Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗ್ರಾಮಗಳ ಗ್ರಂಥಾಲಯಗಳಿಂದ ಪ್ರೇರಣೆ...

ಗ್ರಾಮಗಳ ಗ್ರಂಥಾಲಯಗಳಿಂದ ಪ್ರೇರಣೆ ಮೂಡಬೇಕು: ಡಾ. ಕುಮಾರ್

ವಾರ್ತಾಭಾರತಿವಾರ್ತಾಭಾರತಿ7 Sept 2022 10:56 PM IST
share
ಗ್ರಾಮಗಳ ಗ್ರಂಥಾಲಯಗಳಿಂದ ಪ್ರೇರಣೆ ಮೂಡಬೇಕು: ಡಾ. ಕುಮಾರ್

ಮಂಗಳೂರು, ಸೆ.7: ಜಿಲ್ಲೆಯ ಗ್ರಾಪಂಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಾಲಯಗಳಿಂದ ಸ್ಥಳೀಯ ಗ್ರಾಮಸ್ಥರಿಗೆ ಪ್ರೇರಣೆ ಮೂಡಿಸುವ ಕೆಲಸವಾಗಬೇಕು ಎಂದು ದ.ಕ.ಜಿಪಂ ಸಿಇಒ ಡಾ.ಕುಮಾರ್ ಹೇಳಿದರು.

ನಗರದ ಜಿಪಂ ನೇತ್ರಾವತಿ ಸಭಾಂಗಣದಲ್ಲಿ ಗ್ರಂಥಾಲಯ ಮೇಲ್ವಿಚಾರಕರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದಲ್ಲಿರುವ ಗ್ರಂಥಾಲಯಗಳು ಇದೀಗ ಗ್ರಾಮೀಣಾಭಿವೃದ್ಧಿ ಇಲಾಖೆಯ ಭಾಗವಾಗಿ ಕಾರ್ಯ ನಿರ್ವಹಿಸುತ್ತಿವೆ. ಅಲ್ಲಿನ ಮೆಲ್ವಿಚಾರಕರು ಜವಾಬ್ದಾರಿ, ಹೊಣೆಗಾರಿಕೆ ಹಾಗೂ ಅಭಿರುಚಿಯಿಂದ ಕೆಲಸ ಮಾಡಬೇಕು. ಗ್ರಂಥಾಲಯಗಳು ಜ್ಞಾನ ದೇಗುಲಗಳು, ಜ್ಞ್ಞಾನವೇ ದೇವರು. ಅಲ್ಲಿರುವವರು ಸಕಾರಾತ್ಮಕ ಭಾವನೆಗಳನ್ನು ಹೊಂದಿರುತ್ತಾರೆ. ಈ ವೃತ್ತಿಯನ್ನು ಗೌರವಿಸಿ ಗ್ರಂಥಾಲಯಕ್ಕೆ ಬರುವ ಓದುಗರನ್ನು ಪ್ರೋತ್ಸಾಹಿಸುವ  ಕೆಲಸ ಮಾಡಬೇಕು ಎಂದು ಡಾ.ಕುಮಾರ್ ಹೇಳಿದರು.

ಮೇಲ್ವಿಚಾರಕರು ಬೆಳಗ್ಗೆ 9ರಿಂದ ಮಧ್ಯಾಹ್ನ 1 ಹಾಗೂ ಅಪರಾಹ್ನ 3ರಿಂದ ಸಂಜೆ 5ರವರೆಗೆ ಗ್ರಂಥಾಲಯಗಳನ್ನು ತೆರೆಯಬೇಕು, ಗ್ರಾಮ ವ್ಯಾಪ್ತಿಯಲ್ಲಿರುವ ಪ್ರತಿಯೊಂದು ಶಾಲೆ, ಕಾಲೇಜು ವಿದ್ಯಾರ್ಥಿಗಳ ಪಟ್ಟಿಯನ್ನಿಟ್ಟುಕೊಳ್ಳಬೇಕು, ಗ್ರಾಮದ ಪ್ರತಿ ಕುಟುಂಬದ ಒಬ್ಬರನ್ನಾದರು ಗ್ರಂಥಾಲಯದ ಸದಸ್ಯರನ್ನಾಗಿ ನೋಂದಾಯಿಸಿಕೊಳ್ಳಬೇಕು. ಡಿಜಿಟಲ್ ಲೈಬ್ರರಿಗಳು ಕ್ರಿಯಾಶೀಲತೆಯಿಂದ ಕೂಡಿರಬೇಕು, 8,9,10ನೇ ತರಗತಿಗಳು ಮತ್ತು ಪಿಯುಸಿ ಹಾಗೂ ಪದವಿ ಕಾಲೇಜುಗಳ ಪಠ್ಯ ಪುಸ್ತಕಗಳ ಪಿಡಿಎಫ್ ಕಾಪಿಗಳನ್ನು ಪೆನ್‌ಡ್ರೈವ್‌ ನಲ್ಲಿ ವಿದ್ಯಾರ್ಥಿಗಳು ಪಡೆಯುವಂತಿರಬೇಕು, ಗ್ರಂಥಮಿತ್ರ ಯೋಜನೆಯನ್ನು ಸಮಪರ್ಕವಾಗಿ ಅಳವಡಿಸಿಕೊಳ್ಳ ಬೇಕು ಎಂದು ಡಾ. ಕುಮಾರ್ ಸಲಹೆ ನೀಡಿದರು.

ಸಭೆಯಲ್ಲಿ ಮುಖ್ಯಗ್ರಂಥಾಲಯಾಧಿಕಾರಿ ಗಾಯತ್ರಿ, ಶಿಕ್ಷಣ ಫೌಂಡೇಶನ್‌ನ ಸಂಯೋಜಕ ರಕ್ಷಿತ್ ಮತ್ತಿತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X