Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕನ್ನಡ ಭಾಷೆಗೆ ಅನ್ಯಾಯ ಆಗುವುದನ್ನು...

ಕನ್ನಡ ಭಾಷೆಗೆ ಅನ್ಯಾಯ ಆಗುವುದನ್ನು ಸಹಿಸಲು ಸಾಧ್ಯವಿಲ್ಲ: ಜೆಡಿಎಸ್

‘ಹಿಂದಿ ದಿವಸ್' ವಿಧಾನಸಭೆಯಲ್ಲಿ ಪ್ರತಿಧ್ವನಿ

ವಾರ್ತಾಭಾರತಿವಾರ್ತಾಭಾರತಿ14 Sept 2022 8:18 PM IST
share
ಕನ್ನಡ ಭಾಷೆಗೆ ಅನ್ಯಾಯ ಆಗುವುದನ್ನು ಸಹಿಸಲು ಸಾಧ್ಯವಿಲ್ಲ: ಜೆಡಿಎಸ್

ಬೆಂಗಳೂರು, ಸೆ. 14: ‘ಹಿಂದಿ ದಿವಸ್' ಆಚರಣೆ ಮಾಡುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಜೆಡಿಎಸ್ ಸದಸ್ಯರು, ಕನ್ನಡ ಶಾಲು ಧರಿಸಿ ವಿಧಾನಸಭೆ ಕಲಾಪದಲ್ಲಿ ಹಾಜರಾಗಿದ್ದಲ್ಲದೆ, ‘ಕನ್ನಡ ಭಾಷೆಗೆ ಅನ್ಯಾಯ ಆಗುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ' ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬುಧವಾರ ವಿಧಾನಸಭೆ ಪ್ರಶ್ನೋತ್ತರ ಕಲಾಪದ ಬಳಿಕ ಎದ್ದು ನಿಂತ ಜೆಡಿಎಸ್ ಸದಸ್ಯ ಅನ್ನದಾನಿ ಸೇರಿದಂತೆ ಇನ್ನಿತರ ಸದಸ್ಯರು, ‘ಕನ್ನಡ ನಾಡಿನಲ್ಲಿ ಹಿಂದಿ ದಿವಸ್ ಆಚರಣೆ ಮೂಲಕ ನಮ್ಮ ಹೆಮ್ಮೆಯ ಕನ್ನಡ ಭಾಷೆ, ಸಂಸ್ಕೃತಿಗೆ ಅನ್ಯಾಯ ಮಾಡಲಾಗುತ್ತಿದೆ. ಅತ್ಯಂತ ಪುರಾತನ ಭಾಷೆಯೂ ಆಗಿರುವ ಕನ್ನಡ ಭಾಷೆಯ ಕಡೆಗಣನೆ ಮಾಡುವುದು ಸರಿಯಲ್ಲ' ಎಂದು ಆಕ್ಷೇಪಿಸಿದರು.

ಇದೇನು ಹುಚ್ಚಾಸ್ಪತ್ರೆನೇ: ಏನ್ರೀ ಇದು, ಏನಿದು ಜಾತ್ರೆನಾ? ಸಂತೆನಾ? ನೀವು ನೀವೇ ಎದ್ದು ನಿಂತು ಹುಚ್ಚಾಸ್ಪತ್ರೆಯಲ್ಲಿ ಮಾತನಾಡಿದಂತೆ ಮಾತನಾಡುತ್ತಿದ್ದರೆ ನಾನು ಸದನ ನಡೆಸಲು ಸಾಧ್ಯವೇ? ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಕುಮಾರಸ್ವಾಮಿ ಅವರೇ, ನಿಮ್ಮ ಸದಸ್ಯರಿಗೆ ನೀವೇ ಬುದ್ಧಿ ಹೇಳಿಬಿಡಿ' ಎಂದು ಸ್ಪೀಕರ್ ಕಾಗೇರಿ, ಸದಸ್ಯರ ವರ್ತನೆಗೆ ಆಕ್ರೋಶ ಹೊರಹಾಕಿದರು.

