Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಆವರ್ತ’ ಹೊಸ ಫ್ಯಾಂಟಸಿಯ ನಂಬಿದ...

‘ಆವರ್ತ’ ಹೊಸ ಫ್ಯಾಂಟಸಿಯ ನಂಬಿದ ಕಾದಂಬರಿ: ಡಾ.ಎಚ್.ಎಸ್. ಸತ್ಯನಾರಾಯಣ

ವಾರ್ತಾಭಾರತಿವಾರ್ತಾಭಾರತಿ10 Sept 2022 10:51 PM IST
share
‘ಆವರ್ತ’ ಹೊಸ ಫ್ಯಾಂಟಸಿಯ ನಂಬಿದ ಕಾದಂಬರಿ: ಡಾ.ಎಚ್.ಎಸ್. ಸತ್ಯನಾರಾಯಣ

ಬೆಂಗಳೂರು, ಸೆ.10: ಐತಿಹಾಸಿಕ ಕಥಾ ಎಳೆಯನ್ನು ಇಟ್ಟುಕೊಂಡು ಬರೆಯುವವರಿಗೆ ಬೇಕಾದಷ್ಟು ಇತಿಹಾಸದ ದಾಖಲೆಗಳಿರುತ್ತವೆ. ಆದರೆ ಅದೇನೂ ಇಲ್ಲದೆ ಒಂದು ಹೊಸ ಫ್ಯಾಂಟಸಿಯನ್ನು ನಂಬಿಕೊಂಡು ಇಷ್ಟು ಸುದೀರ್ಘವಾದ ಕಾದಂಬರಿಯನ್ನು ಆಶಾ ರಘು ಬರೆದಿದ್ದಾರೆ. ಐದು ವರ್ಷಗಳ ಕಾಲ ಹೀಗೆ ಧ್ಯಾನಸ್ಥ ಸ್ಥಿತಿಯಲ್ಲಿ ಕುಳಿತು ಬರೆದಿರುವುದು ಸುಲಭದ ಮಾತಲ್ಲ ಡಾ. ಎಚ್.ಎಸ್. ಸತ್ಯನಾರಾಯಣ ಎಂದು ಅಭಿಪ್ರಾಯಪಟ್ಟರು. 

ಶನಿವಾರ ನಗರದ ಗಾಂಧಿ ಭವನದಲ್ಲಿ ಸಾಹಿತ್ಯಲೋಕ ಪಬ್ಲಿಕೇಶನ್ಸ್ ವತಿಯಿಂದ ಲೇಖಕಿ ಆಶಾ ರಘು ಅವರ ʻಆವರ್ತʼ ಮತ್ತು ʻಪೂತನಿ ಮತ್ತಿತರ ನಾಟಕಗಳುʼ ಹಾಗೂ ದೀಪು ಶೆಟ್ಟಿ ದೊಡ್ಡಮನೆ ಅವರ ʻಆವರ್ತ-ಮಂಥನʼ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಆಶಾ ಅವರ ಆವರ್ತ ಕಾದಂಬರಿಯಲ್ಲಿ ಅರಿಷಡ್ವರ್ಗಗಳನ್ನು ಬಳಸಿಕೊಳ್ಳಲಾಗಿದೆ. ಈ ಕೃತಿಯಲ್ಲಿ ಬರುವ ಪಾತ್ರಗಳು ಬಹಳ ವಿಭಿನ್ನವಾಗಿದ್ದು, ಪುರಾಣ ಕಾಲದ ಪಾತ್ರಗಳೋ ಎನ್ನುವ ರೀತಿಯಲ್ಲಿ ಪಾತ್ರವನ್ನು ವರ್ಣಿಸಲಾಗಿದೆ. ಕನ್ನಡ ಸಾಹಿತ್ಯಕ್ಕೆ ಇದು ಹೊಸ ಪರ್ವವಾಗಿದೆ. ಆಶಾ ಅವರು ಕಾದಂಬರಿಗೆ ಮಾತ್ರ ಸೀಮಿತವಾಗಿರದೆ, ಅವರು ನಾಟಕ ಪ್ರಕಾರಕ್ಕೂ ವಿಸ್ತರಿಸಿಕೊಂಡಿದ್ದಾರೆ’ ಎಂದರು. 

