Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಶಿಕ್ಷಣದಿಂದಲೇ ಸಮುದಾಯದ ಸಬಲೀಕರಣ ಸಾಧ್ಯ:...

ಶಿಕ್ಷಣದಿಂದಲೇ ಸಮುದಾಯದ ಸಬಲೀಕರಣ ಸಾಧ್ಯ: ಎ.ಬಿ. ಇಬ್ರಾಹೀಂ

ಟ್ರೆಂಡ್ ವತಿಯಿಂದ ‘ಕಲಿಯಲು ಕಲಿಯೋಣ’ ಅಭಿಯಾನಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ3 Sept 2022 8:45 AM IST
share
ಶಿಕ್ಷಣದಿಂದಲೇ ಸಮುದಾಯದ ಸಬಲೀಕರಣ ಸಾಧ್ಯ: ಎ.ಬಿ. ಇಬ್ರಾಹೀಂ

ಪುತ್ತೂರು: ಮುಸ್ಲಿಂ ಸಮುದಾಯ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಸಮಾಜದ ಮುಖ್ಯವಾಹಿನಿಂದ ದೂರವುಳಿಯುವ ಹಂತಕ್ಕೆ ತಲುಪಿದೆ. ಈ ಪರಿಸ್ಥಿತಿ ಬದಲಾಗಬೇಕದರೆ ಶೈಕ್ಷಣಿಕವಾಗಿ ಮುಸ್ಲಿಂ ಸಮುದಾಯ ಜಾಗೃತಿಗೊಳ್ಳಬೇಕಿದೆ ಎಂದು ಮಾಜಿ ದ.ಕ. ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ ಅವರು ಹೇಳಿದರು.

ಎಸ್ಕೆಎಸ್ಸೆಸ್ಸೆಫ್ ಇದರ ಟೀಂ ರಿಸೋರ್ಸ್ ಫಾರ್ ಎಜ್ಯುಕೇಶನ್ ಆ್ಯಂಡ್ ನ್ಯಾಶನಲ್ ಡೆವೆಲಪ್ಮೆಂಟ್ (ಟ್ರೆಂಡ್) ವತಿಯಿಂದ ಪುತ್ತೂರು ಕಲ್ಲೇಗ ಮದ್ರಸದಲ್ಲಿ ನಡೆದ ‘ಕಲಿಯಲು ಕಲಿಯೋಣ’ ಎಂಬ ಶೈಕ್ಷಣಿಕ ಜಾಗೃತಿ ಅಭಿಯಾನದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು.

ದೂರದಲ್ಲೆಲ್ಲೋ ನಡೆಯುವ ಸಮಸ್ಯೆಗಳನ್ನು ಪಟ್ಟಿ ಮಾಡಿ ಅದನ್ನು ವೈಭವೀಕರಿಸುವ ಬದಲು ನಮ್ಮ ವ್ಯಾಪ್ತಿಗಳಲ್ಲಿರುವ ಸಮುದಾಯದ ಸಮಸ್ಯೆಗಳಿಗೆ ಸ್ಪಂದಿಸುವ ಪ್ರಯತ್ನವನ್ನು ನಾವು ನಡೆಸಬೇಕಿದೆ. ಸಮಸ್ಯೆಗಳಿಗೆ ಪರಿಹಾರ ಹುಡುಕುವ ಕೆಲಸವಾಗಬೇಕೇ ಹೊರತು ಅದನ್ನು ವೈಭವೀಕರಿಸಿ ನಮ್ಮೆಳಗೆ ಸಂಕುಚಿತಮನೋಭಾವವನ್ನು ಸೃಷ್ಟಿಸುವ ಕೆಲಸ ನಾವು ಮಾಡಬಾರದು ಎಂದು ಅವರು ಹೇಳಿದರು. 

ಕಾರ್ಯಕ್ರಮವನ್ನು ಉದ್ಘಾಟಿಸಿದ ರಫೀಕ್ ಮಾಸ್ಟರ್ ಆತೂರು ಮಾತನಾಡಿ, ಆಸಕ್ತಿಯ ಕೊರತೆ ಹಾಗೂ ನಿರ್ದಿಷ್ಠ ಗುರಿಯಿಲ್ಲದೆ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ದೂರ ಉಳಿಯುತ್ತಿದ್ದು, ಅಂಥವರಿಗೆ ಸೂಕ್ತವಾದ ಮಾರ್ಗದರ್ಶನ ಹಾಗೂ ಸ್ಫೂರ್ತಿ ತುಂಬುವ ಕೆಲಸವನ್ನು ಮಾಡಬೇಕಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಕೆಎಸ್ಸೆಸ್ಸೆಫ್ ದ.ಕ. ಜಿಲ್ಲಾ ಈಸ್ಟ್ ಸಮಿತಿಯ ಅಧ್ಯಕ್ಷರಾದ ತಾಜುದ್ದೀನ್ ರಹ್ಮಾನಿ ವಹಿಸಿಕೊಂಡರು.

