Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸೈಬರ್ ಸೆಕ್ಯುರಿಟಿ: ಡೆಲ್ ಜತೆ...

ಸೈಬರ್ ಸೆಕ್ಯುರಿಟಿ: ಡೆಲ್ ಜತೆ ಒಡಂಬಡಿಕೆಗೆ ಸರಕಾರದ ಅಂಕಿತ

ವಾರ್ತಾಭಾರತಿವಾರ್ತಾಭಾರತಿ12 Sept 2022 11:45 PM IST
share
ಸೈಬರ್ ಸೆಕ್ಯುರಿಟಿ: ಡೆಲ್ ಜತೆ ಒಡಂಬಡಿಕೆಗೆ ಸರಕಾರದ ಅಂಕಿತ

ಬೆಂಗಳೂರು, ಸೆ.12: ಶಾಲಾ ವಿದ್ಯಾರ್ಥಿಗಳು, ನವೋದ್ಯಮ ವಲಯ ಮತ್ತು ಸರಕಾರಿ ಕಚೇರಿಗಳಲ್ಲಿ ಸೈಬರ್ ಸೆಕ್ಯುರಿಟಿ ಕುರಿತು ಅರಿವು ಮೂಡಿಸುವ ಉದ್ದೇಶದ ಒಡಂಬಡಿಕೆಗೆ ಡೆಲ್ ಟೆಕ್ನಾಲಜೀಸ್ ಮತ್ತು ರಾಜ್ಯ ಸರಕಾರದ ‘ಸೈಬರ್ ಸೆಕ್ಯುರಿಟಿ ಉತ್ಕøಷ್ಟತಾ ಕೇಂದ್ರ' (ಸೆಂಟರ್ ಆಫ್ ಎಕ್ಸಲೆನ್ಸ್ ಫಾರ್ ಸೈಬರ್ ಸೆಕ್ಯುರಿಟಿ)ಗಳು ಐಟಿ-ಬಿಟಿ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಸಮ್ಮುಖದಲ್ಲಿ ಸೋಮವಾರ ವಿಕಾಸಸೌಧದಲ್ಲಿ ಒಡಂಬಡಿಕೆಗೆ ಸಹಿ ಹಾಕಿದವು.

ಈ ಸಂದರ್ಭದಲ್ಲಿ ಮಾತನಾಡಿದ ಅಶ್ವತ್ಥ ನಾರಾಯಣ, `ಈ ಒಡಂಬಡಿಕೆಯು ಅತ್ಯಂತ ಮಹತ್ವದ ಹೆಜ್ಜೆಯಾಗಿದೆ. ಶಾಲಾ ವಿದ್ಯಾರ್ಥಿಗಳು, ಸಣ್ಣ ಮತ್ತು ಮಧ್ಯಮ ಸ್ವರೂಪದ ಕೈಗಾರಿಕೆಗಳು, ನವೋದ್ಯಮಗಳು ಮತ್ತು ಸರಕಾರಿ ಕಚೇರಿಗಳಿಗೆ ಸೈಬರ್ ಸೆಕ್ಯುರಿಟಿಗೆ ಸಂಬಂಧಿಸಿದ ಕಲಿಕೆ ಸಾಧ್ಯವಾಗಲಿದೆ. ಡೆಲ್ ಟೆಕ್ನಾಲಜೀಸ್ ಸಂಸ್ಥೆಯು ಇಷ್ಟೂ ಕ್ಷೇತ್ರಗಳಿಗೆ ತನ್ನ ಇಂಟರ್-ಆಕ್ಟೀವ್ ಕೋರ್ಸುಗಳನ್ನು ಒದಗಿಸಲಿದೆ. ವಿದ್ಯಾರ್ಥಿಗಳ ಪ್ರಯೋಜನಕ್ಕೆ ರೂಪಿಸಿರುವ ಸೈಬರ್ ಸೆಕ್ಯುರಿಟಿಗೆ ಸಂಬಂಧಿಸಿದ ವಸ್ತು ವಿಷಯಗಳು ಇಂಗ್ಲಿಷಿನ ಜೊತೆಗೆ ಕನ್ನಡದಲ್ಲೂ ಇರಲಿವೆ ಎಂದರು.

