Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರಿನ ‘ಬಿಂದು’ ಬ್ರ್ಯಾಂಡ್ ಮೇಲೆ...

ಪುತ್ತೂರಿನ ‘ಬಿಂದು’ ಬ್ರ್ಯಾಂಡ್ ಮೇಲೆ ರಿಲಯನ್ಸ್ ಮೋಹ: ಆಫರ್ ತಿರಸ್ಕರಿಸಿದ ಎಸ್‌ಜಿ ಕಾರ್ಪೊರೇಟ್ಸ್

ವಾರ್ತಾಭಾರತಿವಾರ್ತಾಭಾರತಿ7 Sept 2022 11:31 AM IST
share
ಪುತ್ತೂರಿನ ‘ಬಿಂದು’ ಬ್ರ್ಯಾಂಡ್ ಮೇಲೆ ರಿಲಯನ್ಸ್ ಮೋಹ: ಆಫರ್ ತಿರಸ್ಕರಿಸಿದ ಎಸ್‌ಜಿ ಕಾರ್ಪೊರೇಟ್ಸ್

ಪುತ್ತೂರು, ಸೆ.7: ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ಪುತ್ತೂರಿನ ಹೆಸರಾಂತ ‘ಬಿಂದು’ (Bindu) ಬ್ರ್ಯಾಂಡ್ ಉತ್ಪನ್ನಗಳ ಮೇಲೆ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್(Reliance) ಸಂಸ್ಥೆ ಮೋಹಗೊಂಡು ಬಿಂದು ಬ್ರ್ಯಾಂಡ್ ಖರೀದಿಗೆ ಆಫರ್ ಮುಂದಿಟ್ಟಿದೆ ಎನ್ನಲಾಗಿದೆ. ಆದರೆ ಈ ಆಫರ್‌ನ್ನು ಬಿಂದು ಮಾಲಕ ನಯವಾಗಿ ತಿರಸ್ಕರಿಸಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳೀಯವಾಗಿ ಪ್ರಾರಂಭಗೊಂಡ ಬಿಂದು ಬ್ರ್ಯಾಂಡ್ ಖರೀದಿ ನಡೆದಿದ್ದರೆ ಸಾವಿರಾರು ಕೋಟಿ ರೂ.ಗಳ ಒಪ್ಪಂದ ಏರ್ಪಡುವ ಸಾಧ್ಯತೆಗಳಿತ್ತು ಎಂಬುದು ಮಾರುಕಟ್ಟೆ ವಿಶ್ಲೇಷಕರ ಅಭಿಪ್ರಾಯವಾಗಿದೆ. ಆದರೆ ಎಸ್‌.ಜಿ.ಕಾರ್ಪೊರೇಟ್ಸ್ ಆಡಳಿತ ನಿರ್ದೇಶ ಸತ್ಯಶಂಕರ್ ಈ ಆಫ್‌ರ್‌ನ್ನು ನಿರಾಕರಿಸಿದ್ದು, ಸಂಸ್ಥೆಯನ್ನು ಮಾರುವ ಇರಾದೆ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.  

ಕೆವಿನ್ ಕೇರ್‌ನ ಗಾರ್ಡನ್ಸ್ ನಮ್ಕೀನ್, ಲಹೋರಿ ಜೀರಾ ಹಾಗೂ ಬಿಂದು ಬಿವರೇಜರ್‌ನ್ನು ತನ್ನ ಸ್ವಾಧೀನಕ್ಕೆ ತೆಗೆದುಕೊಳ್ಳಲು ರಿಲಯನ್ಸ್ ಮುಂದಾಗಿತ್ತು. ತ್ವರಿತವಾಗಿ ಮಾರಾಟವಾಗುವ ಗ್ರಾಹಕ ಸರಕು(ಎಫ್ಎಂಸಿಜಿ) ವಲಯದಲ್ಲಿ ಏಕಸ್ವಾಮ್ಯ ಸಾಧಿಸಲು ದಾಪುಗಾಲು ಇಡುತ್ತಿರುವ ರಿಲಯನ್ಸ್ ಇತ್ತೀಚೆಗಷ್ಟೇ ದಿಲ್ಲಿ ಮೂಲದ ಪ್ಯೂರ್ ಡ್ರಿಂಕ್ಸ್ ಗ್ರೂಪ್‌ನಿಂದ ಸಾಫ್ಟ್ ಡ್ರಿಂಕ್ಸ್ ಬ್ರ್ಯಾಂಡ್ ‘ಕ್ಯಾಂಪಾ’ ಕೋಲಾವನ್ನು ರೂ. 22 ಕೋಟಿಗೆ ಖರೀದಿ ನಡೆಸಿತ್ತು. ಇದೀಗ 'ಬಿಂದು'ವಿನ ಖರೀದಿಗೂ ಸಂಸ್ಥೆ ಮುಂದಾಗಿತ್ತು. ಅಲ್ಲದೆ ಬಿಂದು ಬ್ರ್ಯಾಂಡ್ ಖರೀದಿಗಾಗಿ ಕೊಕಾ ಕೋಲಾ ಮತ್ತು ವಿಪ್ರೋ ಸಹಿತ ವಿದೇಶೀ ಕಂಪೆನಿಗಳು ಮುಂದಾಗಿದ್ದವು ಎನ್ನಲಾಗಿದ್ದು, ಆದರೆ ಈ ಎಲ್ಲಾ ಆಫರ್‌ಗಳನ್ನು ಬಿಂದು ನಿರಾಕರಿಸಿದೆ ಎಂದು ತಿಳಿದು ಬಂದಿದೆ.

20 ವರ್ಷಗಳ ಹಿಂದೆ ಪುತ್ತೂರಿನಲ್ಲಿ ಬಿಂದು ಮಿನರಲ್ ವಾಟರ್ ಆರಂಭಗೊಂಡು ಬಳಿಕ ಬೆಳೆದು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಮದ್ಯಮ ವರ್ಗದ ಕೃಷಿಕ ಕುಟುಂಬದ ಸತ್ಯಶಂಕರ್ ಭಟ್  ಮಿನರಲ್ ವಾಟರ್‌ನೊಂದಿಗೆ ಎಸ್‌ಜಿ ಕಾರ್ಪೊರೇಟ್ಸ್ ಉದ್ಯಮ ಆರಂಭಿಸಿದ್ದರು. ಈ ಸಂಸ್ಥೆಯ ‘ಬಿಂದು ಫಿಝ್ಹ ಜೀರಾ’ ಅಪಾರ ಜನಪ್ರಿಯತೆ ಗಳಿಸಿ ಸಂಸ್ಥೆಯನ್ನು ಎತ್ತರಕ್ಕೆ ಕೊಂಡೊಯ್ದಿತ್ತು. ಇದೀಗ ಸಂಸ್ಥೆಯಿಂದ ಸುಮಾರು 50ಕ್ಕೂ ಅಧಿಕ ಉತ್ಪನ್ನಗಳು ತಯಾರಾಗುತ್ತಿದ್ದು ದೇಶದ ವಿವಿಧ ಕಡೆಗಳಲ್ಲಿ ಮಾರುಕಟ್ಟೆಯನ್ನು ಹೊಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X