Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2019ರ ಕೋಲ್ಕತ್ತ ರ್ಯಾಲಿಯ ಚಿತ್ರ,...

2019ರ ಕೋಲ್ಕತ್ತ ರ್ಯಾಲಿಯ ಚಿತ್ರ, ವೀಡಿಯೊ ಬಳಸಿ ಮಂಗಳೂರು, ಕಛ್‌ ನ ಕಾರ್ಯಕ್ರಮದ್ದೆಂದು ಪ್ರಚಾರ !

ವಾರ್ತಾಭಾರತಿವಾರ್ತಾಭಾರತಿ3 Sept 2022 4:05 PM IST
share
2019ರ ಕೋಲ್ಕತ್ತ ರ್ಯಾಲಿಯ ಚಿತ್ರ, ವೀಡಿಯೊ ಬಳಸಿ ಮಂಗಳೂರು, ಕಛ್‌ ನ ಕಾರ್ಯಕ್ರಮದ್ದೆಂದು ಪ್ರಚಾರ !

ಹೊಸದಿಲ್ಲಿ: ರ್ಯಾಲಿಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಜನಸಮೂಹದತ್ತ ಕೈಬೀಸುವ 30 ಸೆಕೆಂಡುಗಳ ಕ್ಲಿಪ್ ಅನ್ನು ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್ ಮಾಳವಿಯಾ(Amit Malaviya) ಮತ್ತು ಬಿಜೆಪಿ ನಾಯಕಿ ಪ್ರೀತಿ ಗಾಂಧಿ(Priti Gandhi) ಸೇರಿದಂತೆ ಹಲವು ಬಿಜೆಪಿ ನಾಯಕರು, ಕಾರ್ಯಕರ್ತರು ಹಂಚಿಕೊಳ್ಳುತ್ತಿದ್ದಾರೆ. ಕೆಲವರು ವೀಡಿಯೊವನ್ನು ಕಚ್‌ನಲ್ಲಿ ಚಿತ್ರೀಕರಿಸಿದ್ದಾರೆ ಇನ್ನು ಕೆಲವರು ಇದು ಮಂಗಳೂರಿನದ್ದು(Mangaluru) ಎಂದು ಹೇಳಿದ್ದಾರೆ. ಆದರೆ ಈ ವೀಡಿಯೊ 2019ರ ಕೋಲ್ಕತ್ತ ರ್ಯಾಲಿಯ ಸಂದರ್ಭದ್ದು ಎಂದು altnews.in ತನ್ನ ಸತ್ಯಶೋಧನಾ ವರದಿಯಲ್ಲಿ ತಿಳಿಸಿದೆ.

2022 ರ ಆಗಸ್ಟ್ 28 ರಂದು ನರ್ಮದಾ ಕಾಲುವೆಯನ್ನು ಉದ್ಘಾಟಿಸಿದ ನಂತರ ಪ್ರಧಾನಿ ಮೋದಿಯವರು ಕಚ್ ಜಿಲ್ಲೆಯ ಭುಜ್‌ನಲ್ಲಿ ರೋಡ್‌ಶೋ ನಡೆಸಿದರು. ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಭೇಟಿ ನೀಡಿದ ಅವರು ₹ 3,800 ಕೋಟಿ ವೆಚ್ಚದ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ್ದರು.

ಅಮಿತ್ ಮಾಳವಿಯಾ ಸೆಪ್ಟೆಂಬರ್ 2 ರಂದು #Mangaluru ಹ್ಯಾಶ್‌ಟ್ಯಾಗ್‌ನೊಂದಿಗೆ ವೀಡಿಯೊವನ್ನು ಟ್ವೀಟ್ ಮಾಡಿದ್ದಾರೆ. ಇದು ವೀಡಿಯೊವನ್ನು ಮಂಗಳೂರಿನಲ್ಲಿ ಚಿತ್ರೀಕರಿಸಲಾಗಿದೆ ಎಂದು ಸೂಚಿಸುತ್ತದೆ. ಬಳಿಕ ಈ ವಿಡಿಯೋವನ್ನು ಡಿಲೀಟ್ ಮಾಡಿದ್ದಾರೆ. (ಆರ್ಕೈವ್ ಮಾಡಿದ ಲಿಂಕ್‌)

