Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೆ.2ರ ಪ್ರಧಾನಿ ಮೋದಿ ಕಾರ್ಯಕ್ರಮ...

ಸೆ.2ರ ಪ್ರಧಾನಿ ಮೋದಿ ಕಾರ್ಯಕ್ರಮ ಹಿನ್ನೆಲೆ; ಇಲ್ಲಿದೆ ವಾಹನ ಸಂಚಾರ, ನಿಲುಗಡೆ, ನಿಷೇಧಿತ ಮಾರ್ಗಗಳ ವಿವರ

ವಾರ್ತಾಭಾರತಿವಾರ್ತಾಭಾರತಿ31 Aug 2022 1:57 PM IST
share
ಸೆ.2ರ ಪ್ರಧಾನಿ ಮೋದಿ ಕಾರ್ಯಕ್ರಮ ಹಿನ್ನೆಲೆ; ಇಲ್ಲಿದೆ ವಾಹನ ಸಂಚಾರ, ನಿಲುಗಡೆ, ನಿಷೇಧಿತ ಮಾರ್ಗಗಳ ವಿವರ

ಮಂಗಳೂರು, ಆ.31: ಪ್ರಧಾನಿ ನರೇಂದ್ರ ಮೋದಿ ಸೆ.2ರಂದು ಬಂಗ್ರ ಕೂಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಹಿನ್ನೆಲೆಯಲ್ಲಿ ವಾಹನಗಳ ನಿಲುಗಡೆ ಮತ್ತು ಸಂಚಾರ ವ್ಯವಸ್ಥೆಯಲ್ಲಿ ಮಾರ್ಪಾಡುಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

ಅಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಜ್ಪೆ ಕೆಂಜಾರು, ಮರವೂರು, ಮರಕಡ, ಕಾವೂರು, ಬೋಂದೆಲ್, ಪದವಿನಂಗಡಿ, ಯೆಯ್ಯಾಡಿ, ರಾ.ಹೆ.66ರ ಕೆಪಿಟಿ ಜಂಕ್ಷನ್‌ನಿಂದ ಕೊಟ್ಟಾರ ಚೌಕಿ, ಕೂಳೂರು, ಎನ್‌ಎಂಪಿಎವರೆಗೆ ಹಾದು ಹೋಗುವ ಎರಡೂ ಬದಿಗಳಲ್ಲಿ ಎಲ್ಲಾ ರೀತಿಯ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಗೋಲ್ಡ್ ಫಿಂಚ್ ಮೈದಾನ ಮತ್ತು ಸುತ್ತಲಿನ 500 ಮೀ. ವ್ಯಾಪ್ತಿಯ ರಸ್ತೆಗಳಲ್ಲೂ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಎಲ್ಲಾ ರೀತಿಯ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಮಂಗಳೂರು ವಿಮಾನ ನಿಲ್ದಾಣದಿಂದ ಕೆಂಜಾರು, ಮರವೂರು, ಮರಕಡ, ಕಾವೂರು, ಬೋಂದೆಲ್, ಪದವಿನಂಗಡಿ, ಯೆಯ್ಯಾಡಿ ಹಾಗೂ ರಾ.ಹೆ.66ರ ಕೆಪಿಟಿ ಜಂಕ್ಷನ್‌ನಿಂದ ಕೊಟ್ಟಾರ ಚೌಕಿ, ಕೂಳೂರು-ಎನ್‌ಎಂಪಿಎವರೆಗೆ ಎಲ್ಲಾ ಸರಕು ವಾಹನ, ಘನ ವಾಹನ, ಇತರ ಸಾರ್ವಜನಿಕ ವಾಹನಗಳ ಸಂಚಾರವನ್ನು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ನಿಷೇಧಿಸಲಾಗಿದೆ.

*ಬಂಗ್ರ ಕೂಳೂರು ಗೋಲ್ಡ್‌ಫಿಂಚ್ ಸಿಟಿ ಮೈದಾನದವರೆಗೆ ಸಾರ್ವಜನಿಕ ಸಮಾವೇಶಕ್ಕೆ ಆಗಮಿಸುವ ಅತೀ ಗಣ್ಯ ವ್ಯಕ್ತಿಗಳು, ಗಣ್ಯ ವ್ಯಕ್ತಿಗಳು, ಸಾರ್ವಜನಿಕರು ಉಪಯೋಗಿಸುವ ವಾಹನಗಳನ್ನು, ನಿಗದಿತ ಪಾರ್ಕಿಂಗ್ ಸ್ಥಳಗಳಿಗೆ ಸಂಚರಿಸಲು ಮತ್ತು ತುರ್ತು ಸೇವೆಯ ವಾಹನಗಳು ಈ ನಿಷೇಧಿತ ರಸ್ತೆಗಳಲ್ಲಿ ಸಂಚರಿಸಲು ಅನುಮತಿಸಲಾಗಿದೆ.

