Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮೌಲ್ಯಾಧಾರಿತ ಶಿಕ್ಷಣ ನೀಡುವುದು ಶಿಕ್ಷಕರ...

ಮೌಲ್ಯಾಧಾರಿತ ಶಿಕ್ಷಣ ನೀಡುವುದು ಶಿಕ್ಷಕರ ಜವಾಬ್ದಾರಿ: ಉಡುಪಿ ಬಿಷಪ್

ವಾರ್ತಾಭಾರತಿವಾರ್ತಾಭಾರತಿ10 Sept 2022 7:33 PM IST
share
ಮೌಲ್ಯಾಧಾರಿತ ಶಿಕ್ಷಣ ನೀಡುವುದು ಶಿಕ್ಷಕರ ಜವಾಬ್ದಾರಿ: ಉಡುಪಿ ಬಿಷಪ್

ಉಡುಪಿ, ಸೆ.10: ಶಿಕ್ಷಕರು ವಿದ್ಯಾರ್ಥಿಗಳ ಮಾನಸಿಕ ಬೆಳವಣಿಗೆ ಪೂರಕ ವಾದ ಶಿಕ್ಷಣ ನೀಡುವುದರೊಂದಿಗೆ ಮೌಲ್ಯಾಧಾರಿತ ಶಿಕ್ಷಣವನ್ನು ನೀಡುವ ಮಹತ್ವದ ಜವಾಬ್ದಾರಿಯನ್ನೂ ಹೊಂದಿದ್ದಾರೆ ಎಂದು ಉಡುಪಿ ಕ್ರೈಸ್ತ ಧರ್ಮ ಪ್ರಾಂತದ ಧರ್ಮಾಧ್ಯಕ್ಷ ಅ.ವಂ. ಡಾ.ಜೆರಾಲ್ಡ್ ಐಸಾಕ್ ಲೋಬೊ ಅಭಿಪ್ರಾಯ ಪಟ್ಟಿದ್ದಾರೆ. 

ಶನಿವಾರ  ಉಡುಪಿ ಧರ್ಮಪ್ರಾಂತದ ಕೆಥೊಲಿಕ್ ಎಜುಕೇಶನಲ್ ಸೊಸೈಟಿ ವತಿಯಿಂದ   ಉಡುಪಿ ಚರ್ಚ್ ವಠಾರದಲ್ಲಿರುವ ಧರ್ಮಾಧ್ಯಕ್ಷರ ನಿವಾಸದ ನೆಲಮಹಡಿಯ ಆವೆ ಮರಿಯಾ ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಮತ್ತು ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು  ಮಾತನಾಡುತಿದ್ದರು. 

ಶಿಕ್ಷಣ ಕೇವಲ ಜ್ಞಾನ ಸಂಪಾದನೆಗಲ್ಲ, ಬದಲಾಗಿ ಅದು ಮಾನವನ ವಿಕಾಸ ವಾಗಿದೆ. ಶಿಕ್ಷಣ ಎಂದರೆ ವಿದ್ಯಾರ್ಥಿಯ ಸರ್ವಾಂಗೀಣ ಬೆಳವಣಿಗೆಯಾಗಿದೆ. ಇತ್ತೀಚಿನ ದಿನಗಳಲ್ಲಿ ನಮ್ಮ ಶಾಲೆಗಳ ಹೆಚ್ಚಿನ ಗಮನ ಫಲಿತಾಂಶದೆಡೆಗೆ ಮಾತ್ರ ಇದ್ದು, ಶಿಕ್ಷಣದಿಂದ ಮುಖ್ಯವಾಗಿ ಮಕ್ಕಳ ಮಾನಸಿಕ ಬೆಳವಣಿಗೆ, ದೈಹಿಕ ಬೆಳವಣಿಗೆ, ಹೃದಯ ವೈಶಾಲ್ಯತೆ ಮತ್ತು ಆತ್ಮದ ಬೆಳವಣಿಗೆಯಾದಾಗ ಮಾತ್ರ ನಿಜವಾದ ಶಿಕ್ಷಣ ನಮ್ಮ ಮಕ್ಕಳಿಗೆ ಲಭಿಸಿದಂತಾಗುತ್ತದೆ. ಕ್ರೈಸ್ತ ಶಿಕ್ಷಣ ಸಂಸ್ಥೆಗಳು ಸದಾ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡುವಲ್ಲಿ ತಮ್ಮ ಪಾತ್ರವನ್ನು ವಹಿಸುತ್ತಿವೆ ಎಂದವರು ಹೇಳಿದರು.

