Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುಮಾರಸ್ವಾಮಿ ಅವರ ಜಲಧಾರೆ...

ಕುಮಾರಸ್ವಾಮಿ ಅವರ ಜಲಧಾರೆ ಕಾರ್ಯಕ್ರಮದಿಂದಲೇ ರಾಮನಗರಕ್ಕೆ ಹೆಚ್ಚು ಮಳೆ ಬಂದಿರಬೇಕು: ಸಿ.ಟಿ.ರವಿ ವ್ಯಂಗ್ಯ

ವಾರ್ತಾಭಾರತಿವಾರ್ತಾಭಾರತಿ4 Sept 2022 9:54 PM IST
share
ಕುಮಾರಸ್ವಾಮಿ ಅವರ ಜಲಧಾರೆ ಕಾರ್ಯಕ್ರಮದಿಂದಲೇ ರಾಮನಗರಕ್ಕೆ ಹೆಚ್ಚು ಮಳೆ ಬಂದಿರಬೇಕು: ಸಿ.ಟಿ.ರವಿ ವ್ಯಂಗ್ಯ

ಬೆಂಗಳೂರು, ಸೆ. 4: ‘ಕುಮಾರಸ್ವಾಮಿ ಜಲಧಾರೆ ಕಾರ್ಯಕ್ರಮದಿಂದ ರಾಜ್ಯದ ತುಂಬ ಮಳೆ ಆಗಿದೆ ಎಂದಿದ್ದಾರೆ. ಅವರಿಂದಲೇ ಮಳೆ ಆಗಿದ್ದರೆ ಅತಿವೃಷ್ಟಿಗೂ ಅವರೇ ಕಾರಣ ಇರಬೇಕಲ್ಲವೇ?, ರಾಮನಗರಕ್ಕೆ ಜಾಸ್ತಿ ಪ್ರೀತಿ ಇದ್ದ ಕಾರಣ ಹೆಚ್ಚು ಮಳೆ ಬಂದಿರಬೇಕು. ಅವರ ಹೇಳಿಕೆ ಸತ್ಯ ಎಂದು ಭಾವಿಸುವುದಿಲ್ಲ. ಇವರು ಜಲಧಾರೆ ಮಾಡಿದ್ದು ಕರ್ನಾಟಕದಲ್ಲಿ. ಆದರೆ, ದೇಶದ ತುಂಬೆಲ್ಲ ಮಳೆಯಾಗಿದೆ' ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ. 

ರವಿವಾರ ಮಲ್ಲೇಶ್ವರದ ಪಕ್ಷದ ರಾಜ್ಯ ಕಾರ್ಯಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ಇದೆ ತಿಂಗಳ 17ಕ್ಕೆ ಪ್ರಧಾನಿ ಮೋದಿ ಜನ್ಮದಿನ. ಸೆ.25ಕ್ಕೆ ಪಕ್ಷದ ಸಂಸ್ಥಾಪಕರಲ್ಲಿ ಒಬ್ಬರಾದ ದೀನದಯಾಳ್ ಉಪಾಧ್ಯಾಯರ ಜನ್ಮದಿನ. ಅಕ್ಟೋಬರ್ 2ಕ್ಕೆ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸೆ.17ರಿಂದ ಅಕ್ಟೋಬರ್ 2ರ ವರೆಗೆ ಸೇವಾ ಪಾಕ್ಷಿಕವನ್ನು ಆಚರಿಸಲಿದ್ದಾರೆ' ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ.

‘ಸೆ.17ಕ್ಕೆ ಯುವ ಮೋರ್ಚಾ ವತಿಯಿಂದ ದೇಶಾದ್ಯಂತ ರಕ್ತದಾನ ಶಿಬಿರ ಏರ್ಪಡಿಸಲಾಗುವುದು. ರಕ್ತದಾನಿಗಳ ವಿವರವನ್ನು ಪ್ರತಿ ಆಸ್ಪತ್ರೆಯಲ್ಲಿ ತಯಾರಿಸಿ ದಾನಿಗಳ ವಿವರ ಸಿಗುವಂತೆ ಮಾಡಲಾಗುವುದು. ಆರೋಗ್ಯ ಶಿಬಿರವನ್ನೂ ಆಯೋಜಿಸಲಾಗುವುದು. ಅಲ್ಲದೆ ದಿವ್ಯಾಂಗರಿಗೆ ಕೃತಕ ಅಂಗಾಂಗ ಜೋಡಣೆ ಶಿಬಿರ ಏರ್ಪಡಿಸಲಾಗುತ್ತದೆ ಎಂದು ಹೇಳಿದರು.

