Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. VIDEO- ದಲಿತರಲ್ಲಿನ ‘ಮನು ಸಿದ್ಧಾಂತ'...

VIDEO- ದಲಿತರಲ್ಲಿನ ‘ಮನು ಸಿದ್ಧಾಂತ' ತೊಲಗಿದರೆ, ಅಂಬೇಡ್ಕರ್ ಶ್ರಮ ಸಾರ್ಥಕ: ರಮಾಬಾಯಿ ಅಂಬೇಡ್ಕರ್

ವಾರ್ತಾಭಾರತಿವಾರ್ತಾಭಾರತಿ4 Sept 2022 11:03 PM IST
share
VIDEO- ದಲಿತರಲ್ಲಿನ ‘ಮನು ಸಿದ್ಧಾಂತ ತೊಲಗಿದರೆ, ಅಂಬೇಡ್ಕರ್ ಶ್ರಮ ಸಾರ್ಥಕ: ರಮಾಬಾಯಿ ಅಂಬೇಡ್ಕರ್

ಬೆಂಗಳೂರು, ಸೆ.4: ‘ನಮ್ಮ ದಲಿತ ಸಮಾಜವೂ ಪುರುಷ ಪ್ರಾಬಲ್ಯದಿಂದ ಕೂಡಿದೆ. ದಲಿತ ಸಮುದಾಯದವರ ತಲೆಯಲ್ಲಿ ಇನ್ನೂ ಜೀವಂತವಾಗಿರುವ ಮನು ಸಿದ್ಧಾಂತ ತೊಲಗಿ, ಮಹಿಳೆಯರಿಗೆ ಸೂಕ್ತ ಸ್ಥಾನ ದೊರಕುವ ವ್ಯವಸ್ಥೆ ಬಂದಾಗ ಮಾತ್ರ ಅಂಬೇಡ್ಕರ್ ಪಟ್ಟ ಶ್ರಮ ಸಾರ್ಥಕವಾಗುತ್ತದೆ’ ಎಂದು ಡಾ.ಅಂಬೇಡ್ಕರ್ ಮೊಮ್ಮಗಳು ರಮಾಬಾಯಿ ಅಂಬೇಡ್ಕರ್ ಆನಂದ್ ತೇಲ್ತುಂಬ್ಡೆ ಅಭಿಪ್ರಾಯಪಟ್ಟಿದ್ದಾರೆ.

ರವಿವಾರ ಗಾಂಧಿಭವನದಲ್ಲಿ ‘ತಮಟೆ-ಕರ್ನಾಟಕ ಮತ್ತು ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟವು ಆಯೋಜಿಸಿದ್ದ ಲೇಖಕಿ ದು.ಸರಸ್ವತಿ ಅನುವಾದಿಸಿದ ‘ನಾವೂ ಇತಿಹಾಸ ಕಟ್ಟಿದೆವು' ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ‘1989ರಲ್ಲಿ ಮರಾಠಿ ಭಾಷೆಯಲ್ಲಿ ಪ್ರಕಟವಾಗಿದ್ದ ಪುಸ್ತಕವನ್ನು 2022ರಲ್ಲಿ ದು.ಸರಸ್ವತಿಯವರು ಅನುವಾದಿಸುವ ಮೂಲಕ ಈ ಕೃತಿ ಕನ್ನಡಕ್ಕೆ ಬರುತ್ತಿರುವುದು ಸಂತೋಷದ ಸಂಗತಿ. ಸಮುದಾಯದಲ್ಲಿ ಪುರುಷ ಪ್ರಾಬಲ್ಯವನ್ನು ಅಂಬೇಡ್ಕರ್ ಅರಿತಿದ್ದರಿಂದಲೇ ದಲಿತ ಮಹಿಳೆಯರಲ್ಲಿ ಬದಲಾವಣೆ ತರುವ ಪ್ರಯತ್ನ ನಡೆಸಿದ್ದರು. 1924, 1927ರಲ್ಲಿ ನಡೆದ ಮಹಾ ಸತ್ಯಾಗ್ರಹ ಸೇರಿ ಆನಂತರ ನಡೆದ ಎಲ್ಲ ಚಳುವಳಿಗಳಲ್ಲಿ ಮಹಿಳೆಯರನ್ನು ಪಾಲ್ಗೊಳ್ಳುವಂತೆ ಮಾಡಲು ಪಟ್ಟ ಪಾಡನ್ನು ಈ ಕೃತಿ ವಿವರಿಸುತ್ತದೆ’ ಎಂದು ತಿಳಿಸಿದರು.

‘ಅಂಬೇಡ್ಕರ್ ಅವರು ದಮನಿತ ವರ್ಗಗಳ ಚಳವಳಿಯಲ್ಲಿ ಮಹಿಳಾ ಸುಧಾರಣೆಗೆ ಬಹಳ ಒತ್ತು ನೀಡಿದ್ದರು. ಈ ಪುಸ್ತಕ ಮಹಿಳೆಯರನ್ನು ಚಳವಳಿಯ ಭಾಗವಾಗಿ ಮಾಡಲು ಬಾಬಾಸಾಹೇಬರು ಪಟ್ಟ ಪಾಡಿನ ಬಗ್ಗೆ ತಿಳಿಸುತ್ತದೆ. ಅದೇ ರೀತಿಯಲ್ಲಿ ಬಾಬಾಸಾಹೇಬರು ಮುನ್ನಡೆಸಿದ ಚಳವಳಿಯಲ್ಲಿ ಭಾಗವಹಿಸಿದ್ದ ಮಹಿಳೆಯರ ಅನುಭವ ಕಥನಗಳನ್ನೂ ಒಳಗೊಂಡಿದೆ’ ಎಂದು ಅವರು ನುಡಿದರು.

‘ಶೋಷಿತ ಸಮುದಾಯಗಳ ಮಹಿಳೆಯರು ಚಳವಳಿಯಲ್ಲಿ ಭಾಗವಹಿಸುವಾಗ ಅವರ ಉಡುಗೆ-ತೊಡುಗೆಗಳು ಜಾತಿ ಸೂಚಕವಾಗದ ರೀತಿಯಲ್ಲಿ ಅವರನ್ನು ಮಾನಸಿಕವಾಗಿ ಸ್ವಾಭಿಮಾನಿಗಳಾಗಿ ಮಾಡುವಲ್ಲಿ ಬಾಬಾಸಾಹೇಬರು ಪ್ರೇರೇಪಣೆ ನೀಡಿದ್ದಾರೆ. ಮಹಿಳೆಯರು ಶಿಕ್ಷಣ ಹೊಂದಬೇಕು ಎಂದು ಪ್ರಯತ್ನಿಸಿದ್ದ ಅಂಬೇಡ್ಕರ್‍ರ ದಾರಿಯಲ್ಲಿ ನಾವು ಇಂದು ಸಾಗಬೇಕಾಗಿದೆ’ ಎಂದು ಅವರು ಕರೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X