Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಐಟಿ ಕ್ಯಾಪಿಟಲ್ ಆಗಿದ್ದ ಬೆಂಗಳೂರು,...

ಐಟಿ ಕ್ಯಾಪಿಟಲ್ ಆಗಿದ್ದ ಬೆಂಗಳೂರು, ಡ್ರಗ್ಸ್ ಕ್ಯಾಪಿಟಲ್ ಆಗುತ್ತಿದೆ: ಮಾಜಿ ಸಚಿವ ಕೃಷ್ಣಭೈರೇಗೌಡ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ1 Sept 2022 8:30 PM IST
share
ಐಟಿ ಕ್ಯಾಪಿಟಲ್ ಆಗಿದ್ದ ಬೆಂಗಳೂರು, ಡ್ರಗ್ಸ್ ಕ್ಯಾಪಿಟಲ್ ಆಗುತ್ತಿದೆ: ಮಾಜಿ ಸಚಿವ ಕೃಷ್ಣಭೈರೇಗೌಡ ಆಕ್ರೋಶ

ಬೆಂಗಳೂರು, ಸೆ.1: ಬೆಂಗಳೂರು ಪ್ರಪಂಚದಲ್ಲಿ ಐಟಿ ಕ್ಯಾಪಿಟಲ್, ಸ್ಟಾರ್ಟ್ ಅಪ್ ಕ್ಯಾಪಿಟಲ್, ವಿಜ್ಞಾನ ಹಾಗೂ ತಂತ್ರಜ್ಞಾನದ ಕೇಂದ್ರವಾಗಿ ಸೇವೆ ಸಲ್ಲಿಸಿತ್ತು. 2015-16ರಲ್ಲಿ ವಲ್ರ್ಡ್ ಮೋಸ್ಟ್ ಡೈನಾಮಿಕ್ ಸಿಟಿ ಆಗಿ ಹೊರಹೊಮ್ಮಿತ್ತು. ಆದರೆ ಇಂದು ಅತಿ ಹೆಚ್ಚು ರಸ್ತೆ ಗುಂಡಿ ನಗರ, ಮುಳುಗುತ್ತಿರುವ ನಗರವಾಗುತ್ತಿದೆ. ಡ್ರಗ್ಸ್ ಕ್ಯಾಪಿಟಲ್ ಆಗುತ್ತಿದೆ ಎಂದು ಮಾಜಿ ಸಚಿವ ಕೃಷ್ಣಭೈರೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ಗುರುವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಈಗ ದಿನ ಬೆಳಗಾದರೆ ಮೈದಾನ, ಮಸೀದಿ, ದೇವಾಲಯ ವಿಚಾರವಾಗಿ ಟೆನ್ಷನ್ ಸಿಟಿ ಆಗಿ ಮಾರ್ಪಾಡಾಗುತ್ತಿದೆ ಎಂದು ಟೀಕಿಸಿದರು.

ಬೆಂಗಳೂರಿನಲ್ಲಿ ಆಡಳಿತ ವ್ಯವಸ್ಥೆ ಇದೆಯಾ? ಬೆಂಗಳೂರಿನ ಹೊಣೆಗಾರಿಕೆ ಯಾರದ್ದು? ಯಾರನ್ನು ಕೇಳಬೇಕು? ಮುಖ್ಯಮಂತ್ರಿ ರಾಜ್ಯವನ್ನು ನೋಡಬೇಕು ಕೇವಲ ಬೆಂಗಳೂರನ್ನು ನೋಡಲು ಆಗುವುದಿಲ್ಲ. ಆದರೂ ಬೆಂಗಳೂರು ಉಸ್ತುವಾರಿಯನ್ನು ಯಾರಿಗೂ ನೀಡಿಲ್ಲ. ಅದಕ್ಕೆ ಕಾರಣ ಬಿಜೆಪಿಯಲ್ಲಿ ಅಧಿಕಾರದ ಆಂತರಿಕ ಗುದ್ದಾಟ ಎಂದು ಕೃಷ್ಣಭೈರೇಗೌಡ ಟೀಕಿಸಿದರು. 