ಕೇಂದ್ರ ಸರಕಾರ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದ್ದು, ಪಠ್ಯಪುಸ್ತಕದ ಜ್ಞಾನದ ಜೊತೆಗೆ ಕೌಶಲ್ಯಭರಿತ ಶಿಕ್ಷಣ ಮಕ್ಕಳಿಗೆ ಲಭಿಸಬೇಕು ಎನ್ನುವುದು ಈ ನೀತಿಯ ಮುಖ್ಯ ಉದ್ದೇಶವಾಗಿದೆ. ಇದಕ್ಕಾಗಿ ನಮ್ಮ ಶಿಕ್ಷಕರು ಸಂಪೂರ್ಣವಾಗಿ ಸಿದ್ದಗೊಳ್ಳಬೇಕಿದೆ ಎಂದರು.

ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಲು ಬೇಕಾದ ಶಿಕ್ಷಣ ಪ್ರತಿಯೊ ಬ್ಬರ ಅಗತ್ಯವಾಗಿದೆ. ಒಂದು ದೇಶ ಅಭಿವೃದ್ಧಿ ಹೊಂದಬೇಕಾದರೆ ಅದರಲ್ಲಿ ಶಿಕ್ಷಕರ ಪಾತ್ರ ಹಿರಿದಾದುದು. ಶಿಕ್ಷಕರು ಮಕ್ಕಳಲ್ಲಿರುವ ಅನನ್ಯ ಪ್ರತಿಭೆಯನ್ನು ಗುರುತಿಸಿ ಅದನ್ನು ಪೋಷಿಸುವ ಕೆಲಸ ಮಾಡಿದಾಗ ಮಾತ್ರ ಅವರ ವೃತ್ತಿಗೆ ನಿಜವಾದ ಸಾರ್ಥಕತೆ ಲಭಿಸುತ್ತದೆ ಎಂದರು.

ಮುಖ್ಯ ಅತಿಥಿಗಳಾಗಿ  ಪ್ರಾಥಮಿಕ ಶಿಕ್ಷಣ ಇಲಾಖೆ ಸಚಿವಾಲಯದ ನಿವೃತ್ತ ಶಾಖಾಧಿಕಾರಿ ಅಕ್ಬರ್ ಆಲಿ ಭಾಗವಹಿಸಿ ಶುಭ ಹಾರೈಸಿದರು.

ಧರ್ಮಪ್ರಾಂತ ಆಡಳಿತಕ್ಕೆ ಒಳಪಟ್ಟ ಶಾಲಾ, ಕಾಲೇಜುಗಳಲ್ಲಿ ಸೇವೆ ಸಲ್ಲಿಸಿ ಕಳೆದ ಶೈಕ್ಷಣಿಕ ವರ್ಷದಲ್ಲಿ ನಿವೃತ್ತರಾದ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳನ್ನು, ಕಳೆದ ಶೈಕ್ಷಣಿಕ ವರ್ಷದಲ್ಲಿ ಶೇ.೧೦೦ ಫಲಿತಾಂಶ ದಾಖಲಿಸಿದ ಶಾಲೆಗಳನ್ನು, ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕಳೆದ ಒಂದು ವರ್ಷದಲ್ಲಿ ಉಡುಪಿ ಧರ್ಮಪ್ರಾಂತದ ಕೆಥೊಲಿಕ್ ಶಿಕ್ಷಣ ಸೊಸೈಟಿ ಆಡಳಿತಕ್ಕೊಳಪಟ್ಟ ಶಾಲೆಗಳಲ್ಲಿ ನಿಧನರಾದ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಶೃದ್ಧಾಂಜಲಿ ಅರ್ಪಿಸಲಾಯಿತು.

ಕಾರ್ಯಕ್ರಮದಲ್ಲಿ ಉಡುಪಿ ಸಂತ ಮೇರಿ ವಿದ್ಯಾಸಂಸ್ಥೆಗಳ ಸಂಚಾಲಕ ವಂ. ಚಾರ್ಲ್ಸ್ ಮಿನೇಜಸ್ ಸ್ವಾಗತಿಸಿ,  ಕೆಥೊಲಿಕ್ ಶಿಕ್ಷಣ ಸೊಸೈಟಿ ಉಡುಪಿ ಧರ್ಮಪ್ರಾಂತ ಕಾರ್ಯದರ್ಶಿ ವಂ.ವಿನ್ಸೆಂಟ್ ಕ್ರಾಸ್ತಾ ವಂದಿಸಿದರು. ವಿನಯ್ ಸುವರ್ಣ ಮತ್ತು ಅಮೃತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X