Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉತ್ತರದಾಯಿತ್ವದ ಕೊರತೆ ಶ್ರೀಲಂಕಾದ...

ಉತ್ತರದಾಯಿತ್ವದ ಕೊರತೆ ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟಿಗೆ ಕಾರಣ : ವಿಶ್ವಸಂಸ್ಥೆ ವರದಿ

ವಾರ್ತಾಭಾರತಿವಾರ್ತಾಭಾರತಿ7 Sept 2022 8:57 PM IST
share
ಉತ್ತರದಾಯಿತ್ವದ ಕೊರತೆ ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟಿಗೆ ಕಾರಣ : ವಿಶ್ವಸಂಸ್ಥೆ ವರದಿ

ಜಿನೆವಾ, ಸೆ.7: ಶ್ರೀಲಂಕಾದಲ್ಲಿ  ಈ ಹಿಂದೆ ಮತ್ತು ಪ್ರಸ್ತುತ ನಡೆದಿರುವ  ಮಾನವ ಹಕ್ಕುಗಳ ದುರುಪಯೋಗ, ಆರ್ಥಿಕ ಅಪರಾಧ ಮತ್ತು ಭ್ರಷ್ಟಾಚಾರಗಳಿಗೆ ಶಿಕ್ಷೆಯಿಲ್ಲದಿರುವುದು ಹಾಗೂ ಉತ್ತರದಾಯಿತ್ವದ ಬಗ್ಗೆ ನಿರ್ಭಯ  ಶ್ರೀಲಂಕಾದ ಆರ್ಥಿಕ ಕುಸಿತಕ್ಕೆ ಪ್ರಧಾನ ಕಾರಣ ಎಂದು ವಿಶ್ವಸಂಸ್ಥೆಯ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಪ್ರಸ್ತುತ ಸವಾಲುಗಳನ್ನು ಎದುರಿಸಲು ಮತ್ತು ಹಿಂದಿನ ಮಾನವ ಹಕ್ಕುಗಳ ಉಲ್ಲಂಘನೆಯ ಪುನರಾವರ್ತನೆಯನ್ನು ತಪ್ಪಿಸಲು ಮೂಲಭೂತ ಬದಲಾವಣೆ ಅಗತ್ಯ ಎಂದು   ವಿಶ್ವಸಂಸ್ಥೆ ಮಾನವ ಹಕ್ಕುಗಳ ಹೈಕಮಿಷನರ್(ಯುಎನ್‌ಎಚ್‌ಸಿಆರ್) ಮಿಷೆಲ್ ಬ್ಯಾಚೆಲೆಟ್ ತಯಾರಿಸಿರುವ, ಮಂಗಳವಾರ ಬಿಡುಗಡೆಗೊಂಡಿರುವ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಜಿನೆವಾದಲ್ಲಿ ಸೆಪ್ಟಂಬರ್ 12ರಿಂದ ಅಕ್ಟೋಬರ್ 7ರವರೆಗೆ ನಡೆಯಲಿರುವ ಯುಎನ್‌ಎಚ್‌ಸಿಆರ್‌ನ 51ನೇ ಅಧಿವೇಶನದ ಸಂದರ್ಭದಲ್ಲೇ ಈ ವರದಿ ಹೊರಬಿದ್ದಿರುವುದು ಕುತೂಹಲ ಮೂಡಿಸಿದೆ. ಅಧಿವೇಶನದಲ್ಲಿ ಶ್ರೀಲಂಕಾಕ್ಕೆ ಸಂಬಂಧಿಸಿ ನಿರ್ಣಯವನ್ನು ಮಂಡಿಸುವ ನಿರೀಕ್ಷೆಯಿದೆ. ಜತೆಗೆ, ಇದೇ ಪ್ರಪ್ರಥಮ ಬಾರಿಗೆ ವಿಶ್ವಸಂಸ್ಥೆಯ ಉನ್ನತ ಘಟಕವೊಂದು ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟನ್ನು ಸಮಗ್ರ ಮಾನವ ಹಕ್ಕುಗಳ ಉಲ್ಲಂಘನೆಗಳೊಂದಿಗೆ ಜೋಡಿಸಿದೆ. ಸುಸ್ಥಿರ ಸುಧಾರಣೆಗಾಗಿ ಹಿಂದಿನ ಮತ್ತು ಪ್ರಸ್ತುತ ಮಾನವ ಹಕ್ಕುಗಳ ಉಲ್ಲಂಘನೆ, ಆರ್ಥಿಕ ಅಪರಾಧಗಳು ಮತ್ತು ಭ್ರಷ್ಟಾಚಾರಕ್ಕೆ ಹೊಣೆಗಾರಿಕೆ ಇಲ್ಲದಿರುವುದು ಸೇರಿದಂತೆ ಈ ಬಿಕ್ಕಟ್ಟಿಗೆ ಕಾರಣವಾದ ಅಂಶಗಳನ್ನು ಪರಿಹರಿಸಲು ಶ್ರೀಲಂಕಾಕ್ಕೆ ನೆರವಾಗುವ ಅಗತ್ಯವಿದೆ ಎಂದು ವರದಿ ಹೇಳಿದೆ.

