Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೊರಗ ಸಮುದಾಯ ಶಿಕ್ಷಣ, ಸಂಘಟನೆ,...

ಕೊರಗ ಸಮುದಾಯ ಶಿಕ್ಷಣ, ಸಂಘಟನೆ, ಹೋರಾಟದೊಂದಿಗೆ ಮುನ್ನೆಡೆಯುವುದು ಅಗತ್ಯ: ನ್ಯಾ.ರಾಜು ಎನ್.

ವಾರ್ತಾಭಾರತಿವಾರ್ತಾಭಾರತಿ29 Aug 2022 6:34 PM IST
share
ಕೊರಗ ಸಮುದಾಯ ಶಿಕ್ಷಣ, ಸಂಘಟನೆ, ಹೋರಾಟದೊಂದಿಗೆ ಮುನ್ನೆಡೆಯುವುದು ಅಗತ್ಯ: ನ್ಯಾ.ರಾಜು ಎನ್.

ಕುಂದಾಪುರ : ಆದಿವಾಸಿಗಳಾದ ಕೊರಗ ಸಮುದಾಯವು ಇಂದಿಗೂ ಕೂಡ ನಿರಿಕ್ಷಿತ ಮಟ್ಟದಲ್ಲಿ ಸಮಾಜದ ಮುಖ್ಯವಾಹಿನಿಗೆ ಬರಲು ಪರಿತಪಿಸು ತ್ತಿದೆ. ಇಂತಹ ಕಾಲಘಟ್ಟದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ನೀಡಿದ ಸಂದೇಶ ದಂತೆ ಶಿಕ್ಷಣ, ಸಂಘಟನೆ, ಹೋರಾಟವನ್ನು ಮೂಲಮಂತ್ರವಾಗಿಸಿಕೊಂಡು ಮುನ್ನೆಡೆಯಬೇಕು. ಶಿಕ್ಷಣವೇ ಪ್ರಮುಖ ಆಯುಧ ಎಂಬ ಎಲ್ಲ ಮಹನೀಯರ ಆದರ್ಶ ಪಾಲಿಸಬೇಕು ಎಂದು ಕುಂದಾಪುರ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜು ಎನ್. ಹೇಳಿದ್ದಾರೆ.

ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಉಡುಪಿ ಜಿಲ್ಲಾ ಸಂಘಟನಾ ಸಮಿತಿ, ಕುಂದಾಪುರ ತಾಲೂಕು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಕುಂದಾಪುರ ಹಂಚು ಕಾರ್ಮಿಕರ ಭವನದಲ್ಲಿ ವಿಶ್ವ ಆದಿವಾಸಿ ದಿನಾಚರಣೆ ಪ್ರಯುಕ್ತ ನಡೆದ ’ಆದಿವಾಸಿಗಳ ಅಭಿವೃದ್ಧಿ ಏಕೆ? ಮತ್ತು ಹೇಗೆ ಅವಲೋಕನ’, ಪರಿಶಿಷ್ಟ ಪಂಗಡ ಅದಿವಾಸಿ ಬುಡಕಟ್ಟು ಜನರಿಗೆ ’ಕಾನೂನು ಅರಿವು ಮಾಹಿತಿ ಕಾರ್ಯಾಗಾರ ಹಾಗೂ ಆದಿವಾಸಿ ಅಭಿವೃದ್ಧಿ, ಅಧ್ಯಯನ ಶಿಬಿರ’ ಉದ್ಘಾಟನೆ ಗೊಳಿಸಿ ಮಾತನಾಡಿದರು.

ಸರಕಾರ ಆದಿವಾಸಿಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮ ರೂಪಿಸಿದ್ದು ಶಿಕ್ಷಣ ಪಡೆಯುವ ಮೂಲಕ ಅದನ್ನು ಪಡೆಯಲು ಸಾಧ್ಯವಿದೆ. ಪಟ್ಟಣ ಪ್ರದೇಶದ ಸಂಪರ್ಕವಿಲ್ಲದೆ ಕಾಡುಪ್ರದೇಶದಲ್ಲಿ ಬದುಕುವ ಆದಿವಾಸಿಗಳಿಗೆ ಬದುಕಿನ ವಿವಿಧ ಮಜಲುಗಳನ್ನು, ಪೀಳಿಗೆಯನ್ನು ಅಭಿವೃದ್ಧಿಪಡಿಸಿಕೊಳ್ಳಲು ಕಾನೂನು ಮತ್ತು ಶಿಕ್ಷಣ ಅವಶ್ಯಕತೆ ಇದೆ ಎಂದರು.

ಸಮಾಜ ಕಲ್ಯಾಣ ಇಲಾಖೆ ಮತ್ತು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯು ಪ.ಪಂಗಡ, ಬುಡಕಟ್ಟು ಸಮುದಾಯಕ್ಕೆ ಶೈಕ್ಷಣಿಕವಾಗಿ, ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ನೀಡುತ್ತಿದೆ. ರಾಷ್ಟ್ರೀಯ ಬ್ಯಾಂಕುಗಳಲ್ಲಿ ಸ್ವ ಉದ್ಯೋಗ ಸಹಿತ ವಿವಿಧ ಉದ್ಯಮಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ, ಸ್ಪರ್ಧಾತ್ಮಕ ಪರೀಕ್ಷೆಗೆ ಅಣಿಯಾಗುವವರಿಗೆ ಪೂರ್ವ ತರಬೇತಿ ಸಹಿತ ವಿವಿಧ ಯೋಜನೆ ನೀಡುತ್ತಿದೆ. ಚಲನಚಿತ್ರ, ಕಿರುಚಿತ್ರ, ಸಾಕ್ಷ್ಯಚಿತ್ರ ನಿರ್ಮಿಸುವ ಪ.ಪಂಗಡದ ನಿರ್ದೇಶಕ, ನಿರ್ಮಾಪಕರಿಗೆ ೧೫ ಲಕ್ಷ ಪ್ರೋತ್ಸಾಹ ಧನ ನೀಡುತ್ತಿದೆ. ಈ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಗುರುತರ ಜವಬ್ದಾರಿ ಹಾಗೂ ಸಾಮಾಜಿಕ ಹೊಣೆಗಾರಿಕೆ ನಮ್ಮದಾಗಿದೆ ಎಂದು ಅವರು ತಿಳಿಸಿದರು.

ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಹ ಸಂಚಾಲಕ ಡಾ.ಎಸ್.ವೈ.ಗುರುಶಾಂತ ಆಶಯ ನುಡಿಗಳನ್ನಾಡಿ, ಭಾರತವು ವಿವಿಧ ಕ್ಷೇತ್ರಗಳಲ್ಲಿ ಪ್ರಪಂಚವನ್ನೇ ಗಮನ ಸೆಳೆದಿದೆ. ದೇಶದ ಸಂಸ್ಕೃತಿ, ಸಮೃದ್ದಿ ಹೆಚ್ಚಿಸಿ ಆಚಾರ-ವಿಚಾರದ ತಳಹದಿಯಾಗಿರುವ ಮೂಲನಿವಾಸಿಗಳು ಇನ್ನೂ ಕೂಡ ಸ್ವಾತಂತ್ರ್ಯ ಪೂರ್ವದಲ್ಲಿ ನೋವು ಅನುಭವಿಸದಂತೆ ಈಗಲೂ ಸಮಸ್ಯೆ ಯಲ್ಲಿಯೇ ಇದ್ದಾರೆ. ಭಾರತದಲ್ಲಿ ಆದಿವಾಸಿಗಳು ವಿಶ್ವದ ಬೇರೆ ಕಡೆಗಳಿಗಿಂತ ಹೆಚ್ಚಿದ್ದಾರೆ. ಕೊರಗರ ಸಾಕ್ಷರತೆ ಮತ್ತು ಆರೋಗ್ಯ ವಿಚಾರದಲ್ಲಿ ಇನ್ನಷ್ಟು ಪರಿವರ್ತನೆ ಅಗತ್ಯವಿದೆ ಎಂದರು.

ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆ ಉಡುಪಿಯ ವ್ಯವಸ್ಥಾಪಕ ವಿಶ್ವನಾಥ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆ ಕುಂದಾಪುರದ ಸಹಾಯಕ ನಿರ್ದೇಶಕ ರಾಘವೇಂದ್ರ ವರ್ಣೇಕರ್ ಇಲಾಖೆಗಳ ಯೋಜನೆ ಬಗ್ಗೆ ಮಾಹಿತಿ ನೀಡಿದರು. ‘ಆದಿವಾಸಿಗಳ ಸಂವಿಧಾನ ಬದ್ಧ ಹಕ್ಕುಗಳು ಮತ್ತು ಸಂರಕ್ಷಣೆ ಕಾನೂನುಗಳು’ ವಿಷಯದಲ್ಲಿ ಕುಂದಾಪುರದ ವಕೀಲ ಮಂಜುನಾಥ ಆರ್. ಅರಾಟೆ ವಿಚಾರ ಮಂಡಿಸಿದರು.

ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರದ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾ ಧೀಶ, ತಾಲೂಕು ಸಮಿತಿಯ ಸದಸ್ಯ ಕಾರ್ಯದರ್ಶಿ ಧನೇಶ್ ಮುಗಳಿ, ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಉಡುಪಿ ಜಿಲ್ಲಾಧ್ಯಕ್ಷ ಶ್ರೀಧರ್ ನಾಡ, ಗೌರವಾಧ್ಯಕ್ಷ ಸಂಜು ಕಾರೆಬೈಲು ಉಪಸ್ಥಿತರಿದ್ದರು.

ಕೊರಗ ಸಮುದಾಯದವರು ಪ್ರಾಮಾಣಿಕತೆ, ನಂಬಿಕೆ ಜಾಗೂ ಮುಗ್ದತೆ ಯುಳ್ಳವರಾಗಿದ್ದು ಇಂದಿಗೂ ಕೂಡ ನಿರೀಕ್ಷಿತ ಮಟ್ಟಕ್ಕೆ ಪ್ರಗತಿ ಸಾಧಿಸಿಲ್ಲ ಎಂಬುದು ದುರಂತ. ಶಿಕ್ಷಣದಿಂದ ಪ್ರತಿಯೊಬ್ಬ ವ್ಯಕ್ತಿ ಮೇಲಸ್ತರಕ್ಕೆ ಹೋಗಲು ಸಾಧ್ಯ. ಕೊರಗರ ಆರೋಗ್ಯ ಭಾಗ್ಯ ಸೇವೆ ಕೈಬಿಡುವ ನಿರ್ಧಾರ ಕೈಬಿಟ್ಟು ಈ ಹಿಂದಿನಂತೆ ಅವರಿಗೆ ಆರೋಗ್ಯ ಸೇವೆ ಸಿಗುವಂತಾಗಬೇಕು.
-ಬನ್ನಾಡಿ ಸೋಮನಾಥ ಹೆಗ್ಡೆ, ಅಧ್ಯಕ್ಷರು, ಕುಂದಾಪುರ ವಕೀಲರ ಸಂಘ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X