Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶ: ತನ್ನ ಬೈಕ್...

ಉತ್ತರ ಪ್ರದೇಶ: ತನ್ನ ಬೈಕ್ ಮುಟ್ಟಿದ್ದಕ್ಕಾಗಿ ದಲಿತ ಬಾಲಕನನ್ನು ಥಳಿಸಿದ್ದ ಮುಖ್ಯೋಪಾಧ್ಯಾಯನ ಅಮಾನತು

ವಾರ್ತಾಭಾರತಿವಾರ್ತಾಭಾರತಿ5 Sept 2022 7:15 PM IST
share
ಉತ್ತರ ಪ್ರದೇಶ: ತನ್ನ ಬೈಕ್ ಮುಟ್ಟಿದ್ದಕ್ಕಾಗಿ ದಲಿತ ಬಾಲಕನನ್ನು ಥಳಿಸಿದ್ದ ಮುಖ್ಯೋಪಾಧ್ಯಾಯನ ಅಮಾನತು

ವಾರಣಾಸಿ (ಉ.ಪ್ರ)(Uttar Pradesh): ತನ್ನ ಬೈಕ್‌ನ್ನು ಮುಟ್ಟಿದ್ದಕ್ಕಾಗಿ ಆರನೇ ತರಗತಿಯ ದಲಿತ(Dalit) ವಿದ್ಯಾರ್ಥಿಯನ್ನು ಹಿಗ್ಗಾಮುಗ್ಗಾ ಥಳಿಸಿದ್ದ ಬಲಿಯಾದ ಪ್ರಾಥಮಿಕ ಶಾಲೆಯೊಂದರ ಮುಖ್ಯೋಪಾಧ್ಯಾಯರನ್ನು(Headmaster) ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು timesofindia ವರದಿ ಮಾಡಿದೆ.

ಘಟನೆಯಿಂದ ಕ್ರುದ್ಧರಾಗಿದ್ದ ಗ್ರಾಮಸ್ಥರು ಶನಿವಾರ ಪ್ರತಿಭಟನೆ ನಡೆಸಿದ ಬಳಿಕ ಪ್ರಾಥಮಿಕ ಶಿಕ್ಷಣಾಧಿಕಾರಿ ಮಣಿರಾಮ ಸಿಂಗ್ ಅವರು ಮುಖ್ಯೋಪಾಧ್ಯಾಯ ಕೃಷ್ಣಮೋಹನ ಶರ್ಮಾರನ್ನು ವಜಾಗೊಳಿಸಿದ್ದಾರೆ ಮತ್ತು ಘಟನೆಯ ಕುರಿತು ತನಿಖೆಗಾಗಿ ಅಧಿಕಾರಿಗಳ ತಂಡವೊಂದನ್ನು ರಚಿಸಿದ್ದಾರೆ.

ಬ್ಲಾಕ್ ಶಿಕ್ಷಣಾಧಿಕಾರಿಯ ಪ್ರಾಥಮಿಕ ವರದಿಯ ಆಧಾರದಲ್ಲಿ ಶರ್ಮಾರನ್ನು ಅಮಾನತುಗೊಳಿಸಲಾಗಿದೆ. ವಿವರವಾದ ತನಿಖೆಗಾಗಿ ಅಧಿಕಾರಿಗಳ ತಂಡವೊಂದನ್ನು ರಚಿಸಿದ್ದು, ತನಿಖಾ ವರದಿ ಕೈಸೇರಿದ ಬಳಿಕ ಶರ್ಮಾರ ವಿರುದ್ಧ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು ಎಂದು ಸಿಂಗ್ ತಿಳಿಸಿದರು.

ಪ್ರಾಥಮಿಕ ತನಿಖಾ ವರದಿಯಂತೆ ಶುಕ್ರವಾರ ಬಲಿಯಾದ ನಗರಾ ಪ್ರದೇಶದ ರಣವುಪುರದಲ್ಲಿನ ಪ್ರಾಥಮಿಕ ಶಾಲೆಯ ಮಧ್ಯಂತರ ವಿರಾಮದ ವೇಳೆ ಶಾಲಾವರಣದಲ್ಲಿ ನಿಲ್ಲಿಸಲಾಗಿದ್ದ ಶರ್ಮಾರ ಬೈಕ್‌ನ್ನು ಮುಟ್ಟಿದ್ದ. ಆತನನ್ನು ಹಿಡಿದು ಥಳಿಸಿದ್ದ ಶರ್ಮಾ ತನ್ನ ಕಚೇರಿಗೆ ಎಳೆದೊಯ್ದಿದ್ದರು. ಕಬ್ಬಿಣದ ಸರಳಿನಿಂದಲೂ ಶರ್ಮಾ ತನಗೆ ಥಳಿಸಿದ್ದರು ಎಂದು ಬಾಲಕ ಹೇಳಿದ್ದಾನೆ.

ಬಳಿಕ ಬಾಲಕನ ಗಾಯಗಳಿಗೆ ಮುಲಾಮು ಸವರಿದ್ದ ಶರ್ಮಾ ಆತನನ್ನು ಬಿಟ್ಟಿದ್ದರು. ಭೀಮಪುರ ಪ್ರದೇಶದ ಕೌವಾಪುರದಲ್ಲಿಯ ತನ್ನ ಮನೆಗೆ ಮರಳಿದ್ದ ಬಾಲಕ ಗಾಯಗಳನ್ನು ಹೆತ್ತವರಿಗೆ ತೋರಿಸಿ ಘಟನೆಯ ಬಗ್ಗೆ ವಿವರಿಸಿದ್ದ.

ಕುಪಿತ ಗ್ರಾಮಸ್ಥರು ಶನಿವಾರ ಶಾಲೆಯ ಪ್ರವೇಶದ್ವಾರಗಳಿಗೆ ಬೀಗ ಜಡಿದು ಬೃಹತ್ ಪ್ರತಿಭಟನೆಯನ್ನು ನಡೆಸಿದ್ದರು. ಶರ್ಮಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವವರೆಗೆ ಶಾಲೆಯನ್ನು ಆರಂಭಿಸಲು ತಾವು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದ್ದರು. ಸ್ಥಳಕ್ಕೆ ತಲುಪಿದ್ದ ಬ್ಲಾಕ್ ಶಿಕ್ಷಣಾಧಿಕಾರಿ ತನಿಖೆ ನಡೆಸಿ ಸಿಂಗ್‌ಗೆ ವರದಿ ಸಲ್ಲಿಸಿದ್ದರು.

ಶರ್ಮಾರನ್ನು ಅಮಾನತುಗೊಳಿಸಿದ ಬಳಿಕವೇ ಗ್ರಾಮಸ್ಥರು ಪ್ರತಿಭಟನೆಯನ್ನು ಹಿಂದೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಪಾಕ್ ಎದುರು ಭಾರತದ ಸೋಲನ್ನು ವ್ಯಾಖ್ಯಾನಿಸಿ ಟೀಕೆಗೊಳಗಾದ ಸುಧೀರ್ ಚೌಧರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X