ಉತ್ತರದಾಯಿತ್ವ ಮತ್ತು ಪ್ರಜಾಸತ್ತಾತ್ಮಕ ಸುಧಾರಣೆಗಳಿಗಾಗಿ ಶ್ರೀಲಂಕಾದ ಎಲ್ಲಾ ಸಮುದಾಯಗಳ ಬೇಡಿಕೆಗಳು ಭವಿಷ್ಯದ ಹೊಸ ಮತ್ತು ಸಾಮಾನ್ಯ ದೃಷ್ಟಿಗೆ ಪ್ರಮುಖ ಆರಂಭಿಕ ಹಂತವಾಗಿದೆ. ಈ ಹಿಂದಿನ ಮಾನವ ಹಕ್ಕುಗಳ ಉಲ್ಲಂಘನೆಯ ಪುನರಾವರ್ತನೆಯನ್ನು ತಪ್ಪಿಸಲು ಮೂಲಭೂತ ಬದಲಾವಣೆಯ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಕಠೋರವಾದ ಭದ್ರತಾ ಕಾಯ್ದೆಯ ಮೇಲಿನ ಅವಲಂಬನೆಯನ್ನು  ಮತ್ತು ಶಾಂತಿಯುತ ಪ್ರತಿಭಟನೆಗಳ ಮೇಲಿನ ದಬ್ಬಾಳಿಕೆಯನ್ನು ತಕ್ಷಣವೇ ಅಂತ್ಯಗೊಳಿಸಿ, ಮಿಲಿಟರೀಕರಣದ ಕಡೆಗಿನ ದಿಕ್ಚು್ಯತಿಯನ್ನು ಹಿಮ್ಮೆಟ್ಟಿಸಲು ಮತ್ತು ಭದ್ರತಾ  ವಲಯದ ಸುಧಾರಣೆ, ಉತ್ತರದಾಯಿತ್ವದಿಂದ ವಿನಾಯಿತಿ ಸೌಲಭ್ಯವನ್ನು ಅಂತ್ಯಗೊಳಿಸಲು  ರಾನಿಲ್ ವಿಕ್ರಮಸಿಂಘೆ ನೇತೃತ್ವದ ಹಾಲಿ ಸರಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ವರದಿ ಕರೆ ನೀಡಿದೆ. ಶ್ರೀಲಂಕಾದ ಕುರಿತ ನಿರ್ಣಯಕ್ಕೆ ಸಂಬಂಧಿಸಿದ ಕರಡು ನಿರ್ಣಯವನ್ನು ಸೆಪ್ಟಂಬರ್ 23ರಂದು ಯುಎನ್‌ಎಚ್‌ಸಿಆರ್ ಮಂಡಿಸುವ ನಿರೀಕ್ಷೆಯಿದೆ. ಬಳಿಕ ಅಕ್ಟೋಬರ್ 6ರಂದು ನಿರ್ಣಯದ ಮೇಲೆ ಸದಸ್ಯ ದೇಶಗಳು ಮತ ಚಲಾಯಿಸಲಿವೆ.