ಸಂಸ್ಥೆಯು ತನ್ನ ‘ಅಸೆಂಡ್' ವ್ಯವಸ್ಥೆಯ ಮೂಲಕ ರಾಜ್ಯದ ನವೋದ್ಯಮಗಳ ಬೆಳವಣಿಗೆಯನ್ನು ಉತ್ತೇಜಿಸಲಿದ್ದು, ಅಲ್ಲಿ ಎದುರಾಗುವ ಸಮಸ್ಯೆಗಳಿಗೆ ಸಮರ್ಥ ಪರಿಹಾರಗಳನ್ನು ನೀಡಲಿದೆ. ಇದರಿಂದಾಗಿ ನವೋದ್ಯಮಗಳ ಮಾರುಕಟ್ಟೆ ಹಿಗ್ಗಲಿದ್ದು, ಇವುಗಳ ಉತ್ಪನ್ನಗಳು ಮತ್ತು ಸೇವೆಗಳ ಮೌಲ್ಯವರ್ಧನೆಯೂ ಆಗಲಿದೆ ಎಂದು ಅವರು ನುಡಿದರು.

ರಾಜ್ಯವು 2025ರ ಹೊತ್ತಿಗೆ 300 ಶತಕೋಟಿ ಡಾಲರ್ ಮೌಲ್ಯದ ಡಿಜಿಟಲ್ ಆರ್ಥಿಕತೆಯನ್ನು ಬೆಳೆಸುವ ಗುರಿ ಹೊಂದಿದೆ. ಇಂಥ ಡಿಜಿಟಲೀಕರಣ ಸಾಧ್ಯವಾಗಬೇಕು ಎಂದರೆ ಅತ್ಯಂತ ದಕ್ಷವಾದ ಸೈಬರ್ ಸೆಕ್ಯುರಿಟಿ ವ್ಯವಸ್ಥೆ ಇರಬೇಕಾಗುತ್ತದೆ. ಇದನ್ನು ಮುಖ್ಯವಾಗಿ ಇಟ್ಟುಕೊಂಡೇ ಸರಕಾರವು ಐದು ವರ್ಷಗಳ ಹಿಂದೆಯೇ ಸೈಬರ್ ಸೆಕ್ಯುರಿಟಿ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸಿದೆ. ಡಿಜಿಟಲ್ ಆರ್ಥಿಕತೆಯ ಈ ಕಾಲಘಟ್ಟದಲ್ಲಿ ಇದು ಮಹತ್ತರ ಪಾತ್ರ ವಹಿಸಲಿದೆ ಎಂದು ಅವರು ಪ್ರತಿಪಾದಿಸಿದರು.

ಡೆಲ್ ಸಂಸ್ಥೆಯು ತಾನು ಅಭಿವೃದ್ಧಿ ಪಡಿಸಿರುವ ‘ಟೆಕ್ ಟಿಯರ್‍ಡೌನ್' ವ್ಯವಸ್ಥೆಯಡಿ ಆಯ್ದ ನವೋದ್ಯಮಗಳಿಗೆ ನಿರ್ದಿಷ್ಟವಾಗಿ ತಂತ್ರಜ್ಞಾನ ಮತ್ತು ಸೈಬರ್ ಸೆಕ್ಯುರಿಟಿ ಬಗ್ಗೆ ಹೆಚ್ಚಿನ ಅರಿವು ಮೂಡಿಸಲಿದ್ದು, ಅವುಗಳ ಆರ್ಥಿಕ ಬೆಳವಣಿಗೆಗೆ ಮಾರ್ಗದರ್ಶನ ಮಾಡಲಿದೆ. ಇದಲ್ಲದೆ, ಕಂಪನಿಯು ರಾಜ್ಯದ ಸರಕಾರಿ ಮತ್ತು ಖಾಸಗಿ ವಲಯಗಳ ಜತೆಗೂಡಿ ಸೈಬರ್ ರಿಕವರಿ ಕುರಿತಂತೆ ತಿಳಿವಳಿಕೆ ಮೂಡಿಸಲಿವೆ ಎಂದು ಅವರು ವಿವರಿಸಿದರು.