ಅಧಿಕಾರಿಗಳನ್ನು ಅಲ್ಲಿ ಕೂರಿಸಿರುವುದು ಆಡಳಿತ ಮಾಡಲು ಅಲ್ಲ, ಬಿಜೆಪಿಗೆ ಹಣ ಹುಟ್ಟಿಸಲು. ಹೀಗಾಗಿ ದುರಾಡಳಿತದ ತಾಂಡವ ನೃತ್ಯದಿಂದ ಬೆಂಗಳೂರು ಮುಳುಗುತ್ತಿರುವ ನಗರವಾಗಿದೆ. ಇನ್ನು ಬೆಂಗಳೂರಿನ ದುಸ್ಥಿತಿಗೆ 40 ಪರ್ಸೆಂಟ್ ಕಮಿಷನ್ ಕಾರಣ. ಬಿಬಿಎಂಪಿ ಗುತ್ತಿಗೆದಾರರು ಹೇಳಿರುವಂತೆ 50 ಪರ್ಸೆಂಟ್ ಲಂಚ ಸ್ವೀಕರಿಸಿದ ನಂತರ ಯಾವ ರಸ್ತೆಗಳು, ಮೇಲ್ಸೇತುವೆಗಳು, ಕಾಲುವೆ ಉಳಿಯುತ್ತವೆ? ಎಂದು ಅವರು ಪ್ರಶ್ನಿಸಿದರು.

ಇಲ್ಲಿನ ಸರಕಾರ, ಜನಪ್ರತಿನಿಧಿಗಳು ಸರಕಾರದ ಬಜೆಟ್ ಅನ್ನು ಶೇ.80ರಷ್ಟು ರಸ್ತೆ ಹಾಗೂ ಚರಂಡಿಗೆ ಹಾಕುತ್ತಾರೆ. ಹಳೇ ಕಲ್ಲು, ಹೊಸ ಬಿಲ್ಲು ಎಂಬಂತೆ ಮಾಡಿ 50 ಪರ್ಸೆಂಟ್ ಹಣ ಲೂಟಿ ಮಾಡುತ್ತಿದ್ದಾರೆ. ಬೆಂಗಳೂರಿಗೆ ಬೇಕಾಗಿರುವ ರಾಜಕಾಲುವೆ, ಮೇಲ್ಸೇತುವೆಗಳನ್ನು ಬಿಟ್ಟು, ಕೇವಲ ಹಣ ಲೂಟಿ ಮಾಡಲು ಬೇಕಾದ ಕಾಮಗಾರಿಗಳನ್ನು ಮಾತ್ರ ಕೈಗೆತ್ತಿಕೊಳ್ಳುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಈ ಸರಕಾರ ಬಂದ ನಂತರ ಎಷ್ಟು ಹೊಸ ಮೇಲ್ಸೇತುವೆ ಕಾಮಗಾರಿಗೆ ಚಾಲನೆ ಸಿಕ್ಕಿದೆ? ಸರಕಾರದ ಹಣ ಎಲ್ಲಿ ಹೋಗುತ್ತಿದೆ? ಈ ಹಣ ಬಿಜೆಪಿ ನಾಯಕರ ಜೇಬು ಸೇರುತ್ತಿದೆ ಎಂದು ಆರೋಪಿಸಿದ ಕೃಷ್ಣಭೈರೇಗೌಡ, ಬಿಜೆಪಿಯವರ ಪಾಲಿಗೆ ಬೆಂಗಳೂರು ದುಡ್ಡು ಮಾಡುವ ನಗರವಾಗಿದೆ. ಇದರ ಪರಿಣಾಮವಾಗಿ ಜನ ಬೀದಿಗೆ ಬಿದ್ದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಬೆಂಗಳೂರಿನ ಮುಕ್ಕಾಲು ಪಾಲು ಪ್ರದೇಶದಲ್ಲಿ ಹಾನಿ ಆಗಿದೆ. ಪ್ರಧಾನಿ ಬೆಂಗಳೂರಿಗೆ ಬಂದಾಗ ಅವರು ಸಂಚರಿಸುವ ರಸ್ತೆಗೆ ಸಿಂಗಾರ ಮಾಡಲು 26 ಕೋಟಿ ಖರ್ಚು ಮಾಡುತ್ತಾರೆ. ಆದರೆ ಜನ ಸಮಸ್ಯೆಗೆ ಸಿಲುಕಿರುವ ಪ್ರದೇಶದಲ್ಲಿ ಅಭಿವೃದ್ಧಿಗೆ ಖರ್ಚು ಮಾಡುತ್ತಿಲ್ಲ. ಪ್ರಧಾನಿಗಾಗಿ ಖರ್ಚು ಮಾಡಲು ಹಣವಿದೆ, ರಾಜಕಾಲುವೆ ಮಾಡಲು, ರಸ್ತೆ ಗುಂಡಿ ಮುಚ್ಚಲು ಹಣವಿಲ್ಲವೇ? ಎಂದು ಅವರು ಪ್ರಶ್ನಿಸಿದರು.

