Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯಾವುದೇ ಕಾರಣಕ್ಕೂ ‘ಪಂಪ ಮಹಾಕವಿ ರಸ್ತೆ’...

ಯಾವುದೇ ಕಾರಣಕ್ಕೂ ‘ಪಂಪ ಮಹಾಕವಿ ರಸ್ತೆ’ ಹೆಸರು ಬದಲಾವಣೆ ಇಲ್ಲ: ಮಹೇಶ್ ಜೋಶಿ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ12 Sept 2022 6:08 PM IST
share
ಯಾವುದೇ ಕಾರಣಕ್ಕೂ ‘ಪಂಪ ಮಹಾಕವಿ ರಸ್ತೆ’ ಹೆಸರು ಬದಲಾವಣೆ ಇಲ್ಲ: ಮಹೇಶ್ ಜೋಶಿ ಸ್ಪಷ್ಟನೆ

ಬೆಂಗಳೂರು, ಸೆ. 12: ‘ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಎದುರಿನ ‘ಪಂಪ ಮಹಾಕವಿ ಮಾರ್ಗ'ವನ್ನು  ಕನ್ನಡಮಯ ಮಾಡಬೇಕು ಹಾಗೂ ಆಕರ್ಷಣೀಯವನ್ನಾಗಿಸಲು, ಈ ರಸ್ತೆಯನ್ನು ಅಭಿವೃದ್ಧಿ ಪಡಿಸಬೇಕೆಂದು ಬಿಬಿಎಂಪಿಗೆ ಮನವಿ ಮಾಡಲಾಗಿದೆಯೇ ಹೊರತು, ‘ಪಂಪ ಮಹಾಕವಿ' ರಸ್ತೆ ಹೆಸರು ಬದಲಾವಣೆ ಪ್ರಸ್ತಾಪ ಇಲ್ಲ' ಎಂದು ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಮಾಧ್ಯಮಗಳಿಗೆ ಸ್ಪಷ್ಟಣೆ ನೀಡಿದ ಅವರು, ‘ಪಂಪ ಮಹಾಕವಿ ರಸ್ತೆಯ ಹೆಸರು ಬದಲಾವಣೆ ಮಾಡಲು ಪರಿಷತ್ತು ಮುಂದಾಗಿದೆ ಎನ್ನುವ ವರದಿಗಳು ಬಿತ್ತರವಾಗುತ್ತಿದ್ದು, ದುರುದ್ದೇಶದಿಂದ ಹಾಗೂ ಉದ್ಧೇಶಪೂರ್ವಕವಾಗಿ ತಪ್ಪು ಗ್ರಹಿಕೆಯಿಂದ ಕೆಲವರು ಹೀಗೆ ಮಾಡುತ್ತಿದ್ದಾರೆ. ಆದರೆ, ಪಂಪ ಮಹಾಕವಿಯ ಬಗ್ಗೆ ಕಸಾಪ ಅಪಾರವಾದ ಗೌರವ ಹೊಂದಿದೆ' ಎಂದು ವಿವರಣೆ ನೀಡಿದ್ದಾರೆ.

‘ಕಸಾಪ ಕೇಂದ್ರ ಕಚೇರಿ ಇದೇ ರಸ್ತೆಯಲ್ಲಿ ಇರುವುದರಿಂದ, ಪರಿಷತ್ತು ಹೆಮ್ಮೆಪಡುತ್ತೇವೆ. ಕೆಲವು ದಿನಗಳ ಹಿಂದೆ, ಮಿಂಟೋ ಆಸ್ಪತ್ರೆ ವೃತ್ತದಿಂದ ಮಕ್ಕಳಕೂಟ ವೃತ್ತದವರೆಗಿನ ರಸ್ತೆಯನ್ನು ‘ಕನ್ನಡಮಯ'ಗೊಳಿಸಬೇಕು, ಸಾಹಿತ್ಯ ಪರಂಪರೆ ಬಿಂಬಿಸುವ ಭೂದೃಶ್ಯ(ಲ್ಯಾಂಡ್‍ಸ್ಕೇಪ್) ಸಿದ್ಧಪಡಿಸಬೇಕು, ಅಂತರ್‍ರಾಷ್ಟ್ರೀಯ ಮಟ್ಟದಲ್ಲಿ ಈ ಮಾರ್ಗವನ್ನು ಅಭಿವೃದ್ಧಿಪಡಿಸಿ ‘ಕನ್ನಡಮಯ ವಾತಾವರಣ' ನಿರ್ಮಾಣ ಮಾಡಬೇಕೆಂಬ ವಿನಂತಿಯನ್ನು, ಜೂನ್ 3ರಂದು ಕಸಾಪ, ಬಿಬಿಎಂಪಿಗೆ ಪತ್ರವನ್ನು ಬರೆದಿತ್ತು' ಎಂದು ಅವರು ತಿಳಿಸಿದ್ದಾರೆ.

