Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬ್ರಿಟನ್: ಪ್ರಧಾನಿ ಗಾದಿಗೆ ಸನಿಹವಾದ...

ಬ್ರಿಟನ್: ಪ್ರಧಾನಿ ಗಾದಿಗೆ ಸನಿಹವಾದ ಲಿಝ್ ಟ್ರೂಸ್: ರಿಷಿ ಸುನಾಕ್ ಕನಸು ಭಗ್ನ?

ವಾರ್ತಾಭಾರತಿವಾರ್ತಾಭಾರತಿ2 Sept 2022 10:45 PM IST
share
ಬ್ರಿಟನ್: ಪ್ರಧಾನಿ ಗಾದಿಗೆ ಸನಿಹವಾದ ಲಿಝ್ ಟ್ರೂಸ್: ರಿಷಿ ಸುನಾಕ್ ಕನಸು ಭಗ್ನ?

 ಲಂಡನ್, ಸೆ.2: ಬ್ರಿಟನ್ ನ ಪ್ರಧಾನಿ ಹುದ್ದೆಗೆ ಮಾಜಿ ಸಚಿವರಾದ ರಿಷಿ ಸುನಾಕ್ ಮತ್ತು ಲಿಝ್ ಟ್ರೂಸ್ ಮಧ್ಯೆ  ಕಳೆದ ಕೆಲ ದಿನಗಳಿಂದ ನಡೆದ ತುರುಸಿನ ಪೈಪೋಟಿ ಶುಕ್ರವಾರ ಅಂತ್ಯಗೊಳ್ಳಲಿದ್ದು ಸೋಮವಾರ ಫಲಿತಾಂಶದ ಘೋಷಣೆಯಾಗಲಿದೆ. ಈ ಮಧ್ಯೆ, ಲಿಝ್ ಟ್ರೂಸ್ ಅಂತಿಮ ಹಂತದಲ್ಲಿ ಮೇಲುಗೈ ಪಡೆದಿದ್ದು ಪ್ರಧಾನಿಯಾಗುವುದು  ಬಹುತೇಕ ಖಚಿತವಾಗಿದೆ ಎಂದು ಮೂಲಗಳು ಹೇಳಿವೆ.

ಬ್ರಿಟನ್‌ನ ಮೊದಲ ಭಾರತೀಯ ಬ್ರಿಟನ್ ಪ್ರಧಾನಿ ಎಂಬ ದಾಖಲೆ ಬರೆಯುವ ಉತ್ಸಾಹದಲ್ಲಿದ್ದ ಸುನಾಕ್ ಕನಸು ಭಗ್ನವಾಗುವ ಸಾಧ್ಯತೆಯಿದೆ. ಬೋರಿಸ್ ಜಾನ್ಸನ್ ರಾಜೀನಾಮೆಯಿಂದ ತೆರವಾಗಿರುವ ಪ್ರಧಾನಿ ಹುದ್ದೆಗೆ ಕನ್ಸರ್ವೇಟಿವ್ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ದೇಶದಾದ್ಯಂತದ ಸುಮಾರು ೨ ಲಕ್ಷ  ಕನ್ಸರ್ವೇಟಿವ್ ಪಕ್ಷದ ಸದಸ್ಯರು ಆಗಸ್ಟ್ ಆರಂಭದಲ್ಲಿ ಆರಂಭಗೊಂಡ  ಅಂಚೆಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದು ಶುಕ್ರವಾರ ಸಂಜೆ 5 ಗಂಟೆಗೆ (ಬ್ರಿಟನ್ ಕಾಲಮಾನ) ಪ್ರಕ್ರಿಯೆ ಮುಕ್ತಾಯಗೊಂಡಿದೆ. ಬಹುತೇಕ ಸದಸ್ಯರು ಟ್ರೂಸ್ರನ್ ರನ್ನು ಬೆಂಬಲಿಸಿದ್ದಾರೆ ಎನ್ನಲಾಗಿದ್ದು ಮತಎಣಿಕೆಯ ಬಳಿಕ ಅಂತಿಮ ಫಲಿತಾಂಶವನ್ನು ಬ್ರಿಟನ್‌ನ ರಾಣಿ ಸೋಮವಾರ ಪ್ರಕಟಿಸಲಿದ್ದಾರೆ.

ರಿಷಿ ಸುನಾಕ್ ಗೆ ಆರಂಭಿಕ ಹಂತದಲ್ಲಿ ಕನ್ಸರ್ವೇಟಿವ್ ಪಕ್ಷದ ಬಹುತೇಕ ಸದಸ್ಯರ ಬೆಂಬಲ ದೊರಕಿತ್ತು. ಆದರೆ ಮುಂದಿನ ದಿನಗಳಲ್ಲಿ ಪಕ್ಷದ ಪದಾಧಿಕಾರಿಗಳು ಟ್ರೂಸ್ ಅವರ ಬಲಪಂಥೀಯ ವೇದಿಕೆ ಪರ ಪ್ರಚಾರ ಮಾಡಿದರು. ತೆರಿಗೆ ಕಡಿತದ ಭರವಸೆ ನೀಡುವ ಮೂಲಕ ಸದಸ್ಯರ ಬೆಂಬಲ ಹೆಚ್ಚಿಸಿಕೊಳ್ಳಲು ಟ್ರೂಸ್ ಯಶಸ್ವಿಯಾದರು.  `ಸುನಾಕ್ ಅವರಲ್ಲಿ ಉತ್ತಮ ಸಚಿವರಾಗುವ ಸಾಮರ್ಥ್ಯ, ಅರ್ಹತೆಗಳಿವೆ. ಆದರೆ ಟ್ರೂಸ್ ಅವರಲ್ಲಿ ಉತ್ತಮ ರಾಜಕಾರಣಿಯಾಗುವ ಅರ್ಹತೆ, ಸಾಮರ್ಥ್ಯವಿದೆ' ಎಂದು ಸ್ಟ್ರಾಕೈಡ್ ವಿವಿಯ ರಾಜಕೀಯ ಶಾಸ್ತ್ರ ದ ಪ್ರೊಫೆಸರ್ ಜಾನ್ ಕರ್ಟಿಸ್ ಹೇಳಿದ್ದಾರೆ. ಆದರೆ ಯಾರೇ ಗೆದ್ದರೂ, ಅವರ ಎದುರು ಸವಾಲುಗಳ ಸರಣಿಯೇ ಇರಲಿದೆ. ಏರುತ್ತಿರುವ ಹಣದುಬ್ಬರ, ಜೀವನ ವೆಚ್ಚದ ಏರಿಕೆ, ತೆರಿಗೆ ದರ ಕಡಿತ,  12 ವರ್ಷದ ಕನ್ಸರ್ವೇಟಿವ್ ಅಧಿಕಾರದ ಸರಪಳಿಯನ್ನು ಮುಂದುವರಿಸಿಕೊಂಡು ಹೋಗುವ ಕಠಿಣ ಸವಾಲುಗಳಿವೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X