿಸಲು ಶಿಕ್ಷಣದ ಮೂಲಕ ಮಾತ್ರ ಸಾಧ್ಯ’’ ಎಂದು ನ್ಯಾಯಮೂರ್ತಿ ಹೇಳಿದ್ದಾರೆ.  

ಅದೇ ರೀತಿ ಇದು ಲೈಂಗಿಕ ಕಿರುಕುಳಕ್ಕೆ ನೀಡುವ ಶಿಕ್ಷೆಯ ಅರಿವು ಮೂಡಿಸುತ್ತದೆ. ಇದರಿಂದ ಇಂತಹ ಹೇಯ ಕೃತ್ಯಗಳಲ್ಲಿ ತೊಡಗುವವರನ್ನು   ತಡೆಯಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದ್ದಾರೆ. 

ಲೈಂಗಿಕ ಕಿರುಕುಳ ತಡೆಯಲು ವಯಸ್ಸಿಗೆ ಅನುಗುಣವಾದ ಕಾರ್ಯಕ್ರಮ ವಿಧಾನದ ಬಗ್ಗೆ ಸಲಹೆ ನೀಡಲು ತಜ್ಞರ ಸಮಿತಿ ರೂಪಿಸುವಂತೆ ನ್ಯಾಯಾಲಯ ಸಿಬಿಎಸ್‌ಇ ಹಾಗೂ ರಾಜ್ಯ ಸರಕಾರಕ್ಕೆ ತಿಳಿಸಿದೆ. ಸಮಿತಿ 6 ತಿಂಗಳಲ್ಲಿ ವರದಿ ಸಲ್ಲಿಸಬೇಕು. ಅಲ್ಲದೆ, ಮುಂದಿನ ಶೈಕ್ಷಣಿಕ ವರ್ಷದಿಂದ ಲೈಂಗಿಕ ಶಿಕ್ಷಣದ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಸಿಬಿಎಸ್‌ಇ ಹಾಗೂ ರಾಜ್ಯ ಸರಕಾರ ಆದೇಶ ನೀಡಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X