Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಿಎಂ-ಶ್ರೀ ಯೋಜನೆ ಮೂಲಕ 14,500 ಶಾಲೆಗಳು...

ಪಿಎಂ-ಶ್ರೀ ಯೋಜನೆ ಮೂಲಕ 14,500 ಶಾಲೆಗಳು ಮೇಲ್ದರ್ಜೆಗೆ ಕೇಂದ್ರ ಸಂಪುಟ ಅನುಮೋದನೆ

18 ಲಕ್ಷ ವಿದ್ಯಾರ್ಥಿಗಳಿಗೆ ಪ್ರಯೋಜನ

ವಾರ್ತಾಭಾರತಿವಾರ್ತಾಭಾರತಿ7 Sept 2022 11:15 PM IST
share
ಪಿಎಂ-ಶ್ರೀ ಯೋಜನೆ ಮೂಲಕ 14,500 ಶಾಲೆಗಳು ಮೇಲ್ದರ್ಜೆಗೆ ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ,ಆ.7: ದೇಶಾದ್ಯಂತ 14,500 ಶಾಲೆಗಳನ್ನು ಮೇಲ್ದರ್ಜೆಗೇರಿಸುವ ಪ್ರಧಾನಮಂತ್ರಿ -ಶ್ರೀ ಯೋಜನೆಗೆ ಕೇಂದ್ರ ಸಂಪುಟ ಬುಧವಾರ ಅನುಮೋದನೆ ನೀಡಿದೆ ಹಾಗೂ ಮುಂದಿನ ಐದು ವರ್ಷಗಳಿಗೆ 27,360 ಕೋಟಿ ರೂ.ಹಣವನ್ನು ಮೀಸಲಿಡಲಾಗುವುದು. ಈ ಯೋಜನೆಯಡಿ ಕೇಂದ್ರ ಸರಕಾರವು 18,128 ಕೋಟಿ ರೂ. ಅನುದಾನ ನೀಡಲಿದ್ದು, ಇದರಿಂದ 18 ಲಕ್ಷ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ.

  ಸೋಮವಾರ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಈ ಯೋಜನೆಯನ್ನು ಘೋಷಿಸಿದ್ದರು. ಪಿಎಂ-ಶ್ರೀ ಯೋಜನೆಯಡಿ ರೂಪಿಸಲಾಗುವ ಶಾಲೆಗಳು ಮಾದರಿ ಶಿಕ್ಷಣ ಸಂಸ್ಥೆಗಳಾಗಲಿವೆ ಹಾಗೂ 2020ರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಂಪೂರ್ಣ ಚೈತನ್ಯದೊಂದಿಗೆ ಸಾಕಾರಗೊಳಿಸಲಿದೆ ಎಂದವರು ಹೇಳಿದ್ದರು.

 ಈಗ ಅಸ್ತಿತ್ವದಲ್ಲಿರುವ ಶಾಲೆಗಳನ್ನು ಪಿಎಂ-ಶ್ರೀ ಯೋಜನೆಯಡಿ ಕೇಂದ್ರ ಸರಕಾರ, ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಹಾಗೂ ಸ್ಥಳೀಯಾಡಳಿತಗಳು ನಡೆಸುತ್ತಿರುವ ಶಾಲೆಗಳನ್ನು ಈ ಯೋಜನೆಯಡಿ ನಿರ್ವಹಿಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸಂಪುಟ ಸಭೆಯ ಬಳಿಕ ತಿಳಿಸಿದರು.

