Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸದನದಲ್ಲಿ ಸ್ವಾರಸ್ಯಕರ ಚರ್ಚೆಗೆ...

ಸದನದಲ್ಲಿ ಸ್ವಾರಸ್ಯಕರ ಚರ್ಚೆಗೆ ಕಾರಣವಾಯಿತು 'ಕಬಡ್ಡಿ ಆಟ, ಆಪರೇಷನ್ ಕಮಲ'

ವಾರ್ತಾಭಾರತಿವಾರ್ತಾಭಾರತಿ13 Sept 2022 6:49 PM IST
share
ಸದನದಲ್ಲಿ ಸ್ವಾರಸ್ಯಕರ ಚರ್ಚೆಗೆ ಕಾರಣವಾಯಿತು ಕಬಡ್ಡಿ ಆಟ, ಆಪರೇಷನ್ ಕಮಲ

ಬೆಂಗಳೂರು, ಸೆ. 13: ‘ಕಬಡ್ಡಿ ಆಟ ಆಟವಾಡುತ್ತಿದ್ದುದೆ ‘ಆಪರೇಷನ್ ಕಮಲ'ದ ವೇಳೆ ಶಾಸಕರನ್ನು ಕ್ಯಾಚ್ ಹಾಕಿಕೊಳ್ಳಲು ನಿಮಗೆ ಅನುಕೂಲ ಆಯಿತು' ಎಂದು ಕಾಂಗ್ರೆಸ್ ಸದಸ್ಯ ತನ್ವೀರ್ ಸೇಠ್ ಹೇಳಿದ್ದು ಸದನದ ಕಲಾಪದಲ್ಲಿ ಹಾಸ್ಯಕ್ಕೆ ಕಾರಣವಾಯಿತು.

ಮಂಗಳವಾರ ವಿಧಾನಸಭೆಯಲ್ಲಿ ನಿಯಮ 69ರಡಿಯಲ್ಲಿ ಮಳೆ, ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾಗಿರುವ ಹಾನಿಯ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುತ್ತಿದ್ದ ವೇಳೆ, ಸಚಿವ ಆರ್. ಅಶೋಕ್ ಅವರನ್ನು ಕುರಿತು ‘ಅಶೋಕ್ ನೀನು ಕಬಡ್ಡಿ ಆಡ್ತಿದ್ದೆ ಅಲ್ವಾ?’ ಎಂದು ಪ್ರಶ್ನಿಸಿದ್ದು ಕಲಾಪದಲ್ಲಿ ಕೆಲಕಾಲ ಸ್ವಾರಸ್ಯಕರ ಮಾತುಕತೆಗೆ ಅನುವು ನೀಡಿತು.

‘ರಾಜ್ಯದಲ್ಲಿ ಮಳೆ-ನೆರೆಯಿಂದ 122 ಮಂದಿ ಪ್ರಾಣ ಕಳೆದುಕೊಂಡಿದ್ದು, ಒಟ್ಟು 24 ಸಾವಿರಕ್ಕೂ ಅಧಿಕ ಮನೆಗಳು ಹಾನಿಗೀಡಾಗಿದ್ದು, 10ರಿಂದ 12 ಲಕ್ಷ ಹೆಕ್ಟೇರ್ ಬೆಳೆ ನಷ್ಟವಾಗಿದೆ. 7,647 ಕೋಟಿ ರೂ.ನಷ್ಟ ಸಂಭವಿಸಿದೆ ಎಂದು ಕೇಂದ್ರಕ್ಕೆ ಮನವಿ ಸಲ್ಲಿಸಿದ್ದು, 1,012 ಕೋಟಿ ರೂ.ಕೇಂದ್ರದಿಂದ ಪರಿಹಾರ ಕೇಳಿದ್ದೀರಿ. ಆದರೆ, ಅವರು ಈವರೆಗೂ ಒಂದು ನಯಾಪೈಸೆ ಹಣ ನೀಡಿಲ್ಲ' ಎಂದು ಸಿದ್ದರಾಮಯ್ಯ ದೂರಿದರು. 

ಈ ವೇಳೆ ಮಧ್ಯಪ್ರವೇಶಿಸಿದ ಸಚಿವ ಅಶೋಕ್ ಎದ್ದು ನಿಂತು ಉತ್ತರಿಸಲು ಮುಂದಾದರು. ‘ಅಶೋಕ್ ಪದೇ ಪದೆ ಎದ್ದು ನಿಲ್ಲಬೇಡಿ, ಏಕೆ ಎಕ್ಸಸೈಜ್ ಮಾಡ್ತೀರಾ? ನಿನ್ನ ಎನರ್ಜಿ ಚೆನ್ನಾಗಿ ಇದೆ. ನೀನು ದೈಹಿಕವಾಗಿ ಗಟ್ಟಿ ಮುಟ್ಟಾಗಿದ್ದೀಯಾ, ನೀನು ಕಬಡ್ಡಿ ಆಡ್ತಿದ್ದೆ ಅಲ್ವಾ?' ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಶೋಕ್, ‘ಹೌದು ಸಾರ್ ಇಪ್ಪತ್ತು ವರ್ಷದವನಿದ್ದ ವೇಳೆ ಕಬಡಿ ಆಡಿದ್ದೇನೆ' ಎಂದರು.

ಇದನ್ನೂ ಓದಿ: ಬಿಜೆಪಿ ಸರ್ಕಾರದ ರಸ್ತೆ ಡಾಂಬಾರಿಗಿಂತ ರೊಟ್ಟಿಗೆ ಕಲಸುವ ರಾಗಿ ಹಿಟ್ಟೇ ಹೆಚ್ಚು ಸ್ಟ್ರಾಂಗ್: ಕಾಂಗ್ರೆಸ್

‘ನಾನು ಹೈಸ್ಕೂಲ್ ದಿನದಲ್ಲಿ ಆಡುತ್ತಿದ್ದೆ. ಆಮೇಲೆ ಬಿಟ್ಟೆ. ಆಮೇಲೆ ಆಡೋಕೆ ಆಗ್ಲೆ ಇಲ್ಲ. ಈಗ ಯಾವ ಆಟ ಆಡೋಕು ಆಗೋದಿಲ್ಲ' ಎಂದು ಸಿದ್ದರಾಮಯ್ಯ, ಅಶೋಕ್‍ಗೆ ಪ್ರತಿಕ್ರಿಯಿಸಿದರು. ಈ ಹಂತದಲ್ಲಿ ಮಧ್ಯ ಪ್ರವೇಶಿಸಿದ ತನ್ವಿರ್ ಸೇಠ್, ‘ಆಗ ಕಬಡ್ಡಿ ಆಡುತ್ತಿದ್ದರಿಂದಲೇ ಇವರು(ಬಿಜೆಪಿ) ಆಪರೇಷನ್ ಕಮಲ ಮಾಡಲು, ಕ್ಯಾಚ್ ಹಾಕಿಕೊಳ್ಳಲು ಅನುಕೂಲ ಆಗಿದ್ದು ಎಂದರು. ‘ಹೌದು ಕ್ಯಾಚ್ ಹಿಡಿಯಲು ಸಾಧ್ಯವಾಯಿತು. ಕಬ್ಬಡಿ ಆಡಿದರೆ ಶುಗರ್, ಬಿಪಿ ಬರುವುದಿಲ್ಲ ಸರ್' ಎಂದು ಅಶೋಕ್ ಉತ್ತರಿಸಿದ್ದು ಸದನದಲ್ಲಿ ಹಾಸ್ಯಕ್ಕೆ ಕಾರಣವಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X