Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಓ ಮೆಣಸೇ
  4. ಓ ಮೆಣಸೇ...

ಓ ಮೆಣಸೇ...

ಪಿ.ಎ. ರೈಪಿ.ಎ. ರೈ5 Sept 2022 12:12 AM IST
share
ಓ ಮೆಣಸೇ...

ಪ್ರಧಾನಿ ಮೋದಿ ಆಡುವ ಮಾತಿಗೂ, ಮಾಡುವ ವೃತ್ತಿಗೂ ಒಂದಕ್ಕೊಂದು ಸಂಬಂಧವಿಲ್ಲ - ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕ
ಸಂಬಂಧವಿಲ್ಲ ಎನ್ನುವುದು ತಪ್ಪು. ಅವರು ಎಲ್ಲ ವಿಷಯಗಳಲ್ಲೂ ತಾನು ಹೇಳಿದ್ದಕ್ಕೆ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಾರೆ. ಇದನ್ನು ವಿರೋಧಾಭಾಸದ ಸಂಬಂಧವೆನ್ನುತ್ತಾರೆ.

ಯುವಜನತೆ ಮಾತೃ ಭಾಷೆಯಲ್ಲಿ ಓದುವುದು, ಬರೆಯುವುದು, ಮಾತನಾಡುವ ಮೂಲಕ ಭಾಷೆಗಳನ್ನು ಉಳಿಸಿ ಬೆಳೆಸುವ ಕಾರ್ಯಕ್ಕೆ ಕೈಜೋಡಿಸಬೇಕು-ಅಮಿತ್ ಶಾ, ಕೇಂದ್ರ ಸಚಿವ
ಈ ಮಧ್ಯೆ ನೀವು ಸ್ವಲ್ಪ ಪುರುಸೊತ್ತು ಮಾಡಿಕೊಂಡು ಮಾನವೀಯ ಭಾಷೆ ಮಾತನಾಡಲು ಕಲಿಯಬಹುದಲ್ಲಾ!

ಅಪೌಷ್ಟಿಕತೆ ನಿವಾರಣೆಗೆ ಜನರ ಸಾಮೂಹಿಕ ಹೋರಾಟದ ಅಗತ್ಯವಿದೆ- ನರೇಂದ್ರ ಮೋದಿ, ಪ್ರಧಾನಿ
ಜನರನ್ನು ಪರಸ್ಪರರ ವಿರುದ್ಧ ಹೋರಾಟಕ್ಕಿಳಿಸುವುದೇ ಎಲ್ಲ ಸಮಸ್ಯೆಗಳಿಗೆ ಇರುವ ಪರಿಹಾರ ಎಂಬ ನಿಮ್ಮ ಹಳೆಯ ನಂಬಿಕೆ ಇನ್ನೂ ಬದಲಾಗಿಲ್ಲವೇ?

ಕಾಂಗ್ರೆಸ್ ಪಕ್ಷದಲ್ಲಿ ರಾಹುಲ್‌ಗಾಂಧಿಗೆ ಸರಿಸಮನಾದ ನಾಯಕರು ಯಾರೂ ಇಲ್ಲ - ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ
ಈ ಮಟ್ಟದ ದಾರಿದ್ರ್ಯಕ್ಕೆ ಪರಿಹಾರವಿಲ್ಲವೇ?

ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಆಂತರಿಕ ಪ್ರಜಾಪ್ರಭುತ್ವ ಇದೆ - ಜೈರಾಮ್ ರಮೇಶ್, ಕಾಂಗ್ರೆಸ್ ಪ್ರ.ಕಾರ್ಯದರ್ಶಿ
ಪ್ರಜೆಗಳು ತುಂಬಾ ಕಡಿಮೆ ಇದ್ದಾಗ ಪ್ರಜಾಪ್ರಭುತ್ವ ಇರುತ್ತದೆ.

ಮುರುಘಾ ಮಠದ ಸ್ವಾಮೀಜಿಗಳ ವಿರುದ್ಧದ ಸುದ್ದಿ ಸುಳ್ಳಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವೆೆ- ಈಶ್ವರಪ್ಪ, ಶಾಸಕ
40 ಪರ್ಸೆಂಟಿಗೆ ಸಂಬಂಧಿಸಿದ ಪ್ರಾರ್ಥನೆಗಳ ಫಲಿತಾಂಶ ಬಂತೇ?

