Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪೂರ್ವ ವಲಯದಲ್ಲಿ ಉಕ್ರೇನ್ ಸೇನೆ ಮೇಲುಗೈ:...

ಪೂರ್ವ ವಲಯದಲ್ಲಿ ಉಕ್ರೇನ್ ಸೇನೆ ಮೇಲುಗೈ: ವರದಿ

ವಾರ್ತಾಭಾರತಿವಾರ್ತಾಭಾರತಿ10 Sept 2022 9:15 PM IST
share
ಪೂರ್ವ ವಲಯದಲ್ಲಿ ಉಕ್ರೇನ್ ಸೇನೆ ಮೇಲುಗೈ: ವರದಿ

ಕೀವ್, ಸೆ.10: ಪೂರ್ವ ಪ್ರಾಂತದಲ್ಲಿ ರಶ್ಯ ವಶಪಡಿಸಿಕೊಂಡಿದ್ದ ಹಲವು ಪ್ರದೇಶಗಳನ್ನು ಮರಳಿಪಡೆಯಲು  ಉಕ್ರೇನ್ ಸೇನೆ ಯಶಸ್ವಿಯಾಗಿದ್ದು ಖಾರ್ಕಿವ್ ಸೇರಿದಂತೆ ಹಲವು ವಲಯಗಳಲ್ಲಿ ರಶ್ಯದ ಮುಂಚೂಣಿ ಪಡೆ ಹಿಮ್ಮೆಟ್ಟಿದೆ ಎಂದು ವರದಿಯಾಗಿದೆ.

 ಸುಮಾರು 7 ತಿಂಗಳಿನಿಂದ ಮುಂದುವರಿದಿರುವ ರಶ್ಯ-ಉಕ್ರೇನ್ ಯುದ್ಧಕ್ಕೆ ಸಂಬಂಧಿಸಿ ಇದೊಂದು ಮಹತ್ವದ ಬೆಳವಣಿಗೆಯಾಗಿದೆ.‌

ಖಾರ್ಕಿವ್ ಪ್ರಾಂತದಲ್ಲಿ ತನಗೆ ಹಿನ್ನಡೆಯಾಗಿರುವುದನ್ನು ರಶ್ಯವೂ ಒಪ್ಪಿಕೊಂಡಿದೆ. "ಮುನ್ನುಗ್ಗಿ ಬರುತ್ತಿರುವ ಶತ್ರುಪಡೆಯ ಧಾವಂತವನ್ನು ಸಾಧ್ಯವಿದ್ದಷ್ಟು ಮಟ್ಟಿಗೆ ವಿಳಂಬಿಸಲಾಗಿದೆ. ಆದರೆ ಹಲವು ಪ್ರದೇಶಗಳು ಈಗಾಗಲೇ ಶತ್ರುಸೇನೆಯ ವಶಕ್ಕೆ ಬಂದಿದೆ" ಎಂದು ಖಾರ್ಕಿವ್ ವಲಯವನ್ನು ವಶಪಡಿಸಿಕೊಂಡ ಬಳಿಕ ರಶ್ಯದ ನೇಮಿಸಿದ್ದ ಆಡಳಿತಾಧಿಕಾರಿ ವಿಟಾಲಿ ಗ್ಯಾನ್ಚೆವ್ ಟಿವಿ ವಾಹಿನಿಯನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಹೇಳಿದ್ದಾರೆ.