ರಂಗಕರ್ಮಿ ಬಿ. ಮಲ್ಲಿಕಾರ್ಜುನಸ್ವಾಮಿ ಮಹಾಮನೆ ಮಾತನಾಡಿ, ‘ಪೂತನಿ ಎಂಬುದು ಒಂಭತ್ತು ನಾಟಕಗಳನ್ನು ಒಳಗೊಂಡ ಕೃತಿಯಾಗಿದೆ. ಇದರಲ್ಲಿ ಬರುವಂತಹ ಬಟಚಾರಿ ನಾಟಕವು ಬಹಳ ವಿಭಿನ್ನ ಕಥಾಹಂದರವನ್ನು ಹೊಂದಿದೆ. ಒಬ್ಬ ಹೆಣ್ಣು ಮಗಳು ತನ್ನ ಮನೆ, ಬದುಕು, ಗಂಡ ಎಲ್ಲವನ್ನು ಕಳೆದುಕೊಂಡಾಗ ಆಕೆ ಹೇಗೆ ಹೊಸ ಬೆಳಕನ್ನು ಕಾಣುತ್ತಾಳೆ ಎಂಬುದನ್ನು ಈ ನಾಟಕದಲ್ಲಿ ಕಾಣಬಹುದು. ಸ್ವಾಭಿಮಾನಿ ಬದುಕನ್ನು ಕಟ್ಟಿಕೊಳ್ಳುವ ಬಗೆಯನ್ನು ಈ ಕೃತಿಯಲ್ಲಿ ಬಹಳ ವಿಭಿನ್ನವಾಗಿ ವಿವರಿಸಲಾಗಿದೆ. ಹಾಗೆಯೇ ಇಂದಿನ ಮಾಧ್ಯಮ, ನ್ಯಾಯಾಲಯಗಳ ವಿಚಾರಗಳನ್ನು ನಾಟಕದಲ್ಲಿ ಪ್ರಸ್ತಾಪಿಸಲಾಗಿದೆ. ಇದನ್ನು ರಂಗಭೂಮಿಯ ಮೂಲಕ ತರುವ ಪ್ರಯತ್ನವನ್ನು ಮಾಡುತಿದ್ದೇನೆ’ ಎಂದರು.

ಲೇಖಕಿ ಆಶಾ ರಘು ಮಾತಾನಾಡಿ, ‘ಆವರ್ತ ಎಂಬುದು ಯೋಗಭೋಗ ತತ್ವವನ್ನು ಇಟ್ಟುಕೊಂಡು ರಚಿಸಿದ ಕಾದಂಬರಿಯಾಗಿದೆ. ಈ ಕಾದಂಬರಿಯನ್ನು ಬರೆದ ಮೇಲೆ ಸುಮಾರು ಆರು ವರ್ಷಗಳ ಕಾಲ ನನ್ನಿಂದ ಏನೂ ಬರೆಯಲು ಸಾಧ್ಯವಾಗಲಿಲ್ಲ. ಆವರ್ತ ನನ್ನಲ್ಲಿನ ಸಾರವನ್ನೆಲ್ಲ ಹೀರಿಕೊಂಡುಬಿಟ್ಟಿತೋ ಏನೋ ಎಂದು ತಮ್ಮ ಅನುಭವವನ್ನು ಹಂಚಿಕೊಂಡರು. 

ಆವರ್ತ-ಮಂಥನ ಕೃತಿಯ ಸಂಪಾದಕ ದೀಪು ಶೆಟ್ಟಿ ದೊಡ್ಡಮನೆ ಮಾತನಾಡಿ, ‘ಆವರ್ತ ಕಾದಂಬರಿ ವಿಭಿನ್ನತೆಯನ್ನು ಹೊಂದಿದೆ. ಈ ಕಾದಂಬರಿಯಲ್ಲಿ ನಗರ ಹಾಗೂ ಹಳ್ಳಿಯ ಜನರ ಜೀವನವನ್ನು ಬಿಂಬಿಸಲಾಗಿದೆ’ ಎಂದರು.

ಕಾರ್ಯಕ್ರಮದಲ್ಲಿ ಸಾಹಿತ್ಯ ಲೋಕ ಪಬ್ಲಿಕೇಶನ್ಸ್ ರಘು ವೀರ್ ಸಮರ್ಥ್, ಕವಿ ಬಿ.ಆರ್. ಲಕ್ಷ್ಮಣರಾವ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X