ಕಾಂಗ್ರೆಸ್ ಮುಖಂಡರೇ ಗಾಂಧಿ ಕುಟುಂಬವನ್ನು ಟೀಕಿಸಲು ಆರಂಭಿಸಿದ್ದಾರೆ - ಸ್ಮತಿ ಇರಾನಿ, ಕೇಂದ್ರ ಸಚಿವೆ
ಮರ್ಯಾದಸ್ಥರನ್ನು ಮರ್ಯಾದಸ್ಥರು ಟೀಕಿಸುವುದುಂಟು.

ತುಮಕೂರು ವಿವಿಯಲ್ಲಿ ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆಗೆ ಅಗತ್ಯವಾದ ಎಲ್ಲ ನೆರವನ್ನು ಸರಕಾರದಿಂದ ನೀಡಲಾಗುವುದು-ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ
ಪಕ್ಕದಲ್ಲೇ ಗೋಡ್ಸೆ, ವೀರಪ್ಪನ್ ಮುಂತಾದವರ ಹೆಸರಲ್ಲೂ ಪೀಠ ಸ್ಥಾಪನೆ ಮಾಡುವ ಯೋಜನೆ ಇದೆಯಂತೆ?

ನಾವು ಸಾಬರು, ನಾವು ಹೇಳುವ ಜೋತಿಷ್ಯ ಎಂದೂ ಸುಳ್ಳಾಗುವುದಿಲ್ಲ - ಸಿ.ಎಂ.ಇಬ್ರಾಹೀಂ, ಜೆಡಿಎಸ್ ಅಧ್ಯಕ್ಷ
ನೀವು ಶೀಘ್ರವೇ ಜೆಡಿಎಸ್ ಬಿಡ್ತೀರಿ ಎಂದು ಕೆಲವು ಸಾಬರುಗಳು ಹೇಳುತ್ತಿದ್ದಾರಲ್ಲ!

ಅನಾರೋಗ್ಯ ಪೀಡಿತ ಕಾಂಗ್ರೆಸ್, ವೈದ್ಯರಿಂದ ಔಷಧ ಪಡೆದುಕೊಳ್ಳುವ ಬದಲು ಕಂಪೌಂಡರ್‌ಗಳಿಂದ ಔಷಧ ಪಡೆದುಕೊಳ್ಳುತ್ತಿದೆ - ಗುಲಾಂ ನಬಿ ಆಝಾದ್, ಕಾಂಗ್ರೆಸ್‌ನ ಮಾಜಿ ನಾಯಕ
ನಿಮ್ಮ ನಿರ್ಗಮನದೊಂದಿಗೆ ಆ ಪಕ್ಷವು ಒಂದು ದೊಡ್ಡ ಅನಾರೋಗ್ಯದಿಂದ ಮುಕ್ತವಾಗಿದೆ.

ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆಧಾರ ರಹಿತ ಆರೋಪ ಮಾಡುವವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇವೆ - ಬಿ.ಸಿ.ನಾಗೇಶ್, ಸಚಿವ
ಆಧಾರ ಸಹಿತ ಆರೋಪ ಮಾಡುವವರ ವಿರುದ್ಧ ನಡೆಸಲಾಗುವ ಕ್ರೂರ ಕಾರ್ಯಾಚರಣೆಗಳನ್ನೇಕೆ ಗುಟ್ಟಾಗಿಡುತ್ತೀರಿ?

ಒಂದು ವೇಳೆ ನಾನು ಅಧಿಕಾರದಲ್ಲಿ ಇಲ್ಲದಿರುತ್ತಿದ್ದರೆ ಸುಳ್ಳು ಹೇಳುವವರ ನಾಲಗೆ ಸೀಳುವಂತೆ ನಮ್ಮ ಜನರಿಗೆ ಸೂಚಿಸುತ್ತಿದ್ದೆ - ಮಮತಾ ಬ್ಯಾನರ್ಜಿ, ಪ.ಬಂ. ಸಿಎಂ
ಅಧಿಕಾರ ಗದ್ದುಗೆ ಆ ಮಟ್ಟಿಗೆ ನಿಮ್ಮ ಕೈಕಟ್ಟುವುದಾದರೆ ನಿಮಗೆ ಅಂತಹ ಅಧಿಕಾರ ಯಾಕೆ ತಾನೇ ಬೇಕು?

