ಮರ್ಕಝ್ ನಾಲೆಜ್ ಸಿಟಿ ಉದ್ಘಾಟನಾ ಕಾರ್ಯಕ್ರಮ: ಕರ್ನಾಟಕ ಯೋಜನಾ ಸಮಿತಿ ಅಸ್ತಿತ್ವಕ್ಕೆ

ಮಂಗಳೂರು, ಸೆ.6: ಇಂಡಿಯನ್ ಗ್ರಾಂಡ್ ಮುಫ್ತಿ, ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ನೇತೃತ್ವದಲ್ಲಿ ಕೋಝಿಕ್ಕೋಡ್ ಜಿಲ್ಲೆಯ ಕೈದಪ್ಪೊಯಿಲ್ ನಲ್ಲಿ ನಿರ್ಮಾಣಗೊಳ್ಳುತ್ತಿರುವ ಮರ್ಕಝ್ ನಾಲೆಜ್ ಸಿಟಿಯ ಮೊದಲ ಹಂತದ ಉದ್ಘಾಟನಾ ಕಾರ್ಯಕ್ರಮ ಅಕ್ಟೋಬರ್ನಲ್ಲಿ ನಡೆಯಲಿದೆ. ಆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸುನ್ನಿ ಸಂಘಟನಾ ನಾಯಕರ ಸಭೆಯು ಕಾರಂದೂರು ಮರ್ಕಝ್ ನಲ್ಲಿ ನಡೆಯಿತು.
ಬೆಂಗಳೂರು, ಮಂಗಳೂರು, ಕೊಡಗು, ಶಿವಮೊಗ್ಗಗಳಲ್ಲಿ ಅಕ್ಟೋಬರ್ನಲ್ಲಿ ಸಮಾವೇಶ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಈ ಸಮಾವೇಶಗಳಲ್ಲಿ ಮರ್ಕಝ್ ನಾಲೇಜ್ ಸಿಟಿ ಅಧ್ಯಕ್ಷ ಎ.ಪಿ.ಉಸ್ತಾದ್, ಸೈಯದ್ ಅಲಿ ಬಾಫಖಿ ತಂಙಳ್, ಮ್ಯಾನೇಜಿಂಗ್ ಡೈರೆಕ್ಟರ್ ಡಾ.ಅಬ್ದುಲ್ ಹಕೀಂ ಅಝ್ಹರಿ, ನಾಯಕರಾದ ಸಿ.ಮುಹಮ್ಮದ್ ಫೈಝಿ, ಸೈಯದ್ ಮುಹಮ್ಮದ್ ತುರಾಬ್ ತಂಙಳ್, ಸೈಯದ್ ಮುತ್ತನೂರ್ ತಂಙಳ್, ಡಾ.ಅಬ್ದುಸ್ಸಲಾಂ, ಅಡ್ವಕೇಟ್ ತನ್ವೀರ್ ಭಾಗವಹಿಸಲಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಲಾಯಿತು.
*ಕರ್ನಾಟಕದ ಯೋಜನಾ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಗಿದ್ದು, ಅಧ್ಯಕ್ಷರಾಗಿ ಸೈಯದ್ ಇಸ್ಮಾಯೀಲ್ ತಂಙಳ್ ಉಜಿರೆ, ಕಾರ್ಯಾಧ್ಯಕ್ಷರಾಗಿ ಡಾ.ಎಮ್ಮೆಸ್ಸೆಂ ಝೈನಿ ಕಾಮಿಲ್, ಉಪಾಧ್ಯಕ್ಷರಾಗಿ ಶಾಫಿ ಸಅದಿ ಬೆಂಗಳೂರು, ಪ್ರಧಾನ ಸಂಚಾಲಕರಾಗಿ ಅಶ್ರಫ್ ಸಅದಿ ಮಲ್ಲೂರು, ಸಂಚಾಲಕರಾಗಿ ಅಬ್ದುಲ್ಲತೀಫ್ ಸಅದಿ ಶಿವಮೊಗ್ಗ, ಇಸ್ಮಾಯೀಲ್ ಸಖಾಫಿ ಕೊಂಡಂಗೇರಿ, ಕೋಶಾಧಿಕಾರಿಯಾಗಿ ಹಾಜಿ ಬಿ.ಎಂ.ಮುಮ್ತಾಝ್ ಅಲಿ, ಸಂಯೋಜಕರಾಗಿ ಮರ್ಝೂಖ್ ಸಅದಿ ಕಾಮಿಲ್ ಸಖಾಫಿ ಕೋಝಿಕ್ಕೋಡ್, ಸದಸ್ಯರಾಗಿ ಕೆ.ಪಿ.ಹುಸೈನ್ ಸಅದಿ ಕೆ.ಸಿ.ರೋಡ್, ಜಿ.ಎಂ.ಕಾಮಿಲ್ ಸಖಾಫಿ, ಪಿ.ಎಂ.ಉಸ್ಮಾನ್ ಸಅದಿ ಪಟ್ಟೋರಿ, ಅಬ್ದುಲ್ ರಹ್ಮಾನ್ ಮದನಿ ಜೆಪ್ಪು, ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ಕೆ.ಎಚ್.ಇಸ್ಮಾಯೀಲ್ ಸಅದಿ ಕಿನ್ಯ, ಹನೀಫ್ ಹಾಜಿ ಉಳ್ಳಾಲ್, ಅಬ್ದುಲ್ ಹಮೀದ್ ಬಜ್ಪೆ, ಅಶ್ರಫ್ ಕಿನಾರಾ ಅವರನ್ನು ಆಯ್ಕೆ ಮಾಡಲಾಯಿತು.






.jpeg)
.jpeg)
.jpeg)