     ನೇರ ಪ್ರಯೋಜನ ವರ್ಗಾವಣೆ ವಿಧಾನದ ಮೂಲಕ ಈ ಶಾಲೆಗಳಿಗೆ ಅನುದಾನವನ್ನು ನೇರವಾಗಿ ವರ್ಗಾಯಿಸಲಾಗುವುದು ಎಂದವರು ತಿಳಿಸಿದ್ದಾರೆ. ಪ್ರಾಂಶುಪಾಲರು ಹಾಗೂ ಶಾಲಾ ಸಮಿತಿಗಳು, ಮಂಜೂರಾದ ಅನುದಾನದ ಶೇ.40ರಷ್ಟನ್ನು ಹೇಗೆ ಬಳಸಿಕೊಳ್ಳಬೇಕೆಂದು ನಿರ್ಧರಿಸಲಿವೆ ಎಂದರು. ಈ ಉದ್ದೇಶಕ್ಕಾಗಿ ಪಾರದರ್ಶಕ ಮಾನದಂಡವನ್ನು ರೂಪಿಸಲಾಗುವುದು. ದೇಶಲ್ಲಿ ಇದೇ ಮೊದಲ ಬಾರಿಗೆ ಶಾಲೆಗಳಿಗೆ ಇಂತಹ ಅವಕಾಶವನ್ನು ನೀಡಲಾಗಿದೆಯೆಂದವರು ತಿಳಿಸಿದರು.

ಪಿಎಂ ಶ್ರೀ ಯೋಜನೆಗೆ ಶಾಲೆಗಳ ಆಯ್ಕೆ ಪ್ರಕ್ರಿಯೆ

 ಮೊದಲ ಹಂತದಲ್ಲಿ ರಾಜ್ಯಗಳು ಹಾಗೂ ಕೇಂದ್ರಾಡಳಿತಗಳು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಂಪೂರ್ಣವಾಗಿ ಜಾರಿಗೊಳಿಸಲು ಒಪ್ಪಿಗೆ ಸೂಚಿಸಬೇಕು. ನಿರ್ದಿಷ್ಟಪಡಿಸಿದಂತಹ ಗುಣಮಟ್ಟದ ಖಾತರಿಯನನು ಸಾಧಿಸುವಲ್ಲಿ ಶಾಲೆಗಳಿಗೆ ಬೆಂಬಲ ನೀಡುವ ಕುರಿತಾಗಿ ಕೇಂದ್ರ ಸರಕಾರ ಸೂಚಿಸಿದ ಕ್ರಮಗಳಿಗೆ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಬೇಕು.

 ಎರಡನೆ ಹಂತದಲ್ಲಿ ಪಿಎಂ-ಶ್ರೀ ಯೋಜನೆಗೆ ಆಯ್ಕೆಯಾಗುವ ಅರ್ಹತೆಯಿರುವ ಶಾಲೆಗಳನ್ನು ಗುರುತಿಸಲಾಗುವುದು . ಅವುಗಳ ಪೈತಿ ಸೂಚಿಸಲಾದಂತಹ ಕನಿಷ್ಠ ಮಾನದಂಡಗಳನ್ನು ಹೊಂದಿರುವ ಶಾಲೆಗಳನ್ನು ಆಯ್ಕೆ ಮಾಡಲಾಗುವುದು.ಆನಂತರ ಭೌತಿಕ ಪರಿಶೀನೆಗಳ ಮೂಲಕ ಈ ಶಾಲೆಗಳಿಗೆ ಅರ್ಹತಾ ಪ್ರಮಾಣಪತ್ರವನ್ನು ನೀಡಲಾಗುವುದು.

  ದೇಶಾದ್ಯಂತ ಪ್ರತಿ ಬ್ಲಾಕ್/ ನಗರ ಸ್ಥಳೀಯಡಾಳಿತ ಸಂಸ್ಥೆಗಳ ವ್ಯಾಪ್ತಿಲ್ಲಿ ಕನಿಷ್ಠ ಎರಡು ಶಾಲೆಗಳನ್ನು ಆಯ್ಕೆ ಮಾಡಲಾಗುವುದು ( ಒಂದು ಪ್ರಾಥಮಿಕ, ಒಂದು ಮಾಧ್ಯಮಿ/ ಪ್ರೌಢ ಶಾಲೆ). ಜಿಯೋ ಟ್ಯಾಗಿಂಗ್ ವ್ಯವಸ್ಥೆಯ ಮೂಲಕ ಪಿಎಂ ಶ್ರೀ ಶಾಲೆಗಳ ಕಣ್ಗಾವಲು ನಡೆಸಲಾಗುವುದು ಎಂದು ಕೇಂದ್ರ ಸರಕಾರದ ಹೇಳಿಕೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X