ಯುಎನ್‌ಎಚ್‌ಸಿಆರ್ 2013ರಿಂದ ಯುದ್ಧ ಅಪರಾಧಗಳಿಗೆ ಹೊಣೆಗಾರರನ್ನಾಗಿಸುವ ಕರೆ ನೀಡುವ ನಿರ್ಣಯಗಳನ್ನು ಅಂಗೀಕರಿಸಿದೆ. ಶ್ರೀಲಂಕಾದ ಉತ್ತರ ಮತ್ತು ಪೂರ್ವ ವಲಯಗಳಲ್ಲಿ ಪ್ರತ್ಯೇಕ ದೇಶ ಸ್ಥಾಪನೆಯ ಉದ್ದೇಶದ ಹಿಂಸಾತ್ಮಕ ಅಭಿಯಾನದ ಸಂದರ್ಭ ನಡೆದ ಮಾನವ ಹಕ್ಕುಗಳ ವ್ಯಾಪಕ ಉಲ್ಲಂಘನೆ ಮತ್ತು ಯುದ್ಧಾಪರಾಧಗಳಿಗೆ  ಸರಕಾರಿ ಪಡೆ ಮತ್ತು ಎಲ್‌ಟಿಟಿಇ ಸಂಘಟನೆಯ ಮೇಲೆ ಆರೋಪ ಹೊರಿಸಲಾಗಿದೆ. 2015ರಲ್ಲಿ ಮಂಡಿಸಲಾಗಿದ್ದ ಮತ್ತೊಂದು ನಿರ್ಣಯವು ಕಾಮನ್‌ವೆಲ್ತ್ ಮತ್ತು ಇತರ ವಿದೇಶೀ ನ್ಯಾಯಾಧೀಶರು, ರಕ್ಷಣಾ ವಕೀಲರು ಮತ್ತು ಅಧಿಕೃತ ಪ್ರಾಸಿಕ್ಯೂಟರ್‌ಗಳು, ತನಿಖಾಧಿಕಾರಿಗಳ ಭಾಗವಹಿಸುವಿಕೆಯೊಂದಿಗೆ ವಿಶ್ವಾಸಾರ್ಹ ನ್ಯಾಯಾಂಗ ಪ್ರಕ್ರಿಯೆಯನ್ನು ಸ್ಥಾಪಿಸಲು ಶ್ರೀಲಂಕಾವನ್ನು ಆಗ್ರಹಿಸಿತ್ತು. ಆದರೆ ಈ ಒತ್ತಾಯವನ್ನು ಶ್ರೀಲಂಕಾ ನಿರಂತರವಾಗಿ ವಿರೋಧಿಸುತ್ತಾ ಬಂದಿದೆ. 2021ರಲ್ಲಿ ಮಂಡಿಸಲಾಗಿದ್ದ ಮತ್ತೊಂದು ನಿರ್ಣಯದಲ್ಲಿ, ಅಂದಿನ ಅಧ್ಯಕ್ಷ ಗೊತಬಯ ರಾಜಪಕ್ಸ ಸರಕಾರ ಪ್ರಸ್ತಾವಿಸಿದ್ದ ದೇಶೀಯ ವ್ಯವಸ್ಥೆಯ ಬಗ್ಗೆ  ಪ್ರಸ್ತಾವನೆಯಿತ್ತು. ಈ ನಿರ್ಣಯದ ವಿರುದ್ಧ 22 ಮತ್ತು ಪರ 11 ಮತ ಚಲಾವಣೆಯಾಗಿ ನಿರ್ಣಯ ತಿರಸ್ಕೃತಗೊಂಡಿತ್ತು.

ಶ್ರೀಲಂಕಾವು 1948ರ ಬಳಿಕದ ಅತ್ಯಂತ ತೀವ್ರ ಆರ್ಥಿಕ ಬಿಕ್ಕಟ್ಟಿನ ಸಮಸ್ಯೆ ಎದುರಿಸುತ್ತಿದ್ದು ದೇಶದಲ್ಲಿ  ಹಣದುಬ್ಬರ, ದೈನಂದಿನ ಅಗತ್ಯದ ವಸ್ತುಗಳ ತೀವ್ರ ಕೊರತೆ ಉಂಟಾಗಿದೆ.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X