ಯಾವತ್ತೂ ನದಿಮೂಲ ಹಾಗೂ ಋಷಿಮೂಲವನ್ನು ಕೆದಕಬಾರದು - ಸಿ.ಟಿ.ರವಿ, ಶಾಸಕ
ವಿಷ ಮೂಲ ಹುಡುಕುತ್ತಾ ನಿಮ್ಮಲ್ಲಿಗೆ ತಲುಪುವವರಿಗೆ ನಿಮ್ಮ ಕಿವಿಮಾತೇನು?

ಕೊಡಗಿಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರದ ಅಗತ್ಯವಿದೆ - ಎಚ್.ವಿಶ್ವನಾಥ್, ವಿ.ಪ.ಸದಸ್ಯ
ಪ್ರತ್ಯೇಕ ರಾಜ್ಯ ಸ್ಥಾನಮಾನ ನೀಡಿಬಿಟ್ಟರೆ ಉಳಿದದ್ದೆಲ್ಲಾ ತನ್ನಿಂತಾನೇ ಬಂದು ಬಿಡುತ್ತೆ.

ಕಾಂಗ್ರೆಸ್ ಅಧ್ಯಕ್ಷ ಹುದ್ದೆ ಚುನಾವಣೆಗೆ ಸ್ಪರ್ಧಿಸಲು ಯಾರು ಬೇಕಾದರೂ ಅರ್ಜಿ ಸಲ್ಲಿಸಬಹುದು - ಕೆ.ಸಿ.ವೇಣುಗೋಪಾಲ್, ಕಾಂಗ್ರೆಸ್ ಪ್ರ.ಕಾರ್ಯದರ್ಶಿ
ಅರ್ಜಿ ಸಲ್ಲಿಸುವವರಿಗೆ ಇಂತಿಷ್ಟು ಅಂತ ಬಹುಮಾನ ಘೋಷಿಸಿ ನೋಡಿ. ಏನಾದರೂ ಪ್ರತಿಕ್ರಿಯೆ ಬಂದೀತು.

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ವರ್ತಮಾನ ಹಾಗೂ ಭವಿಷ್ಯವನ್ನು ಉಜ್ವಲ ಮತ್ತು ಸುರಕ್ಷಿತಗೊಳಿಸಲಿದೆ- ಥಾವರ್ ಚಂದ್ ಗೆಹ್ಲೋಟ್, ರಾಜ್ಯಪಾಲ
ಅದು ಗತಕಾಲದ ಎಲ್ಲ ಕರಾಳತೆಗಳನ್ನು ವೈಭವೀಕರಿಸಿರುವುದಂತೂ ನಿಜ.

ಸರಕಾರದ ಮೇಲೆ ಶೇ.40 ಕಮಿಷನ್ ಆರೋಪ ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ - ಭೈರತಿ ಬಸವರಾಜ್, ಸಚಿವ
ಲಜ್ಜೆಯೇ ಇಲ್ಲದವರು ಕೇವಲ ಆರೋಪಗಳಿಗೆಲ್ಲಿ ಬಗ್ಗುತ್ತಾರೆ?

ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌ರಿಗೆ ಅಧಿಕಾರದ ಮದ ತಲೆಗೆ ಹತ್ತಿದೆ - ಅಣ್ಣಾ ಹಝಾರೆ, ಸಾಮಾಜಿಕ ಹೋರಾಟಗಾರ
ಕೇಂದ್ರ ಸರಕಾರದ ಎಲ್ಲ ಭ್ರಷ್ಟತೆ ಮತ್ತು ವೈಫಲ್ಯಗಳ ಪಾಲಿಗೆ ಇಷ್ಟೊಂದು ಕುರುಡರಾಗಿರುವ ನಿಮ್ಮ ತಲೆಗೆ ಏನು ಹತ್ತಿದೆ?

share
ಪಿ.ಎ. ರೈ
ಪಿ.ಎ. ರೈ
Next Story
X