ಈ ವೇಳೆ ಮಧ್ಯಪ್ರವೇಶಿಸಿದ ಕುಮಾರಸ್ವಾಮಿ, ‘ನಮ್ಮ ಸದಸ್ಯರು ಸದನದಲ್ಲಿ ನಿಮ್ಮ ಗಮನ ಸೆಳೆಯಲು ಮುಂದಾಗಿದ್ದಾರೆ. ಸದನದ ಕಲಾಪಕ್ಕೆ ಅಡ್ಡಿಪಡಿಸುವ ಉದ್ದೇಶ ಖಂಡಿತ ಇಲ್ಲ. ನಮ್ಮ ಪಕ್ಷದ ನಿಲುವು ದೇಶದಲ್ಲಿ 56ಕ್ಕೂ ಹೆಚ್ಚು ಭಾಷೆಗಳು ಇವೆ. ಆದರೆ, ಇತ್ತೀಚಿನ ದಿನಗಳಲ್ಲಿ ‘ಒಂದು ರಾಷ್ಟ್ರ ಒಂದು ಭಾಷೆ' ಎಂಬ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ ಮಾಡಲಾಗುತ್ತಿದೆ. ಭಾಷೆಯ ಬಗ್ಗೆ ಆಯಾ ರಾಜ್ಯಗಳಲ್ಲಿ ಅವರದ್ದೇ ಆದ ಭಾವನಾತ್ಮಕ ಸಂಬಂಧವಿದೆ. ಬಲವಂತವಾಗಿ ಭಾಷೆಯ ಕತ್ತು ಹಿಸುಕುವ ಕೆಲಸ ಆಗಬಾರದು' ಎಂದು ವಿವರಣೆ ನೀಡಿದರು.

ಕಡ್ಡಾಯಗೊಳಿಸಲು ಕಾನೂನು: ‘ಕನ್ನಡ ಭಾಷೆಯನ್ನು ರಕ್ಷಿಸಿ ಹಾಗೂ ಬೆಳೆಸಲು ನಮ್ಮ ಸರಕಾರ ಬದ್ಧವಾಗಿದೆ. ನೆಲ, ಜಲ, ಭಾಷೆಯ ವಿಚಾರದಲ್ಲಿ ಪಕ್ಷ ಹಾಗೂ ಸರಕಾರ ಎಂದಿಗೂ ರಾಜಕೀಯದ ಹೊರತಾಗಿ ಚಿಂತಿಸುತ್ತದೆ. ಕನ್ನಡದ ಬಳಕೆಯನ್ನು ಹೆಚ್ಚಿಸಲು ಕನ್ನಡವನ್ನು ಕಾನೂನಾತ್ಮಕವಾಗಿ ಕಡ್ಡಾಯಗೊಳಿಸುವ ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಮಂಡಿಸಲಿದ್ದೇವೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜೆಡಿಎಸ್ ಸದಸ್ಯರ ಪ್ರಸ್ತಾಪಕ್ಕೆ ಪ್ರತಿಕ್ರಿಯೆ ನೀಡಿದರು.

‘ಭಾರತ ವಿವಿಧ ಭಾಷೆಗಳ ಒಕ್ಕೂಟ. ಇಲ್ಲಿ ಯಾವುದೇ ಒಂದು ಭಾಷೆ ಹೇರಿಕೆಗೆ ಅವಕಾಶವಿಲ್ಲ. ನಾವು ಕನ್ನಡದ ಪರ ಇದ್ದೇನೆ. ಕನ್ನಡದ ವಿಚಾರದಲ್ಲಿ ರಾಜೀ ಪ್ರಶ್ನೆಯೆ ಇಲ್ಲ. ಕನ್ನಡ ಅಗ್ರಮಾನ್ಯ ಭಾಷೆ. ಇದರ ಜೊತೆಗೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‍ಇಪಿ)ಯಲ್ಲಿ ವೃತ್ತಿ ಶಿಕ್ಷಣವನ್ನು ಕನ್ನಡದಲ್ಲೇ ಕಲಿಕೆ ಆರಂಭಿಸಲಾಗಿದೆ. ಎಂಜಿನಿಯರಿಂಗ್ ಕನ್ನಡದಲ್ಲೆ ಬೋಧನೆ ಮಾಡಲು ಪ್ರೋತ್ಸಾಹ ನೀಡಲಾಗುತ್ತಿದೆ' ಎಂದು ಅವರು ವಿವರಣೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X