Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರಧಾನಿ ನರೇಂದ್ರ ಮೋದಿ ಭೇಟಿಯ...

ಪ್ರಧಾನಿ ನರೇಂದ್ರ ಮೋದಿ ಭೇಟಿಯ ಹಿನ್ನೆಲೆ; ಮಂಗಳೂರಿನಲ್ಲಿ ಬಿಗು ಬಂದೋಬಸ್ತ್, ತೀವ್ರ ತಪಾಸಣೆ

ಬಂಗ್ರಕೂಳೂರಿನಲ್ಲಿ ಸಮಾವೇಶಕ್ಕೆ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ29 Aug 2022 9:19 PM IST
share
ಪ್ರಧಾನಿ ನರೇಂದ್ರ ಮೋದಿ ಭೇಟಿಯ ಹಿನ್ನೆಲೆ; ಮಂಗಳೂರಿನಲ್ಲಿ ಬಿಗು ಬಂದೋಬಸ್ತ್, ತೀವ್ರ ತಪಾಸಣೆ

ಮಂಗಳೂರು, ಆ.29: ನಗರ ಹೊರವಲಯದ ಬಂಗ್ರ ಕೂಳೂರಿನ ಗೋಲ್ಡ್ ಫಿಂಚ್‌ನಲ್ಲಿ ಸೆ.2ರಂದು ನಡೆಯುವ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿರುವುದರಿಂದ ಮಂಗಳೂರು ನಗರ ಮತ್ತು ಹೊರವಲಯದಲ್ಲಿ ಬಿಗು ಬಂದೋಬಸ್ತ್ ನಡೆಸಲಾಗುತ್ತಿದೆ.

ರವಿವಾರದಿಂದಲೇ ಪೊಲೀಸರು ವಾಹನಗಳ ತಪಾಸಣೆ ನಡೆಸಲು ಆರಂಭಿಸಿದ್ದು, ಸೋಮವಾರ ತಪಾಸಣೆ ತೀವ್ರಗೊಳಿಸಿದ್ದಾರೆ. ಸಮದ್ರ ತೀರದಲ್ಲೂ ಗಸ್ತು ಆರಂಭಿಸಲಾಗಿದ್ದು, ಕರಾವಳಿ ಕಾವಲು ಪಡೆ ಕಣ್ಗಾವಲು ನಡೆಸುತ್ತಿದೆ.

ಈಗಾಗಲೆ ಬಂಗ್ರಕೂಳೂರಿನಲ್ಲಿ ಸಿದ್ಧತೆ ಕಾರ್ಯ ಭರದಿಂದ ನಡೆಯುತ್ತಿವೆ. ಈ ಮಧ್ಯೆ ಬಿಜೆಪಿಯು ಇದನ್ನು ಪಕ್ಷದ ಕಾರ್ಯಕ್ರಮ ಎಂಬಂತೆ ಬಿಂಬಿಸುತ್ತಿದೆ ಎಂಬ ಆರೋಪ ಸಾರ್ವಜನಿಕ ವಲಯದಿಂದ ಕೇಳಿ ಬಂದಿದೆ.

ಪ್ರಧಾನಿ ಮೋದಿಯ ಪ್ರಯಾಣದ ವೇಳೆ 2 ಕಿ.ಮೀ.ಗಿಂತ ಹೆಚ್ಚು ರಸ್ತೆ ಮೂಲಕ ಸಂಚಾರಕ್ಕೆ ಅವಕಾಶವಿಲ್ಲ ಎಂದು ಪ್ರಧಾನಿ ಕಾರ್ಯಾಲಯ ಸೂಚಿಸಿದ ಹಿನ್ನ್ನೆಲೆಯಲ್ಲಿ  ಸಮಾವೇಶ ನಡೆಯುವ ಗೋಲ್ಡ್ ಫಿಂಚ್ ಮೈದಾನದ ಸಮೀಪವೇ ಮೂರು ತಾತ್ಕಾಲಿಕ ಹೆಲಿಪ್ಯಾಡ್ ನಿರ್ಮಿಸಲಾಗುತ್ತಿದೆ.

ಸೆ.2ರ ಸಂಜೆ ಪ್ರಧಾನಿ ಕೊಚ್ಚಿನ್‌ನಿಂದ ವಿಶೇಷ ವಿಮಾನದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಅಲ್ಲಿಂದ ಹೆಲಿಕಾಪ್ಟರ್ (3 ಹೆಲಿಕಾಪ್ಟರ್ ಬಳಸಲಾಗುತ್ತದೆ) ಮೂಲಕ ಸಮಾವೇಶದ ಸ್ಥಳಕ್ಕೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಧಾನಿಯ ಭದ್ರತೆಯ ಮೇಲುಸ್ತುವಾರಿ ವಹಿಸಿರುವ ಎಸ್‌ಪಿಜಿ ತಂಡವು ಆ.30ರಂದು ಮಂಗಳೂರಿಗೆ ಆಗಮಿಸಲಿದೆ. ಸಮಾವೇಶ ನಡೆಯುವ ಸ್ಥಳದ 200 ಮೀ. ದೂರದಲ್ಲಿ ಸೇಫ್ ರೂಂ ನಿರ್ಮಿಸಲು ಪ್ರಧಾನಿ ಕಾರ್ಯಾಲಯ ಸೂಚನೆ ನೀಡಿದ ಮೇರೆಗೆ ಕರಾವಳಿ ಕಾಲೇಜು, ಎ.ಜೆ. ಇಂಜಿನಿಯರಿಂಗ್ ಕಾಲೇಜು ಸಹಿತ ಪರಿಸರದ ಒಂದು ಕಟ್ಟಡವನ್ನು ಎಸ್‌ಪಿಜಿ ತಂಡವು ಸೇಫ್ ರೂಂ ಎಂದು ಘೋಷಿಸಲಿದೆ ಎಂದು ತಿಳಿದು ಬಂದಿದೆ.

ಗೋಲ್ಡ್‌ಫಿಂಚ್‌ನ ಸುಮಾರು 30 ಎಕರೆ ಮೈದಾನದ ಸುತ್ತಮುತ್ತ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಮಾವೇಶ ನಡೆಯುವ ಸುತ್ತಮುತ್ತಲಿನ ಎಲ್ಲಾ ಅಂಗಡಿ, ಹೊಟೇಲ್, ಕಚೇರಿಗಳನ್ನು ಸೆ.1 ಮತ್ತು 2ರಂದು ಮುಚ್ಚಲು ಕಾವೂರು ಪೊಲೀಸ್ ಠಾಣೆಯ ಪೊಲೀಸರು ಸೂಚನೆ ನೀಡಿದ್ದಾರೆ. ಹಾಗಾಗಿ ಎರಡು ದಿನ ಕೂಳೂರು, ಕೊಟ್ಟಾರ ಚೌಕಿ ಪ್ರದೇಶ ಸಂಪೂರ್ಣ ಬಂದ್ ಆಗುವ ಸಾಧ್ಯತೆ ಇದೆ. ಅಲ್ಲದೆ ಈ ಭಾಗದ ವಾಹನಗಳ ಸಂಚಾರ ಮಾರ್ಗದಲ್ಲಿ ಭಾರೀ ಬದಲಾವಣೆಗೊಳ್ಳಲಿದೆ ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X