ಬಿಜೆಪಿ ಸರಕಾರದಲ್ಲಿ ಮೋದಿ ಹಾಗೂ ಅಮಿತ್ ಶಾ ಅಭಯ ಹಸ್ತದಿಂದ ಈ ಮಟ್ಟದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಇವರು 50 ಪರ್ಸೆಂಟ್ ಅಲ್ಲ 100 ಪರ್ಸೆಂಟ್ ಹಣ ತಿಂದರೂ ಯಾವುದೇ ಈಡಿ, ಐಟಿ ದಾಳಿ ಆಗುವುದಿಲ್ಲ, ಯಾವುದೇ ಕೇಸ್ ದಾಖಲಾಗುವುದಿಲ್ಲ. ಈ.ಡಿ, ಸಿಬಿಐ, ಐಟಿ ಅಪ್ಪಿತಪ್ಪಿಯೂ ಬಿಜೆಪಿಯವರನ್ನು ಪ್ರಶ್ನಿಸುವುದಿಲ್ಲ ಎಂದು ಅವರು ಟೀಕಿಸಿದರು.

ಬೆಂಗಳೂರಿಗೆ 3 ಲಕ್ಷ ಕೋಟಿ ಡಾಲರ್ ಮೂಲಕವಾಗಿ ಆದಾಯ ಬರುತ್ತಿತ್ತು. ಆದರೆ ಈಗ ಇದು ಕೈತಪ್ಪುತ್ತಿದೆ. ಬೆಂಗಳೂರು ಮುಳುಗುತ್ತಿರುವುದರಿಂದ ಪಕ್ಕದ ರಾಜ್ಯಗಳು ಇಲ್ಲಿ ಮೀನು ಹುಡುಕುತ್ತಿದ್ದಾರೆ. ತಮಿಳುನಾಡು, ಹೈದರಾಬಾದ್ ರಾಜ್ಯಗಳು ಇಲ್ಲಿನ ಕಂಪನಿಗಳನ್ನು ಸೆಳೆಯುತ್ತಿವೆ. ಇದರ ನೇರ ಪರಿಣಾಮ ಕರ್ನಾಟಕದ ಮೇಲೆ ಆಗುತ್ತದೆ ಎಂದು ಅವರು ತಿಳಿಸಿದರು.

ಕೇಂದ್ರ ಸರಕಾರದ ರಾಷ್ಟ್ರೀಯ ಅಪರಾಧ ಅಂಕಿ ಅಂಶಗಳ ಬ್ಯೂರೋ ಮಾಹಿತಿ ಪ್ರಕಾರ  2018ರಲ್ಲಿ ರಾಜ್ಯದಲ್ಲಿ ಡ್ರಗ್ಸ್ ನಿಗ್ರಹ ಕಾಯ್ದೆ ಅಡಿ 1030 ಪ್ರಕರಣ ದಾಖಲಿಸಿದ್ದು, ಕಳೆದ ಎರಡು ವರ್ಷಗಳಲ್ಲಿ 5587 ಪ್ರಕರಣಗಳು ದಾಖಲಾಗಿವೆ. ಡ್ರಗ್ಸ್ ಪ್ರಕರಣಗಳ ಸಂಖ್ಯೆ ಶೇ.462ರಷ್ಟು ಹೆಚ್ಚಾಗಿದೆ ಇದು ಬಿಜೆಪಿ ಸರಕಾರದಲ್ಲಿ ಆಗಿರುವ ಏರಿಕೆ ಎಂದು ಕೆಪಿಸಿಸಿ ಸಂವಹನ ಹಾಗೂ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬೆಂಗಳೂರಿನಲ್ಲಿ ಡ್ರಗ್ಸ್ ಮೂಲೆ ಮೂಲೆಗೆ ಹರಡಲು ಸರಕಾರದ ಪ್ರಾಯೋಜಕತ್ವವೇ ಕಾರಣ. ಆರಂಭದಲ್ಲಿ ಸಿನಿಮಾ ತಾರೆಯರನ್ನು ಬಂಧಿಸಿ ಡ್ರಾಮಾ ಮಾಡಿದರು. ನಂತರ ಡ್ರಗ್ಸ್ ಹಾವಳಿ ಕಡಿಮೆಯಾಗಿದೆಯೇ ಅಥವಾ ಐದು ಪಟ್ಟು ಹೆಚ್ಚಾಗಿದೆಯೇ? ಬಿಜೆಪಿಯವರು ತಮ್ಮ ಹತೋಟಿಗೆ ತೆಗೆದುಕೊಳ್ಳಲು ಈ ಡ್ರಾಮ ಮಾಡಿದ್ದರು. ಸರಕಾರದವರೆ ಪರೋಕ್ಷವಾಗಿ ಡ್ರಗ್ಸ್ ಗೆ ಸಹಕಾರ ನೀಡುತ್ತಿದ್ದಾರೆ. ಇದನ್ನು ನಿಯಂತ್ರಿಸುತ್ತಿಲ್ಲ ಎಂದು ಮಾಜಿ ಸಚಿವ ಕೃಷ್ಣಭೈರೇಗೌಡ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X