Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬಿಸಿಯೂಟದ ಮಹಿಳೆಯರ 2 ತಿಂಗಳ ಸಂಭಾವನೆ...

ಬಿಸಿಯೂಟದ ಮಹಿಳೆಯರ 2 ತಿಂಗಳ ಸಂಭಾವನೆ ಬಿಡುಗಡೆ; ಜೂನ್, ಜುಲೈ ತಿಂಗಳ ಸಂಭಾವನೆ ನೀಡಿ ಸರಕಾರಿ ಆದೇಶ

► ವಾರ್ತಾಭಾರತಿ ಫಾಲೋಅಪ್

ವಾರ್ತಾಭಾರತಿವಾರ್ತಾಭಾರತಿ13 Sept 2022 10:27 PM IST
share
ಬಿಸಿಯೂಟದ ಮಹಿಳೆಯರ 2 ತಿಂಗಳ ಸಂಭಾವನೆ ಬಿಡುಗಡೆ; ಜೂನ್, ಜುಲೈ ತಿಂಗಳ ಸಂಭಾವನೆ ನೀಡಿ ಸರಕಾರಿ ಆದೇಶ

ಕುಂದಾಪುರ, ಸೆ.13: ಅಡುಗೆ ತಯಾರಿಸಿ ಶಾಲಾ ಮಕ್ಕಳಿಗೆ ಊಟ ಬಡಿಸುವ ಬಡ ಅಕ್ಷರ ದಾಸೋಹ ನೌಕರರಿಗೆ ಜೂನ್ ಹಾಗೂ ಜುಲೈ ತಿಂಗಳಿನ ಸಂಭಾವನೆ ನೀಡಿ ಸರಕಾರ ಆದೇಶಿಸಿದ್ದು, ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಒಂದು ತಿಂಗಳ ಸಂಭಾವನೆ ಮಹಿಳೆಯರ ಬ್ಯಾಂಕ್ ಖಾತೆಗೆ ಖಜಾನೆಯಿಂದ ಪಾವತಿಯಾಗಿದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಅಕ್ಷರ ದಾಸೋಹ ನೌಕರರಿಗೆ 5 ತಿಂಗಳಿನಿಂದ ಸಂಭಾವನೆ ಸಿಗದ ಬಗ್ಗೆ ʼವಾರ್ತಾಭಾರತಿʼ ವಿವರವಾಗಿ ವರದಿ ಮಾಡಿತ್ತು.

ರಾಜ್ಯದಲ್ಲಿ 1,15,000ಕ್ಕೂ ಅಧಿಕ ಮಹಿಳೆಯರು ಬಿಸಿಯೂಟ ತಯಾರಿಕೆಯ ಕೆಲಸ ಮಾಡುತ್ತಿದ್ದಾರೆ. ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಆಧಾರದಲ್ಲಿ ಬಿಸಿಯೂಟ ತಯಾರಿಕೆಗೆ ನೌಕರರು ಇರುತ್ತಾರೆ. ಈ ಮೊದಲು ಮುಖ್ಯ ಅಡುಗೆಯವರಿಗೆ 2700 ರೂ. ಹಾಗೂ ಸಹಾಯಕ ಅಡುಗೆಯವರಿಗೆ 2600 ರೂ. ಗೌರವಧನ ನೀಡಲಾಗುತ್ತಿದ್ದು, ನೂತನ ಆದೇಶದಲ್ಲಿ 1000ರೂ. ಹೆಚ್ಚು ಮೊತ್ತ ನೀಡಲು ಆದೇಶವಾಗಿತ್ತು. ಅದರಂತೆ ಪರಿಷ್ಕೃತ ಸಂಭಾವನೆಯಲ್ಲಿ 3600 ಹಾಗೂ 3700 ಸಂಭಾವನೆಯನ್ನು ಸರ್ಕಾರದ ಖಜಾನೆ ಮೂಲಕ ಜಮಾ ಮಾಡಲು ಆದೇಶ ನೀಡಲಾಗಿದೆ.

ರಾಜ್ಯದ ವಿವಿಧ ಜಿಲ್ಲೆಯಲ್ಲಿ ಒಂದು ತಿಂಗಳ ಸಂಭಾವನೆ ಈಗಾಗಲೇ ಮಹಿಳೆಯರ ಖಾತೆಗೆ ಜಮಾ ಆಗಿದೆ. ಕೆಲವು ತಾಲೂಕುಗಳಲ್ಲಿ ಈವರೆಗೆ ಜಮಾ ಆಗದ ಬಗ್ಗೆಯೂ ಮಾಹಿತಿ ಬಂದಿದೆ.

