Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ‘ರಸ್ತೆ ಗುಂಡಿ’ ಹುಡುಕುವ...

ಮಂಗಳೂರು: ‘ರಸ್ತೆ ಗುಂಡಿ’ ಹುಡುಕುವ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

ವಾರ್ತಾಭಾರತಿವಾರ್ತಾಭಾರತಿ30 Aug 2022 6:29 PM IST
share
ಮಂಗಳೂರು: ‘ರಸ್ತೆ ಗುಂಡಿ’ ಹುಡುಕುವ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸ್ಮಾರ್ಟ್ ಸಿಟಿ ಮಾದರಿ ರಸ್ತೆ, ಗುಂಡಿ ಹುಡುಕುವ ಸ್ಪರ್ಧೆಯ ಫಲಿತಾಂಶ ಮಂಗಳವಾರ ಮಹಾನಗರ ಪಾಲಿಕೆಯ ಮುಂದೆ ನಡೆದ ಕಾರ್ಯಕ್ರಮದಲ್ಲಿ ಪ್ರಕಟಿಸಲಾಯಿತು.

ನಗರದ ಅಪಾಯಕಾರಿ ಮತ್ತು ಮಾನವ ಜೀವಕ್ಕೆ ಅಪಾಯವನ್ನು ತಂದೊಡ್ಡುವ ಗುಂಡಿಗಳನ್ನು ಗುರುತಿಸುವ ಸಲುವಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ಆ.23ರಿಂದ 29ರ ಮಧ್ಯೆ ಸಾರ್ವಜನಿಕರು ಕ್ಲಿಕ್ಕಿಸಿದ ಫೋಟೊಗಳನ್ನು ಪರಿಗಣಿಸಲಾಗಿತ್ತು.

ಸ್ಪರ್ಧೆಯಲ್ಲಿ 1211 ಮಂದಿ ಪಾಲ್ಗೊಂಡಿದ್ದರು. ಆ ಪೈಕಿ 30 ಫೋಟೋಗಳನ್ನು ಆಯ್ಕೆ ಮಾಡಿಕೊಂಡ ತೀರ್ಪುಗಾರರಾದ ಮಾರ್ಸೆಲ್ ಮೊಂತೆರೊ, ದೀಕ್ಷಿತ್ ಅತ್ತಾವರ, ಅಝೀಝ್ ಕುದ್ರೋಳಿ, ಮಹೇಶ್ ಕೋಡಿಕಲ್ ಅವರು ಸಂಚಾಲಕ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತೀರ್ಪು ಪ್ರಕಟಿಸಿದರು.

ಸ್ಪರ್ಧೆಯಲ್ಲಿ ವಿಜೇತರಾದ ಶಕ್ತಿನಗರದ ಆಯೋರಾ (ಪ್ರಥಮ-5 ಸಾವಿರ ರೂ.), ಮಣ್ಣಗುಡ್ಡದ ಶ್ರೇಯಾಸ್ ಕಾಮತ್ (ದ್ವಿತೀಯ 3 ಸಾವಿರ ರೂ.). ಮಹಾಕಾಳಿಪಡ್ಪುವಿನ ಕ್ಯಾರನ್ ಲೋಬೋ (ತೃತೀಯ 2 ಸಾವಿರ ರೂ.) ಅವರಿಗೆ ಮಾಜಿ ಮೇಯರ್ ಶಶಿಧರ ಹೆಗ್ಡೆ, ಮಾಜಿ ಕಾರ್ಪೊರೇಟರ್‌ಗಳಾದ ಪ್ರಕಾಶ್ ಸಾಲ್ಯಾನ್, ಸಬಿತಾ ಮಿಸ್ಕಿತ್ ಬಹುಮಾನ ವಿತರಿಸಿದರು.