ಮುಖ್ಯ ಅಥಿತಿಗಳಾಗಿ ನಿವೃತ್ತ ಐಎಫ್‌ಎಸ್ ಅಧಿಕಾರಿ ಮುಹಮ್ಮದ್ ಬ್ಯಾರಿ, ಕಲ್ಲೇಗ ಮಸೀದಿ ಅಧ್ಯಕ್ಷರಾದ ಮುಹಮ್ಮದ್ ಹಾಜಿ, ಕಮ್ಯುನಿಟಿ ಸೆಂಟರ್‌ನ ಹನೀಫ್ ಪುತ್ತೂರು, ಕರ್ನಾಟಕ ಎಸ್ಕೆಎಸ್ಸೆಸ್ಸೆಫ್ ದುಬೈ ಸಮಿತಿಯ ಪ್ರ. ಕಾರ್ಯದರ್ಶಿ ಸುಲೈಮಾನ್ ವೌಲವಿ, ಕರ್ನಾಟಕ ರಾಜ್ಯ ಕಾರ್ಯದರ್ಶಿ ರಿಯಾಝ್ ರಹ್ಮಾನಿ ಕಿನ್ಯಾ, ಕಲ್ಲೇಗ ಶಾಖೆಯ ಅಧ್ಯಕ್ಷ ಮೂಸಾ ಹಾಜಿ, ದ.ಕ. ಜಿಲ್ಲಾ ಜಂಇಯ್ಯತುಲ್ ಮುಅಲ್ಲಿಮೀನ್ ಪ್ರ. ಕಾರ್ಯದರ್ಶಿ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ, ಕಲ್ಲೇಗ ಮದ್ರಸದ ಮುಖ್ಯೋಪಾಧ್ಯಾಯ ಶಾಫಿ ಇರ್ಫಾನಿ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ದ.ಕ. ಟ್ರೆಂಡ್ ಚೇರ್ಮಾನ್ ಇಕ್ಬಾಲ್ ಬಾಳಿಲ ಉದ್ಘಾಟಿಸಿ, ಕನ್ವಿನರ್ ಯೂಸುಫ್ ಮುಂಡೋಳೆ ವಂದಿಸಿದರು.

ತರಬೇತುದಾರರ ಕಾರ್ಯಾಗಾರ

ಈ ಅಭಿಯಾನದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿರುವ ತರಬೇತುದಾರರಿಗೆ ವಿಶೇಷ ಕಾರ್ಯಾಗಾರವು ನಡೆಯಿತು. ಟ್ರೆಂಡ್ ನ್ಯಾಷನಲ್ ಫೆಲೋ ಶಾಹುಲ್ ಕೆ. ಫಝುಣ್ಣನ ತೃಶೂರ್ ಹಾಗೂ ಟ್ರೆಂಡ್ ಮಾಸ್ಟರ್ ಟ್ರೈನರ್ ಶಫೀಕ್ ರಹ್ಮಾನಿ ಕಾರ್ಯಗಾರವನ್ನು ಮುನ್ನಡೆಸಿದರು. ಟ್ರೆಂಡ್ ಬೇಸಿಕ್ ಕೋರ್ಸ್ ಪಡೆದುಕೊಂಡ ಸುಮಾರು 65 ತರಬೇತುದಾರರು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

500 ಕೇಂದ್ರಗಳಲ್ಲಿ ತರಬೇತಿ

ಮುಸ್ಲಿಂ ಸಮುದಾಯವನ್ನು ಶೈಕ್ಷಣಿಕವಾಗಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಸೀದಿ, ಮದ್ರಸ, ಸಂಘಸಂಸ್ಥೆಗಳ ಸಹಕಾರದೊಂದಿಗೆ ದ.ಕ. ಜಿಲ್ಲೆಯಾದ್ಯಂತ ಸುಮಾರು 500 ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಯುವಕರಿಗೆ ‘ಕಲಿಯಲು ಕಲಿಯೋಣ’ ಎಂಬ ವಿಶೇಷ ತರಬೇತಿಯನ್ನು ಹಮ್ಮಿಕೊಳ್ಳುವ ಗುರಿಯನ್ನು ಟ್ರೆಂಡ್ ಸಮಿತಿ ಹೊಂದಿದೆ ಆಯೋಜಕರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X