Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಾವು ಅಧಿಕಾರಕ್ಕೆ ಬಂದರೆ ಭ್ರಷ್ಟ ರಹಿತ...

ನಾವು ಅಧಿಕಾರಕ್ಕೆ ಬಂದರೆ ಭ್ರಷ್ಟ ರಹಿತ ಆಡಳಿತ: ಕಾಂಗ್ರೆಸ್ ಮುಖಂಡರ ಭರವಸೆ

ಭ್ರಷ್ಟಾಚಾರ ವಿರುದ್ಧ ಜಾಗೃತಿಗೆ ಕಾಂಗ್ರೆಸ್ ಅಭಿಯಾನ, ಸಹಾಯವಾಣಿ ಆರಂಭ

ವಾರ್ತಾಭಾರತಿವಾರ್ತಾಭಾರತಿ13 Sept 2022 6:57 PM IST
share
ನಾವು ಅಧಿಕಾರಕ್ಕೆ ಬಂದರೆ ಭ್ರಷ್ಟ ರಹಿತ ಆಡಳಿತ: ಕಾಂಗ್ರೆಸ್ ಮುಖಂಡರ ಭರವಸೆ

ಬೆಂಗಳೂರು, ಸೆ. 13: ‘ಬಿಜೆಪಿ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಶೇ.40 ಕಮಿಷನ್ ಸರಕಾರ. ಈ ಸರಕಾರದ ಭ್ರಷ್ಟಾಚಾರ ಬಯಲು ಮಾಡಲು ನಮ್ಮೊಂದಿಗೆ ಕೈಜೋಡಿಸಿ. 844-770-40-40ಗೆ ಕರೆ ಮಾಡಿ ಭ್ರಷ್ಟಾಚಾರದ ಬಗ್ಗೆ ದೂರು ನೀಡಿ. 2023ರಲ್ಲಿ ಕಾಂಗ್ರೆಸ್ ಸರಕಾರ ಈ ದೂರಿನ ಕುರಿತು ಕ್ರಮ ಕೈಗೊಳ್ಳಲಿದೆ' ಎಂದು ಕಾಂಗ್ರೆಸ್ ವಿಶೇಷ ಅಭಿಯಾನವನ್ನು ಆರಂಭಿಸಿದೆ.

ಮಂಗಳವಾರ ಇಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಮೇಲ್ಮನೆ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್ ಅವರ ಉಪಸ್ಥಿತಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಮುಖಂಡರು, ಬಿಜೆಪಿ ಸರಕಾರದ ಭ್ರಷ್ಟಾಚಾರದ ವಿರುದ್ದ ವಾಗ್ದಾಳಿ ನಡೆಸಿದರು. 

ಭ್ರಷ್ಟ ಮುಕ್ತ ಸರಕಾರ ನೀಡುತ್ತೇವೆ: ಈ ವೇಳೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ‘ಬಿಜೆಪಿ ಭ್ರಷ್ಟ ಸರಕಾರ, ಶೇ.40ರಷ್ಟು ಕಮಿಷನ್ ಸರಕಾರ' ಎಂದು ಕಾಂಗ್ರೆಸ್ ಅಭಿಯಾನ ಆರಂಭಿಸುತ್ತಿದೆ. ಜನರಲ್ಲಿ ಭ್ರಷ್ಟಾಚಾರದ ವಿರುದ್ದ ಜಾಗೃತಿ ಮೂಡಿಸುವುದು ನಮ್ಮ ಉದ್ದೇಶ. ನಾವು ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ ರಹಿತ ಸರಕಾರ ನೀಡುತ್ತೇವೆ. ರಾಜ್ಯವನ್ನು ಹಾಗೂ ಜನರನ್ನು ಇದರಿಂದ ಮುಕ್ತಗೊಳಿಸಬೇಕಿದೆ. ಹೀಗಾಗಿ ಈ ಅಭಿಯಾನ ಆರಂಭಿಸಿದ್ದೇವೆ' ಎಂದು ಹೇಳಿದರು.

‘ಅನೇಕರು ಈ ಸರಕಾರದ ಭ್ರಷ್ಟಾಚಾರ ಹೇಳಲು ಹಿಂಜರಿಯುತ್ತಾರೆ. ಹೀಗಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ಸಹಾಯವಾಣಿ ಆರಂಭಿಸಿದ್ದೇವೆ. ಜನರು ಈ ಸಹಾಯವಾಣಿ 844 770 4040ಗೆ ಕರೆ, ವಾಟ್ಸಪ್ ಮೂಲಕ ತಿಳಿಸಿ. ಅಥವಾ www.40percentsarkaara.com ವೆಬ್‍ಸೈಟ್‍ನಲ್ಲಿ ತಿಳಿಸಬಹುದು' ಎಂದು ಸಿದ್ದರಾಮಯ್ಯ ತಿಳಿಸಿದರು.