ಸೈಬರ್ ಸೆಕ್ಯುರಿಟಿ ಪ್ರವರ್ಧಮಾನಕ್ಕೆ ಬರುತ್ತಿರುವ ಮಹತ್ವದ ಕ್ಷೇತ್ರವಾಗಿದೆ. ನಮ್ಮ ಸಾರ್ವಜನಿಕ ವಲಯವು ಇದಕ್ಕೆ ಸಂಬಂಧಿಸಿದಂತೆ ಐಟಿ ಕಂಪನಿಗಳೊಂದಿಗೆ ಸಹಭಾಗಿತ್ವ ಹೊಂದುವುದು ಮುಂಬರುವ ದಿನಗಳಲ್ಲಿ ಮುಖ್ಯವಾಗಲಿದೆ. ಸೈಬರ್ ಬೆದರಿಕೆಯ ಈ ಯುಗದಲ್ಲಿ ಅಂಕಿ ಅಂಶ ಮತ್ತು ವಿವರಗಳ ಸುರಕ್ಷಿತ ಸಂರಕ್ಷಣೆಗೆ ಅತ್ಯಾಧುನಿಕ ತಂತ್ರಜ್ಞಾನಗಳು ಅನಿವಾರ್ಯವಾಗಿವೆ. ಈ ಒಡಂಬಡಿಕೆಯು ಆಡಳಿತದ ಅಪರಿಮಿತ ಶಕ್ತಿಯ ಸಂಕೇತವಾಗಿದೆ ಎಂದು ಅಶ್ವತ್ಥ ನಾರಾಯಣ ಅಭಿಪ್ರಾಯಪಟ್ಟರು.

ಸೈಬರ್ ಸೆಕ್ಯುರಿಟಿ ಉತ್ಕೃಷ್ಟತಾ ಕೇಂದ್ರದ ಮುಖ್ಯಸ್ಥ ಡಾ.ಕಾರ್ತೀಕ್ ರಾವ್ ಬಪ್ಪನಾಡು ಮಾತನಾಡಿ, ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿರುವ ಕಾರ್ಯ ಪರಿಸರವು ಯಾವುದೇ ಬಗೆಯ ಸೈಬರ್ ದಾಳಿಯನ್ನು ಎದುರಿಸುವಷ್ಟು ಸಮರ್ಥವಾಗಿದೆ.  2 ಮತ್ತು 3ನೇ ಹಂತದ ನಗರಗಳಲ್ಲಿ ಸುಸ್ಥಿರ ಅಭಿವೃದ್ಧಿ ಸಾಧಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರದ ಉತ್ಕೃಷ್ಟತಾ ಕೇಂದ್ರವು ತನ್ನ ಪ್ರಯತ್ನಗಳನ್ನು ಮುಂದುವರಿಸಲಿದೆ ಎಂದರು. 

ಕಾರ್ಯಕ್ರಮದಲ್ಲಿ ಡೆಲ್ ಟೆಕ್ನಾಲಜೀಸ್‍ನ ಉಪಾಧ್ಯಕ್ಷ ಮನೀಶ್ ಗುಪ್ತ, ನಿರ್ದೇಶಕ ಮತ್ತು ಪ್ರಧಾನ ವ್ಯವಸ್ಥಾಪಕ ರಿಪು ಬಾಜ್ವಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X