ಬಿಜೆಪಿ ಆಂಧ್ರಪ್ರದೇಶದ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಷ್ಣುವರ್ಧನ್ ರೆಡ್ಡಿ ಕೂಡ ಈ ವಿಡಿಯೋವನ್ನು ಶೇರ್ ಮಾಡಿದ್ದು, ಇದನ್ನು ಮಂಗಳೂರಿನಲ್ಲಿ ಚಿತ್ರೀಕರಿಸಲಾಗಿದೆ ಎಂದು ಹೇಳಿದ್ದಾರೆ. "ಇಂದು ಮಂಗಳೂರಿನಲ್ಲಿ ಪ್ರಧಾನಿ ಮೋದಿ ಅವರನ್ನು ಹೇಗೆ ಸ್ವಾಗತಿಸಲಾಯಿತು" ಎಂಬ ಶೀರ್ಷಿಕೆಯೊಂದಿಗೆ ಇದೇ ವಿಡಿಯೋವನ್ನು ಸ್ಥಳೀಯ ಪತ್ರಕರ್ತ ಸೂರಜ್ ಸುರೇಶ್ ಹಂಚಿಕೊಂಡಿದ್ದಾರೆ.

ಬಿಜೆಪಿ ನಾಯಕಿ ಪ್ರೀತಿ ಗಾಂಧಿ ಅವರು ಇದೇ ವೀಡಿಯೋವನ್ನು ಆಗಸ್ಟ್ 28 ರಂದು (ಭುಜ್ ರೋಡ್‌ಶೋ ದಿನ) ಟ್ವೀಟ್ ಮಾಡಿದ್ದು, “ಇದು #ಕಚ್‌ನ ಜನರು ಇಂದು ನಮ್ಮ ಗೌರವಾನ್ವಿತ ಪ್ರಧಾನಿ @narendramodi ಜೀ ಅವರಿಗೆ ನೀಡಿದ ರೋಚಕ ಸ್ವಾಗತ. ಊಹೆಗೂ ನಿಲುಕದ ಉತ್ಸಾಹ!!” ಎಂದು ಬರೆದುಕೊಂಡಿದ್ದರು. 

ಫ್ಯಾಕ್ಟ್‌ ಚೆಕ್:

ರಿವರ್ಸ್ ಇಮೇಜ್ ಸರ್ಚ್ ಮತ್ತು ಕೀವರ್ಡ್ ಹುಡುಕಾಟದ ಮೂಲಕ, AltNews.in ಈ ವೀಡಿಯೊವನ್ನು ಪಶ್ಚಿಮ ಬಂಗಾಳದಲ್ಲಿ ಚುನಾವಣಾ ರ್ಯಾಲಿಯ ನಂತರ ಏಪ್ರಿಲ್ 2019 ರಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ಕಂಡುಹಿಡಿದಿದೆ. ಕುತೂಹಲಕಾರಿಯೆಂಬಂತೆ, 2019 ರಲ್ಲಿ ಕೋಲ್ಕತ್ತಾದಲ್ಲಿ ನಡೆದ ರ್ಯಾಲಿಯ ನಂತರ ಪ್ರೀತಿ ಗಾಂಧಿ ಮತ್ತು ಅಮಿತ್ ಮಾಳವಿಯಾ ಇಬ್ಬರೂ ಇದೇ ವೀಡಿಯೊವನ್ನು ಟ್ವೀಟ್ ಮಾಡಿದ್ದರು. 