ಮೇಲ್ಮನೆ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಮಾತನಾಡಿ, ‘ಬಿಜೆಪಿಯವರು ಜನರ ಹಿತಕ್ಕೆ ಯಾವುದೇ ಕಾರ್ಯಕ್ರಮ ಮಾಡಿಲ್ಲ. ಇವರು ಕೋಮುವಾದದ ಮೇಲೆ ರಾಜಕೀಯ ಮಾಡುತ್ತಾರೆ. ಬೆಂಗಳೂರು ಹಾಗೂ ಕರ್ನಾಟಕ ಎಂದರೆ ಪ್ರಗತಿಪರ ರಾಜ್ಯ ಹಾಗೂ ನಗರ. ಆದರೆ, ಬಿಜೆಪಿಯ ಡಬಲ್ ಇಂಜಿನ್ ಸರಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ' ಎಂದು ದೂರಿದರು.

‘ಬಿಜೆಪಿ ಸರಕಾರದಲ್ಲಿ ವಿಜಯೇಂದ್ರ ತೆರಿಗೆ ಎಂದು ಸಂಗ್ರಹಿಸಲಾಗಿದೆ. ಆತ ಯಾವುದೇ ಶಾಸಕರಲ್ಲ. ಕೇವಲ ಬಿಜೆಪಿ ಪದಾಧಿಕಾರಿ. ಇವರ ಬಗ್ಗೆ ಕಾಂಗ್ರೆಸ್ ಪಕ್ಷ ಪ್ರಶ್ನೆ ಮಾಡಿದರೆ, ಮರುದಿನವೇ ಇಡಿ, ಐಟಿ, ಸಿಬಿಐ ದಾಳಿ ಆಗುತ್ತವೆ. ಬಿಜೆಪಿ ಪರವಾಗಿದ್ದ ದೊಡ್ಡ ಉದ್ಯಮಿಯೊಬ್ಬರು ಬೆಂಗಳೂರು ಪ್ರವಾಹದ ಸಂದರ್ಭದಲ್ಲಿ ಬಿಜೆಪಿ ಸರಕಾರ ಟೀಕೆ ಮಾಡಿದ್ದಕ್ಕೆ ಅವರ ಸಂಘ ಸಂಸ್ಥೆಗಳ ಮೇಲೆ ದಾಳಿ ಮಾಡಿಸಿದ್ದಾರೆ. ಇದರ ವಿರುದ್ಧ ಜನಜಾಗೃತಿ ಮೂಡಿಸಲು, ಬಿಜೆಪಿ ಹೇಗೆ ಕರ್ನಾಟಕಕ್ಕೆ ಮಸಿ ಬಳಿದಿದೆ ಎಂದು ತಿಳಿಸಲು ಈ ಅಭಿಯಾನ ಮಾಡುತ್ತಿದ್ದೇವೆ' ಎಂದು ಬಿ.ಕೆ.ಹರಿಪ್ರಸಾದ್ ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ‘ಅಧಿವೇಶನ ನಡೆಯುತ್ತಿದ್ದರೂ ನಾವು ಭ್ರಷ್ಟಾಚಾರದ ವಿಚಾರವನ್ನು ಪಕ್ಷದ ಕಚೇರಿಯಲ್ಲಿ ಮಾತನಾಡುತ್ತಿರುವುದೇಕೆ ಎಂಬ ಪ್ರಶ್ನೆ ಕಾಡುತ್ತಿರಬಹುದು. ಕಲಾಪದಲ್ಲಿ ಬಿಜೆಪಿ ಸರಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಚರ್ಚೆ ಮಾಡಲು ತಿಳಿಸಿದ್ದೇವೆ. ಅಧಿವೇಶನದಲ್ಲಿ ಹಾಗೂ ಹೊರಗೆ ಸಾರ್ವಜನಿಕವಾಗಿ ಈ ಬಗ್ಗೆ ಚರ್ಚೆ ಆಗಬೇಕಿದೆ' ಎಂದು ಹೇಳಿದರು.