*ಸೆ.2ರಂದು ಬೆಳಗ್ಗೆ 10ರಿಂದ ಪ್ರಧಾನಿ ಮಂಗಳೂರು ವಿಮಾನ ನಿಲ್ದಾಣದಿಂದ ನಿರ್ಗಮಿಸುವವರೆಗೆ ನಂತೂರು, ಬಿಕರ್ನಕಟ್ಟೆ- ಕೈಕಂಬ, ಮಂಗಳ ಜ್ಯೋತಿ, ವಾಮಂಜೂರು, ಪೊರ್ಕೊಡಿ, ಮುಲ್ಕಿ, ಹಳೆಯಂಗಡಿ, ಜೋಕಟ್ಟೆ ಕ್ರಾಸ್, ಲೇಡಿಹಿಲ್ ಹೀಗೆ 9 ಜಂಕ್ಷನ್‌ಗಳಲ್ಲಿ  ಸಂಚಾರ ಬದಲಾವಣೆ ಮಾಡಿ ಅಲ್ಲದೆ ಪರ್ಯಾಯ ರಸ್ತೆಗಳನ್ನು ಗುರುತಿಸಲಾಗಿದೆ.

15 ಕಡೆಗಳಲ್ಲಿ ವಾಹನಗಳ ಪಾರ್ಕಿಂಗ್‌ಗೆ ವ್ಯವಸ್ಥೆ

*ಬಂಗ್ರ ಕೂಳೂರಿನ ಡೆಲ್ಟಾ ಗ್ರೌಂಡ್‌ನಲ್ಲಿ ವಿವಿಐಪಿ ವಾಹನಗಳಿಗೆ, ಕೂಳೂರಿನ ಸೋಮಯಾಜಿ ಮೈದಾನದಲ್ಲಿ ವಿಐಪಿ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಎರಡೂ ವಾಹನಗಳು ಪೊಲೀಸ್ ಇಲಾಖೆಯಿಂದ ಪಾಸ್ ಪಡೆದಿರಬೇಕು.

*ಪಣಂಬೂರು-ತಣ್ಣೀರುಬಾವಿ ರಸ್ತೆಯಲ್ಲಿ ಕವೂರು, ಸುರತ್ಕಲ್, ಪಣಂಬೂರು, ಬಜ್ಪೆ ಮಾರ್ಗವಾಗಿ ಬರುವ ವಾಹನಗಳು ಹಾಗೂ ಉಡುಪಿ ಜಿಲ್ಲೆಯಿಂದ ಬರುವ ವಾಹನಗಳು, ಫಲಾನುಭವಿಗಳ ವಾಹನಗಳು (1500 ಬಸ್‌ಗಳು, 500 ಕಾರುಗಳು) ನಿಲುಗಡೆ ಮಾಡಬೇಕು.

*ಎನ್‌ಎಂಪಿಟಿ ಮೈದಾನದಲ್ಲಿ ಕಾವೂರು, ಸುರತ್ಕಲ್, ಪಣಂಬೂರು, ಬಜ್ಪೆ ಮಾರ್ಗವಾಗಿ ಹಾಗೂ ಉಡುಪಿ ಜಿಲ್ಲೆಯಿಂದ ಬರುವ ವಾಹನಗಳು (200 ಬಸ್‌ಗಳು, 600 ಬೈಕ್‌ಗಳು) ನಿಲುಗಡೆ ಮಾಡಬೇಕು.

*ಪಣಂಬೂರು ಎಂಎಸ್‌ಇಝೆಡ್ ರಸ್ತೆಯಲ್ಲಿ ಕಾವೂರು, ಸುರತ್ಕಲ್, ಪಣಂಬೂರು, ಬಜ್ಪೆ ಮಾರ್ಗವಾಗಿ ಹಾಗೂ ಉಡುಪಿ ಜಿಲ್ಲೆಯಿಂದ ಬರುವ ವಾಹನಗಳು (1900 ಲಘು ವಾಹನಗಳು) ನಿಲುಗಡೆ ಮಾಡಬೇಕು.