‘ಪರಿಷತ್ತಿನ ಅಭಿಮಾನಿಗಳು ಹಾಗೂ ಕನ್ನಡ ಪ್ರೇಮಿಗಳು, ಪಂಪ ಮಹಾಕವಿ ಹೆಸರಿನೊಂದಿಗೆ ಕಸಾಪ ಹೆಸರನ್ನು  ಸೇರಿಸಿ ‘ಪಂಪಮಹಾಕವಿ-ಕನ್ನಡಸಾಹಿತ್ಯಪರಿಷತ್ತು ರಸ್ತೆ' ಎಂದು ಅಥವಾ ಆದಿಕವಿ ಪಂಪನಿಗೆ ನಾಡಿನ ಮೊದಲ ಗುರು ‘ನಾಡೋಜ' ಎಂಬ ಹೆಗ್ಗಳಿಕೆ ಇರುವುದರಿಂದ, ‘ನಾಡೋಜ ಪಂಪಮಹಾಕವಿ-ಕನ್ನಡಸಾಹಿತ್ಯಪರಿಷತ್ತು ರಸ್ತೆ' ಎಂದು ನಾಮಕರಣಕ್ಕೆ ಸಲಹೆ ನೀಡಿದ್ದಾರೆ. ಆದರೆ ಕಸಾಪ ಇದರ ಬಗ್ಗೆ ಕೇವಲ ಸಲಹೆ-ಸೂಚನೆಗಳನ್ನು ಆಲಿಸಲಾಗಿದೆಯೇ ಹೊರತು, ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ' ಎಂದು ಮಹೇಶ ಜೋಶಿ ಹೇಳಿದ್ದಾರೆ. 
 
‘ಕೇಂದ್ರದ ವ್ಯಾಪ್ತಿಯಲ್ಲಿ ಬರುವ ದೂರದರ್ಶನವನ್ನು ಕನ್ನಡಮಯ ಮಾಡುವುದರೊಂದಿಗೆ ‘ಸಮೀಪ ದರ್ಶನ'ವನ್ನಾಗಿಸಿದ್ದು, ಜನರು ನೆನೆಸಿಕೊಳ್ಳುತ್ತಿದ್ದಾರೆ. ಅದೇ ರೀತಿಯಲ್ಲಿ ಕಸಾಪ ‘ಜನಸಾಮಾನ್ಯರ ಪರಿಷತ್ತು' ಮಾಡುವುದಕ್ಕಾಗಿ ನಾಡುನುಡಿ, ಸಂಸ್ಕøತಿ ವಿಚಾರದಲ್ಲಿ ಅಪಾರವಾದ ಕಾಳಜಿಯೊಂದಿಗೆ ಕೆಲಸ ಮಾಡುವಲ್ಲಿ ಹೊಸತನ ತರುತ್ತಿರುವ ಹಿನ್ನೆಲೆಯಲ್ಲಿ, ಕೆಲವು ಪೂರ್ವಗ್ರಹಪೀಡಿತರು, ಇಂತಹ ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ. ವಿಕೃತ ಮನಸ್ಸನ್ನು ಹೊಂದಿ, ವಿವಾದ ಸೃಷ್ಟಿಸುವ ಮೂಲಕವೇ, ಪ್ರಚಾರದಲ್ಲಿ ಇರಬೇಕೆಂದು, ದುರದ್ದೇಶ ಹೊಂದಿದವರು, ಯಾವಾಗಲೂ ಸಕ್ರಿಯವಾಗಿರುವುದು ದುರಂತ' ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

