Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಇ-ಕೆವೈಸಿಯನ್ನು ಎಲ್ಲಾ ರೈತರು...

ಇ-ಕೆವೈಸಿಯನ್ನು ಎಲ್ಲಾ ರೈತರು ಮಾಡಿಸಿಕೊಳ್ಳುವುದು ಕಡ್ಡಾಯ: ಮೋಹನ್ ರಾಜ್

ವಾರ್ತಾಭಾರತಿವಾರ್ತಾಭಾರತಿ14 Sept 2022 8:49 PM IST
share
ಇ-ಕೆವೈಸಿಯನ್ನು ಎಲ್ಲಾ ರೈತರು ಮಾಡಿಸಿಕೊಳ್ಳುವುದು ಕಡ್ಡಾಯ: ಮೋಹನ್ ರಾಜ್

ಬ್ರಹ್ಮಾವರ, ಸೆ.14: ಪ್ರಧಾನಮತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪರಿಹಾರ ಪಡೆಯಲು ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದ್ದು, ಎಲ್ಲಾ ರೈತರು ತಮ್ಮ ಆಧಾರ್ ಹಾಗೂ ದೂರವಾಣಿ ಸಂಖ್ಯೆ ದಾಖಲಿಸಿ ಗ್ರಾಮ ಒನ್, ಸ್ಮಾರ್ಟ್‌ಫೋನ್‌ಗಳ ಮೂಲಕ ಶೀಘ್ರವಾಗಿ ಇ-ಕೆವೈಸಿ ಮಾಡಿಕೊಳ್ಳ ಬೇಕು ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್‌ರಾಜ್ ಹೇಳಿದ್ದಾರೆ.

ಮಂದಾರ್ತಿ ಸಮೀಪದ ಕಾಡೂರು ಗ್ರಾಮಪಂಚಾಯತ್‌ನಲ್ಲಿ ಜರಗಿದ ಪ್ರಥಮ ಹಂತದ ಗ್ರಾಮಸಭೆಯಲ್ಲಿ ನೋಡಲ್ ಅಧಿಕಾರಿಯಾಗಿ ಭಾಗವಹಿಸಿ ಅವರು ಮಾತನಾಡುತಿದ್ದರು. ಮನ್‌ರೇಗಾ ಮತ್ತು ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿ ಕಾಡೂರು ಗ್ರಾಪಂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದು ಜನರ ಸಹಭಾಗಿತ್ವವೂ ಮಾದರಿಯಾಗಿದೆ ಎಂದರು.

ಶಿಕ್ಷಣ ಇಲಾಖೆಯ ಅಧಿಕಾರಿ ರಾಘವ ಶೆಟ್ಟಿ ಮಾತನಾಡಿ, ಗ್ರಾಪಂ ಮೂಲಕ ಹೊಸತನದ ಕಾರ್ಯಚಟುವಟಿಕೆ ಗಳನ್ನು ಅನುಷ್ಟಾನ ಮಾಡಲು ಅವಕಾಶವಿದ್ದು,  ದೂರದೃಷ್ಟಿ ಯೋಜನೆಯಡಿ ಎಲ್ಲಾ ಇಲಾಖೆಗಳೂ ಸಮನ್ವಯ ದಿಂದ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಅರಣ್ಯ ಹಾಗೂ ಕಂದಾಯ ಇಲಾಖೆಯ ನಡುವಿನ ಸಮನ್ವಯದ ಕೊರತೆಯಿಂದಾಗಿ ಗ್ರಾಮೀಣ ಪ್ರದೇಶದ ನಾಗರಿಕರಿಗೆ ತೀವ್ರ ಸಮಸ್ಯೆಯಾಗಿದ್ದು ಜಂಟಿ ಸಮೀಕ್ಷೆಯ ಮೂಲಕ ಗಡಿ ಗುರುತು ಮಾಡಿ, ಶಾಶ್ವತ ಪರಿಹಾರಕ್ಕೆ  ನಿರ್ಣಯವಾಗಬೇಕೆಂದು ಗ್ರಾಪಂ ಮಾಜಿ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಆಗ್ರಹಿಸಿ ದರು. ಬ್ರಹ್ಮಾವರ ಪೊಲೀಸ್ ಠಾಣೆ ಠಾಣಾಧಿಕಾರಿ ಮುಕ್ತಾ ಮಾತನಾಡಿದರು.

ಕಾಡೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಮಾತನಾಡಿ, ನರೇಗಾ ಅಡಿಯಲ್ಲಿ ಕೆರೆ-ಮದಗಗಳ ಹೂಳೆತ್ತುವ ಕಾಮಗಾರಿಗೆ ನಾಗರಿಕರ ಸಹಭಾಗಿತ್ವ ಉತ್ತಮವಾಗಿದ್ದು, ಇನ್ನಷ್ಟು ಸಾಮೂಹಿಕ ಕಾಮಗಾರಿಗಳ ಅನು ಷ್ಠಾನಕ್ಕೆ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.

ಅರಣ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕೃಷಿ, ತೋಟಗಾರಿಕೆ, ಪಶುಪಾಲನೆ, ಮೆಸ್ಕಾಂ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಗಳು ಇಲಾಖಾ ಮಾಹಿತಿ ನೀಡಿದರು. ಕಾಡೂರು ಗ್ರಾಪಂ ಅಧ್ಯಕ್ಷ ಪಾಂಡುರಂಗ ಶೆಟ್ಟಿ, ಉಪಾಧ್ಯಕ್ಷೆ ಅಮಿತಾ ರಾಜೇಶ್, ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷೆ ವೀಣಾ, ಗ್ರಾಪಂ ಸದಸ್ಯರು, ಇಲಾಖಾಧಿಕಾರಿಗಳು ನಾಗರಿಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X