‘ಆಝಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಗೆ 75 ಕೆರೆಗಳ ನಿರ್ಮಾಣಕ್ಕೆ ಸರಕಾರ ನಿರ್ದೇಶನ ನೀಡಿದೆ. ಕೆಲವು ಜಿಲ್ಲೆಗಳಲ್ಲಿ ಅಮೃತ ಸರೋವರ ನಿರ್ಮಾಣ ಆಗಿದೆ. ಈ ಸಮಯದಲ್ಲಿ ಬಿಜೆಪಿ ಕಾರ್ಯಕರ್ತರು ನದಿ, ಕೆರೆ, ಬಾವಿಗಳ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದು, ಸಸಿ ನೆಡಲಿದ್ದಾರೆ. 2025ಕ್ಕೆ ಭಾರತವು ಕ್ಷಯ ರೋಗದಿಂದ ಮುಕ್ತ ಆಗಬೇಕೆಂಬುದು ಮೋದಿಯವರ ಸಂಕಲ್ಪ. ಅದಕ್ಕಾಗಿ ಪ್ರತಿ ಕಾರ್ಯಕರ್ತರು, ಜನಪ್ರತಿನಿಧಿಗಳು, ಪದಾಧಿಕಾರಿಗಳು 5 ಜನ ರೋಗಿಗಳಿಗೆ ಮಾರ್ಗದರ್ಶನ, ಚಿಕಿತ್ಸಾ ವ್ಯವಸ್ಥೆ, ಪೂರಕ ಬೆಂಬಲ ಕೊಡಲಿದ್ದಾರೆ' ಎಂದು ಮಾಹಿತಿ ನೀಡಿದರು.

‘ಅಲ್ಲದೆ, ಜನಸಂವಾದ, ಜನೋತ್ಸವ ಕಾರ್ಯಕ್ರಮಗಳನ್ನೂ ಆಯೋಜಿಸಲು ಮುಖ್ಯಮಂತ್ರಿ ಮತ್ತು ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಯೋಜನೆಗಳನ್ನು ರೂಪಿಸಲಾಗಿದೆ. ಕಾಂಗ್ರೆಸ್ ಕಾಲದಲ್ಲಿ ನಡೆಸಿ ಮರೆಮಾಚಿದ ಹಗರಣಗಳನ್ನೂ ಬಯಲಿಗೆ ಎಳೆಯಬೇಕು. ಆ ಹಗರಣಗಳ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಲಾಗಿದೆ' ಎಂದು ಅವರು ತಿಳಿಸಿದರು.

‘ಕೇಂದ್ರ ಮತ್ತು ರಾಜ್ಯದ ಯೋಜನೆಗಳ ಫಲಾನುಭವಿಗಳು ಪ್ರತಿ ಕ್ಷೇತ್ರದಲ್ಲಿ ಶೇ.65ರಿಂದ 80 ಪ್ರತಿಶತ ಜನರು ಇದ್ದಾರೆ. ಈ ಯೋಜನೆಗಳ ಫಲಾನುಭವಿಗಳನ್ನು ಸಂಪರ್ಕಿಸುವ ಕುರಿತು ಪ್ರಮುಖ ಸಭೆಯಲ್ಲಿ ವಿವರವಾಗಿ ಚರ್ಚೆ ನಡೆಸಿ, ಕಾರ್ಯಯೋಜನೆ ತಯಾರಿಸಲಾಗಿದೆ. ಕೆಂಪೇಗೌಡ ಕಟ್ಟಿದ ಬೆಂಗಳೂರಿನ ಹೆಸರನ್ನು ಯಾರೂ ಹಾಳು ಮಾಡಲು ಸಾಧ್ಯವಿಲ್ಲ. ಮೂಲಸೌಕರ್ಯ 3 ದಿನಗಳಲ್ಲಿ ಮಾಡುವುದೇ? ಅಥವಾ 3 ವರ್ಷದಲ್ಲಿ ಮಾಡುವುದೇ? ರಾಜಕಾಲುವೆಯನ್ನು ಒತ್ತುವರಿ ಮಾಡಿ ನಿರ್ಮಾಣ ನಡೆಸಿದ್ದು ಬಿಜೆಪಿ ಸರಕಾರ ಬಂದ ಮೇಲೋ ಅಥವಾ ಹತ್ತಿಪ್ಪತ್ತು ವರ್ಷದ ಹಿಂದಿನಿಂದಲೂ ರಾಜಕಾಲುವೆ ಒತ್ತುವರಿ ಪ್ರವೃತ್ತಿ ನಡೆದುಕೊಂಡು ಬಂದಿದೆಯೇ? ಕೆರೆಗಳನ್ನು ಮುಳುಗಿಸಿದ್ದು ಯಾರು? ಎಂದು ಕೇಳಿದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X