*ಬಂಗ್ರ ಕೂಳೂರು ಎಜೆ ಶೆಟ್ಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪೊಲೀಸ್ ಇಲಾಖೆಯಿಂದ ಪಾಸ್ ಪಡೆದಿರುವ ವಿಐಪಿ ವಾಹನಗಳು (100 ಕಾರುಗಳು) ನಿಲುಗಡೆ ಮಾಡಬೇಕು.

*ಬಂಗ್ರ ಕೂಳೂರು ಸಮಾವೇಶ ಕಾರ್ಯಕ್ರಮದ ಪೂರ್ವಭಾಗದಲ್ಲಿ ಅಮೆಝಾನ್ ಗೋದಾಮು ಬಳಿ ಕಾರ್ಯಕ್ರಮಕ್ಕೆ ಬರುವ 2 ಸಾವಿರ ಕಾರುಗಳು ಮತ್ತು 3 ಸಾವಿರ ಬೈಕುಗಳು ನಿಲುಗಡೆ ಮಾಡಬೇಕು.

*ಎ.ಜೆ. ಆಸ್ಪತ್ರೆ ಬಳಿಯ ಕುಂಟಿಕಾನ ಜಂಕ್ಷನ್‌ನಿಂದ ಕಾವೂರು ಜಂಕ್ಷನ್‌ವರೆಗೆ ಬೆಳ್ತಂಗಡಿ ಮತ್ತು ಕಾಸರಗೋಡು ಕಡೆಯಿಂದ ಬರುವ 350 ಬಸ್‌ಗಳ ನಿಲುಗಡೆ ಮಾಡಬೇಕು.

*ಕೆಪಿಟಿ ಮೈದಾನದಲ್ಲಿ ಮುಲ್ಕಿ-ಮೂಡುಬಿದಿರೆ ಕಡೆಯಿಂದ ಬರುವ 200 ಬಸ್‌ಗಳು ಪಾರ್ಕಿಂಗ್ ಮಾಡಬೇಕು.

*ಆರ್‌ಟಿಒ ಟ್ರಯಲ್ ಮೈದಾನದಲ್ಲಿ ಪುತ್ತೂರು, ಸುಳ್ಯದಿಂದ ಬರುವ 50 ಬಸ್‌ಗಳು ಪಾರ್ಕಿಂಗ್ ಮಾಡಬೇಕು.

*ಪದುವಾ ಕಾಲೇಜು ಮೈದಾನದಲ್ಲಿ ಪುತ್ತೂರು, ಸುಳ್ಯದಿಂದ ಬರುವ 250 ಬಸ್‌ಗಳು ಪಾರ್ಕಿಂಗ್ ಮಾಡಬೇಕು.

*ಲಾಲ್‌ಬಾಗ್-ಕರಾವಳಿ ಉತ್ಸವ ಮೈದಾನದಲ್ಲಿ ಮಂಗಳೂರು ನಗರ ವ್ಯಾಪ್ತಿಯಿಂದ ಬರುವ 250 ಬಸ್‌ಗಳು ಪಾರ್ಕಿಂಗ್ ಮಾಡಬೇಕು.

*ಉರ್ವ ಮಾರ್ಕೆಟ್ ಮೈದಾನ ಮತ್ತು ಲೇಡಿಹಿಲ್ ಪೊಂಪೈ ಚರ್ಚ್ ಮೈದಾನದಲ್ಲಿ ಉಳ್ಳಾಲ ತಾಲೂಕಿನಿಂದ ಬರುವ ತಲಾ 100 ಬಸ್‌ಗಳು ಪಾರ್ಕಿಂಗ್ ಮಾಡಬೇಕು.

*ಉರ್ವಸ್ಟೋರ್ ಮೈದಾನ, ಇನ್ಫೋಸಿಸ್ ಹಿಂಭಾಗದ ರಸ್ತೆ ಮೂಲಕ ಕುಂಟಿಕಾನ ತನಕದ ರಸ್ತೆಯಲ್ಲಿ ಬಂಟ್ವಾಳ ತಾಲೂಕಿನಿಂದ ಬರುವ 300 ಬಸ್‌ಗಳಿಗೆ ಪಾರ್ಕಿಂಗ್ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X