ಮುರುಘಾ ಮಠದಲ್ಲಿ ಲೈಂಗಿಕ ಕಿರುಕುಳದ ಆರೋಪ: 2ನೇ ಆರೋಪಿ ಹಾಸ್ಟೆಲ್ ವಾರ್ಡನ್ ಬಂಧನ
ಸಾಂದರ್ಭಿಕ ಚಿತ್ರ
ಚಿತ್ರದುರ್ಗ: ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಚಿತ್ರದುರ್ಗ ಮುರುಘಾ ಮಠದ ಡಾ ಶಿವಮೂರ್ತಿ ಶಿವಾಚಾರ್ಯ ಶರಣರನ್ನು ಕಳೆದ ರಾತ್ರಿ ಬಂಧಿಸಿರುವ ಚಿತ್ರದುರ್ಗ ಪೊಲೀಸರು ಎರಡನೇ ಅರೋಪಿಯಾಗಿರುವ ಹಾಸ್ಟೆಲ್ ವಾರ್ಡನ್ನನ್ನು ಇಂದು (ಶುಕ್ರವಾರ) ಮಧ್ಯಾಹ್ನ ಬಂಧಿಸಿದ್ದಾರೆ.
ಮುರುಘಾ ಮಠದಲ್ಲಿ ವಾರ್ಡನ್ ಆಗಿರುವ ರಶ್ಮಿಯನ್ನು ಬಂಧಿಸಿರುವುದಾಗಿ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಮಾಹಿತಿ ನೀಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ದೂರುದಾರರಾಗಿರುವ ವಾರ್ಡನ್ ರಶ್ಮಿ ನಿನ್ನೆ (ಗುರುವಾರ) ನ್ಯಾಯಾಲಯಕ್ಕೆ ಹೇಳಿಕೆ ದಾಖಲಿಸಲು ಬಂದಿದ್ದಾಗ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇಂದು (ಶುಕ್ರವಾರ) ಬಂಧಿಸಿದ್ದಾರೆ.
ದೌರ್ಜನ್ಯಕ್ಕೆ ಹಾಸ್ಟೆಲ್ ವಾರ್ಡನ್ ಸಹಕರಿಸುತ್ತಿದ್ದರು ಎಂದು ವಿಚಾರಣೆ ವೇಳೆ ಇಬ್ಬರು ಬಾಲಕಿಯರು ಆರೋಪ ಮಾಡಿದ್ದರು.
Next Story