Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ; ಬೀಡಿ ಕಾರ್ಮಿಕರ ಬೇಡಿಕೆ...

ಉಡುಪಿ; ಬೀಡಿ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಪ್ರಧಾನಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ12 Sept 2022 7:29 PM IST
share
ಉಡುಪಿ; ಬೀಡಿ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಪ್ರಧಾನಿಗೆ ಮನವಿ

ಉಡುಪಿ, ಸೆ.12: ಜಿಲ್ಲೆಯ ಬೀಡಿ ಕಾರ್ಮಿಕರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ (ಸಿಐಟಿಯು) ಸೋಮವಾರ ಉಡುಪಿಯ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಅವರ ಮುಖಾಂತರ ಪ್ರಧಾನ ಮಂತ್ರಿ ಅವರಿಗೆ ಮನವಿ ಸಲ್ಲಿಸಿತು.

ಉಡುಪಿ ಜಿಲ್ಲೆಯಲ್ಲಿ ಸುಮಾರು ಒಂದು ಲಕ್ಷದಷ್ಟು ಬೀಡಿ ಕಾರ್ಮಿಕರು ದುಡಿಯುತಿದ್ದು, ಈಚಿನ ದಿನಗಳಲ್ಲಿ ಈ ಬಡ ಕಾರ್ಮಿಕರ ಸ್ಥಿತಿ ಚಿಂತಾಜನಕ ವಾಗಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.

ಕೆಲವು ವರ್ಷಗಳ ಹಿಂದಿನವರೆಗೆ ಈ ಕಾರ್ಮಿಕರು ಬೀಡಿ ಕೆಲಸದಿಂದ ತಮ್ಮ ಮಕ್ಕಳ ವಿದ್ಯಾಭ್ಯಾಸ, ಮದುವೆ, ವಸತಿಗಳ ನಿರ್ಮಾಣ ಮಾಡಿಕೊಂಡು ಗೌರವ ದಿಂದ ಜೀವನ ಸಾಗಿಸುತಿದ್ದರು. ಆದರೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಬಂಡವಾಳಗಾರರ ಆಮಿಷಕ್ಕೆ ತಲೆಬಾಗಿ ಸರಕಾರ ಬೀಡಿ ಉದ್ಯಮ ನಶಿಸುವಂತೆ ಕಾನೂನು ರೂಪಿಸಿ ಲಕ್ಷಾಂತರ ಬೀಡಿ ಕಾರ್ಮಿಕರನ್ನು ಬೀದಿ ಪಾಲು ಮಾಡಲಾಗಿದೆ. ಬೀಡಿ ಕಾರ್ಮಿಕರಿಗೆ ಬದಲಿ ಉದ್ಯೋಗ ನೀಡದೇ, ಬೀಡಿ ಉದ್ಯಮವನ್ನು ಮುಚ್ಚಲು ಕಾನೂನು ತಂದಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಆದ್ದರಿಂದ ಬೀಡಿ ಕಾರ್ಮಿಕರಿಗೆ ಬದಿ ಉದ್ಯೋಗದ ವ್ಯವಸ್ಥೆ ಮಾಡಬೇಕು ಎಂದು ಹಕ್ಕೊತ್ತಾಯ ಮಾಡುತಿದ್ದೇವೆ ಎಂದಿರುವ ಮನವಿ, ಕೇಂದ್ರ ಸರಕಾರ  ಬೀಡಿ ಕಾರ್ಮಿಕರ ಹಾಗೂ ಉದ್ಯಮದ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು. ಸರಕಾರದ ನೀತಿಗಳಿಂದ ನಿರುದ್ಯೋಗಿಗಳಾಗುತ್ತಿರುವ ಬೀಡಿ ಕಾರ್ಮಿಕರಿಗೆ ಸೂಕ್ತ ಪರಿಹಾರ ಅಥವಾ ಪರ್ಯಾಯ ಉದ್ಯೋಗ ನೀಡಬೇಕು. ಕಾನೂನು ಬಾಹಿರವಾಗಿ ನಡೆಯುತ್ತಿರುವ ಬೀಡಿ ಉತ್ಪಾದನೆಗೆ ತಕ್ಷಣ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಲಾಗಿದೆ.