ನಮ್ಮ ಸೇನೆ, ಗುಪ್ತಚರ ದಳ ಮತ್ತು ಭದ್ರತಾ ವಿಭಾಗದ ಸಕ್ರಿಯ ಕಾರ್ಯಾಚರಣೆಯಿಂದಾಗಿ ಇದುವರೆಗೆ ಖಾರ್ಕಿವ್ ವಲಯದ 30ಕ್ಕೂ ಅಧಿಕ ವಸಾಹತುಗಳು ಮತ್ತೆ ನಮ್ಮ ವಶಕ್ಕೆ ಬಂದಿವೆ. ಪೂರ್ವದ ಡೊನ್ಬಾಸ್ ಮತ್ತು ದಕ್ಷಿಣದಲ್ಲಿ ಹೋರಾಟ ಮುಂದುವರಿದಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ. ಪೂರ್ವ ಪ್ರಾಂತದಲ್ಲಿರುವ ಅತ್ಯಂತ ಆಯಕಟ್ಟಿನ ಪ್ರದೇಶ ಇಝಿಯಂ ನಗರದ ಮೇಲಿನ ಹಿಡಿತವನ್ನು ರಶ್ಯ ಸೇನೆ ಕಳೆದುಕೊಂಡಿದ್ದು ನೂರಾರು ರಶ್ಯನ್ನರು ಮೃತಪಟ್ಟಿದ್ದು ಇತರ ಹಲವರನ್ನು ಬಂಧಿಸಲಾಗಿದೆ ಎಂದು ಝೆಲೆನ್ಸ್ಕಿಯ ಸಲಹೆಗಾರ ಒಲೆಕ್ಸಿ ಅರೆಸ್ಟೊವಿಚ್ ಹೇಳಿದ್ದಾರೆ.

ಫೆಬ್ರವರಿ 24ರಂದು ಆಕ್ರಮಣ ಆರಂಭಿಸಿದ್ದ ರಶ್ಯ ಪ್ರಾರಂಭದಲ್ಲಿ ವೇಗವಾಗಿ ಮುಂದುವರಿದು ಉಕ್ರೇನ್ನ ಐದನೇ ಒಂದರಷ್ಟು ಪ್ರದೇಶವನ್ನು ವಶಕ್ಕೆ ಪಡೆಯಲು ಶಕ್ತವಾಗಿತ್ತು. ಆದರೆ ಕ್ರಮೇಣ ಪ್ರತಿಹೋರಾಟ ತೀವ್ರಗೊಳಿಸಿರುವ ಉಕ್ರೇನ್, ಒಂದೊಂದೇ ಪ್ರದೇಶವನ್ನು ಮರಳಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗುತ್ತಿದೆ. ಪೂರ್ವ ಪ್ರಾಂತವನ್ನು ರಕ್ಷಿಸಿಕೊಳ್ಳಲು ಹೆಚ್ಚುವರಿ ಪಡೆಯನ್ನು ರವಾನಿಸಿರುವುದಾಗಿ ರಶ್ಯ ಸೇನೆ ಹೇಳಿದೆ. ಈ ಮಧ್ಯೆ, ಉಕ್ರೇನ್ ಪಡೆಗಳ ಮುನ್ನಡೆಯಿಂದಾಗಿ ಪೂರ್ವ ಪ್ರಾಂತದೊಂದಿಗೆ ರಶ್ಯ ಸೇನೆಯ ಸಂಪರ್ಕ ಕಡಿತಗೊಂಡಿದ್ದು ಈ ವಲಯದಲ್ಲಿ ಸಾವಿರಾರು ರಶ್ಯನ್ ಯೋಧರು ಅತಂತ್ರ ಸ್ಥಿತಿಗೆ ಸಿಲುಕಿದ್ದಾರೆ ಎಂದು ರಕ್ಷಣಾ ವಿಶ್ಲೇಷಕರು ಹೇಳಿದ್ದಾರೆ.

ಖೆರ್ಸಾನ್ ಬಳಿಕ ಈಗ ಖಾರ್ಕಿವ್ನಲ್ಲಿಯೂ ಗಮನಾರ್ಹ ಯಶಸ್ಸು ಸಾಧ್ಯವಾಗಿದ್ದು ಇದು ಅತ್ಯಂತ ಸ್ಫೂರ್ತಿದಾಯಕವಾಗಿದೆ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಪ್ರತಿಕ್ರಿಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X