‘ಯಾವುದೇ ಪರಿಣಾಮಕಾರಿ ನಿರ್ಣಯ ತೆಗೆದುಕೊಳ್ಳುಲು ಪರಿಷತ್ತಿಗೆ ಒಂದು ಕಾನೂನು ಚೌಕಟ್ಟು ಇದೆ. ‘ಕಾರ್ಯಕಾರಿ ಸಮಿತಿ' ಎನ್ನುವ ಮಹತ್ವದ ವ್ಯವಸ್ಥೆ ಇರುತ್ತದೆ. ಅದರಲ್ಲಿಯೇ ಎಲ್ಲ ನಿರ್ಣಯಗಳು ಕೈಗೊಳ್ಳಲಾಗುತ್ತದೆಯೇ ಹೊರತು, ವೈಯಕ್ತಿಕವಾಗಿ ತೀರ್ಮಾನ ತೆಗೆದುಕೊಳ್ಳುವುದು ಸಾಧ್ಯವೇ ಇಲ್ಲ. ಯಾವುದೇ ಯೋಜನೆ ಅನುಷ್ಠಾನಗೊಳಿಸುವಾಗ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು, ಸೂಕ್ತ ಚರ್ಚೆಯ ನಂತರವೇ, ನಿರ್ಣಯ ಕೈಗೊಳ್ಳಲಾಗುವುದು. ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ದ ಕನ್ನಡಿಗರು ಕಿವಿಗೊಡಬಾರದು' ಎಂದು ಮಹೇಶ್ ಜೋಶಿ ಮನವಿ ಮಾಡಿದ್ದಾರೆ. 


''ರಸ್ತೆ ಹೆಸರು ಬದಲಾವಣೆ ಪ್ರಸ್ತಾಪವೇ ಇಲ್ಲ''

‘ಪಂಪ ಮಹಾಕವಿ ರಸ್ತೆ' ಹೆಸರನ್ನು ಬದಲಾವಣೆ ಮಾಡುವಂತಹ ಚಕಾರವನ್ನೂ ನಾನು ಎತ್ತಿಲ್ಲ. ಪಂಪನ ಬಗ್ಗೆ ತಿಳುವಳಿಕೆ, ಜ್ಞಾನವೂ ಇಲ್ಲದ ವ್ಯಕ್ತಿ ನಾನಲ್ಲ. ರಸ್ತೆ ಬದಲಾವಣೆ ಊಹಾಪೋಹ ಸತ್ಯಕ್ಕೆ ದೂರ. ವಿವಾದ ಎಬ್ಬಿಸಿರುವುದನ್ನು ಕಸಾಪ ಖಂಡಿಸುತ್ತದೆ. ನಾನು ಎಡವೂ ಅಲ್ಲವೂ, ಬಲವೂ ಅಲ್ಲ. ನಾನು ಸಂಪೂರ್ಣ ಕನ್ನಡ ಪಂಥಕ್ಕೆ ಸೇರಿದ ವ್ಯಕ್ತಿ. ಯಾವುದೇ ಪರ-ವಿರೋಧವಿಲ್ಲ. ನನ್ನ ಜಾತಿ, ಧರ್ಮ, ಚಿಂತನೆ ಎಲ್ಲವೂ ಕನ್ನಡ. ಹೀಗಾಗಿ ಪಂಪ ಮಹಾಕವಿ ರಸ್ತೆ ಹೆಸರು ಬದಲಾವಣೆ ಪ್ರಶ್ನೆಯೇ ಇಲ್ಲ'

-ಡಾ.ಮಹೇಶ್ ಜೋಶಿ ಕಸಾಪ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X