Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉ.ಕ. ಜಿಲ್ಲೆಯ ಮೀನುಗಾರ ಮೊಗೇರರ...

ಉ.ಕ. ಜಿಲ್ಲೆಯ ಮೀನುಗಾರ ಮೊಗೇರರ ಒತ್ತಡಕ್ಕೆ ಮಣಿದು ಅಧ್ಯಯನ ಸಮಿತಿ ರಚನೆ: ಆರೋಪ

ದ.ಕ. ಜಿಲ್ಲಾ ಮೊಗೇರ ಸಂಘದಿಂದ ಖಂಡನೆ

ವಾರ್ತಾಭಾರತಿವಾರ್ತಾಭಾರತಿ12 Sept 2022 1:03 PM IST
share
ಉ.ಕ. ಜಿಲ್ಲೆಯ ಮೀನುಗಾರ ಮೊಗೇರರ ಒತ್ತಡಕ್ಕೆ ಮಣಿದು ಅಧ್ಯಯನ ಸಮಿತಿ ರಚನೆ: ಆರೋಪ

ಮಂಗಳೂರು, ಸೆ.12: ಉತ್ತರ ಕನ್ನಡ ಜಿಲ್ಲೆಯ ಪ್ರವರ್ಗ 1ರಲ್ಲಿರುವ ಮೀನುಗಾರ ಮೊಗೇರರ ಒತ್ತಡಕ್ಕೆ ಒಳಗಾಗಿ ರಾಜ್ಯ ಸರಕಾರ ಅಧ್ಯಯನ ಸಮಿತಿ ರಚಿಸುವ ಮೂಲಕ 2010ರ ತನ್ನದೇ ಆದೇಶವನ್ನು ನಿರ್ಲಕ್ಷಿಸಿದ್ದು, ಇದು ಖಂಡನೀಯ ಎಂದು ದ.ಕ. ಜಿಲ್ಲಾ ಮೊಗೇರ ಸಂಘ ಹೇಳಿದೆ.

ಸುದ್ದಿಗೋಷ್ಠಿಯಲ್ಲಿಂದು ಈ ಬಗ್ಗೆ ರಾಜ್ಯ ಮೊಗೇರ ಸಂಘದ ನಿಕಟಪೂರ್ವ ಅಧ್ಯಕ್ಷ ಸುಂದರ ಮೇರ ಮಾತನಾಡಿ, ಉತ್ತರ ಕನ್ನಡ ಜಿಲ್ಲೆಯ ಮೀನುಗಾರ ವೃತ್ತಿಯವರು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಪರಿಶಿಷ್ಟ ಜಾತಿಯ ಮೊಗೇರರ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರ ಪಡೆದು ನೈಜ ಪರಿಶಿಷ್ಟರ ಸಾಂವಿಧಾನಕ ಹಕ್ಕನ್ನು 1977ರಿಂದ 2010ರವರೆಗೂ ದುರುಪಯೋಗಪಡಿಸಿಕೊಂಡಿದ್ದರು ಎಂದು ಆರೋಪಿಸಿದರು.

