Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಂಸಿಎಫ್ ಉದ್ಯೋಗಿ ನಿಗೂಢ ಕಾಣೆ;...

ಎಂಸಿಎಫ್ ಉದ್ಯೋಗಿ ನಿಗೂಢ ಕಾಣೆ; ಕುಟುಂಬಸ್ಥರಿಂದ ತನಿಖೆಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ10 Sept 2022 9:47 PM IST
share
ಎಂಸಿಎಫ್ ಉದ್ಯೋಗಿ ನಿಗೂಢ ಕಾಣೆ; ಕುಟುಂಬಸ್ಥರಿಂದ ತನಿಖೆಗೆ ಮನವಿ

ಮಂಗಳೂರು, ಸೆ.10: ಮೂಲತಃ ಯಾದಗಿರಿ ಜಿಲ್ಲೆಯವರಾದ ಪಣಂಬೂರಿನ ಎಂಸಿಎಫ್‌ನಲ್ಲಿ ಉದ್ಯೋಗಿಯಾಗಿದ್ದ ಆದಿತ್ಯ ವಿ. ಅಲಗೂರು (27) ನಾಪತ್ತೆಯಾಗಿ 50 ದಿನಗಳು ಕಳೆದಿದೆ. ಆದರೆ ಈವರೆಗೂ ಆತನ ಬಗ್ಗೆ ಯಾವುದೇ ಮಾಹಿತಿ ಇಲ್ಲ.  ಈ ಬಗ್ಗೆ ಪೊಲೀಸರು ತನಿಖೆ ನಡೆಸಬೇಕು ಎಂದು  ಆತನ ತಂದೆ ವಿ.ಎಸ್.ಅಲಗೂರು ಮನವಿ ಮಾಡಿದ್ದಾರೆ.

ಎಂಸಿಎಫ್ ಫ್ಯಾಕ್ಟರಿಯ ಪ್ರೊಡಕ್ಷನ್ ಡಿಪಾರ್ಟ್‌ಮೆಂಟ್‌ನಲ್ಲಿ ಉದ್ಯೋಗಿಯಾಗಿದ್ದ ಆದಿತ್ಯ ನಗರದ ಕುಂಜತ್ತಬೈಲ್‌ನ ಟೌನ್‌ಶಿಪ್ ಕ್ವಾಟ್ರರ್ಸ್‌ನಲ್ಲಿ ವಾಸವಾಗಿದ್ದ. ಆತನ ತಂದೆ, ತಾಯಿ ಮತ್ತು ಸಹೋದರ ಕೂಡ ಜೊತೆಗಿದ್ದರು. ಜು.16ರಂದು ತಂದೆ ಮತ್ತು ತಾಯಿ ಕೆಲಸದ ನಿಮಿತ್ತ ಊರಿಗೆ ಹೋಗಿದ್ದ ವೇಳೆ ಕ್ವಾಟ್ರರ್ಸ್‌ನಲ್ಲಿ ಆದಿತ್ಯ ಮತ್ತಾತನ ಸಹೋದರ ಅಭಿಷೇಕ್ ಮಾತ್ರ ಇದ್ದರು ಎನ್ನಲಾಗಿದೆ.

‘ಅಂದು ಸಂಜೆ ಆದಿತ್ಯ ಸ್ಕೂಟರ್‌ನಲ್ಲಿ ಮನೆಯಿಂದ ಹೊರಗೆ ಹೋಗಿದ್ದ. 7:20ರ ವೇಳೆಗೆ ಅಭಿಷೇಕ್‌ನಿಗೆ ಕರೆ ಮಾಡಿದ ಆದಿತ್ಯ ‘ಮನೆಗೆ ಬರುವಾಗ ತಡವಾಗುತ್ತದೆ’ ಎಂದಿದ್ದ. 7:45ಕ್ಕೆ ಅಭಿಷೇಕ್ ಕರೆ ಮಾಡಿದಾಗ ಆದಿತ್ಯನ ಮೊಬೈಲ್ ಸ್ವಿಚ್‌ಆಫ್ ಆಗಿತ್ತು. ಮರುದಿನ ಆದಿತ್ಯನ ಬಗ್ಗೆ ಸ್ನೇಹಿತರಲ್ಲಿ ವಿಚಾರಿಸಿದರೂ ಮಾಹಿತಿ ಸಿಗಲಿಲ್ಲ. ಕಾವೂರು, ಮರವೂರು ಪರಿಸರದಲ್ಲಿ ಹುಡುಕಾಡಿದಾಗ ಜು.21ರಂದು ಮರವೂರು ಡ್ಯಾಂ ಬಳಿ ಆದಿತ್ಯನ ಸ್ಕೂಟರ್ ಪತ್ತೆಯಾಗಿತ್ತು. ಈ ಬಗ್ಗೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ಆದಿತ್ಯನ ತಂದೆ ವಿ.ಎಸ್.ಅಲಗೂರು ತಿಳಿಸಿದ್ದಾರೆ.

ಜು.16ರಂದು ಸಂಜೆ ಆದಿತ್ಯ ಸ್ಕೂಟರ್‌ನಲ್ಲಿ ಮರಕಡ ಕಡೆಯಿಂದ ಕಾವೂರಿಗೆ ಹೋಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಳಿಕ ಎಲ್ಲಿಗೆ ಹೋಗಿದ್ದಾನೆಂಬುದು ತಿಳಿದಿಲ್ಲ. ಈಜುಪಟುವಾಗಿದ್ದ ಆದಿತ್ಯ ನೀರಿನಲ್ಲಿ ಮುಳುಗಲು ಸಾಧ್ಯವಿಲ್ಲ. ಆತ್ಮಹತ್ಯೆ ಮಾಡಿಕೊಳ್ಳುವ ಮನಸ್ಥಿತಿಯವನೂ ಅಲ್ಲ. ಸಹಕಾರಿ ಬ್ಯಾಂಕ್‌ನಲ್ಲಿ 3.50 ಲಕ್ಷ ರೂ. ಸಾಲ ಮಾಡಿದ್ದರೂ ಆತನ ಸಂಬಳದಲ್ಲಿ ಅದು ಕಡಿತವಾಗುತ್ತಿತ್ತು. ಆದಿತ್ಯನ ಮೊಬೈಲ್ ಸ್ಕೂಟರ್‌ನಲ್ಲೇ ಇತ್ತು. ಕೀ ಕೂಡ ಸ್ಕೂಟರ್ ಸೀಟಿನಡಿಯಲ್ಲಿತ್ತು. ಅದನ್ನು ಪೊಲೀಸರಿಗೆ ಒಪ್ಪಿಸಿದ್ದೇವೆ. ಆದಿತ್ಯ 5 ವರ್ಷದಿಂದ ಎಂಸಿಎಫ್ ಟೌನ್‌ಶಿಪ್ ಕ್ವಾಟ್ರರ್ಸ್‌ನಲ್ಲೇ ಇದ್ದ. 2 ವರ್ಷಗಳಿಂದ ಅವನಿಗೆ ಸ್ಥಳೀಯ ಕೆಲವರ ಪರಿಚಯವಾಗಿತ್ತು. ಆತನ ನಿಗೂಢ ಕಾಣೆಯ ಬಗ್ಗೆ 3-4 ಮಂದಿಯ ಮೇಲೆ ಸಂಶಯವಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ ಎಂದು ವಿ.ಎಸ್. ಅಲಗೂರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X