"ಬಿಸಿಯೂಟ ತಯಾರಿಸುವ ಬಡ ಮಹಿಳಾ ನೌಕರರಿಗೆ ಎರಡು ತಿಂಗಳ ಸಂಭಾವನೆ ಬಿಡುಗಡೆ ಮಾಡಿದ ಸರಕಾರ ಅವರು ಮತ್ತವರ ಕುಟುಂಬದ ಭವಿಷ್ಯವನ್ನು ನೋಡಬೇಕಿದೆ. ಮುಂದಿನ ದಿನದಲ್ಲಿ ಇವರಿಗೆ ಕನಿಷ್ಟ ವೇತನವನ್ನು ಕೊಡುವುದು, ಕಾರ್ಮಿಕ ವಿಮಾ ಯೋಜನೆ, ಕಾರ್ಮಿಕ ಭವಿಷ್ಯನಿಧಿ, ಗ್ರಾಚ್ಯುವಿಟಿ ಸಹಿತ ಸಾಮಾಜಿಕ ಭದ್ರತೆ ನೀಡಬೇಕು. ಈ ವರ್ಷ ಎಪ್ರಿಲ್, ಮೇ ತಿಂಗಳಿನಲ್ಲಿ ಕೆಲಸ ಮಾಡಿದ್ದು ಅದರ ಸಂಭಾವನೆ ನೀಡಬೇಕು. ಬೇಡಿಕೆ ಈಡೇರದಿದ್ದಲ್ಲಿ ಹೋರಾಟ ಮುಂದುವರಿಯಲಿದೆ".

-ಜಿ.ಎ ಕೋಟೆಯಾರ್ ( ಸ್ಥಾಪಕ ಅಧ್ಯಕ್ಷರು, ದಿ ಕಾಮನ್ ಪೀಪಲ್ಸ್ ವೆಲ್ಫೇರ್ ಫೌಂಡೇಶನ್ ಮಾಹಿತಿ ಸೇವಾ ಸಮಿತಿ)

"ಸರ್ಕಾರದ ಆದೇಶದಂತೆ ಎರಡು ತಿಂಗಳ ಸಂಬಳ ಬಿಡುಗಡೆಯಾಗಿದ್ದು, ಖಜಾನೆ ಮೂಲಕ ಪರಿಷ್ಕೃತ ಸಂಭಾವನೆ ಅಕ್ಷರ ದಾಸೋಹ ನೌಕರರ ಖಾತೆಗೆ ಜಮಾ ಆಗುವ  ಪ್ರಕ್ರಿಯೆ ನಡೆದಿದೆ".
-ಶೋಭಾ ಶೆಟ್ಟಿ (ಶಿಕ್ಷಾಣಾಧಿಕಾರಿ, ಅಕ್ಷರ ದಾಸೋಹ ಉಡುಪಿ ಜಿಲ್ಲೆ)

"ಎರಡು ತಿಂಗಳ ಸಂಭಾವನೆ ಬಿಡುಗಡೆಯಾದ ಮಾಹಿತಿ  ನಮ್ಮೆಲ್ಲರಿಗೂ ಖುಷಿ ತಂದಿದ್ದರೂ ಕೂಡ ಎಪ್ರಿಲ್, ಮೇ ತಿಂಗಳಿನಲ್ಲಿ ದುಡಿದಿದ್ದು ಪರಿಗಣಿಸಿ ಅದಕ್ಕೂ ಸಂಭಾವನೆ ನೀಡಬೇಕಿದೆ. ಅಲ್ಲದೆ ನಮಗೆ ಆರೋಗ್ಯ ಭದ್ರತೆ, ಜೀವನ ಭದ್ರತೆ ನೀಡಬೇಕು".
-ಸಿಂಗಾರಿ ಪೂಜಾರಿ (ಅಧ್ಯಕ್ಷರು, ಕುಂದಾಪುರ ತಾಲೂಕು ಅಕ್ಷರ ದಾಸೋಹ ನೌಕರರ ಸಂಘ).

share
ವಾರ್ತಾಭಾರತಿ
ವಾರ್ತಾಭಾರತಿ
Next Story
X