ರಾಷ್ಟ್ರೀಯ ಸಮಾನ ಕನಿಷ್ಠ ಕೂಲಿಯಾಗಿ ಒಂದು ಸಾವಿರ ಬೀಡಿ ಸುತ್ತಲು ೩೭೫ರೂ. ನಿಗದಿ ಪಡಿಸಬೇಕು. ಬೀಡಿ ಉದ್ಯಮದ ಇತರ ಕಾರ್ಮಿಕರಿಗೆ ತಿಂಗಳಿಗೆ 21 ಸಾವಿರ ರೂ. ಕನಿಷ್ಠ ವೇತನ ನಿಗದಿ ಮಾಡಬೇಕು. ಗುತ್ತಿಗೆ, ಉಪ ಗುತ್ತಿಗೆ ಪದ್ಥತಿ ನಿಲ್ಲಿಸಿ, ನೇರವಾಗಿ ಮಾಲಕರ ಅಡಿಯಲ್ಲಿ ಕಾರ್ಮಿಕರನ್ನು ತರಬೇಕು. ಇದಕ್ಕೆ ಬೀಡಿ ಮಾಲಕರನ್ನು ಬಾಧ್ಯಸ್ಥರನ್ನಾಗಿಸಬೇಕು ಒಂದು ಒತ್ತಾಯಿಸಲಾಗಿದೆ.

ಬೀಡಿ ಸೆಸ್‌ನ್ನು ಪುನರ್ ಸ್ಥಾಪಿಸಬೇಕು. ಎಲಾ ಬೀಡಿ ಕಾರ್ಮಿಕರಿಗೆ ಗುರುತಿನ ಬೀಟಿ ಕಡ್ಡಾಯವಾಗಿ ನೀಡಬೇಕು. ಇದರ ಆಧಾರದಲ್ಲಿ ಎಲ್ಲಾ ಆರೋಗ್ಯ ಸೇವೆ ಗಳನ್ನು ಮುಂದುವರಿಸಬೇಕು. ಎಲ್ಲಾ ಬೀಡಿ ಕಾರ್ಮಿಕರನ್ನು ಕಡ್ಡಾಯವಾಗಿ ಇಎಸ್‌ಐ ಸದಸ್ಯರಾಗಿ ಪರಿಗಣಿಸಿ ಎಲ್ಲಾ ಸೌಲಭ್ಯ ಒದಗಿಸಬೇಕು. ಬೀಡಿ ವಂತಿಗೆ ಹಣವನ್ನು ಕೇಂದ್ರವೇ ಭರಿಸಬೇಕು. ರಾಜ್ಯ ಸರಕಾರಗಳು ಬೀಡಿ ಕಾರ್ಮಿಕರಿಗೆ ವಿಶೇಷವಾದ ಯೋಜನೆ, ಪ್ಯಾಕೇಜ್ ರೂಪಿಸಿ ಜಾರಿಗೊಳಿಸಬೇಕು ಎಂದು ಮನವಿಯಲ್ಲಿ ಪ್ರಧಾನಿ ಅವರನ್ನು ಒತ್ತಾಯಿಸಲಾಗಿದೆ. 

ನಿಯೋಗದಲ್ಲಿ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಕವಿರಾಜ್ ಎಸ್., ಬೀಡಿ ಫೆಡರೇಶನ್‌ನ ಅಧ್ಯಕ್ಷ  ಮಹಾಬಲ ವಡೇರಹೋಬಳಿ, ಕಾರ್ಯದರ್ಶಿ ಉಮೇಶ್ ಕುಂದರ್, ಬಲ್ಕೀಸ್ ಬಾನು ಹಾಗೂ ನಳಿನಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X