ಪ್ರಬಲ ಹೋರಾಟದ ಪರಿಣಾಮವಾಗಿ 2005ರಲ್ಲಿ ಅಂದಿನ ಸರಕಾರ ಸಮಿತಿ ರಚಿಸಿ ಮೈಸೂರು ವಿವಿಯ ಮಾನವಶಾಸ್ತ್ರ ವಿಭಾಗದ ಪ್ರೊಪೆಸರ್ ಎಚ್.ಕೆ.ಭಟ್ ನೇತೃತ್ವದ ತಜ್ಞರ ಸಮಿತಿಯಿಂದ ಅಧ್ಯಯನ ನಡೆಸಲಾಗಿತ್ತು. ನೈಜ ಮೊಗೇರರು ಅಸ್ಪೃಶ್ಯರಾಗಿದ್ದು, ಮೊಲ ಬೇಟೆ ಅವರ ಮೂಲ ವೃತ್ತಿ. ಉ.ಕ. ಜಿಲ್ಲೆಯ ಮೀನುಗಾರ ಮೊಗೇರರ ಕುಲಕಸುಬು, ಕುಲದೇವರು, ಸಾಂಸ್ಕೃತಿಕ, ಶೈಕ್ಷಣಿಕ, ಧಾರ್ಮಿಕ, ಸಾಮಾಜಿಕ ಸ್ಥಿತಿಗತಿಗಳ ಬಗ್ಗೆ ಕುಲಶಾಸ್ತ್ರೀಯ ಅಧ್ಯಯನ ನಡೆಸಿ 2008ರಲ್ಲಿ ಪ್ರೊ.ಎಚ್.ಕೆ.ಭಟ್ ಸಮಿತಿ ರಾಜ್ಯ ಸರಕಾರಕ್ಕೆ ವರದಿ ಸಲ್ಲಿಸಿತ್ತು. ಈ ಅಧ್ಯಯನ ಪ್ರಕಾರ ಉ.ಕ. ಜಿಲ್ಲೆಯ ಮೊಗೇರ ಜಾತಿಯ ಜನರು ಮೀನುಗಾರ ಜಾತಿಗೆ ಸೇರಿದವರು. ಅವರು ಹಿಂದುಳಿದ ವರ್ಗಗಳ ಪ್ರವರ್ಗ 1ಕ್ಕೆ ಸೇರಲ್ಪಟ್ಟವರು. ಮೊಗೇರ ಜಾತಿಯ ಪರಿಶಿಷ್ಟ ಜಾತಿಯವರು ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ. 1977ನೇ ಸಾಲಿನಲ್ಲಿ ಭಾರತ ಸರಕಾರ ಮೊಗೇರ ಜಾತಿಗೆ ಸಂಬಂಧಿಸಿದ ಪ್ರಾದೇಶಿಕ ನಿರ್ಬಂಧದ ಪರಿಣಾಮ ಹಿಂದೆ ಪ್ರವರ್ಗ 1ರಡಿ ಜಾತಿ ಪ್ರಮಾಣ ಪಡೆಯುತ್ತಿದ್ದ ಉ.ಕ. ಜಿಲ್ಲೆಯ ಮೊಗೇರರು ಪರಿಶ್ಟಿ ಜಾತಿ ಪ್ರಮಾಣ ಪತ್ರ ಪಡೆಯುವುದು ಸರಿಯಲ್ಲ ಎಂದು ವರದಿಯಲ್ಲಿ ತಿಳಿಸಿದ್ದು, ಇದನ್ನು 2010ರ ಮೇ 25ರಂದು ರಾಜ್ಯ ಸರಕಾರ ಅಂಗೀಕರಿಸಿ ಆದೇಶಿಸಿತ್ತು. ಆ ಬಳಿಕ ಸುಳ್ಳು ಜಾತಿ ಪ್ರಮಾಣ ಪತ್ರ ರದ್ದುಪಡಿಸಿ ಸಂಬಂಧಪಟ್ಟವರ ಮೇಲೆ ಕಾನೂನು ಕ್ರಮ ಜರುಗಿಸಲಾಗಿತ್ತು. ಇದೀಗ ರಾಜ್ಯ ಸರಾಕರಕ್ಕೆ ಒತ್ತಡ ತಂದು ಸರಕಾರದಿಂದ ಸಮಿತಿ ರಚಿಸಲು ಯಶಸ್ವಿಯಾಗಿದ್ದಾರೆ ಎಂದು ಸುಂದರ ಮೇರ ಆಕ್ಷೇಪಿಸಿದರು.

ಏಳೆಂಟು ತಿಂಗಳ ಹಿಂದೆ ಈ ಬಗ್ಗೆ ದ.ಕ. ಜಿಲ್ಲಾ ಮೊಗೇರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಸಚಿವ ಅಂಗಾರ ನೇತೃತ್ವದಲ್ಲಿ ಮುಖ್ಯಮಂತ್ರಿ ಹಾಗೂ ರಾಜ್ಯದ ಸಮಾಜ ಕಲ್ಯಾಣ ಸಚಿವರಿಗೆ ಮನವಿ ಸಲ್ಲಿಸಿದಾಗ ನ್ಯಾಯ ದೊರಕಿಸುವ ಭರವಸೆ ನೀಡಲಾಗಿತ್ತು. ಪ್ರಧಾನ ಮಂತ್ರಿಗೂ ಮನವಿ ಸಲ್ಲಿಸಲಾಗಿತ್ತು. ಹಾಗಿದ್ದರೂ, 2010ರಲ್ಲಿ ಸಮಿತಿಯು ನೀಡಿರುವ ವರದಿಯು ಉಕ. ಜಿಲ್ಲಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಖೆಯ ಪ್ರಧಾನ ಕಾರ್ಯದರ್ಶಿಗಳ ಕಡತದಲ್ಲಿ ಲಭ್ಯವಿದ್ದು, ಮತ್ತೆ ಅಧ್ಯಯನ ನಡೆಸಿ ಕಾಲಹರಣ, ದುಂದುವೆಚ್ಚ ಮಾಡುವ ಉದ್ದೇಶದ ಬಗ್ಗೆ ಅನುಮಾನವಿದೆ. ಹಾಗಾಗಿ ಸರಕಾರ ರಚಿಸಿರುವ ನೂತನ ಸಮಿತಿಯನ್ನು ರದ್ದುಪಡಿಸಬೇಕು. ಹಾಗೂ 2010ರಲ್ಲಿ ಅಂಗೀಕರಿಸಿದ ವರದಿಯನ್ನು ಯಥಾಸ್ಥಿತಿ ಮುಂದುವರಿಸಬೇಕು ಎಂದು ಅವರು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಗಧ ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್ ಕನ್ಯಾಡಿ, ರಾಜ್ಯ ದಲಿತ ಸಂಘಟನೆಯ ಹಿರಿಯ ಮುಖಂಡರಾದ ಎಂ. ದೇವದಾಸ್, ದಲಿತ ಮುಖಂಡರಾದ ಅಶೋಕ್ ಕೊಂಚಾಡಿ, ಮಂಗಳೂರು ತಾಲೂಕು ಮೊಗೇರ ಸಂಘದ ಅಧ್ಯಕ್ಷ ಸೀತಾರಾಮ ಕೊಂಚಾಡಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X