ದ.ಕ.ಜಿಲ್ಲಾ ಬಸ್ ನೌಕರರ ಸಂಘ, ಕಾರು ಮತ್ತು ಟೆಂಪೋ ಚಾಲಕರ ಸಂಘ, ದ್ವಿಚಕ್ರ ಸವಾರರರು ಬಹುಮಾನದ ಮೊತ್ತಕ್ಕೆ ಪ್ರಾಯೋಜಕತ್ವ ನೀಡಿದ್ದರು. ಈ ಸಂದರ್ಭ ಸ್ಪರ್ಧೆಗೆ ಬಂದಿದ್ದ  ಗುಂಡಿಗಳ ಫೊಟೋಗಳನ್ನು ಕೂಡ ಪ್ರದರ್ಶಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಐವನ್ ಡಿಸೋಜ ಮಳೆಗಾಲದಲ್ಲಿ ಮೀನುಗಾರಿಕೆಗೆ ನಿಷೇಧವಿದ್ದಂತೆ ರಸ್ತೆ ಅಗೆಯುವುದು ಕಾನೂನಿಗೆ ವಿರುದ್ಧವಾಗಿದೆ. ಈಗಾಗಲೆ ರಸ್ತೆ ಗುಂಡಿಗೆ ಬಿದ್ದು ಹಲವರು ಪ್ರಾಣ ತೆತ್ತಿದ್ದಾರೆ. ಈ ಬಗ್ಗೆ ಮನವಿ ಮಾಡಿದರೂ ಪಾಲಿಕೆ ನಿರ್ಲಕ್ಷ್ಯ ತಾಳಿದೆ. ಈಗ ಪ್ರಧಾನಿ ಬಂದು ಹೋಗುವ ರಸ್ತೆಯ ದುರಸ್ತಿಯಾಗುತ್ತಿದೆ. ಸರಕಾರದ ಪ್ರಮುಖರು ಬರುವಾಗ ಮಾತ್ರ ರಸ್ತೆ ಗುಂಡಿ ಮುಚ್ಚಿದರೆ ಸಾಕೇ, ಸಾಮಾನ್ಯರ ಜೀವಕ್ಕೆ ಬೆಲೆ ಇಲ್ಲವೇ? ಎಂದು ಪ್ರಶ್ನಿಸಿದರು.

ಈ ಸ್ಪರ್ಧೆಯಲ್ಲಿ 1211 ಮಂದಿ ಭಾಗವಹಿಸಿದ್ದು. ಜನರ ಆಕ್ರೋಶ ಎಷ್ಟಿದೆ ಎಂಬುದು ಇದರಿಂದ ವ್ಯಕ್ತವಾಗುತ್ತದೆ. ನಗರದ ಜ್ಯೋತಿ ಸಮೀಪದ ಅಂಬೇಡ್ಕರ್ ವೃತ್ತದಿಂದ ಬಲ್ಮಠದ ಕಲೆಕ್ಟರೇಟ್ ರಸ್ತೆಯ ಮಧ್ಯೆಯೇ ಅಗೆಯಲಾಗಿದೆ. ಮಂಗಳೂರಿನಲ್ಲಿ ನಗರ ಪಾಲಿಕೆಯ ಆಡಳಿತ ಇದೆಯಾ? ಪಾಲಿಕೆಯ ಆಯುಕ್ತರು-ಉಸ್ತುವಾರಿ ಸಚಿವರು ಇದ್ದಾರಾ? ಗುಂಡಿಯಿಂದ ಬಲಿಯಾದ ಇಂಜಿನಿಯರ್‌ನ ಮನೆಗೆ ಸೌಜನ್ಯಕ್ಕಾದರೂ ತೆರಳಿ ಮಾತನಾಡಿದ್ದಾರಾ?ಎಂದು ಐವನ್ ಡಿಸೋಜ ಆಕ್ರೋಶ ವ್ಯಕ್ತಪಡಿಸಿದರು.

ಶೀಘ್ರವಾಗಿ ಈ ಗುಂಡಿಗಳನ್ನು ಮುಚ್ಚದಿದ್ದರೆ ಮೇಯರ್ ಮತ್ತು ಆಯುಕ್ತರು ಹಾಗೂ ಸ್ಮಾರ್ಟ್ ಸಿಟಿಯ ಮ್ಯಾನೆಜಿಂಗ್ ಡೈರೆಕ್ಟರ್  ಕಚೇರಿಯ ಮುಂದೆ ಪ್ರತಿಭಟನೆ ನಡೆಸುವುಧಾಗಿ ಐವನ್ ಡಿಸೋಜ ಎಚ್ಚರಿಕೆ ನೀಡಿದರು.

ಈ ಸಂದರ್ಭ ಚಿತ್ತರಂಜನ್ ಶೆಟ್ಟಿ, ಕೃಷ್ಣ ಆಂಚನ್, ರಮಾನಂದ ಪೂಜಾರಿ, ಸಿದ್ದು ಪೂಜಾರಿ, ಗಣೇಶ್ ಎಕ್ಕೂರು, ಶಶಿ ಪೂಜಾರಿ ಬೋಳಾರ್, ಧನರಾಜ್, ಸತೀಶ್ ಪೆಂಗಲ್, ಜೇಮ್ಸ್ ಪ್ರವೀಣ್, ಮೀನಾ ಟೆಲ್ಲಿಸ್, ಅಶಿತ್ ಪಿರೇರಾ, ವಿಲ್ಪಿಫೆರ್ನಾಂಡಿಸ್, ನಝೀರ್ ಬಜಾಲ್, ಹಸನ್ ಪಳ್ನೀರ್, ಗಂಗಾದರ್ ಯೆಯ್ಯಾದಿ, ಸುರೇಶ್ ಮಲ್ಲಿಕಟ್ಟೆ, ನವೀನ್ ಕಂಕನಾಡಿ, ಪ್ರದೀಪ್ ಕರಾವಳಿ,  ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X