"ಕೋಲ್ಕತ್ತಾದಲ್ಲಿ PM ಶ್ರೀ @narendramodi ಅವರ ಸಾರ್ವಜನಿಕ ಸಭೆಯಲ್ಲಿ ರೋಮಾಂಚಕ ವಾತಾವರಣ" ಎಂಬ ಶೀರ್ಷಿಕೆಯೊಂದಿಗೆ ಏಪ್ರಿಲ್ 3, 2019 ರಂದು @BJP4Indiaದ ಅಧಿಕೃತ ಹ್ಯಾಂಡಲ್‌ನಿಂದ ಈ ವೀಡಿಯೊವನ್ನು ಪೋಸ್ಟ್ ಮಾಡಲಾಗಿತ್ತು. (ಆರ್ಕೈವ್ ಮಾಡಿದ ಲಿಂಕ್)

ಪ್ರಧಾನಿ ಮೋದಿ ಅವರ ಅಧಿಕೃತ ಹ್ಯಾಂಡಲ್ ಕೂಡ, ಏಪ್ರಿಲ್ 3, 2019 ರಂದು ವೀಡಿಯೊವನ್ನು ಅದೇ ಶೀರ್ಷಿಕೆಯೊಂದಿಗೆ ಟ್ವೀಟ್ ಮಾಡಿತ್ತು, ವೀಡಿಯೊವನ್ನು ಕೋಲ್ಕತ್ತಾದಲ್ಲಿ ಚಿತ್ರೀಕರಿಸಲಾಗಿದೆ ಎಂದು ಹೇಳಲಾಗಿತ್ತು. (ಆರ್ಕೈವ್ ಮಾಡಿದ ಲಿಂಕ್)

altnews.in 2019 ರ ವೀಡಿಯೊ ಮತ್ತು 2022 ರ ವೀಡಿಯೊದ ಸ್ಟಿಲ್‌ಗಳನ್ನು ಹೋಲಿಕೆ ಮಾಡಿದಾಗ, ಅದೇ ವೀಡಿಯೋವನ್ನು ಮತ್ತೊಮ್ಮೆ ಅಪ್ಲೋಡ್‌ ಮಾಡಲಾಗಿದೆ ಎಂಬುವುದನ್ನು ಸ್ಪಷ್ಟವಾಗಿ ಪತ್ತೆಹಚ್ಚಿದೆ.

ಹಾಗಾಗಿ ಕೋಲ್ಕತ್ತಾದ ಬಿಜೆಪಿ ರ್ಯಾಲಿಯ ಹಳೆಯ ವೀಡಿಯೊವನ್ನು ಅಮಿತ್ ಮಾಳವಿಯಾ ಮತ್ತು ಪ್ರೀತಿ ಗಾಂಧಿ ಸೇರಿದಂತೆ ಬಿಜೆಪಿ ರಾಜಕಾರಣಿಗಳು ಇತ್ತೀಚೆಗೆ ಮತ್ತೊಮ್ಮೆ ಶೇರ್‌ ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಕೆಲವರು ಈ ವಿಡಿಯೋವನ್ನು ಕಚ್‌ನಲ್ಲಿ ಚಿತ್ರೀಕರಿಸಿದ್ದರೆ, ಇನ್ನು ಕೆಲವರು ಮಂಗಳೂರಿನ ವಿಡಿಯೋ ಎಂದು ಶೇರ್ ಮಾಡಿದ್ದಾರೆ. 2019 ರಲ್ಲಿ ಕೋಲ್ಕತ್ತಾ ರ್ಯಾಲಿಯ ನಂತರ ಮಾಳವಿಯಾ ಮತ್ತು ಗಾಂಧಿ ಇಬ್ಬರೂ ಒಂದೇ ವೀಡಿಯೊವನ್ನು ಹಂಚಿಕೊಂಡಿದ್ದರು.

ಕೃಪೆ: altnews.in

This is the rousing welcome that the people of #Kutch gave our Honourable Prime Minister @narendramodi ji today. Unimaginable fervour!!#KutchWelcomesPMModi pic.twitter.com/LXqvKceUSt

— Priti Gandhi - प्रीति गांधी (@MrsGandhi) August 28, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X