‘ಈ ಭ್ರಷ್ಟ ಸರಕಾರವನ್ನು ಕಿತ್ತು ಹಾಕಬೇಕಿದೆ. ಹೀಗಾಗಿ ನಾವು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದು, ನೀವು ಈ ಭ್ರμÁ್ಟಚಾರಕ್ಕೆ ಬಲಿಯಾಗಿದ್ದರೆ, ನೀವು ಸಹಾಯವಾಣಿ 8447704040ಗೆ ಕರೆ, ವಾಟ್ಸಪ್ ಮೂಲಕ ತಿಳಿಸಿ ಅಥವಾ ತಿತಿತಿ.40ಠಿeಡಿಛಿeಟಿಣsಚಿಡಿಞಚಿಚಿಡಿಚಿ.ಛಿom ವೆಬ್‍ಸೈಟ್‍ನಲ್ಲಿಯೂ ತಿಳಿಸಬಹುದು. ನಿಮ್ಮ ಮಾಹಿತಿಯನ್ನು ಗೌಪ್ಯವಾಗಿ ಇಡುತ್ತೇವೆ' ಎಂದು ಅವರು ತಿಳಿಸಿದರು.

--------------------

ಕೂಡಲೇ ದೂರು ದಾಖಲಿಸಲಿ: ‘ನಮ್ಮ ಅವಧಿಯಲ್ಲಿ ತಪ್ಪು ಮಾಡಿದ್ದರೆ, ನಾನು ಇಂಧನ ಸಚಿವನಾಗಿದ್ದಾಗ ದುಬಾರಿ ಬೆಲೆಗೆ ವಿದ್ಯುತ್ ಖರೀದಿ ಮಾಡಿದ್ದೇನೆಂದು ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಕೂಡಲೇ ನನ್ನ ವಿರುದ್ಧ ಪ್ರಕರಣ ದಾಖಲಿಸಲಿ. ನಾವೆಲ್ಲರೂ ರಾಜ್ಯದ ಜನರಿಗೆ ಉತ್ತರದಾಯಿಯಾಗಿರಬೇಕು. ನಾನು ತಪ್ಪು ಮಾಡಿದ್ದರೆ, ಲಂಚ ಪಡೆದಿದ್ದರೆ, ಜನತೆಗೆ ನಾನು ದ್ರೋಹ ಮಾಡಿದ್ದರೆ ತಕ್ಷಣವೇ ಪ್ರಕರಣ ದಾಖಲಿಸಲಿ. ನಾನು ನನ್ನ ಜವಾಬ್ದಾರಿ ವಿಚಾರವಾಗಿ ಆತ್ಮವಿಶ್ವಾಸದಲ್ಲಿದ್ದೇನೆ. ನಾವು ಜನರಿಗೆ ಭ್ರಷ್ಟಾಚಾರ ರಹಿತ ಸರಕಾರ ನೀಡುತ್ತೇವೆಂಬ ವಿಶ್ವಾಸದಲ್ಲಿ ಈ ವಿಚಾರ ಹೇಳುತ್ತಿದ್ದೇನೆ’

-ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ

----------------------------

‘ರಾಜ್ಯ ಆಳ್ತಿರೋದು-ಶೇ.40ರಷ್ಟು ಕಮಿಷನ್ ಸರಕಾರ. ರಾಜ್ಯದ ಜನರ ಕಷ್ಟಕ್ಕೆ ಕಾರಣ-ಭ್ರಷ್ಟಾಚಾರ. ಭ್ರಷ್ಟ ಬಿಜೆಪಿ ಸರಕಾರದ ಅಕ್ರಮಗಳು, ಹಗರಣಗಳು ಎಳೆದಷ್ಟೂ ಹೊರಬರುತ್ತವೆ. ಬಿಜೆಪಿ ಅಂದ್ರೆ ಭ್ರಷ್ಟಾಚಾರದ ಅಕ್ಷಯಪಾತ್ರೆ!'

-ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ

40% ಸರ್ಕಾರದ ಭ್ರಷ್ಟಾಚಾರ ಬಯಲು ಮಾಡಲು ನಮ್ಮೊಂದಿಗೆ ಕೈಜೋಡಿಸಿ.

844-770-40-40 ಗೆ ಕರೆ ಮಾಡಿ ಭ್ರಷ್ಟಾಚಾರದ ಬಗ್ಗೆ ದೂರು ನೀಡಿ https://t.co/QUNLHjlsWd ಗೆ ಭೇಟಿ ನೀಡಿ ನಿಮ್ಮ ದೂರನ್ನು ದಾಖಲು ಮಾಡಿ.

2023ರಲ್ಲಿ ಕಾಂಗ್ರೆಸ್ ಸರ್ಕಾರ ಈ ದೂರಿನ ಕುರಿತು ಕ್ರಮ ಕೈಗೊಳ್ಳಲಿದೆ.#40percentsarkara pic.twitter.com/YfKwxS4lXa

— Siddaramaiah (@siddaramaiah) September 13, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X